Homeಕರ್ನಾಟಕಸಂಬಳ ಕೊಡದ ಆರೋಪ: ಐಫೋನ್ ತಯಾರಿಕ ನರಸಾಪುರದ 'ವಿಸ್ಟ್ರಾನ್' ಕಂಪನಿಗೆ ಬೆಂಕಿ ಹಚ್ಚಿದ ಕಾರ್ಮಿಕರು

ಸಂಬಳ ಕೊಡದ ಆರೋಪ: ಐಫೋನ್ ತಯಾರಿಕ ನರಸಾಪುರದ ‘ವಿಸ್ಟ್ರಾನ್’ ಕಂಪನಿಗೆ ಬೆಂಕಿ ಹಚ್ಚಿದ ಕಾರ್ಮಿಕರು

ಕೆಲಸ ಮಾಡಿಸಿಕೊಂಡು 4 ತಿಂಗಳುಗಳಿಂದ ಸಂಬಳ ಕೊಡದೆ ಸತಾಯಿಸುತ್ತಿದ್ದರು. ಹಾಗಾಗಿ ಅಲ್ಲಿನ ಕಾರ್ಮಿಕರು ಬಂಡಾಯವೆದ್ದು ಕಂಪನಿಯ ವಸ್ತುಗಳನ್ನು ಪುಡಿ ಪುಡಿ ಮಾಡಿ ತಮ್ಮ ಸಿಟ್ಟು ಹೊರಹಾಕಿದ್ದಾರೆ.

- Advertisement -
- Advertisement -

ಕೋಲಾರ ಬಳಿಯ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಆರಂಭವಾಗಿದ್ದ ದೇಶದ ಏಕೈಕ ಐಫೋನ್ ತಯಾರಿಕ ವಿಸ್ಟ್ರಾನ್‌ನಲ್ಲಿ ಕಾರ್ಮಿಕರು – ಆಡಳಿತ ಮಂಡಳಿಯ ನಡುವಿನ ಜಗಳ ಬೀದಿಗೆ ಬಂದಿದೆ. ನಾಲ್ಕು ಸಂಬಳ ನೀಡಬೇಕೆಂದು ಹಲವು ದಿನಗಳಿಂದ ಮುಷ್ಕರ ನಡೆಸುತ್ತಿದ್ದ ಸಾವಿರಾರು ಕಾರ್ಮಿಕರು ಇಂದು ತಾಳ್ಮೆ ಕಳೆದುಕೊಂಡಿದ್ದು ಕಂಪನಿಯ ಒಂದು ಭಾಗಕ್ಕೆ ಬೆಂಕಿ ಹಚ್ಚಿ, ಕಿಟಕಿ ಗಾಜುಗಳನ್ನು ಒಡೆದು, ಕಾರುಗಳನ್ನು ಜಖಂಗೊಳಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುಮಾರು 15 ಸಾವಿರ ಜನರಿಗೆ ಉದ್ಯೋಗ ಕೊಡುವುದಾಗಿ ವಿಸ್ಟ್ರಾನ್ ಕಂಪನಿ ಘೋಷಿಸಿತ್ತು. ಆದರೆ ಕಂಪನಿಯ ಖಾಯಂ ಉದ್ಯೋಗಗಳನ್ನು ಬೇರೆ ರಾಜ್ಯದವರಿಗೆ ನೀಡಿ, 12 ಸಾವಿರ ನಾಲ್ಕನೇ ದರ್ಜೆಯ ಗುತ್ತಿಗೆ ಉದ್ಯೋಗಗಳನ್ನು ಮಾತ್ರ ಸ್ಥಳೀಯರಿಗೆ ನೀಡಿದೆ. ಅಲ್ಲದೆ ಕೆಲಸ ಮಾಡಿಸಿಕೊಂಡು 4 ತಿಂಗಳುಗಳಿಂದ ಸಂಬಳ ಕೊಡದೆ ಸತಾಯಿಸುತ್ತಿದ್ದರು. ಹಾಗಾಗಿ ಅಲ್ಲಿನ ಕಾರ್ಮಿಕರು ಬಂಡಾಯವೆದ್ದು ಕಂಪನಿಯ ವಸ್ತುಗಳನ್ನು ಪುಡಿ ಪುಡಿ ಮಾಡಿ ತಮ್ಮ ಸಿಟ್ಟು ಹೊರಹಾಕಿದ್ದಾರೆ.

