Homeಚಳವಳಿರೈತ ವಿರೋಧಿ ಕಾನೂನುಗಳನ್ನು ಹಿಂಪಡೆಯಲು ಒತ್ತಾಯ: ದೆಹಲಿ-ಜೈಪುರ ಹೆದ್ದಾರಿ ತಡೆದ ರೈತರು

ರೈತ ವಿರೋಧಿ ಕಾನೂನುಗಳನ್ನು ಹಿಂಪಡೆಯಲು ಒತ್ತಾಯ: ದೆಹಲಿ-ಜೈಪುರ ಹೆದ್ದಾರಿ ತಡೆದ ರೈತರು

ದೆಹಲಿ ಮತ್ತು ಜೈಪುರ ಹೆದ್ದಾರಿಯನ್ನು ತಡೆಯಲು ಬೆಳಿಗ್ಗೆಯಿಂದಲೇ ಸಿದ್ಧತೆ ಮಾಡಿಕೊಂಡಿರುವ ರೈತರನ್ನು ತಡೆಯಲು ದೆಹಲಿ ಮತ್ತು ಹರಿಯಾಣ ಪೊಲೀಸರು ಸಜ್ಜಾಗಿದ್ದರು.

- Advertisement -
- Advertisement -

ಕೇಂದ್ರ ಸರ್ಕಾರದ ವಿವಾದಾತ್ಮಕ ಕೃಷಿ ಕಾನೂನಗಳನ್ನು ವಿರೋಧಿಸಿ ಕಳೆದ 18 ದಿನಗಳಿಂದ ರಾಷ್ಟ್ರ ರಾಜಧಾನಿಯಲ್ಲಿ ಲಕ್ಷಾಂತರ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ. ಇದರ ಭಾಗವಾಗಿ ಇಂದು ದೆಹಲಿ-ಜೈಪುರ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದುವರೆಗೆ ಕೇಂದ್ರದೊಟ್ಟಿಗೆ ಹಲವು ಸುತ್ತಿನ ಸಂಧಾನ ಸಭೆಗಳು ನಡೆದಿದ್ದರೂ ಸಹ ಪಟ್ಟು ಬಿಡದ ರೈತರು ‘ಕಾನೂನುಗಳನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸುತ್ತಿದ್ದಾರೆ.

ದೆಹಲಿ ಮತ್ತು ಜೈಪುರ ಹೆದ್ದಾರಿಯನ್ನು ತಡೆಯಲು ಬೆಳಿಗ್ಗೆಯಿಂದಲೇ ಸಿದ್ಧತೆ ಮಾಡಿಕೊಂಡಿರುವ ರೈತರನ್ನು ತಡೆಯಲು ದೆಹಲಿ ಮತ್ತು ಹರಿಯಾಣ ಪೊಲೀಸರು ಸಜ್ಜಾಗಿದ್ದರು.

ಇದನ್ನೂ ಓದಿ: 2 ನಿಮಿಷದ ಕಿರುಚಿತ್ರ ದೂಸ್ರಾ: CAA-NRC-NPR ವಿರುದ್ಧ ಸಂದೇಶ ಸಾರಿದ ಇರ್ಫಾನ್-ಪಾ.ರಂಜಿತ್ ಜೋಡಿ

ಪ್ರತಿಭಟನೆಯನ್ನು ಕೊನೆಗೊಳಿಸಬೇಕೆಂದು ಕೇಂದ್ರ ಸರ್ಕಾರವು ರೈತ ಸಂಘಟನೆಗಳೊಂದಿಗೆ ಹಲವು ಸುತ್ತಿನ ಮಾತಕತೆ ಮತ್ತು ಸಂಧಾನ ಸಭೆಗಳನ್ನು ನಡೆಸಿದರೂ ಸಹ ಅವುಗಳೆಲ್ಲಾ ವಿಫಲಾಗಿವೆ.

