Homeಚಳವಳಿರೈತ ವಿರೋಧಿ ಕಾನೂನುಗಳನ್ನು ಹಿಂಪಡೆಯಲು ಒತ್ತಾಯ: ದೆಹಲಿ-ಜೈಪುರ ಹೆದ್ದಾರಿ ತಡೆದ ರೈತರು

ರೈತ ವಿರೋಧಿ ಕಾನೂನುಗಳನ್ನು ಹಿಂಪಡೆಯಲು ಒತ್ತಾಯ: ದೆಹಲಿ-ಜೈಪುರ ಹೆದ್ದಾರಿ ತಡೆದ ರೈತರು

ದೆಹಲಿ ಮತ್ತು ಜೈಪುರ ಹೆದ್ದಾರಿಯನ್ನು ತಡೆಯಲು ಬೆಳಿಗ್ಗೆಯಿಂದಲೇ ಸಿದ್ಧತೆ ಮಾಡಿಕೊಂಡಿರುವ ರೈತರನ್ನು ತಡೆಯಲು ದೆಹಲಿ ಮತ್ತು ಹರಿಯಾಣ ಪೊಲೀಸರು ಸಜ್ಜಾಗಿದ್ದರು.

- Advertisement -
- Advertisement -

ಕೇಂದ್ರ ಸರ್ಕಾರದ ವಿವಾದಾತ್ಮಕ ಕೃಷಿ ಕಾನೂನಗಳನ್ನು ವಿರೋಧಿಸಿ ಕಳೆದ 18 ದಿನಗಳಿಂದ ರಾಷ್ಟ್ರ ರಾಜಧಾನಿಯಲ್ಲಿ ಲಕ್ಷಾಂತರ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ. ಇದರ ಭಾಗವಾಗಿ ಇಂದು ದೆಹಲಿ-ಜೈಪುರ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದುವರೆಗೆ ಕೇಂದ್ರದೊಟ್ಟಿಗೆ ಹಲವು ಸುತ್ತಿನ ಸಂಧಾನ ಸಭೆಗಳು ನಡೆದಿದ್ದರೂ ಸಹ ಪಟ್ಟು ಬಿಡದ ರೈತರು ‘ಕಾನೂನುಗಳನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸುತ್ತಿದ್ದಾರೆ.

ದೆಹಲಿ ಮತ್ತು ಜೈಪುರ ಹೆದ್ದಾರಿಯನ್ನು ತಡೆಯಲು ಬೆಳಿಗ್ಗೆಯಿಂದಲೇ ಸಿದ್ಧತೆ ಮಾಡಿಕೊಂಡಿರುವ ರೈತರನ್ನು ತಡೆಯಲು ದೆಹಲಿ ಮತ್ತು ಹರಿಯಾಣ ಪೊಲೀಸರು ಸಜ್ಜಾಗಿದ್ದರು.

ಇದನ್ನೂ ಓದಿ: 2 ನಿಮಿಷದ ಕಿರುಚಿತ್ರ ದೂಸ್ರಾ: CAA-NRC-NPR ವಿರುದ್ಧ ಸಂದೇಶ ಸಾರಿದ ಇರ್ಫಾನ್-ಪಾ.ರಂಜಿತ್ ಜೋಡಿ

ಪ್ರತಿಭಟನೆಯನ್ನು ಕೊನೆಗೊಳಿಸಬೇಕೆಂದು ಕೇಂದ್ರ ಸರ್ಕಾರವು ರೈತ ಸಂಘಟನೆಗಳೊಂದಿಗೆ ಹಲವು ಸುತ್ತಿನ ಮಾತಕತೆ ಮತ್ತು ಸಂಧಾನ ಸಭೆಗಳನ್ನು ನಡೆಸಿದರೂ ಸಹ ಅವುಗಳೆಲ್ಲಾ ವಿಫಲಾಗಿವೆ.

