Homeಮುಖಪುಟಮಹಾರಾಷ್ಟ್ರ: ಸರ್ಕಾರಿ ಉದ್ಯೋಗಿಗಳು ಟೀ ಶರ್ಟ್, ಜೀನ್ಸ್ ಧರಿಸುವಂತಿಲ್ಲ!

ಮಹಾರಾಷ್ಟ್ರ: ಸರ್ಕಾರಿ ಉದ್ಯೋಗಿಗಳು ಟೀ ಶರ್ಟ್, ಜೀನ್ಸ್ ಧರಿಸುವಂತಿಲ್ಲ!

ಖಾದಿ ಉದ್ಯಮವನ್ನು ಉತ್ತೇಜಿಸುವ ಸಲುವಾಗಿ, ಸರ್ಕಾರಿ ನೌಕರರು ವಾರಕ್ಕೆ ಒಮ್ಮೆಯಾದರೂ ಕಡ್ಡಾಯವಾಗಿ ಖಾದಿ ಬಟ್ಟೆಗಳನ್ನು ಧರಿಸಬೇಕು ಎಂದು ತಿಳಿಸಲಾಗಿದೆ.

- Advertisement -
- Advertisement -

ಮಹಾರಾಷ್ಟ್ರದ ಸರ್ಕಾರಿ ಅಧಿಕಾರಿಗಳು, ಉದ್ಯೋಗಿಗಳು ಮತ್ತು ಗುತ್ತಿಗೆ ಆಧಾರದಲ್ಲಿ ಕೆಲಸಕ್ಕೆ ಸೇರಿದವರು ಎಲ್ಲರಿಗೂ ಸೇರಿದಂತೆ ಇನ್ನು ಮುಂದೆ ಸರ್ಕಾರಿ ಕಚೇರಿಯಲ್ಲಿ ವಸ್ತ್ರ ಸಂಹಿತೆ ಪಾಲಿಸುವಂತೆ ಸರ್ಕಾರ ಸೂಚಿಸಿದೆ. ಜೀನ್ಸ್, ಟೀ ಶರ್ಟ್ ಮತ್ತು ಚಪ್ಪಲಿ ಧರಿಸದಂತೆ, ವಾರಕ್ಕೆ ಒಮ್ಮೆ ಖಾದಿ ಬಟ್ಟೆಗಳನ್ನು ಬಳಸುವಂತೆ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರ ಆದೇಶಿಸಿದೆ.

ಈ ವಾರದ ಆರಂಭದಲ್ಲಿ, ರಾಜ್ಯ ಸರ್ಕಾರದ ಸಾಮಾನ್ಯ ಆಡಳಿತ ವಿಭಾಗವು ತನ್ನ ಎಲ್ಲ ಉದ್ಯೋಗಿಗಳಿಗೆ ಕಟ್ಟುನಿಟ್ಟಾದ ಡ್ರೆಸ್ ಕೋಡ್ ಜಾರಿಗೆ ತರುವ ನಿರ್ಣಯವನ್ನು ಹೊರಡಿಸಿತ್ತು. ಸರ್ಕಾರಿ ಉದ್ಯೋಗಿಗಳು ರಾಜ್ಯದ ಪ್ರತಿನಿಧಿಗಳಾಗಿದ್ದು, ಅವರು ಫಾರ್ಮಲ್ ಬಟ್ಟೆ ಧರಿಸದಿದ್ದರೇ ಜನರ ಮನಸ್ಸಿನಲ್ಲಿ ಸರ್ಕಾರದ ಕೆಟ್ಟ ಚಿತ್ರಣ  ಮೂಡಬಹುದು ಎಂಬ ಕಾರಣ ನೀಡಿದ್ದಾರೆ.

’ಸರ್ಕಾರಿ ಕಚೇರಿಗಳಲ್ಲಿ ಕೆಲಸ ಮಾಡುವ ಬಹಳಷ್ಟು ಅಧಿಕಾರಿಗಳು ಮತ್ತು ನೌಕರರು, ಅದರಲ್ಲೂ ವಿಶೇಷವಾಗಿ ಗುತ್ತಿಗೆ ಪಡೆದವರು ಅಥವಾ ಸಲಹೆಗಾರರಾಗಿ ನೇಮಕಗೊಂಡವರು ಕಚೇರಿ ಸಮಯದಲ್ಲಿ ಸರ್ಕಾರಿ ನೌಕರರಂತೆ ಸೂಕ್ತವಾದ ಬಟ್ಟೆಗಳನ್ನು ಧರಿಸುವುದಿಲ್ಲ. ಇದರ ಪರಿಣಾಮವಾಗಿ, ಸಮಾಜದಲ್ಲಿ ಸರ್ಕಾರಿ ಅಧಿಕಾರಿಗಳ ಚಿತ್ರಣವು ಕೆಟ್ಟದಾಗಿರುತ್ತದೆ’ ಎಂದು ಆದೇಶದಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ನಿಲ್ಲದ ರೈತ ಹೋರಾಟ: 100 ಪತ್ರಿಕಾಗೋಷ್ಟಿ, 700 ಸಭೆಗಳ ಮೂಲಕ ಪ್ರಚಾರಕ್ಕೆ ಹೊರಟ ಬಿಜೆಪಿ!

