Homeಚಳವಳಿ2 ನಿಮಿಷದ ಕಿರುಚಿತ್ರ ದೂಸ್ರಾ: CAA-NRC-NPR ವಿರುದ್ಧ ಸಂದೇಶ ಸಾರಿದ ಇರ್ಫಾನ್-ಪಾ.ರಂಜಿತ್ ಜೋಡಿ

2 ನಿಮಿಷದ ಕಿರುಚಿತ್ರ ದೂಸ್ರಾ: CAA-NRC-NPR ವಿರುದ್ಧ ಸಂದೇಶ ಸಾರಿದ ಇರ್ಫಾನ್-ಪಾ.ರಂಜಿತ್ ಜೋಡಿ

ನೀವು ನಿರಂತರವಾಗಿ ನಮ್ಮನ್ನು ಬೇಟೆಯಾಡಬಹದು, ಆದರೆ ನಿಮ್ಮ ಕಾರಾಗೃಹಗಳು ಸಾಕಾಗುವುದಿಲ್ಲ. ನಿಮ್ಮ ದುಷ್ಟ ಸರಪಳಿಗಳು ಮುರಿದುಬಿದ್ದಾಗ, ನ್ಯಾಯದ ಸಮಯ ಆಗಮಿಸುತ್ತದೆ. 

- Advertisement -
- Advertisement -

ಇಬ್ಬರು ಮುಸ್ಲಿಂ ಯುವಕರು ಕ್ರಿಕೆಟ್ ಆಡಲು ಬಹುದೂರದಿಂದ ಓಡೋಡಿ ಬಂದು ಮೈದಾನ ಸೇರುತ್ತಾರೆ. ಆದರೆ ಅಲ್ಲಿದ್ದ ತಂಡದ ನಾಯಕ ಅವರ ಧರ್ಮದ ಕಾರಣಕ್ಕೆ ಅವರನ್ನು ಆಟಕ್ಕೆ ಸೇರಿಸಿಕೊಳ್ಳುವುದಿಲ್ಲ. ‘ನೀನು ಕೆಲದಿನ ಇಲ್ಲದಿದ್ದಾಗ ಇವರೊಡನೆ ನಾವು ಆಡಿದ್ದೇವೆ’ ಎಂದು ಸಹ ಆಟಗಾರ ನಾಯಕನಿಗೆ ತಿಳಿಸುತ್ತಾನೆ. ಆಗ ನಾಯಕ, ‘ಯಾರನ್ನು ಕೇಳಿ ಸೇರಿಸಿಕೊಂಡಿರಿ? ಈ ಈಡಿಯಟ್‌ಗಳಿಗೆ ಅವಕಾಶವಿಲ್ಲ, ಇಲ್ಲಿಂದ ಹೊರದಬ್ಬಿರಿ’ ಎಂದು ಕೆಟ್ಟದಾಗಿ ಬೈಯ್ಯುತ್ತಾನೆ. ನಂತರ ಆಟ ಮುಂದುವರೆಸಿದಾಗ ನಾಯಕ ದೂಸ್ರಾ ಬೌಲ್‌ಗೆ ಸಿಕ್ಸರ್ ಎತ್ತಲು ಪ್ರಯತ್ನಿಸುತ್ತಾನೆ, ಆದರೆ ಮೈದಾನಕ್ಕೆ ಬಂದ 45-50 ವರ್ಷದ ಒಬ್ಬ ಮುಸ್ಲಿಂ ವ್ಯಕ್ತಿ ಒಂದೇ ಕೈಯಲ್ಲಿ ಕ್ಯಾಚ್ ಹಿಡಿಯುತ್ತಾನೆ. ಆತನ ಹಿಂದೆ 20ಕ್ಕೂ ಹೆಚ್ಚು ಎಲ್ಲಾ ಧರ್ಮದ ಯುವಕರು, ಮಕ್ಕಳು ಒಟ್ಟುಗೂಡಿರುತ್ತಾರೆ. ‘REACT ON EXCLUSION’ (ಹೊರಗಿಡುವಿಕೆಗೆ ಪ್ರತಿಕ್ರಿಯೆ) ಎಂಬ ಅಕ್ಷರಗಳು ಪರದೆಯ ಮೇಲೆ ಮೂಡುತ್ತವೆ. “ತಾರತಮ್ಯವೆಣಿಸುವ ಎಲ್ಲಾ ಕಾಯ್ದೆಗಳ ವಿರುದ್ಧ ಹೋರಾಟ, “NO CAA NRC NPR” ಎಂಬ ಸಂದೇಶದೊಂದಿಗೆ ದೂಸ್ರಾ ಕಿರುಚಿತ್ರ ಮುಕ್ತಾಯವಾಗುತ್ತದೆ.