ಕೃಷಿ ಕಾಯ್ದೆಗಳ ಬಗ್ಗೆ ಅರಿವು ಮೂಡಸಲೆಂದು 700 ಜಿಲ್ಲೆಗಳಲ್ಲಿ 100 ಪ್ರತಿಕಾಗೋಷ್ಠಿಗಳು ಮತ್ತು 700 ರೈತ ಸಭೆಗಳನ್ನು ಆಯೋಜಿಸಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ವಿವಾದಾತ್ಮಕ ಕಾನೂನುಗಳ ಕುರಿತು ಜನರಲ್ಲಿನ ಆತಂಕ ಮತ್ತು ಕಳವಳಗಳನ್ನು ದೂರ ಮಾಡುಲು ಇದನ್ನು ಆಯೋಜಿಸಲಾಗಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ನಕಲಿ ಟಿಆರ್‌ಪಿ ರೇಟಿಂಗ್ ಹಗರಣ: ರಿಪಬ್ಲಿಕ್ ಟಿವಿ ಸಿಇಒ ವಿಕಾಸ್ ಖಂಚಂದಾನಿ ಬಂಧನ

ಆದರೆ ರೈತರು ಇದಾವುದಕ್ಕೂ ಸೊಪ್ಪು ಹಾಕದೇ ತಮ್ಮ ಗುರಿಯನ್ನು ಮುಟ್ಟಿಯೇ ತೀರುತ್ತೇವೆ ಎಂದು ಬೀದಿಗಿಳಿದಿದ್ದಾರೆ.

ಇತ್ತೀಚೆಗೆ ಅಮಿತ್ ಶಾ ರೈತ ಮುಖಂಡರನ್ನು ಮಾತುಕತೆಗೆ ಕರೆದು, ಕಾನೂನುಗಳಲ್ಲಿ ಕೆಲವು ತಿದ್ದುಪಡಿಗಳನ್ನು ತರುವುದಾಗಿ ಪ್ರಸ್ತಾವವನ್ನು ಲಿಖಿತ ರೂಪದಲ್ಲಿ ಸಲ್ಲಿಸಿದ್ದರು. ಆದರೆ ರೈತರು ಇದನ್ನೂ ಒಪ್ಪಿರಲಿಲ್ಲ.

ಇದನ್ನೂ ಓದಿ: ಡಾ. ಕಫೀಲ್ ಖಾನ್ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ UP…

ದೆಹಲಿಯ ಗಡಿಗಳಲ್ಲಿ ದಿಟ್ಟ ಹೋರಾಟಾ ನಡೆಸುತ್ತಿರುವ ರೈತರು ಇದೀಗ ಶಾಂತಿಯುತ ಉಪವಾಸ ಸತ್ಯಾಗ್ರಹದ ಮಾರ್ಗ ತುಳಿದಿದ್ದಾರೆ.

ನಿನ್ನೆ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಂಯುಕ್ತ ಕಿಸಾನ್ ಆಂದೋಲನ್‌ನ ಮುಖಂಡ ಕಮಲ್‌ ಪ್ರೀತ್‌ ಸಿಂಗ್ ಪನ್ನು‌, “ಸರ್ಕಾರವು 3 ಕೃಷಿ ಕಾಯ್ದೆಗಳನ್ನು ಹಿಂದಕ್ಕೆ ತೆಗೆದುಕೊಳ್ಳಬೇಕೆಂದು ನಾವು ಬಯಸುತ್ತೇವೆ. ನಾವು ಸರ್ಕಾರ ಸೂಚಿಸುತ್ತಿರುವ ತಿದ್ದುಪಡಿಗಳ ಪರವಿಲ್ಲ. ಕೇಂದ್ರ ಸರ್ಕಾರವು ನಮ್ಮ ಆಂದೋಲನವನ್ನು ಹಿಂಸಾತ್ಮಕವಾಗಿ ತಡೆಯಲು ಬಯಸಿದೆ. ಆದರೆ ನಾವು ಅದನ್ನು ಶಾಂತಿಯುತವಾಗಿ ಮುಂದುವರಿಸುತ್ತೇವೆ” ಎಂದಿದ್ದಾರೆ.


ಇದನ್ನೂ ಓದಿ: ಡಿಸೆಂಬರ್‌ 15 ರಂದು ಮತ್ತೇ ವಿಧಾನ ಪರಿಷತ್‌ ಅಧಿವೇಶನ: ’ಗೋಹತ್ಯೆ’ ಮಸೂದೆ ಅಂಗೀಕಾರಕ್ಕೆ ತಯಾರಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...