Homeಮುಖಪುಟಮಹಾರಾಷ್ಟ್ರ: ಸರ್ಕಾರಿ ಉದ್ಯೋಗಿಗಳು ಟೀ ಶರ್ಟ್, ಜೀನ್ಸ್ ಧರಿಸುವಂತಿಲ್ಲ!

ಮಹಾರಾಷ್ಟ್ರ: ಸರ್ಕಾರಿ ಉದ್ಯೋಗಿಗಳು ಟೀ ಶರ್ಟ್, ಜೀನ್ಸ್ ಧರಿಸುವಂತಿಲ್ಲ!

ಖಾದಿ ಉದ್ಯಮವನ್ನು ಉತ್ತೇಜಿಸುವ ಸಲುವಾಗಿ, ಸರ್ಕಾರಿ ನೌಕರರು ವಾರಕ್ಕೆ ಒಮ್ಮೆಯಾದರೂ ಕಡ್ಡಾಯವಾಗಿ ಖಾದಿ ಬಟ್ಟೆಗಳನ್ನು ಧರಿಸಬೇಕು ಎಂದು ತಿಳಿಸಲಾಗಿದೆ.

- Advertisement -
- Advertisement -

ಮಹಾರಾಷ್ಟ್ರದ ಸರ್ಕಾರಿ ಅಧಿಕಾರಿಗಳು, ಉದ್ಯೋಗಿಗಳು ಮತ್ತು ಗುತ್ತಿಗೆ ಆಧಾರದಲ್ಲಿ ಕೆಲಸಕ್ಕೆ ಸೇರಿದವರು ಎಲ್ಲರಿಗೂ ಸೇರಿದಂತೆ ಇನ್ನು ಮುಂದೆ ಸರ್ಕಾರಿ ಕಚೇರಿಯಲ್ಲಿ ವಸ್ತ್ರ ಸಂಹಿತೆ ಪಾಲಿಸುವಂತೆ ಸರ್ಕಾರ ಸೂಚಿಸಿದೆ. ಜೀನ್ಸ್, ಟೀ ಶರ್ಟ್ ಮತ್ತು ಚಪ್ಪಲಿ ಧರಿಸದಂತೆ, ವಾರಕ್ಕೆ ಒಮ್ಮೆ ಖಾದಿ ಬಟ್ಟೆಗಳನ್ನು ಬಳಸುವಂತೆ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರ ಆದೇಶಿಸಿದೆ.

ಈ ವಾರದ ಆರಂಭದಲ್ಲಿ, ರಾಜ್ಯ ಸರ್ಕಾರದ ಸಾಮಾನ್ಯ ಆಡಳಿತ ವಿಭಾಗವು ತನ್ನ ಎಲ್ಲ ಉದ್ಯೋಗಿಗಳಿಗೆ ಕಟ್ಟುನಿಟ್ಟಾದ ಡ್ರೆಸ್ ಕೋಡ್ ಜಾರಿಗೆ ತರುವ ನಿರ್ಣಯವನ್ನು ಹೊರಡಿಸಿತ್ತು. ಸರ್ಕಾರಿ ಉದ್ಯೋಗಿಗಳು ರಾಜ್ಯದ ಪ್ರತಿನಿಧಿಗಳಾಗಿದ್ದು, ಅವರು ಫಾರ್ಮಲ್ ಬಟ್ಟೆ ಧರಿಸದಿದ್ದರೇ ಜನರ ಮನಸ್ಸಿನಲ್ಲಿ ಸರ್ಕಾರದ ಕೆಟ್ಟ ಚಿತ್ರಣ  ಮೂಡಬಹುದು ಎಂಬ ಕಾರಣ ನೀಡಿದ್ದಾರೆ.

’ಸರ್ಕಾರಿ ಕಚೇರಿಗಳಲ್ಲಿ ಕೆಲಸ ಮಾಡುವ ಬಹಳಷ್ಟು ಅಧಿಕಾರಿಗಳು ಮತ್ತು ನೌಕರರು, ಅದರಲ್ಲೂ ವಿಶೇಷವಾಗಿ ಗುತ್ತಿಗೆ ಪಡೆದವರು ಅಥವಾ ಸಲಹೆಗಾರರಾಗಿ ನೇಮಕಗೊಂಡವರು ಕಚೇರಿ ಸಮಯದಲ್ಲಿ ಸರ್ಕಾರಿ ನೌಕರರಂತೆ ಸೂಕ್ತವಾದ ಬಟ್ಟೆಗಳನ್ನು ಧರಿಸುವುದಿಲ್ಲ. ಇದರ ಪರಿಣಾಮವಾಗಿ, ಸಮಾಜದಲ್ಲಿ ಸರ್ಕಾರಿ ಅಧಿಕಾರಿಗಳ ಚಿತ್ರಣವು ಕೆಟ್ಟದಾಗಿರುತ್ತದೆ’ ಎಂದು ಆದೇಶದಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ನಿಲ್ಲದ ರೈತ ಹೋರಾಟ: 100 ಪತ್ರಿಕಾಗೋಷ್ಟಿ, 700 ಸಭೆಗಳ ಮೂಲಕ ಪ್ರಚಾರಕ್ಕೆ ಹೊರಟ ಬಿಜೆಪಿ!