ಇದು ಸಂವೇದನಾವೇದಿ ಮತ್ತು ಪಾ.ರಂಜಿತ್‌ರವರ ನೀಲಂ ಬ್ಯಾನರ್‌ನಡಿ ನಿರ್ಮಾಣಗೊಂಡ, ಇರ್ಫಾನ್ ಹದಿ ನಿರ್ದೇಶನದ ಕೇವಲ 2 ನಿಮಿಷದ ದೂಸ್ರಾ ಎಂಬ ಹಿಂದಿ ಕಿರುಚಿತ್ರ. ರೈತರೊಂದಿಗೆ ಐಕ್ಯಮತ್ಯ (In Solidarity with Farmers) ಎಂಬ ಆರಂಭಿಕ ಸಾಲುಗಳೊಂದಿಗೆ ಆರಂಭವಾಗುವ ಈ ಕಿರುಚಿತ್ರದಲ್ಲಿ ಕೇವಲ ಎರಡೇ ನಿಮಿಷದಲ್ಲಿ ನಿರ್ದೇಶಕರು ದಾಟಿಸಬೇಕಾದ ಸಂದೇಶವನ್ನು ಪರಿಣಾಮಕಾರಿಯಾಗಿ ಮುಟ್ಟಿಸಿದ್ದಾರೆ. ಕಳೆದ ವರ್ಷ ಭಾರೀ ಪ್ರತಿಭಟನೆಗೆ ಗುರಿಯಾದ ಪೌರತ್ವ ತಿದ್ದಪಡಿ ಕಾಯ್ದೆ, ರಾಷ್ಟ್ರೀಯ ನಾಗರೀಕ ನೋಂದಣಿ ಮತ್ತು ರಾಷ್ಟ್ರೀಯ ಜನಸಂಖ್ಯಾ ನೋಂದಣಿಗಳಿಗೆ ಪ್ರತಿರೋಧವಾಗಿ ಇದು ಮೂಡಿಬಂದಿದೆ.

ನಮ್ಮ ಸ್ವಂತ ಮಣ್ಣಿನಲ್ಲಿ ಬದುಕುಳಿಯಲು ಹೋರಾಡಬೇಕಿದೆ.

ಜನರ ನಂಬಿಕೆ ಮತ್ತು ಚರ್ಮದಿಂದ ಅವರ ಸ್ವಾತಂತ್ರ್ಯವನ್ನು ನಿರ್ಧರಿಸಲಾಗುತ್ತಿದೆ.

ನೀವು ನಿರಂತರವಾಗಿ ನಮ್ಮನ್ನು ಬೇಟೆಯಾಡಬಹದು, ಆದರೆ ನಿಮ್ಮ ಕಾರಾಗೃಹಗಳು ಸಾಕಾಗುವುದಿಲ್ಲ.

ನಿಮ್ಮ ದುಷ್ಟ ಸರಪಳಿಗಳು ಮುರಿದುಬಿದ್ದಾಗ, ನ್ಯಾಯದ ಸಮಯ ಆಗಮಿಸುತ್ತದೆ. 

ಈ ಪರಿಣಾಮಕಾರಿ ಸಂದೇಶದೊಂದಿಗೆ ಕಿರುಚಿತ್ರ ಅಂತ್ಯಗೊಂಡಿದೆ. ದೇಶಾದ್ಯಂತ ಭಾರೀ ಪ್ರತಿಭಟನೆಗಳಿಗೆ ಕಾರಣವಾದ ಆ ಮೂರು ಕಾಯ್ದೆಗಳನ್ನು ಕೇಂದ್ರ ಸರ್ಕಾರ 2021ರ ಜನವರಿಯಿಂದ ಜಾರಿಗೊಳಿಸಲಿದೆ ಎಂಬ ಮಾತುಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಈ ಚಿತ್ರ ನಿರ್ಮಾಣಗೊಂಡಿದೆ.

