Homeಮುಖಪುಟಎಲ್‌ಜಿ ಮನೆ ಮುಂದೆ ಆಪ್ ನಾಯಕರ ಧರಣಿ: ಪೊಲೀಸರಿಂದ ಹಲ್ಲೆ, ಬಂಧನ

ಎಲ್‌ಜಿ ಮನೆ ಮುಂದೆ ಆಪ್ ನಾಯಕರ ಧರಣಿ: ಪೊಲೀಸರಿಂದ ಹಲ್ಲೆ, ಬಂಧನ

ನಿನ್ನೆ ಪ್ರತಿಭಟನೆ ನಡೆಸುವ ಹೇಳಿಕೆ ನೀಡಿದ್ದ ಆಪ್ ಶಾಸಕಿ ಅತಿಶಿ, ’ಮೇಯರ್‌ಗಳಿಗೆ ಧರಣಿ ನಡೆಸಲು ಅವಕಾಶ ನೀಡಿರುವ ದೆಹಲಿ ಪೊಲೀಸರು ನಮಗೂ ಅವಕಾಶ ನೀಡುತ್ತಾರೆ’ ಎಂದು ವ್ಯಂಗ್ಯವಾಡಿದ್ದರು.

- Advertisement -
- Advertisement -

ಉತ್ತರ ದೆಹಲಿ ಪಾಲಿಕೆಯಲ್ಲಿ 2,500 ಕೋಟಿ ರೂಪಾಯಿ ಹಣದ ದುರುಪಯೋಗ ಮಾಡಲಾಗಿದೆ ಎಂದು ಆರೋಪಿಸಿದ್ದ ಆಪ್ ನಾಯಕರು, ಗೃಹ ಸಚಿವ ಅಮಿತ್ ಶಾ ಮತ್ತು ಅನಿಲ್ ಬೈಜಾಲ್ ಅವರ ನಿವಾಸದ ಹೊರಗೆ ಪ್ರತಿಭಟನೆ ನಡೆಸಲು ತಯಾರಾಗಿದ್ದರು. ಪ್ರತಿಭಟನೆಗೂ ಮುನ್ನವೇ ಆಪ್ ನಾಯಕರಾದ ರಾಘವ್ ಚಡ್ಡಾ ಮತ್ತು ಪ್ರತಿಭಟನಾ ಸ್ಥಳಕ್ಕೆ ತೆರಳಿದ್ದ ಶಾಸಕಿ ಅತಿಶಿ ಸೇರಿದಂತೆ ಹಲವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

“ಪಾಲಿಕೆಯಲ್ಲಿ 2,500 ಕೋಟಿ ರೂಪಾಯಿ ಹಣ ದುರುಪಯೋಗವಾಗಿದೆ. ಕೇಂದ್ರ ಸರ್ಕಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು. ನಾಳೆ ಬೆಳಗ್ಗೆ 11 ಗಂಟೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಲೆಫ್ಟಿನೆಂಟ್ ಗವರ್ನರ್ ಅವರ ಮನೆ ಮುಂದೆ ಧರಣಿ ನಡೆಸಲಾಗುವುದು.  ಸಿಬಿಐ ವಿಚಾರಣೆಗೆ ಅವರು ಒಪ್ಪಿಗೆ ನೀಡುವವರೆಗೂ ನಾವು ಅಲ್ಲಿಯೇ ಕುಳಿತುಕೊಳ್ಳುತ್ತೇವೆ” ಎಂದು ಎಎಪಿ ಶಾಸಕಿ ಅತಿಶಿ ನಿನ್ನೆ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದರು.

ಕೊರೊನಾ ನಿಯಮಗಳ ಕಾರಣದಿಂದಾಗಿ ಧರಣಿ ನಡೆಸಲು ದೆಹಲಿ ಪೊಲೀಸರು ಅನುಮತಿ  ನೀಡಿರಲಿಲ್ಲ. “ಮಾರ್ಗಸೂಚಿಗಳನ್ನು ಗಮನದಲ್ಲಿಟ್ಟುಕೊಂಡು, ಕೋವಿಡ್ ಹರಡುವುದನ್ನು ತಡೆಯಲು ಎಲ್ಲಾ ಸಾರ್ವಜನಿಕ ಸಭೆಗಳನ್ನು ನಿಷೇಧಿಸಲಾಗಿದೆ. ಇದಲ್ಲದೆ, ನವದೆಹಲಿ ಜಿಲ್ಲೆಯಲ್ಲಿ ಸಿಆರ್‌ಪಿಸಿಯ ಸೆಕ್ಷನ್ 144 ಜಾರಿಯಲ್ಲಿದೆ. ನಾವು ಎಎಪಿ ವಿನಂತಿಯನ್ನು ತಿರಸ್ಕರಿಸಿದ್ದೇವೆ” ಎಂದು ಡಿಸಿಪಿ ಐಶ್ ಸಿಂಘಾಲ್ ತಿಳಿಸಿದ್ದಾರೆ.

ಇದನ್ನೂ ಓದಿ: ಹಣ ದುರುಪಯೋಗ ಆರೋಪ: ಅಮಿತ್ ಶಾ ಮನೆ ಎದುರು ಧರಣಿ ನಡೆಸಲಿರುವ ಆಪ್

 

ಎಎಪಿ ಶಾಸಕಿ ಅತಿಶಿ ಮತ್ತು ಪಕ್ಷದ ಕೆಲವು ಮುಖಂಡರು ಲೆಫ್ಟಿನೆಂಟ್ ಗವರ್ನರ್ ನಿವಾಸಕ್ಕೆ ಆಗಮಿಸಿದ್ದು, ಬ್ಯಾರಿಕೇಡ್‌ಗಳನ್ನು ದಾಟಲು ಅವಕಾಶವಿರಲಿಲ್ಲ. ಈ ಪ್ರಕರಣದ ಬಗ್ಗೆ ಸಿಬಿಐ ತನಿಖೆಗೆ ಒತ್ತಾಯಿಸಿ ಆಪ್ ಮುಖಂಡರು ಘೋಷಣೆಗಳನ್ನು ಕೂಗಿದರು, ಆ ನಂತರ ಪೊಲೀಸರು ಎಲ್ಲರನ್ನು ವಶಕ್ಕೆ ಪಡೆದಿದ್ದಾರೆ.