“ಸರ್ಕಾರಿ ಅಧಿಕಾರಿಯ ಡ್ರೆಸ್ ಕೋಡ್ ಸೂಕ್ತವಲ್ಲದ, ಕಳಪೆ ಅಥವಾ ಅಶುದ್ಧವಾಗಿದ್ದರೆ ಅದು ಅವರ ಒಟ್ಟಾರೆ ಕೆಲಸದ ಮೇಲೆ ಪರೋಕ್ಷ ಪರಿಣಾಮ ಬೀರುತ್ತದೆ” ಎಂದು ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ದೇಶಪಾಂಡೆ ಸಹಿ ಮಾಡಿರುವ ಆದೇಶ ಪ್ರತಿಯಲ್ಲಿ ತಿಳಿಸಲಾಗಿದೆ.

ಡ್ರೆಸ್ ಕೋಡ್ ಹೇಗಿರಬೇಕು..?

ಸರ್ಕಾರದ ಹೊಸ ಡ್ರೆಸ್ ಕೋಡ್ ಪ್ರಕಾರ, ಎಲ್ಲಾ ಮಹಿಳಾ ಉದ್ಯೋಗಿಗಳು ಸೀರೆಗಳು, ಚೂಡಿದಾರ್, ಕುರ್ತಾ,  ದುಪಟ್ಟಾ ಧರಿಸಬೇಕು. ಪುರುಷರು ಮತ್ತು ಮಹಿಳಾ ಉದ್ಯೋಗಿಗಳಿಗೆ ಜೀನ್ಸ್ ಮತ್ತು ಟೀ ಶರ್ಟ್, ಗಾಢ ಬಣ್ಣದ, ಮುದ್ರಿತ ಅಥವಾ ಕಸೂತಿ ಬಟ್ಟೆಗಳನ್ನು ಧರಿಸುವುದನ್ನು ನಿಷೇಧಿಸಲಾಗಿದೆ. ಫಾರ್ಮಲ್ ಬೂಟುಗಳು, ಸ್ಯಾಂಡಲ್ಸ್‌ಗಳನ್ನು ಬಳಸಬೇಕು. ಲೈಟ್ ವೇಯ್ಟ್​​​ ಚಪ್ಪಲಿಗಳನ್ನು ಧರಿಸಬಾರದೆಂದು ಮಹಾರಾಷ್ಟ್ರ ಸರ್ಕಾರ ಆದೇಶಿಸಿದೆ.

ಖಾದಿ ಉದ್ಯಮವನ್ನು ಉತ್ತೇಜಿಸುವ ಸಲುವಾಗಿ, ಸರ್ಕಾರಿ ನೌಕರರು ವಾರಕ್ಕೆ ಒಮ್ಮೆಯಾದರೂ ಕಡ್ಡಾಯವಾಗಿ ಖಾದಿ ಬಟ್ಟೆಗಳನ್ನು ಧರಿಸಬೇಕು ಎಂದು ತಿಳಿಸಲಾಗಿದೆ.

ಇತ್ತಿಚೆಗೆ ಮಹಾರಾಷ್ಟ್ರದ ಔರಂಗಾಬಾದ್ ನಗರದಲ್ಲಿ ಬಸ್ ಕಂಡಕ್ಟರ್‌ಗಳು ಮತ್ತು ಟಿಕೆಟ್ ಇನ್ಸ್‌ಪೆಕ್ಟರ್‌ಗಳು ಶೀಘ್ರದಲ್ಲೇ ತಮ್ಮ ಸಮವಸ್ತ್ರದಲ್ಲಿ ಕ್ಯಾಮೆರಾ ಹೊಂದಿಲಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದರು. ಇದರಿಂದ ಪ್ರಯಾಣ ಸಮಯದಲ್ಲಿ ಪ್ರಯಾಣಿಕರ ವರ್ತನೆ ಮತ್ತು ಇತರ ಚಟುವಟಿಕೆಗಳ ಬಗ್ಗೆ ಗಮನ ಇರಿಸಲಾಗುತ್ತದೆ ಎಂದು ಮಾಹಿತಿ ನೀಡಲಾಗಿತ್ತು


ಇದನ್ನೂ ಓದಿ: ರೈತ ವಿರೋಧಿ ಮಸೂದೆಗಳಿಗೆ ಸಹಿ ಹಾಕಬಾರದು: ಹೋರಾಟನಿರತ ರೈತ ಮುಖಂಡರನ್ನು ಮಾತುಕತೆಗೆ ಕರೆದ ರಾಜ್ಯಪಾಲರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...