Homeಕರ್ನಾಟಕಟಿಕೆಟ್ ಬೇಡವೆಂದ ಶ್ಯಾಮನೂರು, ಪಾಠ ಕಲಿಯಬೇಕಾದವರು ಯಾರು?

ಟಿಕೆಟ್ ಬೇಡವೆಂದ ಶ್ಯಾಮನೂರು, ಪಾಠ ಕಲಿಯಬೇಕಾದವರು ಯಾರು?

- Advertisement -
- Advertisement -

ಕೆಪಿಸಿಸಿ ಅಧ್ಯಕ್ಷರು ಮತ್ತು ಇತರ ಪದಾಧಿಕಾರಿಗಳು ಕಾಲಕಾಲಕ್ಕೆ ಬದಲಾಗುತ್ತಿದ್ದರೂ, ಬದಲಾಗದ ಒಂದು ಹುದ್ದೆ ಇತ್ತು. ಅದು ರಾಜ್ಯ ಖಜಾಂಚಿಯದ್ದು. ದಶಕಗಳ ಕಾಲ ಈ ಹುದ್ದೆಯಲ್ಲಿ ಕೂತಿದ್ದು ಶಾಮನೂರು ಶಿವಶಂಕರಪ್ಪ. ಬಹುಶಃ ಆ ಕಾಲಕ್ಕೆ ಅವರೇ ದುಡ್ಡಿದ್ದ ಧಣಿಯಿದ್ದಿರಬಹುದು. ಇವರು ಕಾಂಗ್ರೆಸ್ಸಿಗೆ ಅಂತಹ ದೊಡ್ಡ ಕೊಡುಗೆ ಏನು ಕೊಟ್ಟರು ಯಾರಿಗೂ ಗೊತ್ತಿಲ್ಲ. ಆದರೆ, ಶಾಮನೂರು ಮಾತ್ರ ದೊಡ್ಡದಾಗುತ್ತಾ ಹೋದರು. ಎರಡೆರಡು ಮೆಡಿಕಲ್ ಕಾಲೇಜುಗಳ ಒಡೆಯರಾದರು. ಒಂದೇ ಮೆಡಿಕಲ್ ಕಾಲೇಜಿನಲ್ಲೂ ಸರ್ಕಾರೀ ಕಾಲೇಜಿಗಿಂತ ಹೆಚ್ಚು ಸೀಟುಗಳನ್ನು ಹೊಂದಿದ್ದರು.

1984ರಿಂದ ಚನ್ನಯ್ಯ ಒಡೆಯರ್  ರಂತಹ ಸಜ್ಜನ ರಾಜಕಾರಣಿ ಮೂರು ಸಾರಿ ಲೋಕಸಭೆ ಸದಸ್ಯರಾಗಿ ಕಾಂಗ್ರೆಸ್ಸಿನಿಂದಲೇ ಗೆದ್ದು ಬಂದಿದ್ದರು. ಯಾವಾಗ ಶಾಮನೂರು ಫ್ಯಾಮಿಲಿಯ ಹಿಡಿತಕ್ಕೆ ದಾವಣಗೆರೆ ಜಿಲ್ಲೆ ಸಂಪೂರ್ಣವಾಗಿ ಹೋಯಿತೋ ಅಲ್ಲಿಂದಾಚೆಗೆ ಒಮ್ಮೆ ಮಾತ್ರ (ಒಂದೇ ವರ್ಷ ಇದ್ದ 12ನೇ ಲೋಕಸಭೆಗೆ) ಶಿವಶಂಕರಪ್ಪನವರು ಆಯ್ಕೆಯಾಗಿದ್ದು ಬಿಟ್ಟರೆ ಉದ್ದಕ್ಕೂ ಬಿಜೆಪಿಯೇ ಗೆಲ್ಲುತ್ತಾ ಬಂದಿದೆ.

ಅವರ ಕಣ್ಣೆದುರಿಗೇ ದಾವಣಗೆರೆಯಲ್ಲಿ ಕಾಂಗ್ರೆಸ್ ಕುಸಿಯುತ್ತಾ ಹೋಯಿತು. ಶಾಮನೂರರಿಗೆ ಕಿಂಚಿತ್ತೂ ಬೇಸರವಾಗಲಿಲ್ಲ. ಏಕೆಂದರೆ ಆ ಜಾಗದಲ್ಲಿ ಬೆಳೆದ ಬಿಜೆಪಿಯ ಜಿಲ್ಲಾ ನೇತಾರರು ಇವರ ಬೀಗರೇ ಆಗಿದ್ದರು. ಅವರ ಬೀಗರೂ ಇವರಂತೆಯೇ ಫ್ಯೂಡಲ್ ನಡವಳಿಕೆಯ, ಜಾತೀವಾದಿಗಳಾಗಿದ್ದರು ಬಿಟ್ಟರೆ ಮುಸ್ಲಿಂ ದ್ವೇಷ ತುಂಬಿಕೊಂಡ ಕೋಮುವಾದಿಗಳಾಗಿರಲಿಲ್ಲ. ಆದರೆ, ಇದೇ ಫ್ಯೂಡಲ್ ನಡವಳಿಕೆ, ದೊರೆಗಳಂತಹ ಬದುಕು ಮತ್ತು ಧೋರಣೆಯು ಸಮಾಜದಲ್ಲಿ ಒಳಿತನ್ನೇನೂ ಹುಟ್ಟಿಹಾಕುವುದಿಲ್ಲವಲ್ಲಾ? ಅಂತಹ ಒಳಿತು ಹುಟ್ಟಿಹಾಕಬಹುದಾದ ಕಮ್ಯುನಿಸ್ಟ್ ಚಳವಳಿಯು ಅರ್ಧ ತನ್ನದೇ ತಪ್ಪಿನಿಂದ, ಇನ್ನರ್ಧ ದಾವಣಗೆರೆ ಧಣಿಗಳ ಹುನ್ನಾರದಿಂದ ಕುಸಿದು ಹೋಗಿತ್ತು.

ಫ್ಯೂಡಲ್ ಜಾತಿವಾದವು ಮಧ್ಯ ಕರ್ನಾಟಕದಲ್ಲಿ ಕೋಮುವಾದಕ್ಕೆ ನೀರೆರೆದು ಪೋಷಿಸಿತು. ಅದು ತಪ್ಪೆಂದಾಗಲೀ, ಅದನ್ನು ತಡೆಗಟ್ಟಬೇಕೆಂದಾಗಲೀ ‘ಧಣಿ’ಗಳಿಗೆ ಎಂದೂ ಅನಿಸಲಿಲ್ಲ. ಬೀಗರಿಬ್ಬರೂ ತಮ್ಮ ಸಾಮ್ರಾಜ್ಯವನ್ನು ವಿಸ್ತರಿಸಿಕೊಳ್ಳುತ್ತಲೇ ಹೋದರು. ಇದಕ್ಕೆ ಪರ್ಯಾಯವಾಗಿ ಬೇರೆ ನಾಯಕತ್ವ ಬೆಳೆಸುವ ಕೆಲಸವನ್ನು ಕಾಂಗ್ರೆಸ್ ಎಂದೂ ಮಾಡಲಿಲ್ಲ. ದಾವಣಗೆರೆ ನಗರದ ಎರಡು ಕ್ಷೇತ್ರಗಳ ಪೈಕಿ ಒಂದರಲ್ಲಿ ಶಿವಶಂಕರಪ್ಪನವರಿಗೆ ಟಿಕೆಟ್ ಕೊಟ್ಟು, ಇನ್ನೊಂದರಲ್ಲಿ ಅಲ್ಪಸಂಖ್ಯಾತ ಸಮುದಾಯದ ಸೈಫುಲ್ಲಾ ಅವರಿಗೆ ಬಿ.ಫಾರಂ ನೀಡಿದಾಗ, ಅದನ್ನು ಕಸಿದು ನಾಮಿನೇಷನ್ ಹಾಕದಂತೆ ಮಾಡಿದ ಕುಟುಂಬ ಇದು. ಆಗ ಇವರ ಮೇಲೆ ಶಿಸ್ತು ಕ್ರಮ ತೆಗೆದುಕೊಳ್ಳುವ ಬದಲು, ಅವರ ಪರವಾಗಿಯೇ ಕಾಂಗ್ರೆಸ್ ಪಕ್ಷವೂ ನಿಂತಿತು.

