Homeಕರ್ನಾಟಕಅಂಬಿ ಸಮಾಧಿ ಮುಂದೆ ದೇವೇಗೌಡರ ಸೆಕ್ಯುಲರ್ ಶಪಥ!

ಅಂಬಿ ಸಮಾಧಿ ಮುಂದೆ ದೇವೇಗೌಡರ ಸೆಕ್ಯುಲರ್ ಶಪಥ!

- Advertisement -
- Advertisement -

|ತುಂಟ |

ಅದು ಕಂಠೀರವ ಸ್ಟೂಡಿಯೋದಲ್ಲಿರುವ ಅಂಬರೀಶ್ ಅವರ ಸಮಾಧಿ. ರಾತ್ರಿ ಹನ್ನೆರಡೂವರೆ ಒಂದು ಗಂಟೆ ಸಮಯವಿರಬಹುದು. ಬಿಳಿ ಪಂಚೆ, ಬಿಳಿ ಶರ್ಟು ಹಾಕಿದ, ತಲೆಗೆ ಮಫ್ಲರಿನಂತೆ ಟವೆಲ್ ಸುತ್ತಿಕೊಂಡ  ವಯಸ್ಸಾದ ಹಿರಿ ವ್ಯಕ್ತಿಯೊಬ್ಬರು ಏಕಾಂಗಿಯಾಗಿ ಸಮಾಧಿ ಮುಂದೆ ನಿಂತು ಸಣ್ಣಗೆ ಕಣ್ಣೀರು ಮಿಡಿಯುತ್ತಿದ್ದರು. ಕುತೂಹಲಗೊಂಡು ಹತ್ತಿರ ಹೋಗಿ ನೋಡಿದೆ. ಏನಾಶ್ಚರ್ಯ, ಅದು ನಮ್ಮ ಮಾಜಿ ಪ್ರಧಾನಿ ದೇವೇಗೌಡರು!

ಆ ಭಾವನಾತ್ಮಕ ವಾತಾವರಣ ಕದಡಲು ಇಷ್ಟವಾಗಲಿಲ್ಲ. ಸದ್ದು ಮಾಡದೆ, ದೇವೇಗೌಡರ ಪಕ್ಕಕ್ಕೆ ಹೋಗಿ ನಿಂತೆ. ನನ್ನತ್ತ ತಿರುಗಿ ನೋಡಿದ ಗೌಡರ ಕಣ್ಣುಗಳಲ್ಲಿ ಆ ಕ್ಷಣಕ್ಕೆ ಕಿಂಚಿತ್ತೂ ಕಪಟತೆ ಇರಲಿಲ್ಲ. ಮತ್ತೆ ಸಮಾಧಿಯತ್ತ ತಿರುಗಿದ ಅವರು ಅಂಬಿ ಸಮಾಧಿ ಜೊತೆ ಮಾತು ಮುಂದುವರೆಸಿದರು,