ಕೃಷಿ ಕಾಯ್ದೆಗಳ ಬಗ್ಗೆ ಅರಿವು ಮೂಡಸಲೆಂದು 700 ಜಿಲ್ಲೆಗಳಲ್ಲಿ 100 ಪ್ರತಿಕಾಗೋಷ್ಠಿಗಳು ಮತ್ತು 700 ರೈತ ಸಭೆಗಳನ್ನು ಆಯೋಜಿಸಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ವಿವಾದಾತ್ಮಕ ಕಾನೂನುಗಳ ಕುರಿತು ಜನರಲ್ಲಿನ ಆತಂಕ ಮತ್ತು ಕಳವಳಗಳನ್ನು ದೂರ ಮಾಡುಲು ಇದನ್ನು ಆಯೋಜಿಸಲಾಗಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ನಕಲಿ ಟಿಆರ್‌ಪಿ ರೇಟಿಂಗ್ ಹಗರಣ: ರಿಪಬ್ಲಿಕ್ ಟಿವಿ ಸಿಇಒ ವಿಕಾಸ್ ಖಂಚಂದಾನಿ ಬಂಧನ

ಆದರೆ ರೈತರು ಇದಾವುದಕ್ಕೂ ಸೊಪ್ಪು ಹಾಕದೇ ತಮ್ಮ ಗುರಿಯನ್ನು ಮುಟ್ಟಿಯೇ ತೀರುತ್ತೇವೆ ಎಂದು ಬೀದಿಗಿಳಿದಿದ್ದಾರೆ.

ಇತ್ತೀಚೆಗೆ ಅಮಿತ್ ಶಾ ರೈತ ಮುಖಂಡರನ್ನು ಮಾತುಕತೆಗೆ ಕರೆದು, ಕಾನೂನುಗಳಲ್ಲಿ ಕೆಲವು ತಿದ್ದುಪಡಿಗಳನ್ನು ತರುವುದಾಗಿ ಪ್ರಸ್ತಾವವನ್ನು ಲಿಖಿತ ರೂಪದಲ್ಲಿ ಸಲ್ಲಿಸಿದ್ದರು. ಆದರೆ ರೈತರು ಇದನ್ನೂ ಒಪ್ಪಿರಲಿಲ್ಲ.

ಇದನ್ನೂ ಓದಿ: ಡಾ. ಕಫೀಲ್ ಖಾನ್ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ UP…

ದೆಹಲಿಯ ಗಡಿಗಳಲ್ಲಿ ದಿಟ್ಟ ಹೋರಾಟಾ ನಡೆಸುತ್ತಿರುವ ರೈತರು ಇದೀಗ ಶಾಂತಿಯುತ ಉಪವಾಸ ಸತ್ಯಾಗ್ರಹದ ಮಾರ್ಗ ತುಳಿದಿದ್ದಾರೆ.

ನಿನ್ನೆ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಂಯುಕ್ತ ಕಿಸಾನ್ ಆಂದೋಲನ್‌ನ ಮುಖಂಡ ಕಮಲ್‌ ಪ್ರೀತ್‌ ಸಿಂಗ್ ಪನ್ನು‌, “ಸರ್ಕಾರವು 3 ಕೃಷಿ ಕಾಯ್ದೆಗಳನ್ನು ಹಿಂದಕ್ಕೆ ತೆಗೆದುಕೊಳ್ಳಬೇಕೆಂದು ನಾವು ಬಯಸುತ್ತೇವೆ. ನಾವು ಸರ್ಕಾರ ಸೂಚಿಸುತ್ತಿರುವ ತಿದ್ದುಪಡಿಗಳ ಪರವಿಲ್ಲ. ಕೇಂದ್ರ ಸರ್ಕಾರವು ನಮ್ಮ ಆಂದೋಲನವನ್ನು ಹಿಂಸಾತ್ಮಕವಾಗಿ ತಡೆಯಲು ಬಯಸಿದೆ. ಆದರೆ ನಾವು ಅದನ್ನು ಶಾಂತಿಯುತವಾಗಿ ಮುಂದುವರಿಸುತ್ತೇವೆ” ಎಂದಿದ್ದಾರೆ.


ಇದನ್ನೂ ಓದಿ: ಡಿಸೆಂಬರ್‌ 15 ರಂದು ಮತ್ತೇ ವಿಧಾನ ಪರಿಷತ್‌ ಅಧಿವೇಶನ: ’ಗೋಹತ್ಯೆ’ ಮಸೂದೆ ಅಂಗೀಕಾರಕ್ಕೆ ತಯಾರಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...