Homeಚಳವಳಿದೆಹಲಿ ರೈತ ಹೋರಾಟಕ್ಕೆ ನಿವೃತ್ತ IAS, IPS ಸೇರಿದಂತೆ 78 ಮಾಜಿ ಅಧಿಕಾರಿಗಳ ಬೆಂಬಲ

ದೆಹಲಿ ರೈತ ಹೋರಾಟಕ್ಕೆ ನಿವೃತ್ತ IAS, IPS ಸೇರಿದಂತೆ 78 ಮಾಜಿ ಅಧಿಕಾರಿಗಳ ಬೆಂಬಲ

ಅಖಿಲ ಭಾರತ ಮತ್ತು ವಿವಿಧ ರಾಜ್ಯಗಳಲ್ಲಿ ಕೇಂದ್ರ ಸರ್ಕಾರಿ ಸೇವೆಯಲ್ಲಿದ್ದ 78 ಮಂದಿ ನಿವೃತ್ತ ಅಧಿಕಾರಿಗಳಾದ ನಾವು ಯಾವುದೇ ರಾಜಕೀಯ ಪಕ್ಷದೊಂದಿಗೆ ಗುರುತಿಸಿಕೊಂಡಿಲ್ಲ ಹಾಗೂ ತಟಸ್ಥರಾಗಿದ್ದೇವೆ ಎಂದು ಅವರು ಹೇಳಿದ್ದಾರೆ.

- Advertisement -
- Advertisement -

ಸಂಸತ್‌ನ ಎರಡೂ ಸದನಗಳಲ್ಲೂ ಯಾವುದೇ ಚರ್ಚೆಗೆ ಎಡೆಮಾಡಿಕೊಡದೆ ಜಾರಿ ಮಾಡಿದ ವಿವಾದಾತ್ಮಕ ಮೂರು ಕೃಷಿ ಕಾಯ್ದೆಗಳನ್ನು ಜಾರಿಗೊಳಿಸುವ ಮೂಲಕ ಭಾರತ ಸರ್ಕಾರ ಸಂವಿಧಾನದ ಮೂಲ ನಿಯಮಗಳನ್ನು ಉಲ್ಲಂಘನೆ ಮಾಡಿದೆ ಎಂದು 78 ಮಂದಿ ನಿವೃತ್ತ ಅಧಿಕಾರಿಗಳು ಬಹಿರಂಗ ಪತ್ರ ಬರೆದು ಖಂಡಿಸಿದ್ದಾರೆ.

ಕೇಂದ್ರ ಸರ್ಕಾರದ ನಾಗರಿಕ ಸೇವೆಯಲ್ಲಿ ಹಲವು ವರ್ಷಗಳ ಕಾಲ ಕಾರ್ಯನಿರ್ವಹಿಸಿ ನಿವೃತ್ತರಾಗಿರುವ ಐಎಎಸ್, ಐಪಿಎಸ್, ಐಆರ್‌ಎಸ್, ಐಇಎಸ್, ಐಎಫ್‌ಎಸ್, ಐಎ ಅಂಡ್ ಐಎಸ್ ಅಧಿಕಾರಿಗಳು ಪತ್ರ ಬರೆದಿರುವುದನ್ನು ಉಲ್ಲೇಖಿಸಿ ದಿವೈರ್.ಇನ್ ವರದಿ ಮಾಡಿದೆ.

ಇದನ್ನೂ ಓದಿ: 17 ದಿನದಲ್ಲಿ 11 ರೈತರು ಬಲಿ: ಇನ್ನೆಷ್ಟು ಬಲಿಯಾಗಬೇಕು..? ಎಂದು ಪ್ರಶ್ನಿಸಿದ ರಾಹುಲ್ ಗಾಂಧಿ