“ಅಂಬಿ, ನೀನು ನನ್ನ ಪಕ್ಷದಲ್ಲಿ ಇರಲಿ, ಇಲ್ಲದಿರಲಿ ಯಾವತ್ತೂ ನೀನು ನನ್ನ ಹುಡುಗನಾಗಿದ್ದೆ. ಅದೇ ಒರಟು ಭಾಷೆಯ, ಬೆಣ್ಣೆ ಹೃದಯದ ಹುಡುಗ. ನೀನು ಇಷ್ಟು ಬೇಗ ನಮ್ಮನ್ನೆಲ್ಲ ಅಗಲಿ ಹೋಗುತ್ತೀಯ ಅಂದುಕೊಂಡಿರಲಿಲ್ಲ. ನನ್ನ ಕಣ್ಣಮುಂದೆ ಆಡಿ ಬೆಳೆದ, ಸಿನಿಮಾ ಮಾಡಿದ ಹುಡುಗ ಕೊನೆಗೆ ನನ್ನ ಕಣ್ಣ ಮುಂದೆಯೇ ಅಗಲಿಹೋದದ್ದನ್ನು ನೆನೆಸಿಕೊಂಡರೆ ದುಃಖ ಉಕ್ಕಿ ಬರುತ್ತೆ. ನಿನ್ನ ಇಪ್ಪತ್ತೆರಡನೇ ವಯಸ್ಸಲ್ಲಿ ಮೊದಲ ಸಿನಿಮಾ ಮಾಡುವ ಹುಮ್ಮಸ್ಸಿನಲ್ಲಿ ನೀನಿದ್ದಾಗ ನಾನಾಗಲೇ ಎಂಎಲ್ಎ ಆಗಿ ಹತ್ತು ವರ್ಷ ಕಳೆದಿದ್ದೆ. ನನಗಿನ್ನೂ ಚೆನ್ನಾಗಿ ನೆನಪಿದೆ, ನಿನ್ನ ನಾಗರಹಾವು ಸಿನಿಮಾ ರಿಲೀಸ್ ಆದಾಗ ಅದೇ ಮೊದಲ ಬಾರಿಗೆ ವಿರೋಧ ಪಕ್ಷದ ನಾಯಕನಾಗಿ ಆಯ್ಕೆಯಾಗಿದ್ದ ನಾನು ಸಿನಿಮಾ ನೋಡಿ, ಈ ನಮ್ಮ ಮಂಡ್ಯದ  ಹುಡುಗ ಮುಂದೊಂದು ದಿನ ದೊಡ್ಡ ಸ್ಟಾರ್ ಆಗಿ ಬೆಳೆಯುತ್ತಾನೆ ನೋಡ್ತಾ ಇರಿ ಎಂದು ಎಲ್ಲರೆದುರು ಹೆಮ್ಮೆಯಿಂದ ಹೇಳಿಕೊಂಡು ತಿರುಗಾಡಿದ್ದೆ. ನನ್ನ ಮಾತು ಸುಳ್ಳಾಗಲಿಲ್ಲ. ನೀನು ನಿಜಕ್ಕೂ ಕರ್ಣನಂತವನು ಕಣಪ್ಪಾ…”

ಕ್ಷಣಕಾಲ ಮೌನಕ್ಕೆ ಶರಣಾದ ಗೌಡರು, ಮತ್ತೆ ನನ್ನತ್ತ ತಿರುಗಿ ನೋಡಿದರು. ಕಣ್ಣೀರಿನ ಪ್ರಮಾಣ ಕೊಂಚ ತಗ್ಗಿದಂತೆ ಕಾಣಿಸಿತು. ಬಹುಶಃ ಹೊರಟುಹೋಗುತ್ತಾರೇನೊ ಅಂತ ಭಾವಿಸಿದೆ. ಆದರೆ, ಮತ್ತೆ ಸಮಾಧಿಯತ್ತ ತಿರುಗಿದರು. ಈ ಮೊದಲು ಮೆದುವಾಗಿದ್ದ ಅವರ ದನಿಯಿಂದ ತುಸು ಬಿಗಿಯಾದ ಮಾತುಗಳು ತೇಲಿಬಂದವು. “ಈ ಸಲ ನೀನು ಮತ್ತೆ ಕಾಂಗ್ರೆಸ್ ಮೇಲೆ ಮುನಿಸಿಕೊಂಡೆ. ನನ್ನ ಹುಡುಗನ ಗುಣ ಎಂತದ್ದು ಅಂತ ಗೊತ್ತಿದ್ದರಿಂದ ನಾನು ಮತ್ತೆ ನಿನ್ನನ್ನು ಹತ್ತಿರಕ್ಕೆ ಸೆಳೆದುಕೊಂಡೆ. ಅದಕ್ಕೇ ಅಲ್ಲವೇ, ಕಾಂಗ್ರೆಸ್ ಮೇಲೆ ಬೇಸರಿಸಿಕೊಂಡ ನಿನ್ನನ್ನು ನಾನೇ ಸಂತೈಸಿ ನಮ್ಮ ಬೀಗ ತಮ್ಮಣ್ಣನ ಕಾರಿನಲ್ಲಿ ಮತದಾನ ಮಾಡಲು ಕಳಿಸಿದ್ದು. ನನ್ನ ಲೆಕ್ಕಾಚಾರ ಸರಿ ಇದ್ದಿದ್ದರೆ, ನಿನ್ನನ್ನ ಈ ಸಲ ಮಂಡ್ಯದ ಪಾರ್ಲಿಮೆಂಟ್ ಚುನಾವಣೆಗೆ ನನ್ನ ಪಾರ್ಟಿಯಿಂದ ನಿಲ್ಲಿಸೋಣ ಅಂದುಕೊಂಡಿದ್ದೆ. ಆದರೆ ವಿಧಿಯಾಟ, ನೀನೇ ನಮ್ಮನ್ನೆಲ್ಲ ಬಿಟ್ಟು ಹೋದೆ”. ಮತ್ತೆ ದೇವೇಗೌಡರ ಕಣ್ಣುಗಳು ನೀರಾಡಿದವು.

