Homeಕರ್ನಾಟಕಅಭಿವೃದ್ಧಿ ನಿಗಮ ಸ್ಥಾಪಿಸದಿದ್ದರೆ ಬೆಂಗಳೂರಿಗೆ ಪಾದಯಾತ್ರೆ: ತಿಗಳ ಸಮುದಾಯದ ತೀರ್ಮಾನ

ಅಭಿವೃದ್ಧಿ ನಿಗಮ ಸ್ಥಾಪಿಸದಿದ್ದರೆ ಬೆಂಗಳೂರಿಗೆ ಪಾದಯಾತ್ರೆ: ತಿಗಳ ಸಮುದಾಯದ ತೀರ್ಮಾನ

ತಿಗಳ ಅಭಿವೃದ್ಧಿ ನಿಗಮ ಸ್ಥಾಪನೆ ಸಂಬಂಧ ಸ್ಪಷ್ಟ ನಿರ್ಧಾರ ಕೈಗೊಳ್ಳದಿದ್ದರೆ 2021ರ ಜನವರಿಯಲ್ಲಿ ತುಮಕೂರಿನಿಂದ ಬೆಂಗಳೂರಿಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗುವುದು.

- Advertisement -
- Advertisement -

ವಿವಿಧ ಸಮುದಾಯಗಳಿಂದ ಅಭಿವೃದ್ಧಿ ನಿಗಮಗಳ ಸ್ಥಾಪನೆಗೆ ವ್ಯಾಪಕ ಒತ್ತಾಯ ಕೇಳಿ ಬರತೊಡಗಿದೆ. ಹಾಗೆ ಕುಂಚಿಟಿಗರು, ತಿಗಳರು, ಒಕ್ಕಲಿಗರು, ಕುರುಬರ ಸಂಘಗಳು ನಿಗಮ ಸ್ಥಾಪನೆಗೆ ಸರ್ಕಾರಕ್ಕೆ ಬೇಡಿಕೆಯಿಟ್ಟು ಸಿಎಂ ಯಡಿಯೂರಪ್ಪ, ಪುತ್ರ ವಿಜಯೇಂದ್ರ, ಅಶ್ವತ್ಥನಾರಾಯಣ ಸೇರಿದಂತೆ ಹಲವು ಮುಖಂಡರಿಗೆ ಮನವಿ ಪತ್ರಗಳನ್ನು ಸಲ್ಲಿಸಲಾಗಿದೆ.

ಶಿರಾ ಉಪಚುನಾವಣೆ ಹಿನ್ನೆಲೆಯಲ್ಲಿ ಕಾಡುಗೊಲ್ಲ ಅಭಿವೃದ್ಧಿ ನಿಗಮ ಸ್ಥಾಪನೆಯಾಯಿತು. ಅದಾದ ಮೇಲೆ ಉತ್ತರ ಕರ್ನಾಟಕದ ವಿಧಾನಸಭೆ ಉಪಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಮರಾಠ ಪ್ರಾಧಕಾರ ಮತ್ತು ವೀರಶೈವ-ಲಿಂಗಾಯತ ಅಭಿವೃದ್ಧಿ ಪ್ರಾಧಿಕಾರ ರಚನೆಯಾಗಿ ಅಧ್ಯಕ್ಷರನ್ನೂ ನೇಮಕ ಮಾಡಲಾಯಿತು. ಇದಾದ ಮೇಲೆಯೇ ನಿಗಮಗಳ ರಚನೆ ಬೇಡಿಕೆ ಹೆಚ್ಚಾಗಿದೆ. ಪ್ರತಿಯೊಂದು ಜಾತಿ ಸಮುದಾಯಗಳಿಂದಲೂ ಅಭಿವೃದ್ಧಿ ನಿಗಮಗಳ ಬೇಡಿಕೆ ವ್ಯಕ್ತವಾಗುತ್ತಿದೆ.

