Homeಕರ್ನಾಟಕಸರ್ಕಾರ ಸಾರಿಗೆ ನೌಕರರ ಸಮಸ್ಯೆ ಬಗೆಹರಿಸಬೇಕಾದುದ್ದು ಹೀಗೆ..: ಬಸ್ ಪ್ರಯಾಣಿಕರ ವೇದಿಕೆಯ ಸಲಹೆಗಳು

ಸರ್ಕಾರ ಸಾರಿಗೆ ನೌಕರರ ಸಮಸ್ಯೆ ಬಗೆಹರಿಸಬೇಕಾದುದ್ದು ಹೀಗೆ..: ಬಸ್ ಪ್ರಯಾಣಿಕರ ವೇದಿಕೆಯ ಸಲಹೆಗಳು

ಬಡ ವರ್ಗದ ಪ್ರಯಾಣಿಕರಿಗೆ ತೊಂದರೆಯಾಗದಂತೆ ಪ್ರತಿಭಟನೆ ಮುಂದುವರೆಸಲು “ಬಸ್ ಓಡಿಸಲಿ, ಆದರೆ ಪ್ರತಿಭಟನೆಯ ಅಂಗವಾಗಿ ಟಿಕೆಟ್ ಹಣ ಸಂಗ್ರಹ ಮಾಡುವುದು ಬೇಡ” ಎಂಬ ಸಲಹೆಗಳು ಬಂದಿವೆ.

- Advertisement -
- Advertisement -

ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಘೋಷಿಸಬೇಕು, ಸರ್ಕಾರಿ ನೌಕರರಿಗೆ ಸಿಗುವ ಎಲ್ಲಾ ಸೌಲಭ್ಯಗಳನ್ನು ಸಾರಿಗೆ ನೌಕರರಿಗೂ ನೀಡಬೇಕು ಎಂಬ ಹಕ್ಕೊತ್ತಾಯಗಳನ್ನಿಟ್ಟುಕೊಂಡು ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಮೂರನೇ ದಿನಕ್ಕೆ ಕಾಲಿಟ್ಟಿದೆ. ಸರ್ಕಾರ ಮತ್ತು ಸಾರಿಗೆ ನೌಕರರ ಸಂಘದೊಂದಿಗೆ ಮಾತುಕತೆ ವಿಫಲವಾಗಿದ್ದು ಮುಷ್ಕರದಿಂದಾಗಿ ಕಳೆದೆರಡು ದಿನಗಳಿಂದ ಬಸ್‌ಗಳು ರಸ್ತೆಗಿಳಿಯದೆ ಪ್ರಯಾಣಿಕರಿಗೆ ತುಸು ಸಮಸ್ಯೆಯಾಗಿದೆ.

ಈ ಸಮಸ್ಯೆಯನ್ನು ಹೇಗೆ ಬಗೆಹರಿಸಬೇಕೆಂದು ಬೆಂಗಳೂರು ಬಸ್ ಪ್ರಯಾಣಿಕರ ವೇದಿಕೆಯ ಪರವಾಗಿ ವಿನಯ್ ಶ್ರೀನಿವಾಸ ಮತ್ತು ಶಹೀನ್ ಶಸಾ ಪತ್ರಿಕಾಹೇಳಿಕೆಯ ಮೂಲಕ ಕೆಲವು ಸಲಹೆಗಳನ್ನು ನೀಡಿದ್ದಾರೆ. ಸಾರಿಗೆ ನೌಕರರು ಮತ್ತು ಸರ್ಕಾರ ಎರಡಕ್ಕೂ ಮನವಿ ಮಾಡುವ ಮೂಲಕ ಸಮಸ್ಯೆಗೆ ಇತಿಶ್ರಿ ಹಾಡಬೇಕೆಂದು ಕೋರಿದ್ದಾರೆ.

ರಸ್ತೆ ಸಾರಿಗೆ ನಿಗಮದಲ್ಲಿರುವ ರಾಚನಿಕ ಸಮಸ್ಯೆಗಳು, ರಸ್ತೆ ಸಾರಿಗೆ ನಿಗಮಕ್ಕೆ ಸರ್ಕಾರದ ಬೆಂಬಲದ ಕೊರತೆ, ನೌಕರರ ಹಕ್ಕುಗಳನ್ನು ಗೌರವಿಸದಿರುವುದು, ಸಂಘಟನೆಗಳನ್ನು ಮಾನ್ಯ ಮಾಡದಿರುವುದು ಮುಂತಾದ ಕಾರಣಗಳು ಇಂದಿನ ಮುಷ್ಕರಕ್ಕೆ ಕಾರಣವಾಗಿದೆ. ಆದರೆ ರಸ್ತೆ ಸಾರಿಗೆ ಸಂಸ್ಥೆಗೆ ನೌಕರರೇ ಜೀವಾಳ, ನಾವು ಅವರೊಂದಿಗೆ ನಿಲ್ಲುತ್ತೇವೆ. ಮುಷ್ಕರ ನಿರತ ನೌಕರರ ಮೇಲೆ ಸರ್ಕಾರವು ಯಾವುದೇ ಕ್ರಮ ಕೈಗೊಳ್ಳಬಾರದು. ತಕ್ಷಣವೇ ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅವರ ಬೇಡಿಕೆಗಳನ್ನು ಈಡೇರಿಸಲು ಕ್ರಮ ಕೈಗೊಳ್ಳಬೇಕು ಎಂದು ವೇದಿಕೆ ತಿಳಿಸಿದೆ.

