Homeಮುಖಪುಟದಕ್ಷಿಣ ಕೊರಿಯಾದ ಖ್ಯಾತ ಚಿತ್ರನಿರ್ದೇಶಕ ಕಿಮ್ ಕಿ ಡುಕ್ ವಿಧಿವಶ

ದಕ್ಷಿಣ ಕೊರಿಯಾದ ಖ್ಯಾತ ಚಿತ್ರನಿರ್ದೇಶಕ ಕಿಮ್ ಕಿ ಡುಕ್ ವಿಧಿವಶ

- Advertisement -
- Advertisement -

ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತಿ ಪಡೆದಿದ್ದ, ‘ಸ್ಪ್ರಿಂಗ್, ಸಮ್ಮರ್, ಫಾಲ್, ವಿಂಟರ್’ ಸಿನೆಮಾದ ಮೂಲಕ ವಿಶ್ವದ ಸಿನೆಪ್ರಿಯರ ಮನೆಮಾತಾಗಿದ್ದ ದಕ್ಷಿಣ ಕೊರಿಯಾದ ಖ್ಯಾತ ಚಿತ್ರನಿರ್ದೇಶಕ ಕಿಮ್ ಕಿ ಡುಕ್ ಇಂದು ಕೊನೆಯುಸಿರೆಳೆದಿದ್ದಾರೆ. ಕಿಮ್ ಅವರು ಕೊರೊನಾ ಸೋಂಕಿಗೆ ಗುರಿಯಾಗಿದ್ದರು ಎಂದು ತಿಳಿದುಬಂದಿದೆ.

ಇದನ್ನೂ ಓದಿ: ರೈತರಿಗೆ ಬೆಂಬಲ: ‘#WeUnitedForFarmers’ ಟ್ರೆಂಡಿಂಗ್ – ಪ್ರತಿತಂತ್ರ ಹೂಡುತ್ತಿರುವ ಬಿಜೆಪಿ!

1960 ರಲ್ಲಿ ಜನಿಸಿದ ಇವರು 1996 ರಲ್ಲಿ ಕ್ರೊಕಡೈಲ್ ಎನ್ನುವ ಚಿತ್ರವನ್ನು ನಿರ್ದೇಶಿಸುವ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು.

ಹಲವು ಅಂತರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರಶಸ್ತಿಗಳನ್ನು ಪಡೆದಿದ್ದ ಕಿಮ್ ಅವರ ಚಲನಚಿತ್ರಗಳು ಬೆಂಗಳೂರು, ಕೇರಳ ಸೇರಿದಂತೆ ಹಲವು ಭಾರತೀಯ ಚಿತ್ರೋತ್ಸವಗಳಲ್ಲಿ ಕೂಡ ಪ್ರದರ್ಶನಗೊಂಡು ಪ್ರೇಕ್ಷಕರ ಗಮನ ಸೆಳೆದಿದ್ದವು.

ಇದನ್ನೂ ಓದಿ: ಕೃಷಿ ಕಾಯ್ದೆಗಳ ವಿರುದ್ದ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ರೈತ ಸಂಘಟನೆ

ಸುಮಾರು 40 ಕ್ಕೂ ಹೆಚ್ಚು ಸಿನೆಮಾಗಳನ್ನು ನಿರ್ದೇಶಿಸಿರುವ ಕಿಮ್ ಹಲವು ವಿವಾದಗಗಳಿಗೂ ಸಿಲುಕಿದ್ದರು. ವಿವಾದಾತ್ಮಕ ಚಲನಚಿತ್ರ ‘ಮೊಬಿಯಸ್’ ಚಿತ್ರೀಕರಣದ ವೇಳೆ ನಟಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪವನ್ನು ಎದುರಿಸಿದ್ದರು.

3-ಐರನ್, ದ ಬೋ, ಬ್ಯಾಡ್ ಗಯ್, ಡ್ರೀಮ್, ಕ್ರೋಕೋಡೈಲ್ ಇತ್ಯಾದಿ ಸಿನೆಮಾಗಳು ವಿಶ್ವದಾದ್ಯಂತ ಪ್ರೇಕ್ಷಕರ ನಡುವೆ ಜನಪ್ರಿಯವಾಗಿವೆ. 2016 ರಲ್ಲಿ ಉತ್ತರ ಮತ್ತು ದಕ್ಷಿಣ ಕೊರಿಯಾ ದೇಶಗಳ ನಡುವಿನ ಸಂಘರ್ಷವನ್ನು ಅವಲೋಕಿಸುವ ‘ದ ನೆಟ್’ ಚಲನಚಿತ್ರವನ್ನು ಕೂಡ ಕಿಮ್ ನಿರ್ದೇಶಿಸಿದ್ದರು. ಇದು ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡಿತ್ತು,.

2013ರ ಕೇರಳ ಚಲನಚಿತ್ರೋತ್ಸವಕ್ಕೆ ತಿರುವನಂತಪುರಂಗೆ ಕಿಮ್ ಕಿ ಡುಕ್ ಆಗಮಿಸಿದ್ದು ಆ ಉತ್ಸವದ ಮುಖ್ಯ ಆಕರ್ಷಣೆಯಲ್ಲೊಂದಾಗಿತ್ತು.

