Homeಮುಖಪುಟದೇಶದ ಅರ್ಧದಷ್ಟು ಜನ ಹಸಿವಿನಲ್ಲಿರುವಾಗ ಹೊಸ ಸಂಸತ್ತು ಬೇಕೆ? ಮೋದಿಗೆ ಕಮಲ್ ಹಾಸನ್ ಪ್ರಶ್ನೆ

ದೇಶದ ಅರ್ಧದಷ್ಟು ಜನ ಹಸಿವಿನಲ್ಲಿರುವಾಗ ಹೊಸ ಸಂಸತ್ತು ಬೇಕೆ? ಮೋದಿಗೆ ಕಮಲ್ ಹಾಸನ್ ಪ್ರಶ್ನೆ

ಈಗ ಕೊರೊನಾದಿಂದಾಗಿ ಜೀವನೋಪಾಯ ಕಳೆದುಕೊಂಡ ನಂತರ ಭಾರತದ ಅರ್ಧದಷ್ಟು ಜನರು ಹಸಿವಿನಿಂದ ಬಳಲುತ್ತಿರುವಾಗ, 1,000 ಕೋಟಿ ರೂ.ಗಳ ಸಂಸತ್ತನ್ನು ಯಾರಿಗಾಗಿ ನಿರ್ಮಿಸುತ್ತಿದ್ದಿರಿ..?

- Advertisement -
- Advertisement -

ನಟ, ನಿರ್ದೇಶಕ, ರಾಜಕಾರಣಿ ಕಮಲ್ ಹಾಸನ್ 2021ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ಇಂದಿನಿಂದ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ಪ್ರಚಾರ ಆರಂಭಿಸುವ ಮೊದಲು ಹೊಸ ಸಂಸತ್ತಿಗೆ ಅಡಿಗಲ್ಲು ಹಾಕಿರುವ ಪ್ರಧಾನಿ ಮೋದಿಯವರ ಮೇಲೆ ವಾಗ್ದಾಳಿ ನಡೆಸಿದ್ದಾರೆ.

ದೇಶದ ಆರ್ಥಿಕತೆ ತೀವ್ರ ಕುಸಿತ ಕಂಡಿರುವ ಈ ಸಮಯದಲ್ಲಿ ಇಂತಹ ಬೃಹತ್ ಮೊತ್ತದ ಹೊಸ ಸಂಸತ್ತು ನಿರ್ಮಾಣದ ಅರ್ಥವೇನು ಎಂದು ಮಕ್ಕಳ್​ ನೀದಿ ಮಯ್ಯಂ ಪಕ್ಷದ ಸಂಸ್ಥಾಪಕರಾದ ನಟ ಕಮಲ್​​ ಹಾಸನ್ ಪ್ರಧಾನಿಯವರನ್ನು ಪ್ರಶ್ನಿಸಿದ್ದಾರೆ.

ತಮ್ಮ ಟ್ವಿಟರ್‌ ಖಾತೆಯಲ್ಲಿ ಕಮಲ್ ಹಾಸನ್, “ಭಾರತದ ಅರ್ಧದಷ್ಟು ಜನರು ಹಸಿವಿನಿಂದ ಬಳಲುತ್ತಿರುವಾಗ, ಕೊರೊನಾ ವೈರಸ್‌ನಿಂದಾಗಿ ಜೀವನೋಪಾಯವನ್ನು ಕಳೆದುಕೊಂಡಿರುವಾಗ 1,000 ಕೋಟಿ ವೆಚ್ಚದ ಹೊಸ ಸಂಸತ್ತು ಏಕೆ..?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ನಾಸ್ತಿಕತೆಯೇ ನನ್ನ ಆಯುಧ, ಮಾನವೀಯತೆ ನನ್ನ ಸಿದ್ಧಾಂತ: ಕಮಲ್ ಹಾಸನ್ ಹೇಳಿಕೆ ವೈರಲ್

ಕಮಲ್ ಹಾಸನ್ ಚೀನಾದ ಮಹಾಗೋಡೆ ನಿರ್ಮಾಣದ ಉದಾಹರಣೆ ನೀಡಿದ್ದಾರೆ. “ಚೀನಾದ ಮಹಾಗೋಡೆಯ ನಿರ್ಮಾಣದಲ್ಲಿ ಸಾವಿರಾರು ಜನರು ಸಾವನ್ನಪ್ಪಿದಾಗ, ಈ ಗೋಡೆ ಜನರನ್ನು ರಕ್ಷಿಸಲು ಎಂದು ರಾಜರು ಹೇಳಿದರು. ಈಗ ಕೊರೊನಾದಿಂದಾಗಿ ಜೀವನೋಪಾಯ ಕಳೆದುಕೊಂಡ ನಂತರ ಭಾರತದ ಅರ್ಧದಷ್ಟು ಜನರು ಹಸಿವಿನಿಂದ ಬಳಲುತ್ತಿರುವಾಗ, 1,000 ಕೋಟಿ ರೂ.ಗಳ ಸಂಸತ್ತನ್ನು ಯಾರಿಗಾಗಿ ನಿರ್ಮಿಸುತ್ತಿದ್ದಿರಿ..? ದಯವಿಟ್ಟು, ನನ್ನ ಗೌರವಾನ್ವಿತ ಚುನಾಯಿತ ಪ್ರಧಾನಿಗಳೇ ಉತ್ತರಿಸಿ ಎಂದು ಪ್ರಶ್ನಿಸಿದ್ದಾರೆ.

