Homeಮುಖಪುಟದಕ್ಷಿಣ ಕೊರಿಯಾದ ಖ್ಯಾತ ಚಿತ್ರನಿರ್ದೇಶಕ ಕಿಮ್ ಕಿ ಡುಕ್ ವಿಧಿವಶ

ದಕ್ಷಿಣ ಕೊರಿಯಾದ ಖ್ಯಾತ ಚಿತ್ರನಿರ್ದೇಶಕ ಕಿಮ್ ಕಿ ಡುಕ್ ವಿಧಿವಶ

- Advertisement -
- Advertisement -

ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತಿ ಪಡೆದಿದ್ದ, ‘ಸ್ಪ್ರಿಂಗ್, ಸಮ್ಮರ್, ಫಾಲ್, ವಿಂಟರ್’ ಸಿನೆಮಾದ ಮೂಲಕ ವಿಶ್ವದ ಸಿನೆಪ್ರಿಯರ ಮನೆಮಾತಾಗಿದ್ದ ದಕ್ಷಿಣ ಕೊರಿಯಾದ ಖ್ಯಾತ ಚಿತ್ರನಿರ್ದೇಶಕ ಕಿಮ್ ಕಿ ಡುಕ್ ಇಂದು ಕೊನೆಯುಸಿರೆಳೆದಿದ್ದಾರೆ. ಕಿಮ್ ಅವರು ಕೊರೊನಾ ಸೋಂಕಿಗೆ ಗುರಿಯಾಗಿದ್ದರು ಎಂದು ತಿಳಿದುಬಂದಿದೆ.

ಇದನ್ನೂ ಓದಿ: ರೈತರಿಗೆ ಬೆಂಬಲ: ‘#WeUnitedForFarmers’ ಟ್ರೆಂಡಿಂಗ್ – ಪ್ರತಿತಂತ್ರ ಹೂಡುತ್ತಿರುವ ಬಿಜೆಪಿ!

1960 ರಲ್ಲಿ ಜನಿಸಿದ ಇವರು 1996 ರಲ್ಲಿ ಕ್ರೊಕಡೈಲ್ ಎನ್ನುವ ಚಿತ್ರವನ್ನು ನಿರ್ದೇಶಿಸುವ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು.

ಹಲವು ಅಂತರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರಶಸ್ತಿಗಳನ್ನು ಪಡೆದಿದ್ದ ಕಿಮ್ ಅವರ ಚಲನಚಿತ್ರಗಳು ಬೆಂಗಳೂರು, ಕೇರಳ ಸೇರಿದಂತೆ ಹಲವು ಭಾರತೀಯ ಚಿತ್ರೋತ್ಸವಗಳಲ್ಲಿ ಕೂಡ ಪ್ರದರ್ಶನಗೊಂಡು ಪ್ರೇಕ್ಷಕರ ಗಮನ ಸೆಳೆದಿದ್ದವು.

ಇದನ್ನೂ ಓದಿ: ಕೃಷಿ ಕಾಯ್ದೆಗಳ ವಿರುದ್ದ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ರೈತ ಸಂಘಟನೆ

ಸುಮಾರು 40 ಕ್ಕೂ ಹೆಚ್ಚು ಸಿನೆಮಾಗಳನ್ನು ನಿರ್ದೇಶಿಸಿರುವ ಕಿಮ್ ಹಲವು ವಿವಾದಗಗಳಿಗೂ ಸಿಲುಕಿದ್ದರು. ವಿವಾದಾತ್ಮಕ ಚಲನಚಿತ್ರ ‘ಮೊಬಿಯಸ್’ ಚಿತ್ರೀಕರಣದ ವೇಳೆ ನಟಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪವನ್ನು ಎದುರಿಸಿದ್ದರು.

3-ಐರನ್, ದ ಬೋ, ಬ್ಯಾಡ್ ಗಯ್, ಡ್ರೀಮ್, ಕ್ರೋಕೋಡೈಲ್ ಇತ್ಯಾದಿ ಸಿನೆಮಾಗಳು ವಿಶ್ವದಾದ್ಯಂತ ಪ್ರೇಕ್ಷಕರ ನಡುವೆ ಜನಪ್ರಿಯವಾಗಿವೆ. 2016 ರಲ್ಲಿ ಉತ್ತರ ಮತ್ತು ದಕ್ಷಿಣ ಕೊರಿಯಾ ದೇಶಗಳ ನಡುವಿನ ಸಂಘರ್ಷವನ್ನು ಅವಲೋಕಿಸುವ ‘ದ ನೆಟ್’ ಚಲನಚಿತ್ರವನ್ನು ಕೂಡ ಕಿಮ್ ನಿರ್ದೇಶಿಸಿದ್ದರು. ಇದು ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡಿತ್ತು,.

2013ರ ಕೇರಳ ಚಲನಚಿತ್ರೋತ್ಸವಕ್ಕೆ ತಿರುವನಂತಪುರಂಗೆ ಕಿಮ್ ಕಿ ಡುಕ್ ಆಗಮಿಸಿದ್ದು ಆ ಉತ್ಸವದ ಮುಖ್ಯ ಆಕರ್ಷಣೆಯಲ್ಲೊಂದಾಗಿತ್ತು.

