Homeಕರ್ನಾಟಕಅಭಿವೃದ್ಧಿ ನಿಗಮ ಸ್ಥಾಪಿಸದಿದ್ದರೆ ಬೆಂಗಳೂರಿಗೆ ಪಾದಯಾತ್ರೆ: ತಿಗಳ ಸಮುದಾಯದ ತೀರ್ಮಾನ

ಅಭಿವೃದ್ಧಿ ನಿಗಮ ಸ್ಥಾಪಿಸದಿದ್ದರೆ ಬೆಂಗಳೂರಿಗೆ ಪಾದಯಾತ್ರೆ: ತಿಗಳ ಸಮುದಾಯದ ತೀರ್ಮಾನ

ತಿಗಳ ಅಭಿವೃದ್ಧಿ ನಿಗಮ ಸ್ಥಾಪನೆ ಸಂಬಂಧ ಸ್ಪಷ್ಟ ನಿರ್ಧಾರ ಕೈಗೊಳ್ಳದಿದ್ದರೆ 2021ರ ಜನವರಿಯಲ್ಲಿ ತುಮಕೂರಿನಿಂದ ಬೆಂಗಳೂರಿಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗುವುದು.

- Advertisement -
- Advertisement -

ವಿವಿಧ ಸಮುದಾಯಗಳಿಂದ ಅಭಿವೃದ್ಧಿ ನಿಗಮಗಳ ಸ್ಥಾಪನೆಗೆ ವ್ಯಾಪಕ ಒತ್ತಾಯ ಕೇಳಿ ಬರತೊಡಗಿದೆ. ಹಾಗೆ ಕುಂಚಿಟಿಗರು, ತಿಗಳರು, ಒಕ್ಕಲಿಗರು, ಕುರುಬರ ಸಂಘಗಳು ನಿಗಮ ಸ್ಥಾಪನೆಗೆ ಸರ್ಕಾರಕ್ಕೆ ಬೇಡಿಕೆಯಿಟ್ಟು ಸಿಎಂ ಯಡಿಯೂರಪ್ಪ, ಪುತ್ರ ವಿಜಯೇಂದ್ರ, ಅಶ್ವತ್ಥನಾರಾಯಣ ಸೇರಿದಂತೆ ಹಲವು ಮುಖಂಡರಿಗೆ ಮನವಿ ಪತ್ರಗಳನ್ನು ಸಲ್ಲಿಸಲಾಗಿದೆ.

ಶಿರಾ ಉಪಚುನಾವಣೆ ಹಿನ್ನೆಲೆಯಲ್ಲಿ ಕಾಡುಗೊಲ್ಲ ಅಭಿವೃದ್ಧಿ ನಿಗಮ ಸ್ಥಾಪನೆಯಾಯಿತು. ಅದಾದ ಮೇಲೆ ಉತ್ತರ ಕರ್ನಾಟಕದ ವಿಧಾನಸಭೆ ಉಪಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಮರಾಠ ಪ್ರಾಧಕಾರ ಮತ್ತು ವೀರಶೈವ-ಲಿಂಗಾಯತ ಅಭಿವೃದ್ಧಿ ಪ್ರಾಧಿಕಾರ ರಚನೆಯಾಗಿ ಅಧ್ಯಕ್ಷರನ್ನೂ ನೇಮಕ ಮಾಡಲಾಯಿತು. ಇದಾದ ಮೇಲೆಯೇ ನಿಗಮಗಳ ರಚನೆ ಬೇಡಿಕೆ ಹೆಚ್ಚಾಗಿದೆ. ಪ್ರತಿಯೊಂದು ಜಾತಿ ಸಮುದಾಯಗಳಿಂದಲೂ ಅಭಿವೃದ್ಧಿ ನಿಗಮಗಳ ಬೇಡಿಕೆ ವ್ಯಕ್ತವಾಗುತ್ತಿದೆ.

