Homeಚಳವಳಿರಂಗಾಯಣದ ರಂಗೋತ್ಸವ : ಪಿ.ಲಂಕೇಶರಿಗೆ ರಂಗನಮನ - 2019

ರಂಗಾಯಣದ ರಂಗೋತ್ಸವ : ಪಿ.ಲಂಕೇಶರಿಗೆ ರಂಗನಮನ – 2019

- Advertisement -
- Advertisement -

ಪಿ.ಲಂಕೇಶ್ ರವರು ಹಲವು ತಲೆಮಾರುಗಳನ್ನು ಪ್ರಭಾವಿಸಿದ ಭಾರತದ ಅಪ್ಪಟ ಜೀವನಪ್ರೀತಿಯ ಮನುಷ್ಯರಾಗಿದ್ದವರು. ತಮ್ಮ ಎಲ್ಲಾ ರೀತಿಯ ಬರಹಗಳಿಂದ ಅಸಂಖ್ಯಾತ ಓದುಗರನ್ನು ಪ್ರೇರಿಪಿಸಿದ ಮಹಾನ್ ಚೇತನ ಅವರದು. ಕನ್ನಡ ಸಾಹಿತ್ಯ ಲೋಕವಂತೂ ಅವರನ್ನು ಮರೆಯುವ ಮಾತೇ ಇಲ್ಲ. ಗೌರಿ ಲಂಕೇಶ್ ರವರು ಬದುಕಿದ್ದಾಗ ಪ್ರತಿ ವರ್ಷ ಪಿ.ಲಂಕೇಶ್ ರವರ ಜನ್ಮದಿನವಾದ ಮಾರ್ಚ್ 08 ರಂದು ರಾಜ್ಯದ ಯಾವುದಾದರೊಂದು ಜಿಲ್ಲೆಯಲ್ಲಿ ಅತ್ಯುತ್ತಮ ಸಾಹಿತ್ಯಕ-ರಾಜಕೀಯ ಕಾರ್ಯಕ್ರಮ ಏರ್ಪಡಿಸುತ್ತಿದ್ದರು. ಈಗಲೂ ಲಂಕೇಶ್ ರವರ ಸ್ಫೂರ್ತಿ, ಪ್ರಭಾವದ ನೆನಪಿನಲ್ಲಿ ಈ ರೀತಿಯ ಹಲವು ಕಾರ್ಯಕ್ರಮಗಳನ್ನು ಲಂಕೇಶ್ ರವರ ಶಿಷ್ಯಬಳಗ ರಾಜ್ಯದ್ಯಂತ ಹಮ್ಮಿಕೊಳ್ಳುತ್ತಿವೆ.

ಅದೇ ರೀತಿ ಈ ವರ್ಷ ಶಿವಮೊಗ್ಗ ರಂಗಾಯಣದಲ್ಲಿ ವಿಶ್ವರಂಗಭೂಮಿ ದಿನಾಚರಣೆ ಪ್ರಯುಕ್ತ ‘ರಂಗಾಯಣದ ರಂಗೋತ್ಸವ-ಪಿ.ಲಂಕೇಶರಿಗೆ ರಂಗನಮನ-2019’ ರ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕರ್ನಾಟಕದ, ಕನ್ನಡದ ಸಾಕ್ಷಿ ಪ್ರಜೆಯಾಗಿದ್ದ ಕನ್ನಡ ರಂಗಭೂಮಿಗೆ ತಮ್ಮದೇ ಆದ ರೀತಿಯ ಕಾಣಿಕೆ ಸಲ್ಲಿಸಿದ ಪಿ.ಲಂಕೇಶರಿಗೆ, ಸಮಕಾಲೀನವು ವಿಭಿನ್ನವು ಆದ ರಂಗಾಯಣದ ಮೂರು ನಾಟಕಗಳು ಸೇರಿ ಒಟ್ಟು ಐದು ನಾಟಕ ಪ್ರದರ್ಶನಗಳನ್ನು ಅರ್ಪಿಸುವ ಮೂಲಕ ಲಂಕೇಶರನ್ನು ನೆನಪು ಮಾಡಿಕೊಳ್ಳಲಾಗುತ್ತಿದೆ.

