Homeಮುಖಪುಟತನ್ನ ವ್ಯವಹಾರದ ರಕ್ಷಣೆಗೆ ಭಜರಂಗದಳದ ಪರ ನಿಂತ ಫೇಸ್‌ಬುಕ್‌: ವಾಲ್‌ಸ್ಟ್ರೀಟ್ ಜರ್ನಲ್ ವರದಿ

ತನ್ನ ವ್ಯವಹಾರದ ರಕ್ಷಣೆಗೆ ಭಜರಂಗದಳದ ಪರ ನಿಂತ ಫೇಸ್‌ಬುಕ್‌: ವಾಲ್‌ಸ್ಟ್ರೀಟ್ ಜರ್ನಲ್ ವರದಿ

ನವದೆಹಲಿಯ ಹೊರವಲಯದಲ್ಲಿ ಚರ್ಚ್ ಒಂದರ ಮೇಲೆ ಬಜರಂಗದಳ ದಾಳಿ ನಡೆಸಿದ ವಿಡಿಯೋವನ್ನು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿತ್ತು. ಎರಡೂವರೆ ಲಕ್ಷ ವೀಕ್ಷಣೆಯಾಗುವವರೆಗೂ ಫೇಸ್‌ಬುಕ್‌ ಅದನ್ನು ತೆಗೆದಿರಲಿಲ್ಲ!

- Advertisement -
- Advertisement -

ಬಜರಂಗದಳವು ಭಾರತದಾದ್ಯಂತ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರವನ್ನು ಬೆಂಬಲಿಸುವ ಅಪಾಯಕಾರಿ ಸಂಘಟನೆಯೆಂದು ಫೇಸ್‌ಬುಕ್‌ನ ಭದ್ರತಾ ತಂಡವು ಗುರುತಿಸಿದ್ದರೂ, ರಾಜಕೀಯ ಮತ್ತು ವ್ಯವಹಾರದ ರಕ್ಷಣೆಯ ಕಾರಣಕ್ಕಾಗಿ ಸಾಮಾಜಿಕ ಜಾಲತಾಣದಲ್ಲಿ ಅದಕ್ಕೆ ಮುಂದುವರೆಯಲು ಅವಕಾಶ ನೀಡಲಾಗಿದೆ ಎಂದು ವಾಲ್ ಸ್ಟ್ರೀಟ್ ಜರ್ನಲ್ ವರದಿ ಮಾಡಿದೆ.

ಬಜರಂಗದಳವು ಆಡಳಿತಾರೂಢ ಬಿಜೆಪಿಯೊಂದಿಗೆ ಸಂಬಂಧ ಹೊಂದಿರುವ ಬಗ್ಗೆ ಫೇಸ್‌ಬುಕ್ ಅರಿತುಕೊಂಡು, “ಬಜರಂಗದಳದ ವಿರುದ್ದ ಕ್ರಮ ಕೈಗೊಂಡರೆ ಕಂಪನಿ ವ್ಯವಹಾರದ ಭವಿಷ್ಯ ಮತ್ತು ಭಾರತದಲ್ಲಿನ ತನ್ನ ಸಿಬ್ಬಂದಿಗೆ ಅಪಾಯವಾಗಬಹುದು” ಎಂದು ಫೇಸ್‌ಬುಕ್ ಹೆದರಿತ್ತು‌‌ ಎಂದು ಪತ್ರಿಕೆ ಉಲ್ಲೇಖಿಸಿದೆ.

ಇದನ್ನೂ ಓದಿ: ಅಂಬೇಡ್ಕರ್‌‌ ಮೊಮ್ಮಗ ’ರಾಜರತ್ನ’ ಪೇಜನ್ನು ಡಿಲೀಟ್ ಮಾಡಲು ಪ್ರಯತ್ನಿಸಿದ ