Homeಮುಖಪುಟದಕ್ಷಿಣ ಕೊರಿಯಾದ ಖ್ಯಾತ ಚಿತ್ರನಿರ್ದೇಶಕ ಕಿಮ್ ಕಿ ಡುಕ್ ವಿಧಿವಶ

ದಕ್ಷಿಣ ಕೊರಿಯಾದ ಖ್ಯಾತ ಚಿತ್ರನಿರ್ದೇಶಕ ಕಿಮ್ ಕಿ ಡುಕ್ ವಿಧಿವಶ

- Advertisement -
- Advertisement -

ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತಿ ಪಡೆದಿದ್ದ, ‘ಸ್ಪ್ರಿಂಗ್, ಸಮ್ಮರ್, ಫಾಲ್, ವಿಂಟರ್’ ಸಿನೆಮಾದ ಮೂಲಕ ವಿಶ್ವದ ಸಿನೆಪ್ರಿಯರ ಮನೆಮಾತಾಗಿದ್ದ ದಕ್ಷಿಣ ಕೊರಿಯಾದ ಖ್ಯಾತ ಚಿತ್ರನಿರ್ದೇಶಕ ಕಿಮ್ ಕಿ ಡುಕ್ ಇಂದು ಕೊನೆಯುಸಿರೆಳೆದಿದ್ದಾರೆ. ಕಿಮ್ ಅವರು ಕೊರೊನಾ ಸೋಂಕಿಗೆ ಗುರಿಯಾಗಿದ್ದರು ಎಂದು ತಿಳಿದುಬಂದಿದೆ.

ಇದನ್ನೂ ಓದಿ: ರೈತರಿಗೆ ಬೆಂಬಲ: ‘#WeUnitedForFarmers’ ಟ್ರೆಂಡಿಂಗ್ – ಪ್ರತಿತಂತ್ರ ಹೂಡುತ್ತಿರುವ ಬಿಜೆಪಿ!

1960 ರಲ್ಲಿ ಜನಿಸಿದ ಇವರು 1996 ರಲ್ಲಿ ಕ್ರೊಕಡೈಲ್ ಎನ್ನುವ ಚಿತ್ರವನ್ನು ನಿರ್ದೇಶಿಸುವ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು.

ಹಲವು ಅಂತರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರಶಸ್ತಿಗಳನ್ನು ಪಡೆದಿದ್ದ ಕಿಮ್ ಅವರ ಚಲನಚಿತ್ರಗಳು ಬೆಂಗಳೂರು, ಕೇರಳ ಸೇರಿದಂತೆ ಹಲವು ಭಾರತೀಯ ಚಿತ್ರೋತ್ಸವಗಳಲ್ಲಿ ಕೂಡ ಪ್ರದರ್ಶನಗೊಂಡು ಪ್ರೇಕ್ಷಕರ ಗಮನ ಸೆಳೆದಿದ್ದವು.

ಇದನ್ನೂ ಓದಿ: ಕೃಷಿ ಕಾಯ್ದೆಗಳ ವಿರುದ್ದ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ರೈತ ಸಂಘಟನೆ

ಸುಮಾರು 40 ಕ್ಕೂ ಹೆಚ್ಚು ಸಿನೆಮಾಗಳನ್ನು ನಿರ್ದೇಶಿಸಿರುವ ಕಿಮ್ ಹಲವು ವಿವಾದಗಗಳಿಗೂ ಸಿಲುಕಿದ್ದರು. ವಿವಾದಾತ್ಮಕ ಚಲನಚಿತ್ರ ‘ಮೊಬಿಯಸ್’ ಚಿತ್ರೀಕರಣದ ವೇಳೆ ನಟಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪವನ್ನು ಎದುರಿಸಿದ್ದರು.

3-ಐರನ್, ದ ಬೋ, ಬ್ಯಾಡ್ ಗಯ್, ಡ್ರೀಮ್, ಕ್ರೋಕೋಡೈಲ್ ಇತ್ಯಾದಿ ಸಿನೆಮಾಗಳು ವಿಶ್ವದಾದ್ಯಂತ ಪ್ರೇಕ್ಷಕರ ನಡುವೆ ಜನಪ್ರಿಯವಾಗಿವೆ. 2016 ರಲ್ಲಿ ಉತ್ತರ ಮತ್ತು ದಕ್ಷಿಣ ಕೊರಿಯಾ ದೇಶಗಳ ನಡುವಿನ ಸಂಘರ್ಷವನ್ನು ಅವಲೋಕಿಸುವ ‘ದ ನೆಟ್’ ಚಲನಚಿತ್ರವನ್ನು ಕೂಡ ಕಿಮ್ ನಿರ್ದೇಶಿಸಿದ್ದರು. ಇದು ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡಿತ್ತು,.

2013ರ ಕೇರಳ ಚಲನಚಿತ್ರೋತ್ಸವಕ್ಕೆ ತಿರುವನಂತಪುರಂಗೆ ಕಿಮ್ ಕಿ ಡುಕ್ ಆಗಮಿಸಿದ್ದು ಆ ಉತ್ಸವದ ಮುಖ್ಯ ಆಕರ್ಷಣೆಯಲ್ಲೊಂದಾಗಿತ್ತು.

ಇದನ್ನೂ ಓದಿ: ಟೊಯೊಟಾ ಕಿರ್ಲೋಸ್ಕರ್‌ ದರ್ಪ ಮುಂದುವರಿಕೆ: ’ಛತ್ರಿ ಚಳುವಳಿ’ ಆರಂಭಿಸಿದ ಕಾರ್ಮಿಕರು!

ಇವರ ಸಿನಿಮಾಗಳನ್ನು ಶ್ರೇಷ್ಠ ಚಿತ್ರಗಳೆಂದು ಆರಾಧಿಸುವ ದೊಡ್ಡ ಸಮೂಹವೇ ಜಗತ್ತಿನಾದ್ಯಂತ ಇದೆ. ಹಾಗೇ ಅವರೊಬ್ಬ ಕೀಳು ಅಭಿರುಚಿಯ ಕೆಟ್ಟ ನಿರ್ದೇಶಕ; ಕ್ರೌರ್ಯ, ಲೈಂಗಿಕತೆಯನ್ನೇ ಬಂಡವಾಳ ಮಾಡಿಕೊಂಡು ಸಿನಿಮಾ ಮಾಡುವ ಸ್ಯಾಡಿಸ್ಟ್ ಎಂದು ಜರಿಯುವವರ ಸಂಖ್ಯೆಯೂ ಕಮ್ಮಿಯಿಲ್ಲ. ‘ಕೊರಿಯನ್ ಸಿನಿಮಾ’ ಎಂಬ ಹಣೆಪಟ್ಟಿಯಲ್ಲಿ ಜಗತ್ತಿನಾದ್ಯಂತ ಗಮನಸೆಳೆಯುತ್ತಿರುವ ಚಿತ್ರಗಳಿಗಿಂತ ತುಂಬ ಭಿನ್ನವಾದ, ವಿರುದ್ಧವೇನೋ ಅನಿಸುವಂಥ ಸಿನಿಮಾಗಳನ್ನು ನೀಡಿದ ನಿರ್ದೇಶಕ ಕಿಮ್ ಕಿ ಡುಕ್. ಕಿಮ್‌ ಕಿ ಡುಕ್ ಹೆಸರಿನ ಹಿಂದೆ ‘ಕಾಂಟ್ರವರ್ಷಿಯಲ್ ಡೈರೆಕ್ಟರ್’ ಎಂಬ ಒಂದು ಬಿರುದು ಸದಾಕಾಲ ಉಲ್ಲೇಖಿತಗೊಳ್ಳುತ್ತಿರುತ್ತದೆ.

ಇವೆಲ್ಲ ಏನೇ ಇದ್ದರೂ ಜಗತ್ತಿನ ಸಿನಿಮಾ ಆಸ್ಥಾನದಲ್ಲಿ ಕಿಮ್‌ ಕಿ ಡುಕ್‌ಗೆ ಒಂದು ಗಟ್ಟಿಯಾದ ಸಿಂಹಾಸನ ಇರುವುದಂತೂ ಯಾರೂ ತಳ್ಳಿಹಾಕಲು ಸಾಧ್ಯವಿಲ್ಲ.

ಇದನ್ನೂ ಓದಿ: ಗೋಹತ್ಯೆ ನಿಷೇಧ: ವಯಸ್ಸಾದ ದನಗಳನ್ನು ಸರ್ಕಾರವೇ ಖರೀದಿಸಲಿ – ಸಿದ್ದರಾಮಯ್ಯ ಸಲಹೆ

ಇಂದಿಗೂ ತಮ್ಮ ಸಿನಿಮಾಗಳ ಮೂಲಕ ಸಿನಿಮಾಜಗತ್ತಿನಲ್ಲಿ ಕಂಪನ ಎಬ್ಬಿಸುತ್ತಲೇ ಇರುವ ಕಿಮ್ ಕಿ ಡುಕ್ ಸಿನಿಮಾ ಕಲೆಯನ್ನು ಅಕಾಡೆಮಿಕ್ ಆಗಿ ಕಲಿತವರಲ್ಲ. ಆದರೆ ಅವರ ಎಷ್ಟೋ ಸಿನಿಮಾಗಳನ್ನು ನೋಡಿದಾಗ ಸಿನಿಮಾ ಮಾಧ್ಯಮವೂ ತನ್ನನ್ನು ತಾನು ವಿಸ್ತರಿಸಿಕೊಳ್ಳಲು, ಅಭಿವ್ಯಕ್ತಿಸಿಕೊಳ್ಳಲು ಈ ನಿರ್ದೇಶಕನಿಗಾಗಿ ಕಾಯುತ್ತಿತ್ತೇನೋ ಎಂಬುದು ಹಲವರ ಅಭಿಪ್ರಾಯವಾಗಿತ್ತು.


ಇದನ್ನೂ ಓದಿ: ಯುಪಿಎ ಅಧ್ಯಕ್ಷ ಸ್ಥಾನಕ್ಕೆ ಎನ್‌ಸಿಪಿ ಹಿರಿಯ ಮುಖಂಡ ಶರದ್ ಪವಾರ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...