Homeಮುಖಪುಟಮಹಾರಾಷ್ಟ್ರ: ಸರ್ಕಾರಿ ಉದ್ಯೋಗಿಗಳು ಟೀ ಶರ್ಟ್, ಜೀನ್ಸ್ ಧರಿಸುವಂತಿಲ್ಲ!

ಮಹಾರಾಷ್ಟ್ರ: ಸರ್ಕಾರಿ ಉದ್ಯೋಗಿಗಳು ಟೀ ಶರ್ಟ್, ಜೀನ್ಸ್ ಧರಿಸುವಂತಿಲ್ಲ!

ಖಾದಿ ಉದ್ಯಮವನ್ನು ಉತ್ತೇಜಿಸುವ ಸಲುವಾಗಿ, ಸರ್ಕಾರಿ ನೌಕರರು ವಾರಕ್ಕೆ ಒಮ್ಮೆಯಾದರೂ ಕಡ್ಡಾಯವಾಗಿ ಖಾದಿ ಬಟ್ಟೆಗಳನ್ನು ಧರಿಸಬೇಕು ಎಂದು ತಿಳಿಸಲಾಗಿದೆ.

- Advertisement -
- Advertisement -

ಮಹಾರಾಷ್ಟ್ರದ ಸರ್ಕಾರಿ ಅಧಿಕಾರಿಗಳು, ಉದ್ಯೋಗಿಗಳು ಮತ್ತು ಗುತ್ತಿಗೆ ಆಧಾರದಲ್ಲಿ ಕೆಲಸಕ್ಕೆ ಸೇರಿದವರು ಎಲ್ಲರಿಗೂ ಸೇರಿದಂತೆ ಇನ್ನು ಮುಂದೆ ಸರ್ಕಾರಿ ಕಚೇರಿಯಲ್ಲಿ ವಸ್ತ್ರ ಸಂಹಿತೆ ಪಾಲಿಸುವಂತೆ ಸರ್ಕಾರ ಸೂಚಿಸಿದೆ. ಜೀನ್ಸ್, ಟೀ ಶರ್ಟ್ ಮತ್ತು ಚಪ್ಪಲಿ ಧರಿಸದಂತೆ, ವಾರಕ್ಕೆ ಒಮ್ಮೆ ಖಾದಿ ಬಟ್ಟೆಗಳನ್ನು ಬಳಸುವಂತೆ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರ ಆದೇಶಿಸಿದೆ.

ಈ ವಾರದ ಆರಂಭದಲ್ಲಿ, ರಾಜ್ಯ ಸರ್ಕಾರದ ಸಾಮಾನ್ಯ ಆಡಳಿತ ವಿಭಾಗವು ತನ್ನ ಎಲ್ಲ ಉದ್ಯೋಗಿಗಳಿಗೆ ಕಟ್ಟುನಿಟ್ಟಾದ ಡ್ರೆಸ್ ಕೋಡ್ ಜಾರಿಗೆ ತರುವ ನಿರ್ಣಯವನ್ನು ಹೊರಡಿಸಿತ್ತು. ಸರ್ಕಾರಿ ಉದ್ಯೋಗಿಗಳು ರಾಜ್ಯದ ಪ್ರತಿನಿಧಿಗಳಾಗಿದ್ದು, ಅವರು ಫಾರ್ಮಲ್ ಬಟ್ಟೆ ಧರಿಸದಿದ್ದರೇ ಜನರ ಮನಸ್ಸಿನಲ್ಲಿ ಸರ್ಕಾರದ ಕೆಟ್ಟ ಚಿತ್ರಣ  ಮೂಡಬಹುದು ಎಂಬ ಕಾರಣ ನೀಡಿದ್ದಾರೆ.

’ಸರ್ಕಾರಿ ಕಚೇರಿಗಳಲ್ಲಿ ಕೆಲಸ ಮಾಡುವ ಬಹಳಷ್ಟು ಅಧಿಕಾರಿಗಳು ಮತ್ತು ನೌಕರರು, ಅದರಲ್ಲೂ ವಿಶೇಷವಾಗಿ ಗುತ್ತಿಗೆ ಪಡೆದವರು ಅಥವಾ ಸಲಹೆಗಾರರಾಗಿ ನೇಮಕಗೊಂಡವರು ಕಚೇರಿ ಸಮಯದಲ್ಲಿ ಸರ್ಕಾರಿ ನೌಕರರಂತೆ ಸೂಕ್ತವಾದ ಬಟ್ಟೆಗಳನ್ನು ಧರಿಸುವುದಿಲ್ಲ. ಇದರ ಪರಿಣಾಮವಾಗಿ, ಸಮಾಜದಲ್ಲಿ ಸರ್ಕಾರಿ ಅಧಿಕಾರಿಗಳ ಚಿತ್ರಣವು ಕೆಟ್ಟದಾಗಿರುತ್ತದೆ’ ಎಂದು ಆದೇಶದಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ನಿಲ್ಲದ ರೈತ ಹೋರಾಟ: 100 ಪತ್ರಿಕಾಗೋಷ್ಟಿ, 700 ಸಭೆಗಳ ಮೂಲಕ ಪ್ರಚಾರಕ್ಕೆ ಹೊರಟ ಬಿಜೆಪಿ!