ನೌಕರರಿಗೆ ಮತ್ತು ನೌಕರ ಸಂಘಟನೆಗಳಿಗೆ ಮನವಿ

ಪ್ರಯಾಣಿಕರಾಗಿ ನಾವು ಈ ನೌಕರರು ದಿನನಿತ್ಯ ನಿರ್ವಹಿಸುವ ಶ್ರಮದ ದುಡಿಮೆಯನ್ನು ಗೌರವಿಸುತ್ತೇವೆ. ಅವರ ಹೋರಾಟಕ್ಕೆ ನಾವು ಹೆಗಲಾಗುತ್ತೇವೆ. ಆದರೆ, ಇಂದು ಈ ಸಮಸ್ಯೆ ಇತ್ಯರ್ಥವಾಗದಿದ್ದರೆ, ಪ್ರಯಾಣಿಕರಿಗೆ ತೊಂದರೆಯಾಗದಂತೆ ಹೋರಾಟ ಮುಂದುವರೆಸುವ ದಾರಿಗಳನ್ನು ಕಂಡುಕೊಳ್ಳಬೇಕೆಂದು ನಾವು ಮನವಿ ಮಾಡುತ್ತಿದ್ದೇವೆ, ಏಕೆಂದರೆ ಬಹುತೇಕ ಪ್ರಯಾಣಿಕರು ಬಡವರು, ಅಂಚಿಗೆ ಸರಿಸಲ್ಪಟ್ಟವರು. ದುಡಿಮೆಗಾಗಿ ಮತ್ತು ದಿನನಿತ್ಯದ ಅಗತ್ಯಗಳಿಗಾಗಿ, ಪ್ರಯಾಣಿಸಲು ಬಸ್ ಅನ್ನೇ ಆಧರಿಸಿರುವವರು. ಆದ್ದರಿಂದ ಬಡ ವರ್ಗದ ಪ್ರಯಾಣಿಕರಿಗೆ ತೊಂದರೆಯಾಗದಂತೆ ಪ್ರತಿಭಟನೆ ನಡೆಸಬೇಕೆಂಬುದು ನಮ್ಮ ಮನವಿ. ಉದಾಹರಣೆಗೆ ಕೆಲವು ಪ್ರಯಾಣಿಕರು, “ಬಸ್ ಓಡಿಸಲಿ, ಆದರೆ ಪ್ರತಿಭಟನೆಯ ಅಂಗವಾಗಿ ಟಿಕೆಟ್ ಹಣ ಸಂಗ್ರಹ ಮಾಡುವುದು ಬೇಡ” ಎಂಬ ಸಲಹೆಯನ್ನೂ ನೀಡಿದ್ದಾರೆ, ಇದನ್ನು ಪರೀಶೀಲಿಸಬೇಕೆಂದು ವೇದಿಕೆ ಮನವಿ ಮಾಡಿದೆ.

ಈ ಪರಿಸ್ಥಿತಿಯ ನಿರ್ವಹಣೆಗಾಗಿ ಸರ್ಕಾರಕ್ಕೆ ಮನವಿ

ಈ ಮುಷ್ಕರವು ಸಂಸ್ಥೆಯೊಳಗೆ ಇದ್ದ ರಾಚನಿಕ ಸಮಸ್ಯೆ, ಕೋವಿಡ್ ಸಂದರ್ಭದ ಬಿಕ್ಕಟ್ಟು, ಹಲವಾರು ಸಮಸ್ಯೆಗಳನ್ನು ಇತ್ಯರ್ಥಗೊಳಿಸದೇ ಇದ್ದದ್ದು, ಈ ಎಲ್ಲದರ ಒಟ್ಟು ಫಲಿತವಾಗಿದೆ. ಮುಷ್ಕರಕ್ಕೆ ಕರೆಕೊಟ್ಟವರನ್ನೂ ಸೇರಿದಂತೆ ಸರ್ಕಾರವು ನೌಕರರ ಪ್ರತಿನಿಧಿಗಳ ವಿಶ್ವಾಸವನ್ನು ಗಳಿಸಿ ಅವರೊಂದಿಗೆ ಮಾತುಕತೆ ನಡೆಸಬೇಕು. ಎಸ್ಮಾ ಜಾರಿಗೊಳಿಸುವಂತಹ ಕ್ರಮಗಳು ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸುತ್ತವೆ. ನೌಕರರ ಮತ್ತು ಪ್ರಯಾಣಿಕರ ಹಿತಾಸಕ್ತಿಗಾಗಿ ಸರ್ಕಾರವು ಈ ಬಿಕ್ಕಟ್ಟನ್ನು ಅನುನಯದಿಂದ ಬಗೆಹರಿಸಬೇಕಾಗಿದೆ ಎಂದು ವೇದಿಕೆ ಅಭಿಪ್ರಾಯಪಟ್ಟಿದೆ.