 

ರಾಷ್ಟ್ರ ರಾಜಧಾನಿಯಲ್ಲಿ ಸೆಂಟ್ರಲ್ ವಿಸ್ತಾದ 20,000 ಕೋಟಿ ಯೋಜನೆಯ ಕೇಂದ್ರಬಿಂದುವಾಗಿರುವ ಹೊಸ ಸಂಸತ್ ಕಟ್ಟಡಕ್ಕೆ ಡಿಸೆಂಬರ್ 10 ರಂದು ಪ್ರಧಾನಿ ನರೇಂದ್ರ ಮೋದಿ ಅಡಿಗಲ್ಲು ಹಾಕಿದ್ದಾರೆ. ಆದರೆ, ಸಂಸತ್ ಭವನದ ನಿರ್ಮಾಣವನ್ನು ತಕ್ಷಣ ಪ್ರಾರಂಭಿಸಲು ಸಾಧ್ಯವಿಲ್ಲ. ಏಕೆಂದರೆ, ಈ ಯೋಜನೆಯನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆ ಇನ್ನು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಉಳಿದಿದೆ.

ಇದನ್ನೂ ಓದಿ: ನೂತನ ಸಂಸತ್ ಭವನಕ್ಕೆ ಮೋದಿ ಭೂಮಿಪೂಜೆ: ಮುಂದುವರಿದ ಅನ್ನದಾತರ ಪ್ರತಿಭಟನೆ

ತಮಿಳುನಾಡು ಚುನಾವಣೆ ಹಿನ್ನೆಲೆ, ಇಂದಿನಿಂದ 16ನೇ ತಾರೀಖಿನವರೆಗೆ ಸುದೀರ್ಘ ಪ್ರಚಾರದಲ್ಲಿ ಕಮಲ್ ಹಾಸನ್ ತೊಡಗಲಿದ್ದು, ಮಧುರೈ, ಥೇಣಿ, ದಿಂಡಿಗಲ್, ವಿರುಧುನಗರ್​, ತಿರುಣಲ್​ವೇಲಿ, ಟುಟುಕೊರಿನ್ ಹಾಗೂ ಕನ್ಯಾಕುಮಾರಿ ಜಿಲ್ಲೆಗಳಲ್ಲಿ ಪ್ರಚಾರ ಮಾಡಲಿದ್ದಾರೆ.

ಕಮಲ್ ಹಾಸನ್ ಈ ಬಾರಿ ಸ್ಪರ್ಧಿಸುವ ಸಾಧ್ಯತೆಯಿದ್ದು, ಭ್ರಷ್ಟಾಚಾರ ನಿರ್ಮೂಲನೆ, ಉದ್ಯೋಗಗಳು, ಗ್ರಾಮ ಅಭಿವೃದ್ಧಿ ಮತ್ತು ಕುಡಿಯುವ ನೀರು ತಮ್ಮ ಪಕ್ಷದ  ಪ್ರಮುಖ ಯೋಜನೆಗಳನ್ನಾಗಿ ಮಾಡಿದ್ದಾರೆ. 2019 ರ ಲೋಕಸಭಾ ಚುನಾವಣೆಯಲ್ಲಿ ಕಮಲ್ ಪಕ್ಷವು ಸುಮಾರು 4 ಶೇಕಡಾ ಮತಗಳನ್ನು ಗಳಿಸಿದೆ.

ಮೊದಲಿನಿಂದಲೂ ಬಿಜೆಪಿ ವಿರುದ್ಧ ಟೀಕೆಗಳನ್ನು ಮಾಡುತ್ತ ಬಂದಿರುವ ನಟ ಕಮಲ್, ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷವಾದ ”ಮಕ್ಕಳ್ ನೀದಿ ಮಯ್ಯಂ” ಉತ್ತಮ ಜನರೊಂದಿಗೆ ಮೈತ್ರಿ ಮಾಡಿಕೊಳ್ಳಲಿದೆ, ಮುಂಬರುವ ಚುನಾವಣೆಯಲ್ಲಿ ನಟ ರಜನಿಕಾಂತ್ ಬೆಂಬಲವನ್ನು ಕೇಳುತ್ತೇನೆ ಎಂದು ಎಂದು ಈ ಹಿಂದೆ ಹೇಳಿದ್ದಾರೆ.

ಈಗಾಗಲೇ ತಮಿಳುನಾಡು ರಾಜಕೀಯದಲ್ಲಿ ಚಿತ್ರರಂಗದ ಜೊತೆಗೆ ಐಎಎಸ್ ಅಧಿಕಾರಿಗಳು ಸೇರಿಕೊಂಡಿದ್ದಾರೆ. ಐಎಎಸ್ ಮಾಜಿ ಅಧಿಕಾರಿ ಸಸಿಕಾಂತ್ ಸೆಂಥಿಲ್, ಅಣ್ಣಾಮಲೈ ಸೇರಿಕೊಂಡರೇ, ಡಿಸೆಂಬರ್‌ 31 ರಂದು ಪಕ್ಷವನ್ನು ಅಧಿಕೃತ ಘೋಷಣೆ ಮಾಡುವುದಾಗಿ ರಜನಿಕಾಂತ್ ಹೇಳಿದ್ದಾರೆ. ಒಟ್ಟಾರೆ, ಈ ಬಾರಿಯ ತಮಿಳುನಾಡಿನ ವಿಧಾನಸಭಾ ಚುನಾವಣೆ ದೇಶದ ಗಮನ ಸೆಳೆಯಲಿದೆ.


ಇದನ್ನೂ ಓದಿ: ವಿಧಾನಸಭಾ ಚುನಾವಣೆಯಲ್ಲಿ ರಜನಿಕಾಂತ್ ಬೆಂಬಲ ಕೇಳುತ್ತೇನೆ: ಕಮಲ್ ಹಾಸನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...