Homeಮುಖಪುಟನಟ ವಿಷ್ಣುವರ್ಧನ್ ಬಗ್ಗೆ ಅವಹೇಳನಕಾರಿ ಹೇಳಿಕೆ: ಖಡಕ್ ಎಚ್ಚರಿಕೆ ನೀಡಿದ ಸ್ಯಾಂಡಲ್‌ವುಡ್

ನಟ ವಿಷ್ಣುವರ್ಧನ್ ಬಗ್ಗೆ ಅವಹೇಳನಕಾರಿ ಹೇಳಿಕೆ: ಖಡಕ್ ಎಚ್ಚರಿಕೆ ನೀಡಿದ ಸ್ಯಾಂಡಲ್‌ವುಡ್

ಕಲೆಗೆ, ಕಲಾವಿದರಿಗೆ ಗೌರವಿಸೋದು ನಮ್ಮ ಕರ್ತವ್ಯ “ಮೊದಲು ಮಾನವನಾಗು”- ಪುನೀತ್ ರಾಜ್‌ಕುಮಾರ್‌

- Advertisement -
- Advertisement -

ಕನ್ನಡ ಚಿತ್ರರಂಗದ ಹಿರಿಯ ನಟ, ದಿವಂಗತ ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ಬಗ್ಗೆ ತೆಲುಗು ಚಿತ್ರರಂಗದ ಖಳನಟ ವಿಜಯ ರಂಗರಾಜು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ರಂಗರಾಜು ಹೇಳಿಕೆಗೆ ಇಡೀ ಕನ್ನಡ ಚಿತ್ರರಂಗ, ವಿಷ್ಣುವರ್ಧನ್ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಖಡಕ್ ಎಚ್ಚರಿಕೆ ನೀಡಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿದ್ದ ತೆಲುಗು ಖಳನಟ ವಿಜಯ ರಂಗರಾಜು, ನಟ ವಿಷ್ಣುವರ್ಧನ್ ಅವರಿಗೆ ಹೆಣ್ಣಿನ ವೀಕ್‌ನೆಸ್ ಇತ್ತು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಸ್ಯಾಂಡಲ್‌ವುಡ್ ನಾಯಕ ನಟರಾದ ಜಗ್ಗೇಶ್, ಸುದೀಪ್, ಪುನೀತ್ ರಾಜಕುಮಾರ್‌, ಚೇತನ್, ಗಣೇಶ್,   ಅನಿರುದ್ಧ್, ನಿರ್ದೇಶಕರಾದ ರಿಷಬ್ ಶೆಟ್ಟಿ, ಪವನ್ ಒಡೆಯರ್‌ ಸೇರಿದಂತೆ ಅನೇಕ ಮಂದಿ ತೆಲುಗು ಖಳನಟ ರಂಗರಾಜು ವಿರುದ್ಧ ಕಿಡಿಕಾರಿದ್ದಾರೆ. ವಿಷ್ಣುವರ್ಧನ್ ಅವರ ಬಗ್ಗೆ ಮಾತನಾಡುವ ಮುನ್ನ ಎಚ್ಚರಿಕೆ ಇರಲಿ. ಕಲೆಗೆ, ಕಲಾವಿದರಿಗೆ ಗೌರವ ನೀಡುವುದನ್ನು ಕಲಿಯಿರಿ ಎಂದು ಕಿಡಿಕಾರಿದ್ದಾರೆ.

ಈಗಾಗಲೇ ದಿವಂಗತ ನಟ ವಿಷ್ಣುವರ್ಧನ್ ಅವರ ಅಭಿಮಾನಿಗಳು ಚಲನಚಿತ್ರ ವಾಣಿಜ್ಯಮಂಡಳಿಗೆ ದೂರು ಸಲ್ಲಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ಗಳನ್ನು ಶೇರ್‌ ಮಾಡಿಕೊಂಡಿರುವ ನಟರು, ಅಭಿಮಾನಿಗಳು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಲಾಕ್‌ಡೌನ್ ಎಫೆಕ್ಟ್: ಆಹಾರಕ್ಕಾಗಿ ಸಾಲ ಮಾಡಿದ 11 ರಾಜ್ಯಗಳ 45% ಜನ!