“ಸರ್ಕಾರಿ ಅಧಿಕಾರಿಯ ಡ್ರೆಸ್ ಕೋಡ್ ಸೂಕ್ತವಲ್ಲದ, ಕಳಪೆ ಅಥವಾ ಅಶುದ್ಧವಾಗಿದ್ದರೆ ಅದು ಅವರ ಒಟ್ಟಾರೆ ಕೆಲಸದ ಮೇಲೆ ಪರೋಕ್ಷ ಪರಿಣಾಮ ಬೀರುತ್ತದೆ” ಎಂದು ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ದೇಶಪಾಂಡೆ ಸಹಿ ಮಾಡಿರುವ ಆದೇಶ ಪ್ರತಿಯಲ್ಲಿ ತಿಳಿಸಲಾಗಿದೆ.

ಡ್ರೆಸ್ ಕೋಡ್ ಹೇಗಿರಬೇಕು..?

ಸರ್ಕಾರದ ಹೊಸ ಡ್ರೆಸ್ ಕೋಡ್ ಪ್ರಕಾರ, ಎಲ್ಲಾ ಮಹಿಳಾ ಉದ್ಯೋಗಿಗಳು ಸೀರೆಗಳು, ಚೂಡಿದಾರ್, ಕುರ್ತಾ,  ದುಪಟ್ಟಾ ಧರಿಸಬೇಕು. ಪುರುಷರು ಮತ್ತು ಮಹಿಳಾ ಉದ್ಯೋಗಿಗಳಿಗೆ ಜೀನ್ಸ್ ಮತ್ತು ಟೀ ಶರ್ಟ್, ಗಾಢ ಬಣ್ಣದ, ಮುದ್ರಿತ ಅಥವಾ ಕಸೂತಿ ಬಟ್ಟೆಗಳನ್ನು ಧರಿಸುವುದನ್ನು ನಿಷೇಧಿಸಲಾಗಿದೆ. ಫಾರ್ಮಲ್ ಬೂಟುಗಳು, ಸ್ಯಾಂಡಲ್ಸ್‌ಗಳನ್ನು ಬಳಸಬೇಕು. ಲೈಟ್ ವೇಯ್ಟ್​​​ ಚಪ್ಪಲಿಗಳನ್ನು ಧರಿಸಬಾರದೆಂದು ಮಹಾರಾಷ್ಟ್ರ ಸರ್ಕಾರ ಆದೇಶಿಸಿದೆ.

ಖಾದಿ ಉದ್ಯಮವನ್ನು ಉತ್ತೇಜಿಸುವ ಸಲುವಾಗಿ, ಸರ್ಕಾರಿ ನೌಕರರು ವಾರಕ್ಕೆ ಒಮ್ಮೆಯಾದರೂ ಕಡ್ಡಾಯವಾಗಿ ಖಾದಿ ಬಟ್ಟೆಗಳನ್ನು ಧರಿಸಬೇಕು ಎಂದು ತಿಳಿಸಲಾಗಿದೆ.

ಇತ್ತಿಚೆಗೆ ಮಹಾರಾಷ್ಟ್ರದ ಔರಂಗಾಬಾದ್ ನಗರದಲ್ಲಿ ಬಸ್ ಕಂಡಕ್ಟರ್‌ಗಳು ಮತ್ತು ಟಿಕೆಟ್ ಇನ್ಸ್‌ಪೆಕ್ಟರ್‌ಗಳು ಶೀಘ್ರದಲ್ಲೇ ತಮ್ಮ ಸಮವಸ್ತ್ರದಲ್ಲಿ ಕ್ಯಾಮೆರಾ ಹೊಂದಿಲಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದರು. ಇದರಿಂದ ಪ್ರಯಾಣ ಸಮಯದಲ್ಲಿ ಪ್ರಯಾಣಿಕರ ವರ್ತನೆ ಮತ್ತು ಇತರ ಚಟುವಟಿಕೆಗಳ ಬಗ್ಗೆ ಗಮನ ಇರಿಸಲಾಗುತ್ತದೆ ಎಂದು ಮಾಹಿತಿ ನೀಡಲಾಗಿತ್ತು


ಇದನ್ನೂ ಓದಿ: ರೈತ ವಿರೋಧಿ ಮಸೂದೆಗಳಿಗೆ ಸಹಿ ಹಾಕಬಾರದು: ಹೋರಾಟನಿರತ ರೈತ ಮುಖಂಡರನ್ನು ಮಾತುಕತೆಗೆ ಕರೆದ ರಾಜ್ಯಪಾಲರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...