ಟವೆಲ್ಲಿನಿಂದ ಕಣ್ಣೊರೆಸಿಕೊಂಡ ಅವರು ಕ್ಷಣ ತಡೆದು ಇನ್ನಷ್ಟು ನಿಖರವಾಗಿ ಮಾತು ಮುಂದುವರೆಸಿದರು, “ನೀನು ಅಗಲಿದ ನೋವು ನಮ್ಮನ್ನೆಲ್ಲ ತುಂಬಾ ಕಾಡಿತು. ಕುಮಾರಸ್ವಾಮಿಯವರಂತೂ ಹಾರ್ಟ್ ಪೇಶೆಂಟಾಗಿದ್ದ್ರೂ ಒಡಹುಟ್ಟಿದ ಸೋದರನಂತೆ ಮುಂದೆ ನಿಂತು ಅಂತ್ಯಸಂಸ್ಕಾರ ಮಾಡಿದರು. ನನಗಂತೂ ಮೊಮ್ಮಗ ನಿಖಿಲ್ ರವರ ಮುಖದಲ್ಲಿ ನೀನೇ ಎದ್ದು ಬಂದಂತಾಗುತ್ತಿತ್ತು. ಅವರೂ ನಿನ್ನಂತೆಯೇ ಸಿನಿಮಾ ಸ್ಟಾರು. ನಿಖಿಲ್ ರವರನ್ನು ನೋಡಿದಾಗಲೆಲ್ಲ ನಿನ್ನದೇ ನೆನಪಾಗುತ್ತಿತ್ತು. ಅದಕ್ಕೆ ಅವತ್ತೇ ಡಿಸೈಡ್ ಮಾಡಿದೆ, ನೀನು ಪ್ರತಿನಿಧಿಸುತ್ತಿದ್ದ ಮಂಡ್ಯದಲ್ಲೇ ಅವರನ್ನು ಎಲೆಕ್ಷನ್ನಿಗೆ ನಿಲ್ಲಿಸಿ, ಅಂಬಿ ಇಲ್ಲದ ಕೊರಗು ನೀಗಿಕೊಳ್ಳೋಣ ಅಂತ!”.

