Homeಚಳವಳಿರಂಗಾಯಣದ ರಂಗೋತ್ಸವ : ಪಿ.ಲಂಕೇಶರಿಗೆ ರಂಗನಮನ - 2019

ರಂಗಾಯಣದ ರಂಗೋತ್ಸವ : ಪಿ.ಲಂಕೇಶರಿಗೆ ರಂಗನಮನ – 2019

- Advertisement -
- Advertisement -

ಪಿ.ಲಂಕೇಶ್ ರವರು ಹಲವು ತಲೆಮಾರುಗಳನ್ನು ಪ್ರಭಾವಿಸಿದ ಭಾರತದ ಅಪ್ಪಟ ಜೀವನಪ್ರೀತಿಯ ಮನುಷ್ಯರಾಗಿದ್ದವರು. ತಮ್ಮ ಎಲ್ಲಾ ರೀತಿಯ ಬರಹಗಳಿಂದ ಅಸಂಖ್ಯಾತ ಓದುಗರನ್ನು ಪ್ರೇರಿಪಿಸಿದ ಮಹಾನ್ ಚೇತನ ಅವರದು. ಕನ್ನಡ ಸಾಹಿತ್ಯ ಲೋಕವಂತೂ ಅವರನ್ನು ಮರೆಯುವ ಮಾತೇ ಇಲ್ಲ. ಗೌರಿ ಲಂಕೇಶ್ ರವರು ಬದುಕಿದ್ದಾಗ ಪ್ರತಿ ವರ್ಷ ಪಿ.ಲಂಕೇಶ್ ರವರ ಜನ್ಮದಿನವಾದ ಮಾರ್ಚ್ 08 ರಂದು ರಾಜ್ಯದ ಯಾವುದಾದರೊಂದು ಜಿಲ್ಲೆಯಲ್ಲಿ ಅತ್ಯುತ್ತಮ ಸಾಹಿತ್ಯಕ-ರಾಜಕೀಯ ಕಾರ್ಯಕ್ರಮ ಏರ್ಪಡಿಸುತ್ತಿದ್ದರು. ಈಗಲೂ ಲಂಕೇಶ್ ರವರ ಸ್ಫೂರ್ತಿ, ಪ್ರಭಾವದ ನೆನಪಿನಲ್ಲಿ ಈ ರೀತಿಯ ಹಲವು ಕಾರ್ಯಕ್ರಮಗಳನ್ನು ಲಂಕೇಶ್ ರವರ ಶಿಷ್ಯಬಳಗ ರಾಜ್ಯದ್ಯಂತ ಹಮ್ಮಿಕೊಳ್ಳುತ್ತಿವೆ.

ಅದೇ ರೀತಿ ಈ ವರ್ಷ ಶಿವಮೊಗ್ಗ ರಂಗಾಯಣದಲ್ಲಿ ವಿಶ್ವರಂಗಭೂಮಿ ದಿನಾಚರಣೆ ಪ್ರಯುಕ್ತ ‘ರಂಗಾಯಣದ ರಂಗೋತ್ಸವ-ಪಿ.ಲಂಕೇಶರಿಗೆ ರಂಗನಮನ-2019’ ರ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕರ್ನಾಟಕದ, ಕನ್ನಡದ ಸಾಕ್ಷಿ ಪ್ರಜೆಯಾಗಿದ್ದ ಕನ್ನಡ ರಂಗಭೂಮಿಗೆ ತಮ್ಮದೇ ಆದ ರೀತಿಯ ಕಾಣಿಕೆ ಸಲ್ಲಿಸಿದ ಪಿ.ಲಂಕೇಶರಿಗೆ, ಸಮಕಾಲೀನವು ವಿಭಿನ್ನವು ಆದ ರಂಗಾಯಣದ ಮೂರು ನಾಟಕಗಳು ಸೇರಿ ಒಟ್ಟು ಐದು ನಾಟಕ ಪ್ರದರ್ಶನಗಳನ್ನು ಅರ್ಪಿಸುವ ಮೂಲಕ ಲಂಕೇಶರನ್ನು ನೆನಪು ಮಾಡಿಕೊಳ್ಳಲಾಗುತ್ತಿದೆ.

