Homeಚಳವಳಿ2 ನಿಮಿಷದ ಕಿರುಚಿತ್ರ ದೂಸ್ರಾ: CAA-NRC-NPR ವಿರುದ್ಧ ಸಂದೇಶ ಸಾರಿದ ಇರ್ಫಾನ್-ಪಾ.ರಂಜಿತ್ ಜೋಡಿ

2 ನಿಮಿಷದ ಕಿರುಚಿತ್ರ ದೂಸ್ರಾ: CAA-NRC-NPR ವಿರುದ್ಧ ಸಂದೇಶ ಸಾರಿದ ಇರ್ಫಾನ್-ಪಾ.ರಂಜಿತ್ ಜೋಡಿ

ನೀವು ನಿರಂತರವಾಗಿ ನಮ್ಮನ್ನು ಬೇಟೆಯಾಡಬಹದು, ಆದರೆ ನಿಮ್ಮ ಕಾರಾಗೃಹಗಳು ಸಾಕಾಗುವುದಿಲ್ಲ. ನಿಮ್ಮ ದುಷ್ಟ ಸರಪಳಿಗಳು ಮುರಿದುಬಿದ್ದಾಗ, ನ್ಯಾಯದ ಸಮಯ ಆಗಮಿಸುತ್ತದೆ. 

- Advertisement -
- Advertisement -

ಇಬ್ಬರು ಮುಸ್ಲಿಂ ಯುವಕರು ಕ್ರಿಕೆಟ್ ಆಡಲು ಬಹುದೂರದಿಂದ ಓಡೋಡಿ ಬಂದು ಮೈದಾನ ಸೇರುತ್ತಾರೆ. ಆದರೆ ಅಲ್ಲಿದ್ದ ತಂಡದ ನಾಯಕ ಅವರ ಧರ್ಮದ ಕಾರಣಕ್ಕೆ ಅವರನ್ನು ಆಟಕ್ಕೆ ಸೇರಿಸಿಕೊಳ್ಳುವುದಿಲ್ಲ. ‘ನೀನು ಕೆಲದಿನ ಇಲ್ಲದಿದ್ದಾಗ ಇವರೊಡನೆ ನಾವು ಆಡಿದ್ದೇವೆ’ ಎಂದು ಸಹ ಆಟಗಾರ ನಾಯಕನಿಗೆ ತಿಳಿಸುತ್ತಾನೆ. ಆಗ ನಾಯಕ, ‘ಯಾರನ್ನು ಕೇಳಿ ಸೇರಿಸಿಕೊಂಡಿರಿ? ಈ ಈಡಿಯಟ್‌ಗಳಿಗೆ ಅವಕಾಶವಿಲ್ಲ, ಇಲ್ಲಿಂದ ಹೊರದಬ್ಬಿರಿ’ ಎಂದು ಕೆಟ್ಟದಾಗಿ ಬೈಯ್ಯುತ್ತಾನೆ. ನಂತರ ಆಟ ಮುಂದುವರೆಸಿದಾಗ ನಾಯಕ ದೂಸ್ರಾ ಬೌಲ್‌ಗೆ ಸಿಕ್ಸರ್ ಎತ್ತಲು ಪ್ರಯತ್ನಿಸುತ್ತಾನೆ, ಆದರೆ ಮೈದಾನಕ್ಕೆ ಬಂದ 45-50 ವರ್ಷದ ಒಬ್ಬ ಮುಸ್ಲಿಂ ವ್ಯಕ್ತಿ ಒಂದೇ ಕೈಯಲ್ಲಿ ಕ್ಯಾಚ್ ಹಿಡಿಯುತ್ತಾನೆ. ಆತನ ಹಿಂದೆ 20ಕ್ಕೂ ಹೆಚ್ಚು ಎಲ್ಲಾ ಧರ್ಮದ ಯುವಕರು, ಮಕ್ಕಳು ಒಟ್ಟುಗೂಡಿರುತ್ತಾರೆ. ‘REACT ON EXCLUSION’ (ಹೊರಗಿಡುವಿಕೆಗೆ ಪ್ರತಿಕ್ರಿಯೆ) ಎಂಬ ಅಕ್ಷರಗಳು ಪರದೆಯ ಮೇಲೆ ಮೂಡುತ್ತವೆ. “ತಾರತಮ್ಯವೆಣಿಸುವ ಎಲ್ಲಾ ಕಾಯ್ದೆಗಳ ವಿರುದ್ಧ ಹೋರಾಟ, “NO CAA NRC NPR” ಎಂಬ ಸಂದೇಶದೊಂದಿಗೆ ದೂಸ್ರಾ ಕಿರುಚಿತ್ರ ಮುಕ್ತಾಯವಾಗುತ್ತದೆ.