ರೈತರು ದೆಹಲಿಯ ಗಡಿಯಲ್ಲಿ ಕಳೆದ ಎರಡು ವಾರಗಳಿಂದ ಪ್ರತಿಭಟನೆ ನಡೆಸುತ್ತಿದ್ದು, ಕಡುಚಳಿಯನ್ನು ಲೆಕ್ಕಿಸದೆ ಸರ್ಕಾರದ ನಡೆಯನ್ನು ಪ್ರಶ್ನಿಸುತ್ತಿದ್ದಾರೆ. ಮೂರು ಹೊಸ ಕೃಷಿ ಕಾಯ್ದೆಗಳನ್ನು ರದ್ದುಪಡಿಸಿದರೆ ಪ್ರತಿಭಟನೆಯನ್ನು ಹಿಂಪಡೆಯಲು ಒಪ್ಪಿಕೊಳ್ಳುತ್ತೇವೆ ಎಂದು ಹೇಳುತ್ತಿದ್ದಾರೆ. ಕೇಂದ್ರ ಸರ್ಕಾರ ಸಂಸತ್‌ನಲ್ಲಿ ಯಾವುದೇ ಪ್ರತಿಪಕ್ಷ ಕೃಷಿ ಕಾಯ್ದೆಗಳನ್ನು ಸಂಪೂರ್ಣ ಬದಲಾವಣೆ ಮಾಡಬೇಕೆಂದು ಆಗ್ರಹ ಮಾಡಲಿಲ್ಲ. ಆದರೂ ಕೃಷಿ ಕಾಯ್ದೆಗಳನ್ನು ಸಂಪೂರ್ಣ ಬದಲಾವಣೆ ಮಾಡಿದ್ದು ಏಕೆ? ಎಂದು ನಿವೃತ್ತ ಅಧಿಕಾರಿಗಳು ಪ್ರಶ್ನಿಸಿದ್ದಾರೆ.

ನರೇಂದ್ರ ಮೋದಿ ಸರ್ಕಾರ ಸಂವಿಧಾನದ ಮೂಲ ತತ್ವಗಳನ್ನು ಉಲ್ಲಂಘಿಸಿ ಕೃಷಿ ಕಾಯ್ದೆಗಳನ್ನು ಜಾರಿಗೆ ತರುತ್ತಿದೆ. ಇದು ಒಕ್ಕೂಟ ವ್ಯವಸ್ಥೆಯ ತತ್ವಗಳ ಮೇಲಿನ ಹಲ್ಲೆಯಾಗಿದೆ. ಕೃಷಿ ರಾಜ್ಯಪಟ್ಟಿಯಲ್ಲಿದ್ದರೂ ಕೇಂದ್ರ ತಾನೇ ಕೃಷಿ ಕಾಯ್ದೆಗಳನ್ನು ಜಾರಿಗೆ ತರುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೃಷಿ ಕಾಯ್ದೆಗಳಿಗೆ ತಿದ್ದುಪಡಿ ಮಾಡಬೇಕೆಂದು ಸಂಸತ್ತಿನಲ್ಲಿ ಯಾವುದೇ ಪಕ್ಷದ ಸದಸ್ಯರು ಒತ್ತಡ ಹೇರಲಿಲ್ಲ. ಸಂಸತ್ತಿನ ಉಭಯ ಸದನಗಳಲ್ಲಿ ಕೃಷಿ ಮಸೂದೆಗಳ ಕುರಿತು ಚರ್ಚೆ-ಸಂವಾದ ನಡೆಸಲಿಲ್ಲ. ರಾಜ್ಯಸಭೆಯಲ್ಲಿ ಒಪ್ಪಿಗೆಯನ್ನೂ ಪಡೆದುಕೊಳ್ಳಲಿಲ್ಲ. ಮಸೂದೆಯನ್ನು ಧ್ವನಿ ಮತದ ಮೂಲಕ ಅಂಗೀಕರಿಸಿ ಗೊಂದಲಕ್ಕೆ ಕಾರಣವಾಗಿದೆ ಎಂದು ನಿವೃತ್ತ ಅಧಿಕಾರಿಗಳು ಸರ್ಕಾರಕ್ಕೆ ಬಹಿರಂಗ ಪತ್ರದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ರೈತರಿಗೆ ಬೆಂಬಲ: ‘#WeUnitedForFarmers’ ಟ್ರೆಂಡಿಂಗ್ – ಪ್ರತಿತಂತ್ರ ಹೂಡುತ್ತಿರುವ ಬಿಜೆಪಿ!