ಇದೇ ಮಾರ್ಚ್ 27 ರಿಂದ 31 ರವರೆಗೆ ನಡೆಯುವ ಈ ರಂಗನಮನ ಕಾರ್ಯಕ್ರಮದಲ್ಲಿ ಅರವಿಂದ ಮಾಲಗತ್ತಿಯವರ ಗೌರ್ಮೆಂಟ್ ಬ್ರಾಹ್ಮಣ, ಬಾದಲ್ ಸರ್ಕಾರ್ ರವರ ಮೆರವಣಿಗೆ, ಜಾಯ್ ಮೈಸ್ನಾಂ ರವರ ಇದಕ್ಕೆ ಕೊನೆ ಎಂದು? ವಾಮನ ರಾಯರವರ ಸಂದೇಹ ಸಾಮ್ರಾಜ್ಯ ಮತ್ತು ಶ್ರೀನಿವಾಸ ವೈದ್ಯರ ಬರಹಗಳನ್ನಾಧರಿಸಿದ ಪಾರ್ಶ್ವ ಸಂಗೀತ ನಾಟಕಗಳು ಪ್ರತಿದಿನ ಸಂಜೆ ಪ್ರದರ್ಶನಗೊಳ್ಳಲ್ಲಿವೆ. ಈ ರಂಗೋತ್ಸವ ನಡೆಯಲು ಶಿವಮೊಗ್ಗ ರಂಗಾಯಣದ ನಿರ್ದೇಶಕರಾದ ಡಾ. ಎಂ ಗಣೇಶ್ ರವರ ಶ್ರಮ ಎದ್ದು ಕಾಣುತ್ತಿದೆ.

“ಸಾಲದಲ್ಲಿ ಹುಟ್ಟಿ ಸಾಲದಲ್ಲೇ ಸಾಯುತ್ತಾನೆ” ಎಂಬ ಮಾತು ಈ ವಸುಧೆಯ ಮೇಲೆ ಭಾರತೀಯ ರೈತನಿಗಲ್ಲದೇ ಇನ್ನಾರಿಗೆ ಅನ್ವಯಿಸೀತು?  ರೈತರ ಅರಿವಿಗೆ ಬಾರದೆಯೇ ಅವರನ್ನಾವರಿಸುವ ಸಾಲದ ಸುಳಿ, ಅದರಿಂದ ಹೊರಬರಲಾರದೇ ಒದ್ದಾಡುತ್ತಿರುವಾಗಲೇ ಅವನೊಡನೆ ಕಣ್ಣಾಮುಚ್ಚಾಲೆಯಾಡುವ ಮಳೆ, ಮುನಿಸಿಕೊಳ್ಳುವ ಪ್ರಕೃತಿ, ನೀರಿನ ನೀರಿಕ್ಷೆಯಲ್ಲಿಯೇ ಮುರುಟುವ ಬೆಳೆಗಳು ಒಂದೇ ಎರಡೇ? ಅನ್ನಕ್ಕೂ ಗತಿಯಿಲ್ಲದೇ ತನ್ನ ಬದುಕನ್ನು ಕೊನೆಯಾಗಿಸಿಕೊಳ್ಳುತ್ತಾನೆ ರೈತ! .
ಈ ರೈತರ ಆತ್ಮಹತ್ಯೆಯಂತಹ ಕಠು ಸತ್ಯದ ಭೀಕರತೆಯನ್ನು ಉತ್ಕಟ ಭಾವಾಭಿನಯಗಳ ಅಸಂಗತ ಘಟನಾವಳಿಗಳ ಮೂಲಕ ತಮ್ಮ ಮುಂದೆ ಶಿವಮೊಗ್ಗ ರಂಗಾಯಣದ ಕಲಾವಿದರು ಅಭಿನಯಿಸಲಿದ್ದಾರೆ. ಮಾತುಗಳು ಮುಖ್ಯವಾಗದೆ ಬೌದ್ಧಿಕ ದೈಹಿಕ ಅಭಿನಯದಲ್ಲಿ ಪ್ರೇಕ್ಷಕನನ್ನು ಚಿಂತನೆಗೆ ಪ್ರಚೋದಿಸುವ ಪ್ರಯತ್ನ ಮಾಡಿದ್ದಾರೆ ನಿರ್ದೇಶಕರಾದ ಮಣಿಪುರದ ಜಾಯ್ ಮೈಸ್ನಾಂ ರವರು.

ಈ ರೀತಿ ಸಮಾಜಮುಖಿ ಚಿಂತನೆಗಳುಳ್ಳ ನಾಟಕಗಳು ಪಿ.ಲಂಕೇಶ್ ರವರ ನೆನಪಿನಲ್ಲಿ ಪ್ರದರ್ಶನಗೊಳ್ಳುತ್ತಿರುವ ಆಶಾದಾಯಕ ಬೆಳವಣಿಗೆ. ಇಂತಹ ಪ್ರಯೋಗಗಳು ಹೆಚ್ಚಾಗಲಿ ಎಂಬುದು ನಮ್ಮ ಆಶಯ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....