ಸರ್ಕಾರವು ಸಾರಿಗೆ ಸಂಸ್ಥೆಗಳಿಗೆ ಗಣನೀಯವಾಗಿ ಸಾರ್ವಜನಿಕ ಹೂಡಿಕೆಯನ್ನು ಹೆಚ್ಚಿಸಿ ಅವುಗಳ ಆರ್ಥಿಕ ಪುನಶ್ಚೇತನಕ್ಕಾಗಿ ಯೋಚಿಸಲು ಈ ಸಮಯವು ಸುಸಂದರ್ಭವಾಗಿದೆ. ಇದರಿಂದ ಸಂಸ್ಥೆಗಳು ತಮ್ಮ ನೌಕರರಿಗೆ ಸೌಲಭ್ಯಗಳನ್ನು ಒದಗಿಸಲು ಮಾತ್ರವಲ್ಲ, ಪ್ರಯಾಣಿಕರಿಗೆ ಉತ್ತಮ ಸೇವೆ ಒದಗಿಸಲು ಸಾಧ್ಯವಾಗುತ್ತದೆ. ಸಾಮಾನ್ಯ ಜನರ ಹಿತಾಸಕ್ತಿಗಾಗಿ, ಅವರಿಗೆ ಕೈಗೆಟುವಂತಹ ಸೇವೆ ಒದಗಿಸುವ ದೃಷ್ಟಿಯಿಂದ ಸಾರಿಗೆ ಸಂಸ್ಥೆಗಳನ್ನು ಬಲಗೊಳಿಸಬೇಕಿದೆ. ನೌಕರರ ಬೇಡಿಕೆಗಳ ಬಗ್ಗೆ ಮತ್ತು ಅವರ ಕಲ್ಯಾಣದ ಬಗ್ಗೆ ಚರ್ಚಿಸಲು, ಜಂಟಿ ಸದನ ಸಮಿತಿ ಅಥವಾ ನೌಕರರು, ಸಂಸ್ಥೆಯ ಪ್ರತಿನಿಧಿಗಳು ಮತ್ತು ಸರ್ಕಾರದ ಪ್ರತಿನಿಧಿಗಳನ್ನೊಳಗೊಂಡ ತ್ರಿಪಕ್ಷೀಯ ಸಮಿತಿಯೊಂದನ್ನು ರಚಿಸಬೇಕು ಎಂದು ವೇದಿಕೆ ಒತ್ತಾಯಿಸಿದೆ.

ಬಸ್ ಮತ್ತು ಪ್ರಯಾಣಿಕರು ಇಬ್ಬರೂ ಈ ನಗರದ ಕೇಂದ್ರಬಿಂದು. ನಮ್ಮನ್ನು ನಿರ್ಲಕ್ಷಿಸಬೇಡಿ, ಬಸ್ ಸೇವೆಯನ್ನು ಉತ್ತೇಜಿಸಿ, ಈ ಸೇವೆಯಲ್ಲಿ ನೌಕರರು ಪ್ರಮುಖ ಭಾಗೀದಾರರು, ಮತ್ತು ಅವರು ನಮ್ಮ ಜೊತೆಗಾರರು. ಅವರ ಕಾಳಜಿಯನ್ನು ನಿರ್ಲಕ್ಷಿಸಬೇಡಿ, ಪ್ರಯಾಣಿಕರ ಹಿತಾಸಕ್ತಿಗಾಗಿ ಮತ್ತು ಆರೋಗ್ಯಕರ ಬಸ್ ವ್ಯವಸ್ಥೆಗಾಗಿ, ಸರ್ಕಾರವು ಈ ಕೂಡಲೇ ಹತಾಶರಾಗಿರುವ ನೌಕರರತ್ತ ಧಾವಿಸಲಿ ಮತ್ತು ಅವರ ಅಳಲುಗಳನ್ನು ಆಲಿಸಿ, ತತ್ ಕ್ಷಣವೇ ಪರಿಹರಿಸಲಿ ಎಂದು ವೇದಿಕೆಯ ವಿನಯ್ ಶ್ರೀನಿವಾಸ, ಶಹೀನ್ ಶಸಾ ಆಶಿಸಿದ್ದಾರೆ.


ಇದನ್ನೂ ಓದಿ: ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡಿ: ಬೆಂಗಳೂರಿನಲ್ಲಿ ಬೃಹತ್ ಹೋರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...