ಹಿರಿಯ ನಟ ನವರಸ ನಾಯಕ ಜಗ್ಗೇಶ್ ತಮ್ಮ ಟ್ವಿಟರ್‌ ಖಾತೆಯಲ್ಲಿ ರಂಗರೆಡ್ಡಿ ಅವರಿಗೆ ಕ್ಷಮೆಯಿಲ್ಲ, ನತದೃಷ್ಟ ಶಿಕಾಮಣಿ, ಇವರ ಮಾತಿನಿಂದ ದುಃಖವಾಯಿತು ಎಂದಿದ್ದಾರೆ.

“ಕಾಲವಾದ ಸಾಧಕರ ಬಗ್ಗೆ ಕುಚೇಷ್ಟೆ ಮಾತಾಡುವ ಗುಣದವ ಎಲ್ಲಿಯು ಸಲ್ಲದವ. ಅದರಲ್ಲು ಇವ ಕಲಾವಿದನಂತೆ ಈ ದರಿದ್ರ ಮುಖ ಯಾವ ಚಿತ್ರದಲ್ಲು ನೋಡಿದ ನೆನಪಿಲ್ಲಾ. ಕನ್ನಡದ ಹೃದಯಗಳೆ ಇವನ ಅನಿಷ್ಟ ಸೊಲ್ಲು ಅಡುಗುವಂತೆ ಕನ್ನಡಿಗರ ದೂಷಣೆಗೆ ಹಿಂಜರಿಯುವಂತೆ ಉತ್ತರಿಸಿ. ಇವನ ಉದ್ದಟತನ ಮಾತಿಗೆ ಕ್ಷಮೆಯಿಲ್ಲಾ. ಸತ್ತವರು ದೇವರ ಸಮ. ದುಃಖವಾಯಿತು” ಎಂದಿದ್ದಾರೆ.

ಇನ್ನು ನಟ ಪುನೀತ್ ರಾಜ್‌ಕುಮಾರ್‌ ಟ್ವೀಟ್ ಮಾಡಿ, “ನಮ್ಮ ನಾಡಿನ ಮೇರು ನಟರಲ್ಲಿ ಒಬ್ಬರಾದ ವಿಷ್ಣು ಸರ್ ಬಗ್ಗೆ ಅವಹೇಳನ ವಾಗಿ ಮಾತನಾಡಿರುವ ಆ ಕಲಾವಿದ ಕ್ಷಮೆ ಕೇಳಿ ತನ್ನ ಮಾತುಗಳನ್ನ ಹಿಂಪಡಿಬೇಕು. ಭಾರತೀಯ ಚಿತ್ರರಂಗ ನಮ್ಮ ಮನೆ ಎಲ್ಲ ಕಲಾವಿದರು ಒಂದು ಕುಟುಂಬ. ಕಲೆಗೆ, ಕಲಾವಿದರಿಗೆ ಗೌರವಿಸೋದು ನಮ್ಮ ಕರ್ತವ್ಯ. ಮೊದಲು ಮಾನವನಾಗು” ಎಂದು ಕಿವಿ ಹಿಂಡಿದ್ದಾರೆ.

“ಒಬ್ಬ ಕಲಾವಿದನಾಗಬೇಕಾದರೆ ಅವನಿಗಿರಬೇಕಾದ ಮೊದಲ ಅರ್ಹತೆ ತನ್ನ ಸಹದ್ಯೋಗಿ ಕಲಾವಿದರ ಬಗ್ಗೆ ಗೌರವ ಹಾಗು ಪ್ರೀತಿಯನ್ನು ತೋರುವುದು. ಯಾವುದೇ ಭಾಷೆಯ ನಟರಾದರು ಗೌರವ ಮೊದಲು” ಎಂದಿದ್ದಾರೆ.