ತುಮಕೂರಿನಲ್ಲಿ ಸಭೆ ಸೇರಿದ ತಿಗಳ ಸಮುದಾಯದ ಮುಖಂಡರು ‘ಅಗ್ನಿವಂಶ ಕ್ಷತ್ರಿಯ ತಿಗಳ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕೆಂದು’ ಆಗ್ರಹಿಸಿದ್ದಾರೆ. ಜೊತೆಗೆ ತಿಗಳ ಜನಾಂಗವನ್ನು ಪ್ರವರ್ಗ 2ಎ ಯಿಂದ ಪ್ರವರ್ಗ 1ಕ್ಕೆ ಸೇರಿಸಬೇಕು ಎಂದು ಒತ್ತಾಯಿಸಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು. ತಿಗಳ ಸಮುದಾಯ ಕೃಷಿ ಮತ್ತು ತೋಟಗಾರಿಕೆ ನೆಚ್ಚಿಕೊಂಡು ಜೀವನ ಸಾಗಿಸುತ್ತಿದೆ. ಸೊಪ್ಪು-ತರಕಾರಿ ಮಾರಿ ಕುಟುಂಬ ನಿರ್ವಹಣೆಯಲ್ಲಿ ತೊಡಗಿದೆ. ಸಮುದಾಯ ಆರ್ಥಿಕ, ರಾಜಕೀಯ, ಸಾಮಾಜಿಕ ಮತ್ತು ರಾಜಕೀಯವಾಗಿ ಹಿಂದುಳಿದಿದೆ. ತಿಗಳರು ಕಟು ಆಚಾರಗಳನ್ನು ಅನುಸರಿಸುತ್ತಿದ್ದು ಸಮಾಜದ ಮುಖ್ಯವಾಹಿನಿಯಿಂದ ದೂರವೇ ಉಳಿದಿದೆ. ಹಾಗಾಗಿ ಎಲ್ಲಾ ಸರ್ಕಾರಗಳು ಈ ಜನಾಂಗವನ್ನು ನಿರ್ಲಕ್ಷಿಸುತ್ತ ಬರುತ್ತಿವೆ. ರಾಜಕೀಯ ಶಕ್ತಿ ಇಲ್ಲದೆ ಸರ್ಕಾರದ ಯಾವುದೇ ಸೌಲಭ್ಯ ಪಡೆಯಲು ಆಗಿಲ್ಲ ಎಂಬ ಅಭಿಪ್ರಾಯ ಮುಖಂಡರಿಂದ ವ್ಯಕ್ತವಾಗಿದೆ.

ರಾಜ್ಯದ ತುಮಕೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸುಮಾರು 40 ಲಕ್ಷ ಮಂದಿ ಸಮುದಾಯದ ಜನಸಂಖ್ಯೆ ಇದೆ. ಹಲವು ಕ್ಷೇತ್ರಗಳ ಚುನಾವಣೆಯಲ್ಲಿ ತಿಗಳ ಸಮುದಾಯ ನಿರ್ಣಾಯಕವಾಗಿದೆ. ಅಭ್ಯರ್ಥಿ ಗೆಲುವಿನಲ್ಲಿ ಸಮುದಾಯ ಬಹುಮುಖ್ಯ ಪಾತ್ರ ವಹಿಸಿದೆ. ಆದರೂ ರಾಜಕೀಯ ಪಕ್ಷಗಳು ನಮ್ಮ ಸಮುದಾಯವನ್ನು ಕಡೆಗಣಿಸಿವೆ. ಸಮುದಾಯದ ಅಭಿವೃದ್ಧಿಯ ಹಿತದೃಷ್ಟಿಯಿಂದ ಅಭಿವೃದ್ಧಿ ನಿಗಮ ಸ್ಥಾಪಿಸಬೇಕೆಂದು ಒತ್ತಾಯಿಸುತ್ತಲೇ ಬರುತ್ತಿದ್ದೇವೆ. ಆದರೂ ಸರ್ಕಾರ ನಮ್ಮ ಮನವಿಗೆ ಸ್ಪಂದಿಸಿಲ್ಲ ಎಂದು ತುಮಕೂರು ಮಹಾನಗರ ಪಾಲಿಕೆ ಸದಸ್ಯ ನರಸಿಂಹಮೂರ್ತಿ ನಾನುಗೌರಿ.ಕಾಂಗೆ ತಿಳಿಸಿದರು.

