Homeಮುಖಪುಟಎಲ್‌ಜಿ ಮನೆ ಮುಂದೆ ಆಪ್ ನಾಯಕರ ಧರಣಿ: ಪೊಲೀಸರಿಂದ ಹಲ್ಲೆ, ಬಂಧನ

ಎಲ್‌ಜಿ ಮನೆ ಮುಂದೆ ಆಪ್ ನಾಯಕರ ಧರಣಿ: ಪೊಲೀಸರಿಂದ ಹಲ್ಲೆ, ಬಂಧನ

ನಿನ್ನೆ ಪ್ರತಿಭಟನೆ ನಡೆಸುವ ಹೇಳಿಕೆ ನೀಡಿದ್ದ ಆಪ್ ಶಾಸಕಿ ಅತಿಶಿ, ’ಮೇಯರ್‌ಗಳಿಗೆ ಧರಣಿ ನಡೆಸಲು ಅವಕಾಶ ನೀಡಿರುವ ದೆಹಲಿ ಪೊಲೀಸರು ನಮಗೂ ಅವಕಾಶ ನೀಡುತ್ತಾರೆ’ ಎಂದು ವ್ಯಂಗ್ಯವಾಡಿದ್ದರು.

- Advertisement -
- Advertisement -

ಉತ್ತರ ದೆಹಲಿ ಪಾಲಿಕೆಯಲ್ಲಿ 2,500 ಕೋಟಿ ರೂಪಾಯಿ ಹಣದ ದುರುಪಯೋಗ ಮಾಡಲಾಗಿದೆ ಎಂದು ಆರೋಪಿಸಿದ್ದ ಆಪ್ ನಾಯಕರು, ಗೃಹ ಸಚಿವ ಅಮಿತ್ ಶಾ ಮತ್ತು ಅನಿಲ್ ಬೈಜಾಲ್ ಅವರ ನಿವಾಸದ ಹೊರಗೆ ಪ್ರತಿಭಟನೆ ನಡೆಸಲು ತಯಾರಾಗಿದ್ದರು. ಪ್ರತಿಭಟನೆಗೂ ಮುನ್ನವೇ ಆಪ್ ನಾಯಕರಾದ ರಾಘವ್ ಚಡ್ಡಾ ಮತ್ತು ಪ್ರತಿಭಟನಾ ಸ್ಥಳಕ್ಕೆ ತೆರಳಿದ್ದ ಶಾಸಕಿ ಅತಿಶಿ ಸೇರಿದಂತೆ ಹಲವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

“ಪಾಲಿಕೆಯಲ್ಲಿ 2,500 ಕೋಟಿ ರೂಪಾಯಿ ಹಣ ದುರುಪಯೋಗವಾಗಿದೆ. ಕೇಂದ್ರ ಸರ್ಕಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು. ನಾಳೆ ಬೆಳಗ್ಗೆ 11 ಗಂಟೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಲೆಫ್ಟಿನೆಂಟ್ ಗವರ್ನರ್ ಅವರ ಮನೆ ಮುಂದೆ ಧರಣಿ ನಡೆಸಲಾಗುವುದು.  ಸಿಬಿಐ ವಿಚಾರಣೆಗೆ ಅವರು ಒಪ್ಪಿಗೆ ನೀಡುವವರೆಗೂ ನಾವು ಅಲ್ಲಿಯೇ ಕುಳಿತುಕೊಳ್ಳುತ್ತೇವೆ” ಎಂದು ಎಎಪಿ ಶಾಸಕಿ ಅತಿಶಿ ನಿನ್ನೆ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದರು.

ಕೊರೊನಾ ನಿಯಮಗಳ ಕಾರಣದಿಂದಾಗಿ ಧರಣಿ ನಡೆಸಲು ದೆಹಲಿ ಪೊಲೀಸರು ಅನುಮತಿ  ನೀಡಿರಲಿಲ್ಲ. “ಮಾರ್ಗಸೂಚಿಗಳನ್ನು ಗಮನದಲ್ಲಿಟ್ಟುಕೊಂಡು, ಕೋವಿಡ್ ಹರಡುವುದನ್ನು ತಡೆಯಲು ಎಲ್ಲಾ ಸಾರ್ವಜನಿಕ ಸಭೆಗಳನ್ನು ನಿಷೇಧಿಸಲಾಗಿದೆ. ಇದಲ್ಲದೆ, ನವದೆಹಲಿ ಜಿಲ್ಲೆಯಲ್ಲಿ ಸಿಆರ್‌ಪಿಸಿಯ ಸೆಕ್ಷನ್ 144 ಜಾರಿಯಲ್ಲಿದೆ. ನಾವು ಎಎಪಿ ವಿನಂತಿಯನ್ನು ತಿರಸ್ಕರಿಸಿದ್ದೇವೆ” ಎಂದು ಡಿಸಿಪಿ ಐಶ್ ಸಿಂಘಾಲ್ ತಿಳಿಸಿದ್ದಾರೆ.

ಇದನ್ನೂ ಓದಿ: ಹಣ ದುರುಪಯೋಗ ಆರೋಪ: ಅಮಿತ್ ಶಾ ಮನೆ ಎದುರು ಧರಣಿ ನಡೆಸಲಿರುವ ಆಪ್

 

ಎಎಪಿ ಶಾಸಕಿ ಅತಿಶಿ ಮತ್ತು ಪಕ್ಷದ ಕೆಲವು ಮುಖಂಡರು ಲೆಫ್ಟಿನೆಂಟ್ ಗವರ್ನರ್ ನಿವಾಸಕ್ಕೆ ಆಗಮಿಸಿದ್ದು, ಬ್ಯಾರಿಕೇಡ್‌ಗಳನ್ನು ದಾಟಲು ಅವಕಾಶವಿರಲಿಲ್ಲ. ಈ ಪ್ರಕರಣದ ಬಗ್ಗೆ ಸಿಬಿಐ ತನಿಖೆಗೆ ಒತ್ತಾಯಿಸಿ ಆಪ್ ಮುಖಂಡರು ಘೋಷಣೆಗಳನ್ನು ಕೂಗಿದರು, ಆ ನಂತರ ಪೊಲೀಸರು ಎಲ್ಲರನ್ನು ವಶಕ್ಕೆ ಪಡೆದಿದ್ದಾರೆ.