ಈ ವೇಳೆ “ನಾವು ಲೆಫ್ಟಿನೆಂಟ್ ಜನರಲ್‌ಗೆ ಪತ್ರ ಬರೆದು ಮಾತಾಡಲು ಅಪಾಯಿಂಟ್ಮೆಂಟ್ ಕೇಳಿದ್ದೇವು. ಆದರೆ ಸಿಗಲಿಲ್ಲ. ಲೆಫ್ಟಿನೆಂಟ್ ಜನರಲ್ ಅನಿಲ್ ಬೈಜಾಲ್ ಯಾರನ್ನು ರಕ್ಷಿಸಲು ಪ್ರಯತ್ನಿಸುತ್ತಿದ್ದಾರೆ? ” ಎಂದು ಅತಿಶಿ ಪ್ರಶ್ನಿಸಿದ್ದಾರೆ.

ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ಆಪ್ ನಾಯಕರ ಮೇಲೆ ಪೊಲೀಸರು ಹಲ್ಲೆ ಮಾಡಿ ಬಂಧಿಸಿದ್ದಾರೆ ಎಂದು ಆಮ್ ಆದ್ಮಿ ಪಾರ್ಟಿ ಆರೋಪಿಸಿದೆ.

ಇದನ್ನು ಓದಿ: ಕರ್ನಾಟಕದಲ್ಲಿ ಬಿಜೆಪಿ ಹೆಬ್ಬಾಗಿಲು ಪೂರ್ತಿ ತೆರೆದಿಲ್ಲ, ಕಳ್ಳಕಿಂಡಿಗಳು ಇನ್ನೂ ಮುಚ್ಚಿಲ್ಲ

ನಿನ್ನೆ ಪ್ರತಿಭಟನೆ ನಡೆಸುವ ಹೇಳಿಕೆ ನೀಡಿದ್ದ ಆಪ್ ಶಾಸಕಿ ಅತಿಶಿ, ಮೇಯರ್‌ಗಳಿಗೆ ಧರಣಿ ನಡೆಸಲು ಅವಕಾಶ ನೀಡಿರುವ ದೆಹಲಿ ಪೊಲೀಸರು ನಮಗೂ ಅವಕಾಶ ನೀಡುತ್ತಾರೆ ಎಂಬ ನಂಬಿಕೆ ಇದೆ ಎಂದು ವ್ಯಂಗ್ಯವಾಡಿದ್ದರು.

ಏಕೆಂದರೆ, ಮೂರು ಮಹಾನಗರ ಪಾಲಿಕೆಗಳ ಮೇಯರ್‌ಗಳು ಸರ್ಕಾರದಿಂದ ತಮಗೆ ಬರಬೇಕಾದ ಹಣವನ್ನು ನೀಡಬೇಕು ಎಂದು ಆಗ್ರಹಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಿವಾಸದ ಹೊರಗೆ ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.

“ಬಿಜೆಪಿ ಮುಖಂಡರು ಸಿಎಂ ಮನೆಯ ಹೊರಗೆ ಹಲವಾರು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಇದು ಸೆಕ್ಷನ್ 144 ಉಲ್ಲಂಘನೆ ಎಂದು ಪೊಲೀಸರಿಗೆ ಅನ್ನಿಸುವುದಿಲ್ಲ ಮತ್ತು ಸಾಂಕ್ರಾಮಿಕ ಮಾರ್ಗಸೂಚಿಗಳು ಅವರಿಗೆ ಅನ್ವಯಿಸುವುದಿಲ್ಲ”ಎಂದು ರಾಘವ್ ಚಡ್ಡಾ ಹೇಳಿದ್ದಾರೆ.

ಎಲ್ಲಾ ಮೂರು ಮಹಾನಗರ ಪಾಲಿಕೆಗಳು ತಮ್ಮ ಸಿಬ್ಬಂದಿಗೆ ನಿಯಮಿತವಾಗಿ ಸಂಬಳ ನೀಡಲು ಸಾಧ್ಯವಾಗದ ಕಾರಣ ಆರ್ಥಿಕ ಕುಸಿತವನ್ನು ಎದುರಿಸುತ್ತಿವೆ. ಇದು ಪುರಸಭೆ, ಎಂಜಿನಿಯರ್‌ಗಳು, ವೈದ್ಯರು ಮತ್ತು ಇತರ ಸಿಬ್ಬಂದಿಗಳ ಪ್ರತಿಭಟನೆಗೆ ಕಾರಣವಾಗಿದೆ. ಇಂತಹ ಸಂದರ್ಭದಲ್ಲಿ ಆಪ್ ಸರ್ಕಾರ ಎಂಸಿಡಿ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ಆಗ್ರಹಿಸಿ, ಧರಣಿ ನಡೆಸಲು ನಿರ್ಧರಿಸಿತ್ತು.


ಇದನ್ನೂ ಓದಿ: ಡಿಸೆಂಬರ್‌ 15 ರಂದು ಮತ್ತೇ ವಿಧಾನ ಪರಿಷತ್‌ ಅಧಿವೇಶನ: ’ಗೋಹತ್ಯೆ’ ಮಸೂದೆ ಅಂಗೀಕಾರಕ್ಕೆ ತಯಾರಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...