ಇಂದು ಬೆಳ್ಳಂಬೆಳಿಗ್ಗೆಯೇ 5 ಗಂಟೆ ಸಮಯದಲ್ಲಿ ನೂರಾರು ಕಾರ್ಮಿಕರು ಕಂಪನಿ ವಸ್ತುಗಳನ್ನು ಒಡೆದು ಹಾಕುವ ವಿಡಿಯೋಗಳು ಎಲ್ಲೆಡೆ ವೈರಲ್ ಆಗಿವೆ. ಆಡಳಿತ ಮಂಡಳಿಯ ಸದಸ್ಯರ ಕಾರುಗಳನ್ನು ಜಖಂಗೊಳಿಸಲಾಗಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಲಘು ಲಾಠೀ ಪ್ರಹಾರ ನಡೆಸಿ, ಹಲವು ಕಾರ್ಮಿಕರನ್ನು ವಶಕ್ಕೆ ಪಡೆದಿದ್ದಾರೆ. ಸ್ಥಳಕ್ಕೆ ಜಿಲ್ಲಾಧಿಕಾರಿ ಸತ್ಯಭಾಮ, ಪೊಲೀಸ್ ಅಧೀಕ್ಷಕ ಕಾರ್ತಿಕ್ ರೆಡ್ಡಿ ಭೇಟಿ ನೀಡಿದ್ದಾರೆ.

ಇಷ್ಟು ದೊಡ್ಡ ಕಂಪನಿಯಲ್ಲಿ ದುಡಿಯುವ 12 ಸಾವಿರ ಕಾರ್ಮಿಕರಿಗೆ ಕೇವಲ 8-12 ಸಾವಿರ ರೂ ಸಂಬಳವಿದೆ. ಅದನ್ನು ಕೊಡದೆ ಸತಾಯಿಸುತ್ತಿದ್ದರು. ಹಾಗಾಗಿ ಕಾರ್ಮಿಕರು ರೊಚ್ಚಿಗೆದ್ದಿದ್ದಾರೆ. ಘಟನೆ ಬೆಳಿಗ್ಗೆ 5 ಗಂಟೆಗೆ ಆರಂಭವಾದರೂ ಪೊಲೀಸರು ಸ್ಥಳಕ್ಕೆ ಬರುವಲ್ಲಿ 7 ಗಂಟೆ ಆಗಿದೆ. ಅಷ್ಟರಲ್ಲಿ ಕಾರ್ಮಿಕರು ಅಲ್ಲಿಂದ ಚೆಲ್ಲಾಪಿಲ್ಲಿಯಾಗಿದ್ದಾರೆ. ನಂತರ ರಸ್ತೆಯಲ್ಲಿ ಸಿಕ್ಕ ಸಿಕ್ಕ ಬೇರೆ ಕಂಪನಿಯ ಕಾರ್ಮಿಕರನ್ನು, ಸಾಮಾನ್ಯ ಜನರನ್ನು ಪೊಲೀಸರು ಬಂಧಿಸಿದ್ದಾರೆ. ಸ್ಥಳದಲ್ಲಿ ಪ್ರಕ್ಷುಬ್ದ ವಾತವಾರಣ ನಿರ್ಮಾಣವಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.


ಇದನ್ನೂ ಓದಿ: ಟೊಯೊಟಾ ಕಿರ್ಲೋಸ್ಕರ್‌ ದರ್ಪ ಮುಂದುವರಿಕೆ: ’ಛತ್ರಿ ಚಳುವಳಿ’ ಆರಂಭಿಸಿದ ಕಾರ್ಮಿಕರು!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...