ಇದೇ ಮಾರ್ಚ್ 27 ರಿಂದ 31 ರವರೆಗೆ ನಡೆಯುವ ಈ ರಂಗನಮನ ಕಾರ್ಯಕ್ರಮದಲ್ಲಿ ಅರವಿಂದ ಮಾಲಗತ್ತಿಯವರ ಗೌರ್ಮೆಂಟ್ ಬ್ರಾಹ್ಮಣ, ಬಾದಲ್ ಸರ್ಕಾರ್ ರವರ ಮೆರವಣಿಗೆ, ಜಾಯ್ ಮೈಸ್ನಾಂ ರವರ ಇದಕ್ಕೆ ಕೊನೆ ಎಂದು? ವಾಮನ ರಾಯರವರ ಸಂದೇಹ ಸಾಮ್ರಾಜ್ಯ ಮತ್ತು ಶ್ರೀನಿವಾಸ ವೈದ್ಯರ ಬರಹಗಳನ್ನಾಧರಿಸಿದ ಪಾರ್ಶ್ವ ಸಂಗೀತ ನಾಟಕಗಳು ಪ್ರತಿದಿನ ಸಂಜೆ ಪ್ರದರ್ಶನಗೊಳ್ಳಲ್ಲಿವೆ. ಈ ರಂಗೋತ್ಸವ ನಡೆಯಲು ಶಿವಮೊಗ್ಗ ರಂಗಾಯಣದ ನಿರ್ದೇಶಕರಾದ ಡಾ. ಎಂ ಗಣೇಶ್ ರವರ ಶ್ರಮ ಎದ್ದು ಕಾಣುತ್ತಿದೆ.

“ಸಾಲದಲ್ಲಿ ಹುಟ್ಟಿ ಸಾಲದಲ್ಲೇ ಸಾಯುತ್ತಾನೆ” ಎಂಬ ಮಾತು ಈ ವಸುಧೆಯ ಮೇಲೆ ಭಾರತೀಯ ರೈತನಿಗಲ್ಲದೇ ಇನ್ನಾರಿಗೆ ಅನ್ವಯಿಸೀತು?  ರೈತರ ಅರಿವಿಗೆ ಬಾರದೆಯೇ ಅವರನ್ನಾವರಿಸುವ ಸಾಲದ ಸುಳಿ, ಅದರಿಂದ ಹೊರಬರಲಾರದೇ ಒದ್ದಾಡುತ್ತಿರುವಾಗಲೇ ಅವನೊಡನೆ ಕಣ್ಣಾಮುಚ್ಚಾಲೆಯಾಡುವ ಮಳೆ, ಮುನಿಸಿಕೊಳ್ಳುವ ಪ್ರಕೃತಿ, ನೀರಿನ ನೀರಿಕ್ಷೆಯಲ್ಲಿಯೇ ಮುರುಟುವ ಬೆಳೆಗಳು ಒಂದೇ ಎರಡೇ? ಅನ್ನಕ್ಕೂ ಗತಿಯಿಲ್ಲದೇ ತನ್ನ ಬದುಕನ್ನು ಕೊನೆಯಾಗಿಸಿಕೊಳ್ಳುತ್ತಾನೆ ರೈತ! .
ಈ ರೈತರ ಆತ್ಮಹತ್ಯೆಯಂತಹ ಕಠು ಸತ್ಯದ ಭೀಕರತೆಯನ್ನು ಉತ್ಕಟ ಭಾವಾಭಿನಯಗಳ ಅಸಂಗತ ಘಟನಾವಳಿಗಳ ಮೂಲಕ ತಮ್ಮ ಮುಂದೆ ಶಿವಮೊಗ್ಗ ರಂಗಾಯಣದ ಕಲಾವಿದರು ಅಭಿನಯಿಸಲಿದ್ದಾರೆ. ಮಾತುಗಳು ಮುಖ್ಯವಾಗದೆ ಬೌದ್ಧಿಕ ದೈಹಿಕ ಅಭಿನಯದಲ್ಲಿ ಪ್ರೇಕ್ಷಕನನ್ನು ಚಿಂತನೆಗೆ ಪ್ರಚೋದಿಸುವ ಪ್ರಯತ್ನ ಮಾಡಿದ್ದಾರೆ ನಿರ್ದೇಶಕರಾದ ಮಣಿಪುರದ ಜಾಯ್ ಮೈಸ್ನಾಂ ರವರು.

ಈ ರೀತಿ ಸಮಾಜಮುಖಿ ಚಿಂತನೆಗಳುಳ್ಳ ನಾಟಕಗಳು ಪಿ.ಲಂಕೇಶ್ ರವರ ನೆನಪಿನಲ್ಲಿ ಪ್ರದರ್ಶನಗೊಳ್ಳುತ್ತಿರುವ ಆಶಾದಾಯಕ ಬೆಳವಣಿಗೆ. ಇಂತಹ ಪ್ರಯೋಗಗಳು ಹೆಚ್ಚಾಗಲಿ ಎಂಬುದು ನಮ್ಮ ಆಶಯ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...