ಈ ವೇಳೆ “ನಾವು ಲೆಫ್ಟಿನೆಂಟ್ ಜನರಲ್‌ಗೆ ಪತ್ರ ಬರೆದು ಮಾತಾಡಲು ಅಪಾಯಿಂಟ್ಮೆಂಟ್ ಕೇಳಿದ್ದೇವು. ಆದರೆ ಸಿಗಲಿಲ್ಲ. ಲೆಫ್ಟಿನೆಂಟ್ ಜನರಲ್ ಅನಿಲ್ ಬೈಜಾಲ್ ಯಾರನ್ನು ರಕ್ಷಿಸಲು ಪ್ರಯತ್ನಿಸುತ್ತಿದ್ದಾರೆ? ” ಎಂದು ಅತಿಶಿ ಪ್ರಶ್ನಿಸಿದ್ದಾರೆ.

ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ಆಪ್ ನಾಯಕರ ಮೇಲೆ ಪೊಲೀಸರು ಹಲ್ಲೆ ಮಾಡಿ ಬಂಧಿಸಿದ್ದಾರೆ ಎಂದು ಆಮ್ ಆದ್ಮಿ ಪಾರ್ಟಿ ಆರೋಪಿಸಿದೆ.

ಇದನ್ನು ಓದಿ: ಕರ್ನಾಟಕದಲ್ಲಿ ಬಿಜೆಪಿ ಹೆಬ್ಬಾಗಿಲು ಪೂರ್ತಿ ತೆರೆದಿಲ್ಲ, ಕಳ್ಳಕಿಂಡಿಗಳು ಇನ್ನೂ ಮುಚ್ಚಿಲ್ಲ

ನಿನ್ನೆ ಪ್ರತಿಭಟನೆ ನಡೆಸುವ ಹೇಳಿಕೆ ನೀಡಿದ್ದ ಆಪ್ ಶಾಸಕಿ ಅತಿಶಿ, ಮೇಯರ್‌ಗಳಿಗೆ ಧರಣಿ ನಡೆಸಲು ಅವಕಾಶ ನೀಡಿರುವ ದೆಹಲಿ ಪೊಲೀಸರು ನಮಗೂ ಅವಕಾಶ ನೀಡುತ್ತಾರೆ ಎಂಬ ನಂಬಿಕೆ ಇದೆ ಎಂದು ವ್ಯಂಗ್ಯವಾಡಿದ್ದರು.

ಏಕೆಂದರೆ, ಮೂರು ಮಹಾನಗರ ಪಾಲಿಕೆಗಳ ಮೇಯರ್‌ಗಳು ಸರ್ಕಾರದಿಂದ ತಮಗೆ ಬರಬೇಕಾದ ಹಣವನ್ನು ನೀಡಬೇಕು ಎಂದು ಆಗ್ರಹಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಿವಾಸದ ಹೊರಗೆ ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.

“ಬಿಜೆಪಿ ಮುಖಂಡರು ಸಿಎಂ ಮನೆಯ ಹೊರಗೆ ಹಲವಾರು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಇದು ಸೆಕ್ಷನ್ 144 ಉಲ್ಲಂಘನೆ ಎಂದು ಪೊಲೀಸರಿಗೆ ಅನ್ನಿಸುವುದಿಲ್ಲ ಮತ್ತು ಸಾಂಕ್ರಾಮಿಕ ಮಾರ್ಗಸೂಚಿಗಳು ಅವರಿಗೆ ಅನ್ವಯಿಸುವುದಿಲ್ಲ”ಎಂದು ರಾಘವ್ ಚಡ್ಡಾ ಹೇಳಿದ್ದಾರೆ.

ಎಲ್ಲಾ ಮೂರು ಮಹಾನಗರ ಪಾಲಿಕೆಗಳು ತಮ್ಮ ಸಿಬ್ಬಂದಿಗೆ ನಿಯಮಿತವಾಗಿ ಸಂಬಳ ನೀಡಲು ಸಾಧ್ಯವಾಗದ ಕಾರಣ ಆರ್ಥಿಕ ಕುಸಿತವನ್ನು ಎದುರಿಸುತ್ತಿವೆ. ಇದು ಪುರಸಭೆ, ಎಂಜಿನಿಯರ್‌ಗಳು, ವೈದ್ಯರು ಮತ್ತು ಇತರ ಸಿಬ್ಬಂದಿಗಳ ಪ್ರತಿಭಟನೆಗೆ ಕಾರಣವಾಗಿದೆ. ಇಂತಹ ಸಂದರ್ಭದಲ್ಲಿ ಆಪ್ ಸರ್ಕಾರ ಎಂಸಿಡಿ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ಆಗ್ರಹಿಸಿ, ಧರಣಿ ನಡೆಸಲು ನಿರ್ಧರಿಸಿತ್ತು.


ಇದನ್ನೂ ಓದಿ: ಡಿಸೆಂಬರ್‌ 15 ರಂದು ಮತ್ತೇ ವಿಧಾನ ಪರಿಷತ್‌ ಅಧಿವೇಶನ: ’ಗೋಹತ್ಯೆ’ ಮಸೂದೆ ಅಂಗೀಕಾರಕ್ಕೆ ತಯಾರಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...