ಇದನ್ನೂ ಓದಿ: ರೈತ ಇದ್ರೇನೆ ದೇಶ: ರೈತ ಹೋರಾಟಕ್ಕೆ ನಟ ಶಿವರಾಜ್‌ಕುಮಾರ್ ಬೆಂಬಲ

ಡಾ. ವಿಷ್ಣುವರ್ಧನ್​ ಅವರ ಅಪ್ಪಟ ಅಭಿಮಾನಿಯಾದ, ನಟ ಸುದೀಪ್​ ಕೂಡ ತಮ್ಮ ಆಕ್ರೋಶ ಹೊರಹಾಕಿದ್ದಾರೆ. “ಒಬ್ಬ ವ್ಯಕ್ತಿ ಬದುಕಿರುವಾಗ ಮಾತಾಡಿದರೆ ಗಂಡಸ್ತನ ಇರುತ್ತದೆ ಎನ್ನುವ ನಂಬಿಕೆ ನನ್ನದು ನೀವು ಅವರಿಗೆ ವಾರ್ನ್ ಮಾಡಿದೆ ಎಂದಿದ್ದೀರಿ. ಆ ಮಟ್ಟಕ್ಕೆ ಹೋಗಬೇಡಿ ಎಂದಿದ್ದಾರೆ. ’ಕೆಲವು ಜನರ ಈ ಥರದ ಮಾತುಗಳಿಂದ ಇಂಡಸ್ಟ್ರಿಗಳ ಮಧ್ಯೆ ಮತ್ತೆ ಬಿರುಕಾಗುತ್ತದೆ. ನಿಮ್ಮ ಮಾತುಗಳನ್ನು ತೆಲುಗು ಇಂಡಸ್ಟ್ರಿಯವರು ಕೂಡ ಒಪ್ಪಲ್ಲ. ನೀವು ಆಡಿರುವ ಮಾತುಗಳನ್ನು ವಾಪಸ್ಸು ಪಡೆಯಿರಿ” ಎಂದು ವಾರ್ನಿಂಗ್ ನೀಡಿದ್ದಾರೆ.

ನಟ, ಸಾಮಾಜಿಕ ಹೋರಾಟಗಾರ ಚೇತನ್ ಕೂಡ, “ವಿಷ್ಣುವರ್ಧನ್ ವಿರುದ್ಧ ವಿಜಯ್ ರಂಗರಾಜ್ ಮಾತನಾಡಿದ ಹೇಳಿಕೆಯನ್ನು ನಾನು ನೋಡಿದೆ. ರಂಗರಾಜ್ ಅವರ ಮಾತುಗಳು ಅಸಹ್ಯ ಮತ್ತು ಸೂಕ್ತವಲ್ಲ. ಹೌದು, ಜನರು ಒಟ್ಟಿಗೆ ಕೆಲಸ ಮಾಡುವಾಗ ಪರಸ್ಪರ ಘರ್ಷಣೆಗಳು ಸಂಭವಿಸಬಹುದು. ಮತ್ತು ವೈಯಕ್ತಿಕ ಸ್ಮರಣೆಗೆ ಅನುಗುಣವಾಗಿ ಸತ್ಯವು ಭಿನ್ನವಾಗಿರುತ್ತದೆ. ಆದರೆ ನಾಲಿಗೆಯ ಸಭ್ಯತೆ ಅತ್ಯಗತ್ಯ” ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ: ಜನರಿಗಾಗಿ ತಮ್ಮ ಆಸ್ತಿಯನ್ನು 10 ಕೋಟಿಗೆ ಅಡವಿಟ್ಟ ನಟ ಸೋನು ಸೂದ್!

ವಿಷ್ಣುವರ್ಧನ್ ‘ಕಲೆ ಮತ್ತು ಕಲಾವಿದನಿಗೆ ಗಡಿ ರೇಖೆಗಳಿಲ್ಲ. ವಿಷ್ಣು ದಾದಾರಂತಹ ಮೇರು ನಟರ ಬಗ್ಗೆ ಕೀಳು ಅಭಿರುಚಿಯಿಂದ ಮಾತನಾಡಿರುವುದನ್ನ ನಾನು ಖಂಡಿಸುತ್ತೇನೆ. ಯಾವುದೇ ಚಿತ್ರರಂಗಕ್ಕೆ ಸಂಬಂಧ ಪಟ್ಟವನಾಗಿದ್ದರೂ, ದುರಹಂಕಾರವನ್ನು ಪಕ್ಕಕ್ಕೆ ಇಟ್ಟು, ತಕ್ಷಣವೇ ಪತ್ರಿಕಾಗೋಷ್ಠಿಯನ್ನ ನಡೆಸಿ ವಿಷ್ಣು ದಾದಾರ ಅಸಂಖ್ಯ ಅಭಿಮಾನಿಗಳಲ್ಲಿ ಈ ಕೂಡಲೇ ಕ್ಷಮೆ ಯಾಚಿಸಬೇಕೆಂದು, ನಾನೂ ಒಬ್ಬ ಅಭಿಮಾನಿಯಾಗಿ ಆಗ್ರಹಿಸುತ್ತೇನೆ’ ಎಂದು ಗೋಲ್ಡನ್​ ಸ್ಟಾರ್​ ಗಣೇಶ್​ ಆಗ್ರಹಿಸಿದ್ದಾರೆ.