ಕರಾವಳಿಯಲ್ಲಿ ಬೆಳೆದ ಕೋಮುವಾದದ ಪ್ರಭಾವವು, ಮಲೆನಾಡಿನಿಂದ ಈಗ ಮಧ್ಯಕರ್ನಾಟಕಕ್ಕೆ ಹರಡಿದೆ. ಬಸವಣ್ಣನ ತತ್ವ ಪಾಲಿಸುತ್ತೇವೆಂದು ಹೇಳುವ ಸಮುದಾಯದ ಅಖಿಲ ಭಾರತ ಸಂಸ್ಥೆಯ ರಾಜ್ಯಾಧ್ಯಕ್ಷರಾದ ಶಾಮನೂರರಿಗೆ ಕೋಮುವಾದ ಮತ್ತು ಬಸವ ತತ್ವದ ನಡುವಿನ ವೈರುಧ್ಯ ಅರ್ಥವಾಗಲು ಸಾಧ್ಯವೇ ಇರಲಿಲ್ಲ. ಬದಲಿಗೆ ಲಿಂಗಾಯಿತ ಚಳವಳಿ ಆರಂಭವಾದಾಗ ಅದರ ವಿರುದ್ಧ ಮಾತಾಡಿದ ವೀರಶೈವ ಮಹಾಸಭಾದ ಅಧ್ಯಕ್ಷರು ಅವರೇ ಆಗಿದ್ದರು. ಈ ರೀತಿಯ ಮನೋಭಾವ ಇರುವವರು ಬಿಜೆಪಿಗೆ ವಿರುದ್ಧವಾದ ಒಂದು ವೈಚಾರಿಕ ನೆಲೆಯನ್ನು ಕಟ್ಟುವುದು ಸಾಧ್ಯವೇ ಇಲ್ಲ.

ಯಾವ ಕೊಡುಗೆ ಇಲ್ಲದಿದ್ದರೂ ಹಳೆಯ ಫ್ಯೂಡಲ್ ಕುಟುಂಬಗಳಿಗೆ ಮಣೆ ಹಾಕುತ್ತಾ ಬಂದ ಕಾಂಗ್ರೆಸ್ ಪಕ್ಷಕ್ಕೆ ಇದೀಗ ಶಾಮನೂರು ಇಕ್ಕಟ್ಟಿಗೆ ಸಿಕ್ಕಿಸಿದ್ದಾರೆ. ಕಳೆದ ಸಾರಿ, ಮೋದಿ ಅಲೆಯ ಹೊರತಾಗಿಯೂ ಕೇವಲ 17,000 ಮತಗಳ ಅಂತರದಲ್ಲಿ ಮಗ ಶಾಮನೂರು ಸೋತಿದ್ದರು. ವಿಧಾನಸಭಾ ಚುನಾವಣೆಯಲ್ಲೂ ಸೋತು ಕುಳಿತಿರುವ ಮಲ್ಲಿಕಾರ್ಜುನ್ ತಾನು ಸ್ಪರ್ಧಿಸುವ ಕುರಿತು ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಮಾತಾಡುತ್ತಿದ್ದರು. ಅವರಿಗಿಂತ ತಂದೆ ಶಾಮನೂರರಿಗೆ ಕೊಟ್ಟರೆ ಗೆಲುವಿನ ಸಾಧ್ಯತೆ ಹೆಚ್ಚೆಂದು ಬಗೆದ ನಾಯಕರು ಅವರ ಹೆಸರು ಘೋಷಣೆ ಮಾಡಿದರು. ಇದೀಗ ಶಿವಶಂಕರಪ್ಪನವರು ಕುಟುಂಬದಲ್ಲಿ ಯಾರೂ ಸ್ಪರ್ಧಿಸಲ್ಲ. ತಾನು ಸೂಚಿಸುವ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಿಗೆ ಟಿಕೆಟ್ ಕೊಡಿ ಎಂದಿದ್ದಾರೆ. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಜೆ.ಎಚ್.ಪಟೇಲರ ಸಂಬಂಧಿ, ರೈತ ಹೋರಾಟಗಾರ ತೇಜಸ್ವಿ ಪಟೇಲ್‍ರಿಗೆ ಟಿಕೆಟ್ ಕೊಡಲು ಮಾತುಕತೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಆದರೆ, ಬೇರೆ ಯಾರಿಗೇ ಆದರೂ, ಮುತುವರ್ಜಿ ವಹಿಸಿ ಪ್ರಚಾರ ಮಾಡಲು ಶಾಮನೂರು ಫ್ಯಾಮಿಲಿ ಮುಂದಾಗುವುದು ಅಸಾಧ್ಯ.