ಕಿರು ಚಿತ್ರದ ‘ದೂಸ್ರಾ’ ಹೆಸರೇ ಅರ್ಥಗರ್ಭಿತವಾಗಿದೆ. ಇದಕ್ಕೆ ಹಿಂದಿಯಲ್ಲಿ ಎರಡನೆಯ ಅಥವಾ ಇತರ ಎನ್ನುವ ಅರ್ಥ ಬರುತ್ತದೆ. ಹಾಗಾಗಿ ದೇಶದಲ್ಲಿನ ಅಲ್ಪಸಂಖ್ಯಾತರನ್ನು ಈ ಕಾಯ್ದೆಗಳ ಮೂಲಕ ಎರಡನೇ ದರ್ಜೆಯ ಪ್ರಜೆಗಳಾಗಿ ನೋಡಲಾಗುತ್ತದೆ ಎಂದು ಅರ್ಥೈಸಬಹುದು. ಅದೇ ರೀತಿಯಲ್ಲಿ ಈ ಚಿತ್ರದಲ್ಲಿ ಕ್ರಿಕೆಟ್ ಆಟವನ್ನು ಸಾಂಕೇತಿಕವಾಗಿ ತೋರಿಸಲಾಗಿದೆ. ಕ್ರಿಕೆಟ್‌ ಪರಿಭಾಷೆಯಲ್ಲಿ ದೂಸ್ರಾ ಎಂದರೆ ಆಫ್‌ ಸ್ಪಿನ್ನರ್ ಬೌಲರ್‌ ಪ್ರಯೋಗಿಸುವ ವಿಭಿನ್ನ ಬೌಲ್. ದೂಸ್ರಾ ಬೌಲ್ ಆಫ್ ಬ್ರೇಕ್‌ಗೆ (ಆಫ್-ಸ್ಪಿನ್ನರ್‌ನ ಸಾಮಾನ್ಯ ಎಸೆತ) ವಿರುದ್ಧ ದಿಕ್ಕಿನಲ್ಲಿ ತಿರುಗುತ್ತದೆ, ಮತ್ತು ಬ್ಯಾಟ್ಸ್‌ಮನ್‌ನನ್ನು ಕಳಪೆ ಶಾಟ್ ಆಡುವಂತೆ ಗೊಂದಲಗೊಳಿಸುವ ಗುರಿ ಹೊಂದಿರುತ್ತದೆ. ಈ ಚಿತ್ರದಲ್ಲಿ ತಂಡದ ನಾಯಕ ಸಹ ದೂಸ್ರಾ ಬೌಲ್‌ಗೆ ಔಟಾಗುತ್ತಾರೆ. ಹಾಗೆಯೇ ಕೇಂದ್ರ ಸರ್ಕಾರ ಸಹ ಈ ಕಾಯ್ದೆಗಳನ್ನು ತಂದಲ್ಲಿ ಬಹುಜನರ ದೂಸ್ರಾ ದಾಳಿಗೆ ತತ್ತರಿಸುವುದು ಖ‍ಚಿತ ಎಂಬುದಾಗಿ ಕೂಡ ಅರ್ಥ ಮಾಡಿಕೊಳ್ಳಬಹುದಾಗಿದೆ.

ಪಾ ರಂಜಿತ್ ತಳಸಮುದಾಯದ, ಜಾತಿಯತೆಯ ವಿಷಯಗಳನ್ನು ಸಂಕೇತಗಳ ಮೂಲಕ ಮುಖ್ಯವಾಹಿನಿ ಸಿನಿಮಾದಲ್ಲಿ ತೋರಿಸುವುದರಲ್ಲಿ ನಿಸ್ಸೀಮರು. ಇದನ್ನು ಅವರ ನಿರ್ದೇಶನದ ಕಾಲಾ, ಕಬಾಲಿ, ಮದ್ರಾಸ್ ಮತ್ತು ಅಟ್ಟಕತ್ತಿಗಳಲ್ಲಿ, ಅವರ ನಿರ್ಮಾಣದ ಪರಿಯುರಮ್ ಪೆರುಮಾಳ್, ಗುಂಡು ಚಿತ್ರಗಳಲ್ಲಿ ಕಾಣಬಹುದು. ಅವರೀಗ ತಮ್ಮ ನೀಲಂ ಪ್ರೊಡಕ್ಷನ್ ಮೂಲಕ ಯೂಟ್ಯೂಬ್‌ನಲ್ಲಿ ಅಂಬೇಡ್ಕರ್, ಪೆರಿಯಾರ್ ಕುರಿತು, ಜಾತಿ-ಲಿಂಗ ತಾರತಮ್ಯದ ವಿಷಯಗಳನ್ನು ಪರಿಣಾಮಕಾರಿಯಾಗಿ ಹೇಳುತ್ತಿದ್ದಾರೆ. ಅದಕ್ಕೆ ಹೊಸ ಸೇರ್ಪಡೆ ಈ ಕಿರುಚಿತ್ರವಾಗಿದೆ.

ನಿನ್ನೆ ಯೂಟ್ಯೂಬ್‌ನಲ್ಲಿ ಬಿಡುಗಡೆಗೊಂಡಿರುವ ಸಂವೇದನಾವೇದಿ ನಿರ್ಮಾಣದ ಕೇವಲ ಎರಡು ನಿಮಿಷದ ‘ದೂಸ್ರಾ’ ನೋಡಲು ಇಲ್ಲಿ ಕ್ಲಿಕ್ ಮಾಡಿ.


ಇದನ್ನೂ ಓದಿ: ಸಿನೆಮಾದ ಮೂಲಕ ಜಾತಿ ಮುಕ್ತ ಸಮಾಜ ಕಟ್ಟಲೊರಟ ಅಂಬೇಡ್ಕರ್‌ವಾದಿ ನಿರ್ದೇಶಕ ಪ.ರಂಜಿತ್‌…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...