ಇದು ಸಂವೇದನಾವೇದಿ ಮತ್ತು ಪಾ.ರಂಜಿತ್‌ರವರ ನೀಲಂ ಬ್ಯಾನರ್‌ನಡಿ ನಿರ್ಮಾಣಗೊಂಡ, ಇರ್ಫಾನ್ ಹದಿ ನಿರ್ದೇಶನದ ಕೇವಲ 2 ನಿಮಿಷದ ದೂಸ್ರಾ ಎಂಬ ಹಿಂದಿ ಕಿರುಚಿತ್ರ. ರೈತರೊಂದಿಗೆ ಐಕ್ಯಮತ್ಯ (In Solidarity with Farmers) ಎಂಬ ಆರಂಭಿಕ ಸಾಲುಗಳೊಂದಿಗೆ ಆರಂಭವಾಗುವ ಈ ಕಿರುಚಿತ್ರದಲ್ಲಿ ಕೇವಲ ಎರಡೇ ನಿಮಿಷದಲ್ಲಿ ನಿರ್ದೇಶಕರು ದಾಟಿಸಬೇಕಾದ ಸಂದೇಶವನ್ನು ಪರಿಣಾಮಕಾರಿಯಾಗಿ ಮುಟ್ಟಿಸಿದ್ದಾರೆ. ಕಳೆದ ವರ್ಷ ಭಾರೀ ಪ್ರತಿಭಟನೆಗೆ ಗುರಿಯಾದ ಪೌರತ್ವ ತಿದ್ದಪಡಿ ಕಾಯ್ದೆ, ರಾಷ್ಟ್ರೀಯ ನಾಗರೀಕ ನೋಂದಣಿ ಮತ್ತು ರಾಷ್ಟ್ರೀಯ ಜನಸಂಖ್ಯಾ ನೋಂದಣಿಗಳಿಗೆ ಪ್ರತಿರೋಧವಾಗಿ ಇದು ಮೂಡಿಬಂದಿದೆ.

ನಮ್ಮ ಸ್ವಂತ ಮಣ್ಣಿನಲ್ಲಿ ಬದುಕುಳಿಯಲು ಹೋರಾಡಬೇಕಿದೆ.

ಜನರ ನಂಬಿಕೆ ಮತ್ತು ಚರ್ಮದಿಂದ ಅವರ ಸ್ವಾತಂತ್ರ್ಯವನ್ನು ನಿರ್ಧರಿಸಲಾಗುತ್ತಿದೆ.

ನೀವು ನಿರಂತರವಾಗಿ ನಮ್ಮನ್ನು ಬೇಟೆಯಾಡಬಹದು, ಆದರೆ ನಿಮ್ಮ ಕಾರಾಗೃಹಗಳು ಸಾಕಾಗುವುದಿಲ್ಲ.

ನಿಮ್ಮ ದುಷ್ಟ ಸರಪಳಿಗಳು ಮುರಿದುಬಿದ್ದಾಗ, ನ್ಯಾಯದ ಸಮಯ ಆಗಮಿಸುತ್ತದೆ. 

ಈ ಪರಿಣಾಮಕಾರಿ ಸಂದೇಶದೊಂದಿಗೆ ಕಿರುಚಿತ್ರ ಅಂತ್ಯಗೊಂಡಿದೆ. ದೇಶಾದ್ಯಂತ ಭಾರೀ ಪ್ರತಿಭಟನೆಗಳಿಗೆ ಕಾರಣವಾದ ಆ ಮೂರು ಕಾಯ್ದೆಗಳನ್ನು ಕೇಂದ್ರ ಸರ್ಕಾರ 2021ರ ಜನವರಿಯಿಂದ ಜಾರಿಗೊಳಿಸಲಿದೆ ಎಂಬ ಮಾತುಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಈ ಚಿತ್ರ ನಿರ್ಮಾಣಗೊಂಡಿದೆ.