ಶಾಮನೂರರಂತೆ ಫ್ಯೂಡಲ್ ಕುಟುಂಬದಿಂದ ಬಂದಿರದಿದ್ದರೂ, ಬಹಳ ಉಡಾಫೆಯಿಂದ ವರ್ತಿಸುತ್ತಿದ್ದ ಅಂಬರೀಷ್‍ರ ವಿಚಾರದಲ್ಲೂ ಕಾಂಗ್ರೆಸ್ ಪೆಟ್ಟು ತಿಂದಿತು. 2013ರ ಚುನಾವಣೆಯಲ್ಲಿ ಗೆದ್ದು ಮಂತ್ರಿಯಾದ ಅಂಬರೀಷ್ ಜನರ ಮನ್ನಣೆ ಕಳೆದುಕೊಂಡಿದ್ದರು. ಅವರು ಮತ್ತೆ ಗೆಲ್ಲುವುದು ಸಾಧ್ಯವಿಲ್ಲ ಎಂದು ಕಾಂಗ್ರೆಸ್ಸಿಗೂ ಗೊತ್ತಿತ್ತು; ಅಂಬರೀಷ್‍ಗೂ ಗೊತ್ತಿತ್ತು. ಅವರು ಟಿಕೆಟ್ ಬೇಕು ಎಂದು ಅರ್ಜಿಯೂ ಹಾಕಲಿಲ್ಲ; ಕೇಳಲೂ ಇಲ್ಲ. ಆದರೆ, ಅವರ ಮನೆ ಬಾಗಿಲಿಗೇ ಬಿ.ಫಾರಂ ತೆಗೆದುಕೊಂಡು ಹೋಗಿ ಕೊಡಲಾಯಿತು. ಅದನ್ನು ಅಂಬರೀಷ್ ತಿರಸ್ಕರಿಸಿದರು.

ವ್ಯಕ್ತಿಗಳಿಗಿಂತ ಪಕ್ಷ ಮುಖ್ಯ ಎನ್ನುವುದು ಕಾಂಗ್ರೆಸ್ ಪಕ್ಷದಲ್ಲೇ ಇಲ್ಲ. ಅದರ ಅತ್ಯಂತ ತುದಿಯಲ್ಲಿರುವ ಕುಟುಂಬವು ಪಕ್ಷಕ್ಕಿಂತ ಮುಖ್ಯ ಎಂದು ಹಲವು ಸಾರಿ ಸಾಬೀತಾಗಿದೆ. ರಾಹುಲ್‍ಗಾಂಧಿ ರಾಜ್ಯ ಪದಾಧಿಕಾರಿಗಳು ಮತ್ತು ಇತರ ಹಿರಿಯ ನಾಯಕರ ಅಭಿಪ್ರಾಯಗಳಿಗೆ ಹೆಚ್ಚಿನ ಗೌರವ ಕೊಡುತ್ತಾರೆಂದೂ, ಅದೇ ಕಾರಣಕ್ಕೆ ತನ್ನ ಅಭಿಪ್ರಾಯಕ್ಕೆ ವಿರುದ್ಧವಾಗಿ ದೆಹಲಿ ಮತ್ತು ಪ.ಬಂಗಾಳಗಳಲ್ಲಿ ಮೈತ್ರಿಯಾಗಲಿಲ್ಲವೆಂದೂ ಹೇಳಬಹುದು. ಆದರೆ, ಇದು ಎಷ್ಟು ದಿನ ಉಳಿಯುತ್ತದೆ ಕಾದು ನೋಡಬೇಕು.

ಸಂಘಟನಾ ಶಕ್ತಿಯನ್ನು ಕಟ್ಟಿಕೊಳ್ಳದ, ತನ್ನದೇ ಆದ ವೈಚಾರಿಕ ನೆಲೆಯನ್ನು ಪಕ್ಷದಲ್ಲೂ, ಸಮಾಜದಲ್ಲೂ ತರದ ಪಕ್ಷವೊಂದು ಹೇಗೆ ತಾನೇ ದೀರ್ಘಕಾಲ ಉಳಿದುಕೊಂಡೀತು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...