ದೇವೇಗೌಡರ ಮಾತು ಕೇಳಿ ನನಗೆ ಶಾಕ್ ಆಯ್ತು! ಹಾಗಾದ್ರೆ, ನಿಖಿಲ್ ನನ್ನು ಮಂಡ್ಯದ ಚಕ್ರವ್ಯೂಹದೊಳಕ್ಕೆ ತಳ್ಳಿದ್ದು ಕುಟುಂಬ ರಾಜಕಾರಣದ ವಿಸ್ತರಣೆಯ ಭಾಗವಾಗಿ ಅಲ್ಲ, ಅಂಬಿ ಇಲ್ಲದ ಕೊರಗನ್ನು ನಿಖಿಲ್ ಮೂಲಕ ತುಂಬಲು..!!!! ಅಯ್ಯಯ್ಯೋ ಇಂಥಾ ಪುಣ್ಯಾತ್ಮನನ್ನ ತಪ್ಪಾಗಿ ತಿಳಿದುಬಿಟ್ಟಿದ್ದೆನ್ನಲ್ಲಾ ಅಂತ ವಿಪರೀತ ಸಂಕಟವಾಯ್ತು. ಜೊತೆಗೆ ದೇವೇಗೌಡರ ಮೇಲೆ ಗೌರವವೂ ಹೆಚ್ಚಾಯ್ತು. ಅಷ್ಟರೊಳಗೆ ಮತ್ತೆ ದೇವೇಗೌಡರ ಮಾತುಗಳು ಶುರುವಾಗಿದ್ದವು, “ಆದ್ರೆ ಇದನ್ನು ನನ್ನ ಮಗಳು ಸುಮಲತಾ ಅರ್ಥಾನೆ ಮಾಡಿಕೊಳ್ಳಲಿಲ್ಲ. ಪಾಪಾ, ಆಕೆಯಾದ್ರು ಏನು ಮಾಡುವಳು. ಸುತ್ತವರೆದಿರುವ ಮೀರ್ ಸಾದಿಕ್.ಗಳ ಮಾತು ಕೇಳಿ ಹಾಗೆ ಮಾಡ್ತಿದಾಳೆ. ನನಗಂತೂ ಸುಮಲತಾ ಮೇಲೆ ಸ್ವಲ್ಪವೂ ಬೇಸರವಿಲ್ಲ. ನನ್ನ ಮಕ್ಕಳಾದ ಕುಮಾರಸ್ವಾಮಿಯವರು ಮತ್ತು ರೇವಣ್ಣನವರ ಮೇಲಿಗಿಂತ ಜಾಸ್ತಿ ಪ್ರೀತಿ ಇದೆ. ಆದರೆ ನಿನಗೇ ಗೊತ್ತಲ್ಲವಾ ಈ ಹಾಳಾದ ರಾಜಕಾರಣದಲ್ಲಿ ಅದನ್ನೆಲ್ಲ ತೋರಿಸಿಕೊಳ್ಳಲು ಆಗುತ್ತಿಲ್ಲ. ಒಂದಲ್ಲ ಒಂದು ದಿನ  ಅರ್ಥವಾಗುತ್ತೆ. ಒಂದಂತೂ ಸತ್ಯ, ನನ್ನ ಮಗ ರೇವಣ್ಣನವರು ಅದ್ಯಾವುದೋ ಆತುರದಲ್ಲಿ ಆ ಮಗಳು ಸುಮಲತಾಗೆ ‘ಗಂಡ ಸತ್ತು ಆರು ತಿಂಗಳು ಕಳೆದಿಲ್ಲ, ಅಷ್ಟರಲ್ಲೇ ರಾಜಕೀಯ ಬೇಕಿತ್ತಾ?’ ಅಂತ ಕೇಳಿದ್ದು ನನಗೆ ತುಂಬಾನೇ ದುಃಖ ಉಂಟುಮಾಡಿದೆ. ಅದಕ್ಕೆ ನಾನೇ ಖುದ್ದಾಗಿ ಕಿವಿಹಿಂಡಿ ಬುದ್ದಿ ಹೇಳಿದೆ ನಮ್ಮ ಪಾರ್ಟಿ ಪ್ರೆಸಿಡೆಂಟು ಎಚ್.ವಿಶ್ವನಾಥರದ್ದು, ಕೊನೆಗೆ ಅವರಿಂದಲೇ ರೇವಣ್ಣನವರ ಪರವಾಗಿ ಕ್ಷಮೆಯನ್ನೂ ಕೇಳಿಸಿದ್ದೇನೆ”.

ನನಗೇ ಗೊತ್ತಿಲ್ಲದೆ ಈಗ ನನ್ನ ಕಣ್ಣಾಲಿಗಳಲ್ಲೂ ನೀರು ಜಿನುಗ ತೊಡಗಿದವು. ದೇವೇಗೌಡರ ಮಮಕಾರ ಕಂಡು ಕರಗಿಹೋದೆ.  ದೇವೇಗೌಡರು ಈಗ ಶಪಥಗೈಯ್ಯುವ ದನಿಯಲ್ಲಿ ಹೂಂಕರಿಸಿದರು, “ಇಲ್ಲಾ ಅಂಬಿ, ನಿನಗಿಂತ ನನ್ನ ಮೊಮ್ಮಗನ ಎಲೆಕ್ಷನ್ ದೊಡ್ಡದಲ್ಲ. ಅದಕ್ಕಿಂತಲೂ ಮುಖ್ಯವಾಗಿ, ಎಷ್ಟೇ ಬಾರಿ ಪಕ್ಷಾಂತರ ಮಾಡಿದರು ಕಾಂಗ್ರೆಸ್-ಜನತಾದಳ ನಡುವೆ ಓಡಾಡಿದೆಯೇ ವಿನಾಃ ಆ ಕೋಮುವಾದಿ ಬಿಜೆಪಿಯತ್ತ ತಲೆ ಹಾಕದ ನಿನ್ನ ಸಿದ್ಧಾಂತ ಕಾಯುವುದು ನನ್ನ ಧರ್ಮ ಅನ್ನಿಸುತ್ತಿದೆ. ಇವತ್ತು ಅದೇ ಬಿಜೆಪಿಯವರು ಮಗಳು ಸುಮಲತಾಗೆ ಬೆಂಬಲ ನೀಡುವ ನೆಪದಲ್ಲಿ ತಮ್ಮ ಕೈಗೊಂಬೆ ಮಾಡಲು ಯತ್ನಿಸುತ್ತಿದ್ದಾರೆ. ಅವರ ಆ ಆಸೆ ಈಡೇರಲು ನಾನು ಬಿಡುವುದಿಲ್ಲ. ನಿನ್ನ ಆತ್ಮ ಪರಿತಪಿಸುವುದನ್ನು ನಾನು ನೋಡಲಾರೆ. ಅದಕ್ಕೇ ಇವತ್ತು ರಾಜಾರೋಷವಾಗಿ ಜನರ ಮುಂದೆ ಘೋಷಿಸಿದ್ದೇನೆ ‘ದಕ್ಷಿಣ ಭಾರತದಲ್ಲಿ ಬಿಜೆಪಿಯನ್ನು ಮುಗಿಸಿಯೇ ನಾನು ಹೋಗೋದು’ ಅಂತ. ಅದರ ಮೊದಲ ಹೆಜ್ಜೆಯನ್ನು ನಿನ್ನ ಪ್ರೀತಿಯ ಮಂಡ್ಯದಿಂದಲೇ ಶುರು ಮಾಡ್ತೀನಿ ಅಂಬಿ. ನನ್ನ ಮೊಮ್ಮಗನ ನಾಮಪತ್ರವನ್ನ ವಾಪಾಸು ಪಡೆದು, ಮಗಳು ಸುಮಲತಾ ಅವಿರೋಧವಾಗಿ ಆಯ್ಕೆ ಆಗುವಂತೆ ಮಾಡುತ್ತೇನೆ. ಕೋಮುವಾದಿ ಬಿಜೆಪಿಗಳಿಗೆ ಇಲ್ಲಿಂದಲೇ ಶಾಕ್ ಟ್ರೀಟ್ ಮೆಂಟ್ ಶುರು ಮಾಡ್ತೀನಿ. ಮಂಡ್ಯದಂತಹ ಹೊಸ ಜಾಗದಲ್ಲಿ ಬಿಜೆಪಿ ಬೇರೂರಲು ಬಿಡುವುದಿಲ್ಲ. ಇದು ನನ್ನ ಶಪಥ!”

