Homeಕರೋನಾ ತಲ್ಲಣನಿರುದ್ಯೋಗಿಗಳ ಬೆನ್ನಿಗೆ ನಿಂತ ನಟ ಸೋನು ಸೂದ್: ಇ-ಆಟೋ ಹಂಚಲು ನಿರ್ಧಾರ

ನಿರುದ್ಯೋಗಿಗಳ ಬೆನ್ನಿಗೆ ನಿಂತ ನಟ ಸೋನು ಸೂದ್: ಇ-ಆಟೋ ಹಂಚಲು ನಿರ್ಧಾರ

’ಜನರ ಬೇಡಿಕೆಗಳನ್ನು ಈಡೇರಿಸುವುದಕ್ಕಿಂತಲೂ ಅವರಿಗೆ ಉದ್ಯೋಗಾವಕಾಶಗಳನ್ನು ಒದಗಿಸುವುದು ಹೆಚ್ಚು ಮುಖ್ಯ ಎಂದು ನಾನು ನಂಬುತ್ತೇನೆ’

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗ ನಿಯಂತ್ರಣ ಮಾಡಲು ಏಕಾಏಕಿ ಲಾಕ್‌ಡೌನ್ ಘೋಷಿಸಿದ್ದ ಕೇಂದ್ರ ಸರ್ಕಾರದ ಕ್ರಮದಿಂದ ನಿರ್ಗತಿಕರಾದ ಲಕ್ಷಾಂತರ ಜನರ ಪಾಲಿಗೆ ಆಪತ್ಬಾಂದವರಾಗಿದ್ದು ನಟ ಸೋನು ಸೂದ್. ಈಗ ಮತ್ತೊಂದು ಕಾರ್ಯಕ್ಕೆ ಕೈ ಹಾಕಿದ್ದು, ನಿರುದ್ಯೋಗಿಗಳಿಗೆ ಇ-ಆಟೋಗಳನ್ನು ಉಡುಗೊರೆಯಾಗಿ ನೀಡುತ್ತಿದ್ದಾರೆ.

ಖುದ್ ಕಮಾವೋ ಘರ್​ ಚಲಾವೋ (ನೀವೇ ಗಳಿಸಿ ಮನೆ ನಡೆಸಿ) ಎಂಬ ಹೆಸರಿನಲ್ಲಿ ಹೊಸದೊಂದು ಯೋಜನೆ ಆರಂಭಿಸಲು ಮುಂದಾಗಿರುವ ಸೋನು ಸೂದ್, ಲಾಕ್​ಡೌನ್ ಸಮಯದಲ್ಲಿ ಉದ್ಯೋಗ ಕಳೆದುಕೊಂಡು ನಿರುದ್ಯೋಗಿಗಳಾದವರಿಗೆ ಎಲೆಕ್ಟ್ರಾನಿಕ್ ಆಟೋಗಳನ್ನ ನೀಡಲು ಮುಂದಾಗಿದ್ದಾರೆ.

ಇ- ಆಟೋಗಳ ಮೂಲಕ ನಿರುದ್ಯೋಗಿಗಳು ಸ್ವ ಉದ್ಯೋಗಿಗಳಾಗಲಿದ್ದು ತಮ್ಮ ಮನೆ ನಡೆಸಲು ತಾವೇ ದುಡಿಯಬಹುದು. ಈ ಮೂಲಕ ಅವರಿಗೆ ಸಹಾಯವಾಗಲಿದೆ ಎಂದು ಈ ಯೋಜನೆ ಪ್ರಾರಂಭಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಜನರಿಗಾಗಿ ತಮ್ಮ ಆಸ್ತಿಯನ್ನು 10 ಕೋಟಿಗೆ ಅಡವಿಟ್ಟ ನಟ ಸೋನು ಸೂದ್!

View this post on Instagram

 

“ಕಳೆದ ಕೆಲವು ತಿಂಗಳುಗಳಿಂದ ನಾನು ಜನರಿಂದ ಸಾಕಷ್ಟು ಪ್ರೀತಿಯನ್ನು ಪಡೆದುಕೊಂಡಿದ್ದೇನೆ. ಅದು ಅವರಿಗಾಗಿ ಮುಂದುವರಿಯಲು ನನಗೆ ಪ್ರೇರಣೆ ನೀಡಿದೆ. ಆದ್ದರಿಂದ, ನಾನು ’ಖುದ್ ಕಮಾವೋ ಘರ್ ಚಾಲಾವೋ’ ಯೋಜನೆ ಆರಂಭಿಸಿದ್ದೇನೆ ಎಂದು 47 ವರ್ಷದ ನಟ ಹೇಳಿದ್ದಾರೆ.