ತುಮಕೂರಿನಲ್ಲಿ ಸಭೆ ಸೇರಿದ ತಿಗಳ ಸಮುದಾಯದ ಮುಖಂಡರು ‘ಅಗ್ನಿವಂಶ ಕ್ಷತ್ರಿಯ ತಿಗಳ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕೆಂದು’ ಆಗ್ರಹಿಸಿದ್ದಾರೆ. ಜೊತೆಗೆ ತಿಗಳ ಜನಾಂಗವನ್ನು ಪ್ರವರ್ಗ 2ಎ ಯಿಂದ ಪ್ರವರ್ಗ 1ಕ್ಕೆ ಸೇರಿಸಬೇಕು ಎಂದು ಒತ್ತಾಯಿಸಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು. ತಿಗಳ ಸಮುದಾಯ ಕೃಷಿ ಮತ್ತು ತೋಟಗಾರಿಕೆ ನೆಚ್ಚಿಕೊಂಡು ಜೀವನ ಸಾಗಿಸುತ್ತಿದೆ. ಸೊಪ್ಪು-ತರಕಾರಿ ಮಾರಿ ಕುಟುಂಬ ನಿರ್ವಹಣೆಯಲ್ಲಿ ತೊಡಗಿದೆ. ಸಮುದಾಯ ಆರ್ಥಿಕ, ರಾಜಕೀಯ, ಸಾಮಾಜಿಕ ಮತ್ತು ರಾಜಕೀಯವಾಗಿ ಹಿಂದುಳಿದಿದೆ. ತಿಗಳರು ಕಟು ಆಚಾರಗಳನ್ನು ಅನುಸರಿಸುತ್ತಿದ್ದು ಸಮಾಜದ ಮುಖ್ಯವಾಹಿನಿಯಿಂದ ದೂರವೇ ಉಳಿದಿದೆ. ಹಾಗಾಗಿ ಎಲ್ಲಾ ಸರ್ಕಾರಗಳು ಈ ಜನಾಂಗವನ್ನು ನಿರ್ಲಕ್ಷಿಸುತ್ತ ಬರುತ್ತಿವೆ. ರಾಜಕೀಯ ಶಕ್ತಿ ಇಲ್ಲದೆ ಸರ್ಕಾರದ ಯಾವುದೇ ಸೌಲಭ್ಯ ಪಡೆಯಲು ಆಗಿಲ್ಲ ಎಂಬ ಅಭಿಪ್ರಾಯ ಮುಖಂಡರಿಂದ ವ್ಯಕ್ತವಾಗಿದೆ.

ರಾಜ್ಯದ ತುಮಕೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸುಮಾರು 40 ಲಕ್ಷ ಮಂದಿ ಸಮುದಾಯದ ಜನಸಂಖ್ಯೆ ಇದೆ. ಹಲವು ಕ್ಷೇತ್ರಗಳ ಚುನಾವಣೆಯಲ್ಲಿ ತಿಗಳ ಸಮುದಾಯ ನಿರ್ಣಾಯಕವಾಗಿದೆ. ಅಭ್ಯರ್ಥಿ ಗೆಲುವಿನಲ್ಲಿ ಸಮುದಾಯ ಬಹುಮುಖ್ಯ ಪಾತ್ರ ವಹಿಸಿದೆ. ಆದರೂ ರಾಜಕೀಯ ಪಕ್ಷಗಳು ನಮ್ಮ ಸಮುದಾಯವನ್ನು ಕಡೆಗಣಿಸಿವೆ. ಸಮುದಾಯದ ಅಭಿವೃದ್ಧಿಯ ಹಿತದೃಷ್ಟಿಯಿಂದ ಅಭಿವೃದ್ಧಿ ನಿಗಮ ಸ್ಥಾಪಿಸಬೇಕೆಂದು ಒತ್ತಾಯಿಸುತ್ತಲೇ ಬರುತ್ತಿದ್ದೇವೆ. ಆದರೂ ಸರ್ಕಾರ ನಮ್ಮ ಮನವಿಗೆ ಸ್ಪಂದಿಸಿಲ್ಲ ಎಂದು ತುಮಕೂರು ಮಹಾನಗರ ಪಾಲಿಕೆ ಸದಸ್ಯ ನರಸಿಂಹಮೂರ್ತಿ ನಾನುಗೌರಿ.ಕಾಂಗೆ ತಿಳಿಸಿದರು.