ಕೇಂದ್ರ ಸರ್ಕಾರ ಇಂತಹ ತೀರ್ಮಾನ ಕೈಗೊಳ್ಳದಿದ್ದರೆ ರೈತರು ಬೀದಿಗೆ ಬರುತ್ತಿರಲಿಲ್ಲ. ಪ್ರತಿಭಟನೆಗೆ ಇಳಿಯುತ್ತಿರಲಿಲ್ಲ. ಕೊರೊನಾ ಸನ್ನಿವೇಶವನ್ನು ದುರುಪಯೋಗ ಮಾಡಿಕೊಂಡು ರೈತರು ಪ್ರತಿಭಟನೆಗೆ ಹೋಗುವುದಿಲ್ಲ. ಹೆಚ್ಚು ಜನರು ಸೇರಲು ಅವಕಾಶ ಇರುವುದಿಲ್ಲ ಎಂಬುದನ್ನು ಖಚಿತ ಮಾಡಿಕೊಂಡ ಸರ್ಕಾರ ಇಂತಹ ಕಾಯ್ದೆಗಳನ್ನು ಜಾರಿಗೆ ತಂದಿದೆ. ನಾವು ಕಾಯ್ದೆಗಳ ಸರಿ-ತಪ್ಪುಗಳ ಕುರಿತು ಚರ್ಚೆ ಮಾಡಲು ಹೋಗುವುದಿಲ್ಲ. ಸಂವಿಧಾನದ ಆಶಯಗಳಂತೆ ನಡೆಯಬೇಕು ಎಂದು ಒತ್ತಾಯಿಸುತ್ತೇವೆ.

ಅಖಿಲ ಭಾರತ ಮತ್ತು ವಿವಿಧ ರಾಜ್ಯಗಳಲ್ಲಿ ಕೇಂದ್ರ ಸರ್ಕಾರಿ ಸೇವೆಯಲ್ಲಿದ್ದ 78 ಮಂದಿ ನಿವೃತ್ತ ಅಧಿಕಾರಿಗಳಾದ ನಾವು ಯಾವುದೇ ರಾಜಕೀಯ ಪಕ್ಷದೊಂದಿಗೆ ಗುರುತಿಸಿಕೊಂಡಿಲ್ಲ. ನೋಂದಣಿ ಮಾಡಿಕೊಂಡಿಲ್ಲ. ತಟಸ್ಥರಾಗಿದ್ದೇವೆ. ಪಕ್ಷಪಾತಕ್ಕೆ ನಮ್ಮಲ್ಲಿ ಅವಕಾಶವಿಲ್ಲ. ಆದರೆ ನಾವು ಸಂವಿಧಾನಕ್ಕೆ ಬದ್ದರಾಗಿ ನಡೆದು ಕೊಳ್ಳುವವರಾಗಿದ್ದೇವೆ. ಹಾಗಾಗಿ ರೈತರ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸುತ್ತೇವೆ ಎಂದು ತಿಳಿಸಿದ್ದಾರೆ.

ದೆಹಲಿ ಸಮೀಪದ ಸಿಂಘು ಗಡಿಯಲ್ಲಿ ಬೃಹತ್ ಸಂಖ್ಯೆ ರೈತರು ಪ್ರತಿಭಟನೆಗೆ ಇಳಿದಿರುವುದು ದೇಶ-ವಿದೇಶದ ಗಮನ ಸೆಳೆದಿದೆ. ಈ ಪ್ರತಿಭಟನೆಯಲ್ಲಿ ಪಂಜಾಬ್, ಹರಿಯಾಣ, ಉತ್ತರ ಪ್ರದೇಶ ಮತ್ತು ರಾಜಸ್ಥಾನ ರಾಜ್ಯದ ರೈತರು ಇದ್ದಾರೆ. ಕೃಷಿ ಕಾಯ್ದೆಗಳನ್ನು ರದ್ದುಪಡಿಸುವಂತೆ ಆಗ್ರಹಿಸುತ್ತಿದ್ದಾರೆ. ಹಲವು ತಿಂಗಗಳುಗಳಿಂದಲೂ ಸರ್ಕಾರದ ಗಮನ ಸೆಳೆಯುತ್ತಿದ್ದಾರೆ. ಹೀಗಾಗಿ ರೈತ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು, ವಿದ್ಯಾರ್ಥಿ-ಯುವಜನ ಸಂಘಟನೆಗಳು, ವಿಶ್ವವಿದ್ಯಾಲಯದ ಅಧ್ಯಾಪಕರ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.