ಇದನ್ನೂ ಓದಿ: BJP ಮತೀಯ ಭಾವನೆ ಕೆರಳಿಸುತ್ತದೆಯೆ ವಿನಃ ಗೋವಿನ ಬಗ್ಗೆ ಭಕ್ತಿ, ಕಾಳಜಿ ಇಲ್ಲ: ಸಿದ್ದರಾಮಯ್ಯ

“ತಮ್ಮ ವ್ಯಕ್ತಿತ್ವದಿಂದಲೇ ಕೋಟ್ಯಂತರ ಅಭಿಮಾನಿಗಳನ್ನು ಸಂಪಾದಿಸಿರುವ ವಿಷ್ಣು ಸರ್ ನಡತೆ ಬಗ್ಗೆ ನಟನೊಬ್ಬ ತುಚ್ಛವಾಗಿ ಮಾತಾನಾಡಿದ್ದು ಖಂಡನೀಯ. ಆತ ಕೂಡಲೇ ತಪ್ಪೊಪ್ಪಿಕೊಂಡು ಕಲೆ, ಕಲಾವಿದರನ್ನು ಗೌರವಿಸುವುದು ಕಲಿಯಬೇಕು” ಎಂದು ನಟ, ನಿರ್ದೇಶಕ ರಿಷಬ್ ಶೆಟ್ಟಿ ಆಗ್ರಹಿಸಿದ್ದಾರೆ.

ಇನ್ನು ನಿರ್ದೇಶಕ ಪವನ್ ಒಡೆಯರ್‌ ಕೂಡ ಪುನೀತ್ ರಾಜ್‌ಕುಮಾರ್‌ ಮಾದರಿಯಲ್ಲಿ ಮೊದಲು ಮಾನವನಾಗು ಎಂದಿದ್ದಾರೆ.  “ನಮ್ಮ ನಾಡಿನ ಮೇರು ನಟರಲ್ಲಿ ಒಬ್ಬರಾದ ವಿಷ್ಣು ಸರ್ ಬಗ್ಗೆ ಅವಹೇಳನ ವಾಗಿ ಮಾತನಾಡಿರುವ ಆ ಕಲಾವಿದ ಕ್ಷಮೆ ಕೇಳಿ ತನ್ನ ಮಾತುಗಳನ್ನ ಹಿಂಪಡಿಬೇಕು ಭಾರತೀಯ ಚಿತ್ರರಂಗ ನಮ್ಮ ಮನೆ ಎಲ್ಲ ಕಲಾವಿದರು ಒಂದು ಕುಟುಂಬ ಕಲೆಗೆ ಕಲಾವಿದರಿಗೆ ಗೌರವಿಸೋದು ನಮ್ಮ ಕರ್ತವ್ಯ “ಮೊದಲು ಮಾನವನಾಗು” ಎಂದು ಟ್ವೀಟ್ ಮಾಡಿದ್ದಾರೆ.

ಚಿತ್ರರಂಗವಲ್ಲದೇ ಸಾಹಸಸಿಂಹ ವಿಷ್ಣುವರ್ಧನ್ ಅಭಿಮಾನಿಗಳು ಖಳನಟನ ವಿರುದ್ಧ ದೂರು ದಾಖಲಿಸಿದ್ದು, ಅಲ್ಲದೇ ತಮ್ಮ ಖಾತೆಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಲ್ಲರೂ ತಮ್ಮ ಪೋಸ್ಟ್‌ಗಳಲ್ಲಿ #RespectArtAndArtist ಎನ್ನುವ ಹ್ಯಾಶ್‌ಟ್ಯಾಗ್ ಬಳಕೆ ಮಾಡಿದ್ದು, ಕಲಾವಿದರು ಮತ್ತು ಕಲೆಗೆ ಬೆಲೆ ನೀಡಿ ಎಂದಿದ್ದಾರೆ.


ಇದನ್ನೂ ಓದಿ: ಕರ್ನಾಟಕದಲ್ಲಿ ಬಿಜೆಪಿ ಹೆಬ್ಬಾಗಿಲು ಪೂರ್ತಿ ತೆರೆದಿಲ್ಲ, ಕಳ್ಳಕಿಂಡಿಗಳು ಇನ್ನೂ ಮುಚ್ಚಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...