“ಸರ್ಕಾರಿ ಅಧಿಕಾರಿಯ ಡ್ರೆಸ್ ಕೋಡ್ ಸೂಕ್ತವಲ್ಲದ, ಕಳಪೆ ಅಥವಾ ಅಶುದ್ಧವಾಗಿದ್ದರೆ ಅದು ಅವರ ಒಟ್ಟಾರೆ ಕೆಲಸದ ಮೇಲೆ ಪರೋಕ್ಷ ಪರಿಣಾಮ ಬೀರುತ್ತದೆ” ಎಂದು ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ದೇಶಪಾಂಡೆ ಸಹಿ ಮಾಡಿರುವ ಆದೇಶ ಪ್ರತಿಯಲ್ಲಿ ತಿಳಿಸಲಾಗಿದೆ.

ಡ್ರೆಸ್ ಕೋಡ್ ಹೇಗಿರಬೇಕು..?

ಸರ್ಕಾರದ ಹೊಸ ಡ್ರೆಸ್ ಕೋಡ್ ಪ್ರಕಾರ, ಎಲ್ಲಾ ಮಹಿಳಾ ಉದ್ಯೋಗಿಗಳು ಸೀರೆಗಳು, ಚೂಡಿದಾರ್, ಕುರ್ತಾ,  ದುಪಟ್ಟಾ ಧರಿಸಬೇಕು. ಪುರುಷರು ಮತ್ತು ಮಹಿಳಾ ಉದ್ಯೋಗಿಗಳಿಗೆ ಜೀನ್ಸ್ ಮತ್ತು ಟೀ ಶರ್ಟ್, ಗಾಢ ಬಣ್ಣದ, ಮುದ್ರಿತ ಅಥವಾ ಕಸೂತಿ ಬಟ್ಟೆಗಳನ್ನು ಧರಿಸುವುದನ್ನು ನಿಷೇಧಿಸಲಾಗಿದೆ. ಫಾರ್ಮಲ್ ಬೂಟುಗಳು, ಸ್ಯಾಂಡಲ್ಸ್‌ಗಳನ್ನು ಬಳಸಬೇಕು. ಲೈಟ್ ವೇಯ್ಟ್​​​ ಚಪ್ಪಲಿಗಳನ್ನು ಧರಿಸಬಾರದೆಂದು ಮಹಾರಾಷ್ಟ್ರ ಸರ್ಕಾರ ಆದೇಶಿಸಿದೆ.

ಖಾದಿ ಉದ್ಯಮವನ್ನು ಉತ್ತೇಜಿಸುವ ಸಲುವಾಗಿ, ಸರ್ಕಾರಿ ನೌಕರರು ವಾರಕ್ಕೆ ಒಮ್ಮೆಯಾದರೂ ಕಡ್ಡಾಯವಾಗಿ ಖಾದಿ ಬಟ್ಟೆಗಳನ್ನು ಧರಿಸಬೇಕು ಎಂದು ತಿಳಿಸಲಾಗಿದೆ.

ಇತ್ತಿಚೆಗೆ ಮಹಾರಾಷ್ಟ್ರದ ಔರಂಗಾಬಾದ್ ನಗರದಲ್ಲಿ ಬಸ್ ಕಂಡಕ್ಟರ್‌ಗಳು ಮತ್ತು ಟಿಕೆಟ್ ಇನ್ಸ್‌ಪೆಕ್ಟರ್‌ಗಳು ಶೀಘ್ರದಲ್ಲೇ ತಮ್ಮ ಸಮವಸ್ತ್ರದಲ್ಲಿ ಕ್ಯಾಮೆರಾ ಹೊಂದಿಲಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದರು. ಇದರಿಂದ ಪ್ರಯಾಣ ಸಮಯದಲ್ಲಿ ಪ್ರಯಾಣಿಕರ ವರ್ತನೆ ಮತ್ತು ಇತರ ಚಟುವಟಿಕೆಗಳ ಬಗ್ಗೆ ಗಮನ ಇರಿಸಲಾಗುತ್ತದೆ ಎಂದು ಮಾಹಿತಿ ನೀಡಲಾಗಿತ್ತು


ಇದನ್ನೂ ಓದಿ: ರೈತ ವಿರೋಧಿ ಮಸೂದೆಗಳಿಗೆ ಸಹಿ ಹಾಕಬಾರದು: ಹೋರಾಟನಿರತ ರೈತ ಮುಖಂಡರನ್ನು ಮಾತುಕತೆಗೆ ಕರೆದ ರಾಜ್ಯಪಾಲರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...