“ಜನರ ಬೇಡಿಕೆಗಳನ್ನು ಈಡೇರಿಸುವುದಕ್ಕಿಂತಲೂ ಅವರಿಗೆ ಉದ್ಯೋಗಾವಕಾಶಗಳನ್ನು ಒದಗಿಸುವುದು ಹೆಚ್ಚು ಮುಖ್ಯ ಎಂದು ನಾನು ನಂಬುತ್ತೇನೆ. ಈ ಯೋಜನೆ ಅವರನ್ನು ಸ್ವಾವಲಂಬಿಗಳಾಗಿ ಮಾಡುವ ಮೂಲಕ ಮತ್ತೆ ತಮ್ಮ ಕಾಲುಗಳ ಮೇಲೆ ನಿಲ್ಲಲು ಸಹಾಯ ಮಾಡುತ್ತದೆ ಎಂದು ನನಗೆ ಖಾತ್ರಿಯಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸೋನು ಸೂದ್ ನಮ್ಮ ಪಾಲಿಗೆ ದೇವರಿದ್ದಂತೆ: ಟ್ರಾಕ್ಟರ್ ಉಡುಗೊರೆ ಪಡೆದ ರೈತನ ಕೃತಜ್ಞತೆ

ಈ ವರ್ಷದ ಆರಂಭದಲ್ಲಿ, ಸೋನು ಸೂದ್ ಅವರು ಪ್ರವಾಸಿ ರೋಜ್​ಗಾರ್ ಆ್ಯಪ್ ಬಿಡುಗಡೆ ಮಾಡಿದ್ದರು. ಇದರಿಂದ ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ಆರ್ಥಿಕ ಹೊಡೆತದಿಂದ ಕೆಲಸ ಕಳೆದುಕೊಂಡವರಲ್ಲಿ 50,000 ಕ್ಕೂ ಹೆಚ್ಚು ಜನರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸಿತು. ಪ್ರವಾಸಿ ರೋಜ್​ಗಾರ್ ಆ್ಯಪ್, ಅನೇಕ ಕಂಪನಿಗಳೊಂದಿಗೆ ಸಂಪರ್ಕದಲ್ಲಿದ್ದು,ಕಂಪನಿಗಳಲ್ಲಿ ಖಾಲಿ ಇರುವ ಕೆಲಸದ ಬಗ್ಗೆ ಮಾಹಿತಿ ನೀಡುತ್ತದೆ.

ಲಾಕ್‌ಡೌನ್ ಸಂಕಷ್ಟದಲ್ಲಿ ತೊಂದರೆಗೊಳಗಾಗಿದ್ದ ವಲಸೆ ಕಾರ್ಮಿಕರಿಗೆ ನಟ ಸೋನುಸೂದ್ ಆಹಾರ ವಿತರಿಸಿದ್ದರು. ಬಸ್‌ಗಳು, ರೈಲುಗಳು ಮತ್ತು ಚಾರ್ಟರ್ಡ್ ವಿಮಾನಗಳ ಮೂಲಕ ಕಾರ್ಮಿಕರನ್ನು ತಮ್ಮ ತಮ್ಮ ಗ್ರಾಮಗಳಿಗೆ ತಲುಪಿಸಿದ್ದರು. ಇಷ್ಟೇ ಅಲ್ಲದೆ ಉತ್ತಮ ಜೀವನೋಪಾಯಕ್ಕಾಗಿ ಉದ್ಯೋಗಾವಕಾಶಗಳನ್ನು ಒದಗಿಸುವ ಮೂಲಕ ನಿಸ್ವಾರ್ಥವಾಗಿ ಸಹಾಯ ಮಾಡಿದ್ದಕ್ಕಾಗಿ ನಟ ಸೋನು ಸೂದ್ ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮ (ಯುಎನ್​ಡಿಪಿ) ದಿಂದ ಎಸ್‌ಡಿಜಿ ವಿಶೇಷ ಮಾನವೀಯ ಕ್ರಿಯಾ ಪ್ರಶಸ್ತಿಯನ್ನು ಪಡೆದಿದ್ದಾರೆ.


ಇದನ್ನೂ ಓದಿ: ನಟ ಸೋನು ಸೂದ್ ಮಾನವೀಯ ಕಾರ್ಯಕ್ಕೆ ವಿಶ್ವಸಂಸ್ಥೆಯ ಗೌರವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...