ತಿಗಳ ಜನಾಂಗದಲ್ಲಿ ಮೂರು ಉಪ ಪಂಗಡಗಳು ಇವೆ. ಎಲ್ಲಾ ಉಪ ಪಂಗಡಗಳ ಮುಖಂಡರು ನಿಯೋಗದಲ್ಲಿ ತೆರಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ. ಈ ತಿಂಗಳ ಅಂತ್ಯದೊಳಗೆ ತಿಗಳ ಅಭಿವೃದ್ಧಿ ನಿಗಮ ಸ್ಥಾಪನೆ ಸಂಬಂಧ ಸ್ಪಷ್ಟ ನಿರ್ಧಾರ ಕೈಗೊಳ್ಳದಿದ್ದರೆ 2021ರ ಜನವರಿಯಲ್ಲಿ ತುಮಕೂರಿನಿಂದ ಬೆಂಗಳೂರಿಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗುವುದು. ನಮ್ಮ ಸಮುದಾಯ ಶೈಕ್ಷಣಿಕವಾಗಿ ಹಿಂದುಳಿದಿದ್ದು ಜನಾಂಗದ ಅಭಿವೃದ್ಧಿಗೆ ನಿಗಮ ಅನಿವಾರ್ಯ ಎಂದು ತಿಗಳ ಸಮುದಾಯದ ನೌಕರರ ಸಂಘದ ಅಧ್ಯಕ್ಷ ಎಚ್.ಅಂಜನೇಯ ಒತ್ತಾಯಿಸಿದ್ದಾರೆ.

ತುಮಕೂರು ನಗರದಲ್ಲಿ ಅತಿಹೆಚ್ಚು ಜನಸಂಖ್ಯೆಯಿರುವ ತಿಗಳರು ಪಾಲಿಕೆ ಚುನಾವಣೆಯಲ್ಲಿ ಹೆಚ್ಚು ಸಂಖ್ಯೆ ಸದಸ್ಯರು ಆಯ್ಕೆಯಾಗಿರುವುದು ಉಂಟು. ಈಗ ಶ್ರೀನಿವಾಸ್ ಪಾಲಿಕೆ ಸದಸ್ಯರಾಗಿದ್ದು, ಲಿಲಿತಾ ರವೀಶ್, ಶಶಿಕಲಾ ಅವರು ಕ್ರಮವಾಗಿ ಮೇಯರ್, ಉಪಮೇಯರ್ ಆಗಿ ಕೆಲಸ ನಿರ್ವಹಿಸಿದ್ದಾರೆ. ಸಭೆಯಲ್ಲಿ, ಕುಂಭಯ್ಯ, ಕುಂಭಿನರಸಯ್ಯ, ಪ್ರೆಸ್ ರಾಜಣ್ಣ, ನಾರಾಯಣಸ್ವಾಮಿ, ಸೂರ್ಯಪ್ರಕಾಶ್, ಅನಂತರಾಮು ಸೇರಿ ಹಲವು ಮುಖಂಡರು ಭಾಗವಹಿಸಿ ಮುಂದಿನ ತೀರ್ಮಾನಗಳ ಕುರಿತು ಚರ್ಚಿಸಿದ್ದಾರೆ.


ಇದನ್ನೂ ಓದಿ: ಜಾತಿಗೊಂದು ನಿಗಮ ರಚನೆ: ಸಿಎಂ ನಡೆಗೆ ಸೊಗಡು ಶಿವಣ್ಣ ತೀವ್ರ ಅಸಮಾಧಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...