ತಿಗಳ ಜನಾಂಗದಲ್ಲಿ ಮೂರು ಉಪ ಪಂಗಡಗಳು ಇವೆ. ಎಲ್ಲಾ ಉಪ ಪಂಗಡಗಳ ಮುಖಂಡರು ನಿಯೋಗದಲ್ಲಿ ತೆರಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ. ಈ ತಿಂಗಳ ಅಂತ್ಯದೊಳಗೆ ತಿಗಳ ಅಭಿವೃದ್ಧಿ ನಿಗಮ ಸ್ಥಾಪನೆ ಸಂಬಂಧ ಸ್ಪಷ್ಟ ನಿರ್ಧಾರ ಕೈಗೊಳ್ಳದಿದ್ದರೆ 2021ರ ಜನವರಿಯಲ್ಲಿ ತುಮಕೂರಿನಿಂದ ಬೆಂಗಳೂರಿಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗುವುದು. ನಮ್ಮ ಸಮುದಾಯ ಶೈಕ್ಷಣಿಕವಾಗಿ ಹಿಂದುಳಿದಿದ್ದು ಜನಾಂಗದ ಅಭಿವೃದ್ಧಿಗೆ ನಿಗಮ ಅನಿವಾರ್ಯ ಎಂದು ತಿಗಳ ಸಮುದಾಯದ ನೌಕರರ ಸಂಘದ ಅಧ್ಯಕ್ಷ ಎಚ್.ಅಂಜನೇಯ ಒತ್ತಾಯಿಸಿದ್ದಾರೆ.

ತುಮಕೂರು ನಗರದಲ್ಲಿ ಅತಿಹೆಚ್ಚು ಜನಸಂಖ್ಯೆಯಿರುವ ತಿಗಳರು ಪಾಲಿಕೆ ಚುನಾವಣೆಯಲ್ಲಿ ಹೆಚ್ಚು ಸಂಖ್ಯೆ ಸದಸ್ಯರು ಆಯ್ಕೆಯಾಗಿರುವುದು ಉಂಟು. ಈಗ ಶ್ರೀನಿವಾಸ್ ಪಾಲಿಕೆ ಸದಸ್ಯರಾಗಿದ್ದು, ಲಿಲಿತಾ ರವೀಶ್, ಶಶಿಕಲಾ ಅವರು ಕ್ರಮವಾಗಿ ಮೇಯರ್, ಉಪಮೇಯರ್ ಆಗಿ ಕೆಲಸ ನಿರ್ವಹಿಸಿದ್ದಾರೆ. ಸಭೆಯಲ್ಲಿ, ಕುಂಭಯ್ಯ, ಕುಂಭಿನರಸಯ್ಯ, ಪ್ರೆಸ್ ರಾಜಣ್ಣ, ನಾರಾಯಣಸ್ವಾಮಿ, ಸೂರ್ಯಪ್ರಕಾಶ್, ಅನಂತರಾಮು ಸೇರಿ ಹಲವು ಮುಖಂಡರು ಭಾಗವಹಿಸಿ ಮುಂದಿನ ತೀರ್ಮಾನಗಳ ಕುರಿತು ಚರ್ಚಿಸಿದ್ದಾರೆ.


ಇದನ್ನೂ ಓದಿ: ಜಾತಿಗೊಂದು ನಿಗಮ ರಚನೆ: ಸಿಎಂ ನಡೆಗೆ ಸೊಗಡು ಶಿವಣ್ಣ ತೀವ್ರ ಅಸಮಾಧಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...