ಕಿರು ಚಿತ್ರದ ‘ದೂಸ್ರಾ’ ಹೆಸರೇ ಅರ್ಥಗರ್ಭಿತವಾಗಿದೆ. ಇದಕ್ಕೆ ಹಿಂದಿಯಲ್ಲಿ ಎರಡನೆಯ ಅಥವಾ ಇತರ ಎನ್ನುವ ಅರ್ಥ ಬರುತ್ತದೆ. ಹಾಗಾಗಿ ದೇಶದಲ್ಲಿನ ಅಲ್ಪಸಂಖ್ಯಾತರನ್ನು ಈ ಕಾಯ್ದೆಗಳ ಮೂಲಕ ಎರಡನೇ ದರ್ಜೆಯ ಪ್ರಜೆಗಳಾಗಿ ನೋಡಲಾಗುತ್ತದೆ ಎಂದು ಅರ್ಥೈಸಬಹುದು. ಅದೇ ರೀತಿಯಲ್ಲಿ ಈ ಚಿತ್ರದಲ್ಲಿ ಕ್ರಿಕೆಟ್ ಆಟವನ್ನು ಸಾಂಕೇತಿಕವಾಗಿ ತೋರಿಸಲಾಗಿದೆ. ಕ್ರಿಕೆಟ್‌ ಪರಿಭಾಷೆಯಲ್ಲಿ ದೂಸ್ರಾ ಎಂದರೆ ಆಫ್‌ ಸ್ಪಿನ್ನರ್ ಬೌಲರ್‌ ಪ್ರಯೋಗಿಸುವ ವಿಭಿನ್ನ ಬೌಲ್. ದೂಸ್ರಾ ಬೌಲ್ ಆಫ್ ಬ್ರೇಕ್‌ಗೆ (ಆಫ್-ಸ್ಪಿನ್ನರ್‌ನ ಸಾಮಾನ್ಯ ಎಸೆತ) ವಿರುದ್ಧ ದಿಕ್ಕಿನಲ್ಲಿ ತಿರುಗುತ್ತದೆ, ಮತ್ತು ಬ್ಯಾಟ್ಸ್‌ಮನ್‌ನನ್ನು ಕಳಪೆ ಶಾಟ್ ಆಡುವಂತೆ ಗೊಂದಲಗೊಳಿಸುವ ಗುರಿ ಹೊಂದಿರುತ್ತದೆ. ಈ ಚಿತ್ರದಲ್ಲಿ ತಂಡದ ನಾಯಕ ಸಹ ದೂಸ್ರಾ ಬೌಲ್‌ಗೆ ಔಟಾಗುತ್ತಾರೆ. ಹಾಗೆಯೇ ಕೇಂದ್ರ ಸರ್ಕಾರ ಸಹ ಈ ಕಾಯ್ದೆಗಳನ್ನು ತಂದಲ್ಲಿ ಬಹುಜನರ ದೂಸ್ರಾ ದಾಳಿಗೆ ತತ್ತರಿಸುವುದು ಖ‍ಚಿತ ಎಂಬುದಾಗಿ ಕೂಡ ಅರ್ಥ ಮಾಡಿಕೊಳ್ಳಬಹುದಾಗಿದೆ.

ಪಾ ರಂಜಿತ್ ತಳಸಮುದಾಯದ, ಜಾತಿಯತೆಯ ವಿಷಯಗಳನ್ನು ಸಂಕೇತಗಳ ಮೂಲಕ ಮುಖ್ಯವಾಹಿನಿ ಸಿನಿಮಾದಲ್ಲಿ ತೋರಿಸುವುದರಲ್ಲಿ ನಿಸ್ಸೀಮರು. ಇದನ್ನು ಅವರ ನಿರ್ದೇಶನದ ಕಾಲಾ, ಕಬಾಲಿ, ಮದ್ರಾಸ್ ಮತ್ತು ಅಟ್ಟಕತ್ತಿಗಳಲ್ಲಿ, ಅವರ ನಿರ್ಮಾಣದ ಪರಿಯುರಮ್ ಪೆರುಮಾಳ್, ಗುಂಡು ಚಿತ್ರಗಳಲ್ಲಿ ಕಾಣಬಹುದು. ಅವರೀಗ ತಮ್ಮ ನೀಲಂ ಪ್ರೊಡಕ್ಷನ್ ಮೂಲಕ ಯೂಟ್ಯೂಬ್‌ನಲ್ಲಿ ಅಂಬೇಡ್ಕರ್, ಪೆರಿಯಾರ್ ಕುರಿತು, ಜಾತಿ-ಲಿಂಗ ತಾರತಮ್ಯದ ವಿಷಯಗಳನ್ನು ಪರಿಣಾಮಕಾರಿಯಾಗಿ ಹೇಳುತ್ತಿದ್ದಾರೆ. ಅದಕ್ಕೆ ಹೊಸ ಸೇರ್ಪಡೆ ಈ ಕಿರುಚಿತ್ರವಾಗಿದೆ.

ನಿನ್ನೆ ಯೂಟ್ಯೂಬ್‌ನಲ್ಲಿ ಬಿಡುಗಡೆಗೊಂಡಿರುವ ಸಂವೇದನಾವೇದಿ ನಿರ್ಮಾಣದ ಕೇವಲ ಎರಡು ನಿಮಿಷದ ‘ದೂಸ್ರಾ’ ನೋಡಲು ಇಲ್ಲಿ ಕ್ಲಿಕ್ ಮಾಡಿ.


ಇದನ್ನೂ ಓದಿ: ಸಿನೆಮಾದ ಮೂಲಕ ಜಾತಿ ಮುಕ್ತ ಸಮಾಜ ಕಟ್ಟಲೊರಟ ಅಂಬೇಡ್ಕರ್‌ವಾದಿ ನಿರ್ದೇಶಕ ಪ.ರಂಜಿತ್‌…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...