Homeಚಳವಳಿರೈತರನ್ನು ಬೆಂಬಲಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತೇನೆ, ನೀವು ಉಪವಾಸ ಕೈಗೊಳ್ಳಿ: ಅರವಿಂದ್ ಕೇಜ್ರಿವಾಲ್ ಕರೆ

ರೈತರನ್ನು ಬೆಂಬಲಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತೇನೆ, ನೀವು ಉಪವಾಸ ಕೈಗೊಳ್ಳಿ: ಅರವಿಂದ್ ಕೇಜ್ರಿವಾಲ್ ಕರೆ

"ಈ ದೇಶದ ರೈತರನ್ನು ರಾಷ್ಟ್ರ ವಿರೋಧಿ ಎಂದು ಕರೆಯುವ ಧೈರ್ಯ ಮಾಡಬೇಡಿ" ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಿಜೆಪಿ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ.

- Advertisement -
- Advertisement -

ವಿವಾದಿತ ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ಕಳೆದ 18 ದಿನಗಳಿಂದ ದೆಹಲಿಯ ಗಡಿಗಳಲ್ಲಿ ಹೋರಾಟ ನಡೆಸುತ್ತಿರುವ ರೈತರು ನಾಳೆಯಿಂದ ಉಪವಾಸ ಸತ್ಯಾಗ್ರಹ ನಡೆಸಲು ಮುಂದಾಗಿದ್ದು, ಇದಕ್ಕೆ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಪ್ ನಾಯಕರು ಸಾಥ್ ನೀಡಲಿದ್ದಾರೆ.

ಕೇಂದ್ರದ ಕೃಷಿ ಕಾನೂನುಗಳನ್ನು ವಿರೋಧಿಸಿ ಸೋಮವಾರ (ಡಿ.14) ರೈತರೊಂದಿಗೆ ಉಪವಾಸ ಸತ್ಯಾಗ್ರಹ ಮಾಡುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

“ರೈತರ ಪ್ರತಿಭಟನೆಯನ್ನು ಬೆಂಬಲಿಸಿ ನಾಳೆ ಒಂದು ದಿನದ ಉಪವಾಸವನ್ನು ನಡೆಸುತ್ತೇನೆ. ಎಎಪಿ ಸ್ವಯಂಸೇವಕರಿಗೆ ಉಪವಾಸ ಸತ್ಯಾಗ್ರಹದಲ್ಲಿ ಸೇರಿಕೊಳ್ಳಲು ನಾನು ಮನವಿ ಮಾಡುತ್ತೇನೆ. ಕೃಷಿ ಕಾನೂನುಗಳನ್ನು ವಿರೋಧಿಸುವ ರೈತರ ಎಲ್ಲಾ ಬೇಡಿಕೆಗಳನ್ನು ಕೇಂದ್ರವು ಅಹಂಕಾರ ಬಿಟ್ಟು ತಕ್ಷಣವೇ ಸ್ವೀಕರಿಸಬೇಕು. ಮತ್ತು ಎಂಎಸ್‌ಪಿ (ಕನಿಷ್ಠ ಬೆಂಬಲ ಬೆಲೆ) ಖಾತರಿಪಡಿಸುವ ಮಸೂದೆಯನ್ನು ಜಾರಿಗೆ ತರಬೇಕು’ ಎಂದು ಕೇಜ್ರಿವಾಲ್ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಡಿ.14 ರಿಂದ ಉಪವಾಸ ಸತ್ಯಾಗ್ರಹ ಆರಂಭಿಸಲಿರುವ ದೆಹಲಿಯ ಹೋರಾಟನಿರತ ರೈತರು

ಕೃಷಿ ಮಸೂದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರು, ಅವರಿಗೆ ಬೆಂಬಲ ನೀಡುತ್ತಿರುವ ಗಾಯಕರು, ಕ್ರೀಡಾಪಟುಗಳು, ಮಾಜಿ ಸೈನಿಕರನ್ನು ರಾಷ್ಟ್ರದ್ರೋಹಿಗಳು ಎನ್ನುವವರ ವಿರುದ್ಧ ಆಪ್ ಮುಖಂಡ ಅರವಿಂದ್ ಕೇಜ್ರಿವಾಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ದೇಶ ಸೇವೆ ಮಾಡಿದ ಮಾಜಿ ಸೈನಿಕರು, ವೈದ್ಯರು, ದೇಶಕ್ಕಾಗಿ ಪ್ರಶಸ್ತಿಗಳನ್ನು ತಂದ ಆಟಗಾರರು, ಗಾಯಕರು ಅವರು ದೇಶ ವಿರೋಧಿಗಳೇ..? ನಾನು ಬಿಜೆಪಿ ಮುಖಂಡರಿಗೆ ಎಚ್ಚರಿಕೆ ನೀಡಲು ಬಯಸುತ್ತೇನೆ, ಈ ದೇಶದ ರೈತರನ್ನು ರಾಷ್ಟ್ರ ವಿರೋಧಿ ಎಂದು ಕರೆಯುವ ಧೈರ್ಯ ಮಾಡಬೇಡಿ” ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಎಚ್ಚರಿಕೆ ನೀಡಿದ್ದಾರೆ.

ದೆಹಲಿ-ಹರಿಯಾಣ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಮೂಲಭೂತ ವ್ಯವಸ್ಥೆಗಳನ್ನು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭೇಟಿ ಮಾಡಿದ್ದರು. ಪ್ರತಿಭಟನಾ ಸ್ಥಳಕ್ಕೂ ಭೇಟಿ ನೀಡಿದ್ದರು. ನಂತರ ಭಾರತ್ ಬಂದ್‌ಗೆ ಬೆಂಬಲಿಸಲು ಹೊರಟ್ಟಿದ್ದ ಅವರನ್ನು ಗೃಹ ಬಂಧನದಲ್ಲಿ ಇಡಲಾಗಿತ್ತು.

ಆಪ್‌ ಪಕ್ಷವು ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಟ್ವೀಟ್ ಮಾಡಿ, “ಸಿಂಘು ಗಡಿಯಲ್ಲಿ ಹೋರಾಟ ನಿರತ ರೈತರನ್ನು ಭೇಟಿ ಮಾಡಿದ ನಂತರ ಮಾನ್ಯ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ರವರನ್ನು ದೆಹಲಿ ಪೊಲೀಸರು ಗೃಹ ಬಂಧನದಲ್ಲಿಟ್ಟಿದ್ದಾರೆ. ಯಾರೂ ಅವರ ಮನೆ ಪ್ರವೇಶಿಸಲು ಅನುಮತಿ ನೀಡುತ್ತಿಲ್ಲ” ಎಂದು ಟ್ವೀಟ್ ಮಾಡಿ ಆರೋಪಿಸಿತ್ತು. ಆದರೆ, ಕೇಂದ್ರ ಸರ್ಕಾರ ಮತ್ತು ದೆಹಲಿ ಪೊಲೀಸರು ಆಪ್ ಆರೋಪಗಳನ್ನು ನಿರಾಕರಿಸಿತ್ತು.


ಇದನ್ನೂ ಓದಿ: ಅತ್ತ ರೈತರ ಪ್ರತಿಭಟನೆ, ಇತ್ತ ಪ್ರಧಾನಿಯಿಂದ ಕೃಷಿ ಕಾಯ್ದೆಗಳ ಗುಣಗಾನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...