Homeಕರ್ನಾಟಕಸಾರಿಗೆ ನೌಕರರ ಪ್ರತಿಭಟನೆಗೆ ಮಣಿದ ಸರ್ಕಾರ: ಬೇಡಿಕೆಗಳನ್ನು ಈಡೇರಿಸುವಂತೆ ಭರವಸೆ

ಸಾರಿಗೆ ನೌಕರರ ಪ್ರತಿಭಟನೆಗೆ ಮಣಿದ ಸರ್ಕಾರ: ಬೇಡಿಕೆಗಳನ್ನು ಈಡೇರಿಸುವಂತೆ ಭರವಸೆ

ಸಾರಿಗೆ ನೌಕರರ ಪ್ರತಿಭಟನೆಗೆ ಮೊಸಳೆ ಕಣ್ಣೀರು ಸುರಿಸುತ್ತಿರುವ ನಾಯಕರು, ಕಾಂಗ್ರೆಸ್ ಸರ್ಕಾರ ಹಾಗು ಸಮ್ಮಿಶ್ರ ಸರ್ಕಾರಗಳು ಇದ್ದ ಸಂದರ್ಭದಲ್ಲಿ ಈ ಬೇಡಿಕೆಗಳನ್ನು ಏಕೆ ಪೂರೈಸಲಿಲ್ಲ? - ಸುಧಾಕರ್

- Advertisement -
- Advertisement -

ಸಾರಿಗೆ ನೌಕರರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಕಳೆದ ಮೂರು ದಿನಗಳಿಂದ ಪ್ರತಿಭಟನೆ ಮಾಡುತ್ತಿದ್ದು, ಇದಕ್ಕೆ ಪ್ರತಿಪಕ್ಷ ಸೇರಿದಂತೆ ಹಲವು ಸಂಘಟನೆಗಳು ಬೆಂಬಲ ನೀಡಿದ್ದವು. ಇದರ ಕುರಿತು ಪ್ರತಿಕ್ರಿಯಿಸಿರುವ ಸಚಿವ ಸುಧಾಕರ್, “ಸಮ್ಮಿಶ್ರ ಸರ್ಕಾರಗಳು ಇದ್ದ ಸಂದರ್ಭದಲ್ಲಿ ಈ ಬೇಡಿಕೆಗಳನ್ನು ಏಕೆ ಪೂರೈಸಲಿಲ್ಲ?” ಎಂದು ಪ್ರಶ್ನಿಸಿದ್ದಾರೆ.

ಸಾರಿಗೆ ನೌಕರರ ಬೇಡಿಕೆಗಳ ಕುರಿತು ಇಂದು ಸರ್ಕಾರ ಪ್ರತಿಭಟನಾಕಾರರೊಟ್ಟಿಗೆ ಮಾತುಕತೆ ನಡೆಸಿದ್ದು, ವೇತನ ಪರಿಷ್ಕರಣೆ, ಕಿರುಕುಳ ತಡೆ, ಭತ್ಯೆ ಪುನರಾರಂಭ, ಆರೋಗ್ಯ ವಿಮೆ ಸೇರಿದಂತೆ ಸಾರಿಗೆ ನೌಕರರ ಹಲವು ಬೇಡಿಕೆಗಳನ್ನು ಈಡೇರಿಸುವುದಾಗಿ ರಾಜ್ಯ ಸರ್ಕಾರ ಒಪ್ಪಿಕೊಂಡಿದೆ.

ಇದನ್ನೂ ಓದಿ: ಪ್ರಧಾನಿ ನೀಡುತ್ತಿರುವ ಐತಿಹಾಸಿಕ ಉಡುಗೊರೆ ರೈತರಿಗೆ ಬೇಡ: ಯೋಗೇಂದ್ರ ಯಾದವ್

ಸಂಧಾನ ಸಭೆ ಅಂತ್ಯಗೊಂಡ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಸಾರಿಗೆ ನೌಕರರ ಕೂಟದ ಅಧ್ಯಕ್ಷ ಚಂದ್ರಶೇಖರ್, ‘ನಮ್ಮ ಬಹುತೇಕ ಬೇಡಿಕೆಗಳನ್ನು ಸರ್ಕಾರ ಒಪ್ಪಿಕೊಂಡಿದೆ. ಸೌಹಾರ್ದಯುತ ತೀರ್ಮಾನ ಆಗಿದೆ. ಮುಂದಿನ ನಿರ್ಧಾರವನ್ನು ಸ್ವಾತಂತ್ರ್ಯ ಉದ್ಯಾನದ ಪ್ರತಿಭಟನಾ ಸ್ಥಳದಲ್ಲಿ ಪ್ರಕಟಿಸಲಾಗುವುದು’ ಎಂದರು.