ಇದನ್ನೂ ಓದಿ: ಮೋದಿಯವರ ಅಹಂ ದೊಡ್ಡದೋ, ರೈತಶಕ್ತಿ ದೊಡ್ಡದೋ ತೀರ್ಮಾನವಾಗಲಿದೆ

ಡಿಸೆಂಬರ್ 8 ರಂದು ಭಾರತ್ ಬಂದ್ ನಡೆಸಿ ಸರ್ಕಾರದ ಮೇಲೆ ಒತ್ತಡ ತರಲಾಯಿತು. ಪ್ರತಿಭಟನಾನಿರತ ರೈತರೊಂದಿಗೆ ಸರ್ಕಾರ ನಡೆಸಿದ ಹಲವು ಸುತ್ತಿನ ಮಾತುಕತೆ ಫಲಪ್ರದವಾಗಿಲ್ಲ. ಇಂತಹ ಸಂದರ್ಭದಲ್ಲಿ ನಾವುಗಳು ಕಾಯ್ದೆಗಳ ಸರಿತಪ್ಪುಗಳ ಕುರಿತು ಚರ್ಚಿಸುವುದಿಲ್ಲ. ಆದರೆ ಸಂವಿಧಾನದ ಮೂಲ ಆಶಯಗಳು, ಪ್ರಜಾಪ್ರಭುತ್ವದ ಪ್ರಕ್ರಿಯೆಗಳ ಉಲ್ಲಂಘನೆಯಾಗುತ್ತಿದೆ ಎಂಬುದರ ಬಗ್ಗೆ ಗಮನ ಸೆಳೆಯುತ್ತಿದ್ದೇವೆ.

ಕೇಂದ್ರ ಸರ್ಕಾರ ಒಕ್ಕೂಟ ವ್ಯವಸ್ಥೆಯನ್ನು ಮತ್ತು ಬಹುತ್ವವನ್ನು ಎತ್ತಿಹಿಡಿಯುವ ಕೆಲಸ ಮಾಡಬೇಕು. ಕೃಷಿ ಸಂವಿಧಾನದ 7 ಷೆಡ್ಯೂಲ್ ನ ವಿಷಯ ಪಟ್ಟಿಯಲ್ಲಿ 14 ರಲ್ಲಿ ಬರುತ್ತದೆ. ಕೃಷಿ ರಾಜ್ಯಪಟ್ಟಿಯಲ್ಲಿ ಬರುತ್ತದೆ. ಸಂವಿಧಾನದ ನಿಯಮಗಳನ್ನು ಉಲ್ಲಂಘಿಸಿ ಕಾಯ್ದೆ ಜಾರಿಗೊಳಿಸಿರುವುದರ ವಿರುದ್ಧ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿದೆ ಎಂದು ನಿವೃತ್ತ ಅಧಿಕಾರಿಗಳು ಬರೆದಿರುವ ಪತ್ರವನ್ನು ಉಲ್ಲೇಖಿಸಿ ದಿವೈರ್.ಇನ್ ವರದಿ ಮಾಡಿದೆ.

ಯಾವುದೇ ಮಸೂದೆ ಮಂಡನೆಯಾಗುವ ಮೊದಲು ಸಂಸತ್ತಿನ ಸಮಿತಿಗಳಿಗೆ ಕಳಿಸಬೇಕು. ಆದರೆ ಈ ಕಾಯ್ದೆಗಳ ಅಂಗೀಕಾರಕ್ಕೂ ಮೊದಲು ಸಮಿತಿಗಳಿಗೆ ಕಳಿಸುವುದನ್ನು ನಿರಾಕರಿಸಲಾಗಿದೆ. ಯುಪಿಎ-1 ಸರ್ಕಾರ ಇದ್ದಾಗ ಶೇ.60 ಮಸೂದೆಗಳನ್ನು ಸಂಸತ್ ಆಯ್ಕೆ ಸಮಿತಿಗೆ ಕಳಿಸಲಾಗಿತ್ತು. ಯುಪಿಎ-2 ಸರ್ಕಾರದ ಅವಧಿಯಲ್ಲಿ ಶೇ.71ರಷ್ಟು ಮಸೂದೆಗಳನ್ನು ಆಯ್ಕೆ ಸಮಿತಿಗಳ ಒಪ್ಪಿಗೆಗೆ ಕಳಿಸಲಾಗಿತ್ತು. ಎನ್.ಡಿ.ಎ-1 ಸರ್ಕಾರದ ಅವಧಿಯಲ್ಲಿ ಶೇ. 25ರಷ್ಟು ಮಸೂದೆಗಳು ಮಾತ್ರ ಸಂಸತ್ತಿನ ಸಮಿತಿಗಳ ಒಪ್ಪಿಗೆ ಕಳಿಸಲಾಗಿದೆ. ಈ ಸರ್ಕಾರದ ಅವಧಿಯಲ್ಲಿ ಚರ್ಚೆ ಮತ್ತು ಸಂವಾದ ನಡೆಸುವುದನ್ನು ನಿರಾಕರಿಸಿರುವುದು ಸ್ಪಷ್ಟವಾಗಿ ಕಾಣುತ್ತದೆ ಎಂದು ಪತ್ರದಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ರೈತರ ‘ಬಾಯ್ಕಾಟ್ ರಿಲೆಯನ್ಸ್’ ಅಭಿಯಾನಕ್ಕೆ ಭಾರಿ ಬೆಂಬಲ: #BoycottAdaniAmbani, #BoycottJio ಟ್ರೆಂಡಿಂಗ್