ಇದನ್ನೂ ಓದಿ: ಟೊಯೊಟಾ ಕಿರ್ಲೋಸ್ಕರ್‌ ದರ್ಪ ಮುಂದುವರಿಕೆ: ’ಛತ್ರಿ ಚಳುವಳಿ’ ಆರಂಭಿಸಿದ ಕಾರ್ಮಿಕರು!

ಇವರ ಸಿನಿಮಾಗಳನ್ನು ಶ್ರೇಷ್ಠ ಚಿತ್ರಗಳೆಂದು ಆರಾಧಿಸುವ ದೊಡ್ಡ ಸಮೂಹವೇ ಜಗತ್ತಿನಾದ್ಯಂತ ಇದೆ. ಹಾಗೇ ಅವರೊಬ್ಬ ಕೀಳು ಅಭಿರುಚಿಯ ಕೆಟ್ಟ ನಿರ್ದೇಶಕ; ಕ್ರೌರ್ಯ, ಲೈಂಗಿಕತೆಯನ್ನೇ ಬಂಡವಾಳ ಮಾಡಿಕೊಂಡು ಸಿನಿಮಾ ಮಾಡುವ ಸ್ಯಾಡಿಸ್ಟ್ ಎಂದು ಜರಿಯುವವರ ಸಂಖ್ಯೆಯೂ ಕಮ್ಮಿಯಿಲ್ಲ. ‘ಕೊರಿಯನ್ ಸಿನಿಮಾ’ ಎಂಬ ಹಣೆಪಟ್ಟಿಯಲ್ಲಿ ಜಗತ್ತಿನಾದ್ಯಂತ ಗಮನಸೆಳೆಯುತ್ತಿರುವ ಚಿತ್ರಗಳಿಗಿಂತ ತುಂಬ ಭಿನ್ನವಾದ, ವಿರುದ್ಧವೇನೋ ಅನಿಸುವಂಥ ಸಿನಿಮಾಗಳನ್ನು ನೀಡಿದ ನಿರ್ದೇಶಕ ಕಿಮ್ ಕಿ ಡುಕ್. ಕಿಮ್‌ ಕಿ ಡುಕ್ ಹೆಸರಿನ ಹಿಂದೆ ‘ಕಾಂಟ್ರವರ್ಷಿಯಲ್ ಡೈರೆಕ್ಟರ್’ ಎಂಬ ಒಂದು ಬಿರುದು ಸದಾಕಾಲ ಉಲ್ಲೇಖಿತಗೊಳ್ಳುತ್ತಿರುತ್ತದೆ.

ಇವೆಲ್ಲ ಏನೇ ಇದ್ದರೂ ಜಗತ್ತಿನ ಸಿನಿಮಾ ಆಸ್ಥಾನದಲ್ಲಿ ಕಿಮ್‌ ಕಿ ಡುಕ್‌ಗೆ ಒಂದು ಗಟ್ಟಿಯಾದ ಸಿಂಹಾಸನ ಇರುವುದಂತೂ ಯಾರೂ ತಳ್ಳಿಹಾಕಲು ಸಾಧ್ಯವಿಲ್ಲ.

ಇದನ್ನೂ ಓದಿ: ಗೋಹತ್ಯೆ ನಿಷೇಧ: ವಯಸ್ಸಾದ ದನಗಳನ್ನು ಸರ್ಕಾರವೇ ಖರೀದಿಸಲಿ – ಸಿದ್ದರಾಮಯ್ಯ ಸಲಹೆ

ಇಂದಿಗೂ ತಮ್ಮ ಸಿನಿಮಾಗಳ ಮೂಲಕ ಸಿನಿಮಾಜಗತ್ತಿನಲ್ಲಿ ಕಂಪನ ಎಬ್ಬಿಸುತ್ತಲೇ ಇರುವ ಕಿಮ್ ಕಿ ಡುಕ್ ಸಿನಿಮಾ ಕಲೆಯನ್ನು ಅಕಾಡೆಮಿಕ್ ಆಗಿ ಕಲಿತವರಲ್ಲ. ಆದರೆ ಅವರ ಎಷ್ಟೋ ಸಿನಿಮಾಗಳನ್ನು ನೋಡಿದಾಗ ಸಿನಿಮಾ ಮಾಧ್ಯಮವೂ ತನ್ನನ್ನು ತಾನು ವಿಸ್ತರಿಸಿಕೊಳ್ಳಲು, ಅಭಿವ್ಯಕ್ತಿಸಿಕೊಳ್ಳಲು ಈ ನಿರ್ದೇಶಕನಿಗಾಗಿ ಕಾಯುತ್ತಿತ್ತೇನೋ ಎಂಬುದು ಹಲವರ ಅಭಿಪ್ರಾಯವಾಗಿತ್ತು.


ಇದನ್ನೂ ಓದಿ: ಯುಪಿಎ ಅಧ್ಯಕ್ಷ ಸ್ಥಾನಕ್ಕೆ ಎನ್‌ಸಿಪಿ ಹಿರಿಯ ಮುಖಂಡ ಶರದ್ ಪವಾರ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...