ಇದರ ಬೆನ್ನಲ್ಲೇ ಸರಣಿ ಟ್ವೀಟ್ ಮಾಡಿರುವ ಸುಧಾಕರ್, “ಕಾಂಗ್ರೆಸ್ ನಾಯಕರು ಅನಗತ್ಯವಾಗಿ ಪದೇ ಪದೇ ಮುಷ್ಕರ, ಬಂದ್‌ಗಳಿಗೆ ಕರೆನೀಡುತ್ತಿದ್ದಾರೆ” ಎಂದು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ‘ಪ್ರಧಾನ ಮಂತ್ರಿ ಆಗಬೇಕು ಎನ್ನುವ ಆಸೆ ನನಗಿಲ್ಲ…’ – ಸಿದ್ದರಾಮಯ್ಯ

“ರೈತ ನಾಯಕರು ಎನಿಸಿಕೊಂಡಿರುವ ಕೋಡಿಹಳ್ಳಿ ಚಂದ್ರಶೇಖರ್ ಅವರಿಗೆ ಸಾರಿಗೆ ವ್ಯವಸ್ಥೆ ಹಾಗೂ ನೌಕರರ ಸಮಸ್ಯೆಗಳ ಬಗ್ಗೆ ಅರಿವಿದೆಯೇ? ತಮಗೆ ಅರಿವಿಲ್ಲದ ವಿಷಯಗಳ ಬಗ್ಗೆ ಮೂಗು ತೂರಿಸುವುದು ಎಷ್ಟು ಸಮಂಜಸ ಎಂದು ಜನ ಕೇಳುತ್ತಿರುವ ಪ್ರಶ್ನೆಗೆ ಕೋಡಿಹಳ್ಳಿ ಚಂದ್ರಶೇಖರ್ ಅವರು ಮೊದಲು ಉತ್ತರ ನೀಡಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಶೂದ್ರರಿಗೆ ಜ್ಞಾನವಿಲ್ಲ, ಹಾಗಾಗಿಯೇ ತಾವು ಶೂದ್ರರು ಎಂದು ಒಪ್ಪಿಕೊಳ್ಳುವುದಿಲ್ಲ: ಪ್ರಗ್ಯಾ ಠಾಕೂರ್

“ಸಾರಿಗೆ ವ್ಯವಸ್ಥೆ ಅತ್ಯಂತ ಪ್ರಮುಖ ಮತ್ತು ಅಗತ್ಯ ಸೇವೆಯಾಗಿದ್ದು, ಶ್ರೀ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾದಾಗಿನಿಂದ ಪದೇ ಪದೇ ಮುಷ್ಕರ, ಬಂದ್ ಗಳಿಗೆ ಕುಮ್ಮಕ್ಕು ನೀಡುವ ಮೂಲಕ ಸಾರ್ವಜನಿಕರ ದೈನಂದಿನ ಜೀವನಕ್ಕೆ ತೊಂದರೆ ಉಂಟುಮಾಡಿ ಬಡವರು, ದಿನಗೂಲಿ ಕಾರ್ಮಿಕರು, ಸಣ್ಣ ವ್ಯಾಪಾರಸ್ಥರಿಗೆ ಕಿರುಕುಳ ನೀಡುತ್ತಿದ್ದಾರೆ” ಎಂದು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ರೈತರನ್ನು ಬೆಂಬಲಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತೇನೆ, ನೀವು ಉಪವಾಸ ಕೈಗೊಳ್ಳಿ: ಅರವಿಂದ್ ಕೇಜ್ರಿವಾಲ್ ಕರೆ

“ನೌಕರರ ಪ್ರತಿಭಟನೆಗೆ ಮೊಸಳೆ ಕಣ್ಣೀರು ಸುರಿಸುತ್ತಿರುವ ನಾಯಕರು ಕಾಂಗ್ರೆಸ್ ಸರ್ಕಾರ ಹಾಗು ಸಮ್ಮಿಶ್ರ ಸರ್ಕಾರಗಳು ಇದ್ದ ಸಂದರ್ಭದಲ್ಲಿ ಈ ಬೇಡಿಕೆಗಳನ್ನು ಏಕೆ ಪೂರೈಸಲಿಲ್ಲ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಅಭಿವೃದ್ಧಿ ನಿಗಮ ಸ್ಥಾಪಿಸದಿದ್ದರೆ ಬೆಂಗಳೂರಿಗೆ ಪಾದಯಾತ್ರೆ: ತಿಗಳ ಸಮುದಾಯದ ತೀರ್ಮಾನ

“ಸಾರಿಗೆ ನೌಕರರು ಮುಂದಿಟ್ಟಿರುವ ಬಹುತೇಕ ಬೇಡಿಕೆಗಳನ್ನು ಈಡೇರಿಸಲು ಮುಖ್ಯಮಂತ್ರಿ ಶ್ರೀ ಯಡಿಯೂರಪ್ಪನವರು
ಅವರು ಈಗಾಗಲೇ ಭರವಸೆ ನೀಡಿದ್ದಾರೆ. ತಮ್ಮನ್ನು ದಾರಿ ತಪ್ಪಿಸುತ್ತಿರುವವರ ಪ್ರಚೋದನೆಗೆ ಒಳಗಾಗದೆ ಪ್ರತಿಭಟನೆ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗುತ್ತಿರುವ ನೌಕರರಿಗೆ ಧನ್ಯವಾದಗಳು” ಎಂದು ಬರೆದುಕೊಂಡಿದ್ದಾರೆ.


ಇದನ್ನೂ ಓದಿ: ಸರ್ಕಾರ ಸಾರಿಗೆ ನೌಕರರ ಸಮಸ್ಯೆ ಬಗೆಹರಿಸಬೇಕಾದುದ್ದು ಹೀಗೆ..: ಬಸ್ ಪ್ರಯಾಣಿಕರ ವೇದಿಕೆಯ ಸಲಹೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...