ಪ್ರತಿಭಟನೆ ನಡೆಸುತ್ತಿರುವ ರೈತರ ಮೇಲೆ ಜಲಫಿರಂಗಿ, ಆಶ್ರುವಾಯು ಮತ್ತು ಲಾಟಿ ಪ್ರಹಾರ ನಡೆಸುವ ಮೂಲಕ ಹೋರಾಟವನ್ನು ಹತ್ತಿಕ್ಕಲು ಸರ್ಕಾರ ಪ್ರಯತ್ನಿಸಿತು. ಪ್ರತಿಭಟನಾನಿರತ ರೈತರನ್ನು ದೇಶದ್ರೋಹಿಗಳು, ಪಾಕಿಸ್ತಾನ ಪರವಾದಿಗಳು, ಪ್ರಶಸ್ತಿ ವಾಪಸ್ಸಿಗಳು, ನಗರ ನಕ್ಸಲರು, ಖಾಲಿಸ್ತಾನಿಗಳು ಎಂದು ಬಿಂಬಿಸುವ ಮೂಲಕ ಕೇಂದ್ರ ಸರ್ಕಾರ ರೈತರೊಂದಿಗೆ ಚರ್ಚೆ, ಸಂವಾದ, ಮಾತುಕತೆಯಿಂದ ದೂರ ಉಳಿಯಲು ಯತ್ನಿಸುತ್ತಿದೆ. ಇದು ಸರಿಯಾದ ನಡೆಯಲ್ಲ ಎಂದು ಪ್ರಶ್ನಿಸಿದ್ದಾರೆ.

ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಹಕ್ಕುಗಳಿಗಾಗಿ ಶಾಂತಿಯುತ ಪ್ರತಿಭಟನೆ ನಡೆಸುವ ರೈತರು ಸೇರಿ ಯಾರೇ ಆದರೂ ಅವರಿಗೆ ಬೆಂಬಲ ನೀಡುತ್ತೇವೆ. ಈಗಲಾದರೂ ಸರ್ಕಾರ ಶಾಂತಿಯುತ ಪ್ರತಿಭಟನೆ ನಡೆಸುತ್ತಿರುವ ರೈತರ ಬೇಡಿಕೆಗಳನ್ನು ಈಡೇರಿಸುವ ಕೆಲಸ ಮಾಡಬೇಕು. ಪ್ರಜಾಪ್ರಭುತ್ವದ ರೀತಿಯಲ್ಲಿ ನಡೆಸುತ್ತಿರುವ ಪ್ರತಿಭಟಿಸುವ ಹಕ್ಕುಗಳನ್ನು ಗೌರವಿಸಬೇಕು. ಮಾತುಕತೆಯ ಮೂಲಕ ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗಬೇಕು ಎಂದು ನಿವೃತ್ತ ಅಧಿಕಾರಿಗಳು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಅಂಬಾನಿಯ ಜಿಯೋ ಸಿಮ್ ಬಳಸುವುದಿಲ್ಲ, ರಿಲೆಯನ್ಸ್ ಪೆಟ್ರೋಲ್ ಹಾಕಿಸುವುದಿಲ್ಲ, ಮಾಲ್‌ಗೆ ಹೋಗುವುದಿಲ್ಲ: ರೈತರ ಪ್ರತಿಜ್ಞೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...