ಇದನ್ನೂ ಓದಿ: ಟೊಯೊಟಾ ಕಿರ್ಲೋಸ್ಕರ್‌ ದರ್ಪ ಮುಂದುವರಿಕೆ: ’ಛತ್ರಿ ಚಳುವಳಿ’ ಆರಂಭಿಸಿದ ಕಾರ್ಮಿಕರು!

ಇವರ ಸಿನಿಮಾಗಳನ್ನು ಶ್ರೇಷ್ಠ ಚಿತ್ರಗಳೆಂದು ಆರಾಧಿಸುವ ದೊಡ್ಡ ಸಮೂಹವೇ ಜಗತ್ತಿನಾದ್ಯಂತ ಇದೆ. ಹಾಗೇ ಅವರೊಬ್ಬ ಕೀಳು ಅಭಿರುಚಿಯ ಕೆಟ್ಟ ನಿರ್ದೇಶಕ; ಕ್ರೌರ್ಯ, ಲೈಂಗಿಕತೆಯನ್ನೇ ಬಂಡವಾಳ ಮಾಡಿಕೊಂಡು ಸಿನಿಮಾ ಮಾಡುವ ಸ್ಯಾಡಿಸ್ಟ್ ಎಂದು ಜರಿಯುವವರ ಸಂಖ್ಯೆಯೂ ಕಮ್ಮಿಯಿಲ್ಲ. ‘ಕೊರಿಯನ್ ಸಿನಿಮಾ’ ಎಂಬ ಹಣೆಪಟ್ಟಿಯಲ್ಲಿ ಜಗತ್ತಿನಾದ್ಯಂತ ಗಮನಸೆಳೆಯುತ್ತಿರುವ ಚಿತ್ರಗಳಿಗಿಂತ ತುಂಬ ಭಿನ್ನವಾದ, ವಿರುದ್ಧವೇನೋ ಅನಿಸುವಂಥ ಸಿನಿಮಾಗಳನ್ನು ನೀಡಿದ ನಿರ್ದೇಶಕ ಕಿಮ್ ಕಿ ಡುಕ್. ಕಿಮ್‌ ಕಿ ಡುಕ್ ಹೆಸರಿನ ಹಿಂದೆ ‘ಕಾಂಟ್ರವರ್ಷಿಯಲ್ ಡೈರೆಕ್ಟರ್’ ಎಂಬ ಒಂದು ಬಿರುದು ಸದಾಕಾಲ ಉಲ್ಲೇಖಿತಗೊಳ್ಳುತ್ತಿರುತ್ತದೆ.

ಇವೆಲ್ಲ ಏನೇ ಇದ್ದರೂ ಜಗತ್ತಿನ ಸಿನಿಮಾ ಆಸ್ಥಾನದಲ್ಲಿ ಕಿಮ್‌ ಕಿ ಡುಕ್‌ಗೆ ಒಂದು ಗಟ್ಟಿಯಾದ ಸಿಂಹಾಸನ ಇರುವುದಂತೂ ಯಾರೂ ತಳ್ಳಿಹಾಕಲು ಸಾಧ್ಯವಿಲ್ಲ.

ಇದನ್ನೂ ಓದಿ: ಗೋಹತ್ಯೆ ನಿಷೇಧ: ವಯಸ್ಸಾದ ದನಗಳನ್ನು ಸರ್ಕಾರವೇ ಖರೀದಿಸಲಿ – ಸಿದ್ದರಾಮಯ್ಯ ಸಲಹೆ

ಇಂದಿಗೂ ತಮ್ಮ ಸಿನಿಮಾಗಳ ಮೂಲಕ ಸಿನಿಮಾಜಗತ್ತಿನಲ್ಲಿ ಕಂಪನ ಎಬ್ಬಿಸುತ್ತಲೇ ಇರುವ ಕಿಮ್ ಕಿ ಡುಕ್ ಸಿನಿಮಾ ಕಲೆಯನ್ನು ಅಕಾಡೆಮಿಕ್ ಆಗಿ ಕಲಿತವರಲ್ಲ. ಆದರೆ ಅವರ ಎಷ್ಟೋ ಸಿನಿಮಾಗಳನ್ನು ನೋಡಿದಾಗ ಸಿನಿಮಾ ಮಾಧ್ಯಮವೂ ತನ್ನನ್ನು ತಾನು ವಿಸ್ತರಿಸಿಕೊಳ್ಳಲು, ಅಭಿವ್ಯಕ್ತಿಸಿಕೊಳ್ಳಲು ಈ ನಿರ್ದೇಶಕನಿಗಾಗಿ ಕಾಯುತ್ತಿತ್ತೇನೋ ಎಂಬುದು ಹಲವರ ಅಭಿಪ್ರಾಯವಾಗಿತ್ತು.


ಇದನ್ನೂ ಓದಿ: ಯುಪಿಎ ಅಧ್ಯಕ್ಷ ಸ್ಥಾನಕ್ಕೆ ಎನ್‌ಸಿಪಿ ಹಿರಿಯ ಮುಖಂಡ ಶರದ್ ಪವಾರ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...