Homeಕರ್ನಾಟಕಪೊಳ್ಳು ಭರವಸೆ ಬೇಡ; ಲಿಖಿತ ಒಪ್ಪಿಗೆ ನೀಡಿ: ಹೋರಾಟ ಮುಂದುವರಿಸಲಿರುವ ಸಾರಿಗೆ ನೌಕರರು!

ಪೊಳ್ಳು ಭರವಸೆ ಬೇಡ; ಲಿಖಿತ ಒಪ್ಪಿಗೆ ನೀಡಿ: ಹೋರಾಟ ಮುಂದುವರಿಸಲಿರುವ ಸಾರಿಗೆ ನೌಕರರು!

"ತಮ್ಮನ್ನು ಸರ್ಕಾರಿ ನೌಕರರು ಎಂದು ಘೋಷಿಸುವವರೆಗೂ ಬಸ್ ತೆಗೆಯುವುದಿಲ್ಲ. ಸರ್ಕಾರ ನೀಡಿರುವ ಭರವಸೆಗಳ ಬಗ್ಗೆ ಲಿಖಿತ ಒಪ್ಪಿಗೆ ನೀಡಿ, ಅಧಿಕೃತವಾಗಿ ಘೋಷಿಸಲಿ" ಎಂದು ಸಾರಿಗೆ ನೌಕರರು ಪಟ್ಟು ಹಿಡಿದಿದ್ದಾರೆ.

- Advertisement -
- Advertisement -

ಕಳೆದ ಮೂರು ದಿನಗಳಿಂದ ಸಾರಿಗೆ ನೌಕರರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದು, ಈ ಸಂಬಂಧ ನೌಕರರ ಬೇಡಿಕೆಗಳನ್ನು ಈಡೇರಿಸುವುದಾಗಿ ಇಂದು ನಡೆದ ಸಭೆಯಲ್ಲಿ ಸರ್ಕಾರ ಭರವಸೆ ನೀಡಿತ್ತು. ಆದರೆ ನಮ್ಮನ್ನು ಸರ್ಕಾರಿ ನೌಕರರೆಂದು ಪರಿಗಣಿಸುವವರೆಗೂ ಬಸ್ ತೆಗೆಯುವುದಿಲ್ಲ ಎಂದು ನೌಕರರ ಸಂಘದ ರಾಜ್ಯಾಧ್ಯಕ್ಷ ಚಂದ್ರು ಹೇಳಿದ್ದಾರೆ.

ಸಾರಿಗೆ ನೌಕರರ ಬೇಡಿಕೆಗಳ ಕುರಿತು ಇಂದು ಸರ್ಕಾರ ಪ್ರತಿಭಟನಾಕಾರರೊಟ್ಟಿಗೆ ಮಾತುಕತೆ ನಡೆಸಿದ್ದು, ವೇತನ ಪರಿಷ್ಕರಣೆ, ಕಿರುಕುಳ ತಡೆ, ಭತ್ಯೆ ಪುನರಾರಂಭ, ಆರೋಗ್ಯ ವಿಮೆ ಸೇರಿದಂತೆ ಸಾರಿಗೆ ನೌಕರರ ಹಲವು ಬೇಡಿಕೆಗಳನ್ನು ಈಡೇರಿಸುವುದಾಗಿ ರಾಜ್ಯ ಸರ್ಕಾರ ಒಪ್ಪಿಕೊಂಡಿತ್ತು. ಆದರೆ ಅವರನ್ನು ಸರ್ಕಾರಿ ನೌಕರರು ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಹೇಳಿತ್ತು.

ಇದನ್ನೂ ಓದಿ: ನಿರುದ್ಯೋಗಿಗಳ ಬೆನ್ನಿಗೆ ನಿಂತ ನಟ ಸೋನು ಸೂದ್: ಇ-ಆಟೋ ಹಂಚಲು ನಿರ್ಧಾರ

ಸಂಧಾನ ಸಭೆ ಅಂತ್ಯಗೊಂಡ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಸಾರಿಗೆ ನೌಕರರ ಕೂಟದ ಅಧ್ಯಕ್ಷ ಚಂದ್ರಶೇಖರ್, “ನಮ್ಮ ಬಹುತೇಕ ಬೇಡಿಕೆಗಳನ್ನು ಸರ್ಕಾರ ಒಪ್ಪಿಕೊಂಡಿದೆ. ಸೌಹಾರ್ದಯುತ ತೀರ್ಮಾನ ಆಗಿದೆ. ಮುಂದಿನ ನಿರ್ಧಾರವನ್ನು ಸ್ವಾತಂತ್ರ್ಯ ಉದ್ಯಾನದ ಪ್ರತಿಭಟನಾ ಸ್ಥಳದಲ್ಲಿ ಪ್ರಕಟಿಸಲಾಗುವುದು” ಎಂದಿದ್ದರು.

ಈಗ ತಮ್ಮ ನಿರ್ಧಾರವನ್ನು ಪ್ರಕಟಿಸಿರುವ ಪ್ರತಿಭಟನಾ ನಿರತ ಸಾರಿಗೆ ನೌಕರರು, ಪ್ರತಿಭಟನೆಯನ್ನು ಮುಂದುವರೆಸಲು ನಿರ್ಧರಿಸಿದ್ದಾರೆ.

ಇದನ್ನೂ ಓದಿ: ‘ಪ್ರಧಾನ ಮಂತ್ರಿ ಆಗಬೇಕು ಎನ್ನುವ ಆಸೆ ನನಗಿಲ್ಲ…’ – ಸಿದ್ದರಾಮಯ್ಯ

“ತಮ್ಮನ್ನು ಸರ್ಕಾರಿ ನೌಕರರು ಎಂದು ಘೋಷಿಸುವವರೆಗೂ ಬಸ್ ತೆಗೆಯುವುದಿಲ್ಲ. ಸರ್ಕಾರ ನೀಡಿರುವ ಭರವಸೆಗಳ ಬಗ್ಗೆ ಲಿಖಿತ ಒಪ್ಪಿಗೆ ನೀಡಿ, ಅಧಿಕೃತವಾಗಿ ಘೋಷಿಸಲಿ” ಎಂದು ಸಾರಿಗೆ ನೌಕರರು ಪಟ್ಟು ಹಿಡಿದಿದ್ದಾರೆ.

ಪ್ರತಿಭಟನಾ ಸ್ಥಳದಲ್ಲಿ ಮಾತನಾಡಿದ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್, “ನಾವು ಕೊಟ್ಟಿರುವ ಸಾವಿರಾರು ಮನವಿಗಳು ಇಂದು ಕಸದಬುಟ್ಟಿಯಲ್ಲಿವೆ. ಸರ್ಕಾರ ಪೊಳ್ಳು ಭರವಸೆಗಳನ್ನು ನೀಡುವುದನ್ನು ಬಿಡಬೇಕು. ಸರ್ಕಾರದ ಭರವಸೆಗಳು ಘೋಷಣೆಯಾಗಲಿ. ಇಲ್ಲದಿದ್ದರೆ ನಾಳೆಯೂ ಪ್ರತಿಭಟನೆ ಮುಂದುವರಿಯುತ್ತದೆ” ಎಂದು ಹೇಳಿದರು.


ಇದನ್ನೂ ಓದಿ: ಶೂದ್ರರಿಗೆ ಜ್ಞಾನವಿಲ್ಲ, ಹಾಗಾಗಿಯೇ ತಾವು ಶೂದ್ರರು ಎಂದು ಒಪ್ಪಿಕೊಳ್ಳುವುದಿಲ್ಲ: ಪ್ರಗ್ಯಾ ಠಾಕೂರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...