ಗೌಡರ ಶಪಥ ಕೇಳಿ ನನ್ನ ಮೈ ರೋಮಗಳೆಲ್ಲ ಎದ್ದು ನಿಂತವು, ಎದೆ ಬಡಿತ ಅಂಕೆಗೇ  ಸಿಗದಷ್ಟು ಡಬಗುಟ್ಟಲು ಶುರುವಾಯ್ತು, ಮೈಯಲ್ಲೆಲ್ಲ ಬೆವರು ಬಸಿಯತೊಡಗಿತು. ಕಣ್ಮುಚ್ಚಿ, ಜೋರಾಗಿ ಉಸಿರು ಒಳಗೆಳೆದುಕೊಂಡು, ದೇವೇಗೌಡರಿಗೆ ಗಟ್ಟಿಯಾಗಿ ಜೈಕಾರ ಕೂಗಲು ಶುರು ಮಾಡಿದೆ.

ಛಟೀರ್…!

ಕೆನ್ನೆಯ ಮೇಲೆ ಏಟೊಂದು ಬಿತ್ತು. ರಾತ್ರಿ ಮಲಗಿದ ಹಾಸಿಗೆಯಲ್ಲೇ ನಾನಿದ್ದೆ. ಪಕ್ಕದಲ್ಲಿ ಹೆಂಡತಿ ಗೊಣಗುತ್ತಾ ಕೂತಿದ್ದಳು “ಹಗಲೆಲ್ಲ ಕೆಲ್ಸ ಮಾಡಿ ಸುಸ್ತಾಗಿ ರಾತ್ರಿ ನೆಮ್ದಿಯಿಂದ ಮಲಗೋಣ ಅಂದ್ರೆ, ದರಿದ್ರ, ನಿಮ್ಮದೊಂದು ಕಾಟ ನಮಿಗೆ. ನಿಮ್ ಜರ್ನಲಿಸ್ಟ್ ಬುದ್ದೀನ ಅಲ್ಲೇ ಆಫೀಸ್ನಲ್ಲಿ ಬಿಟ್ಟು ಬರೋಕೆ ಆಗಲ್ವಾ. ಹೀಗೆ ಕನಸ್ನಲ್ಲೂ ಕನವರಿಸ್ಕೊಂಡು ಯಾಕ್ರೀ ಪ್ರಾಣ ತಿಂತೀರಾ….?”

“ಹ್ಞಾಂ……!!!!”

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...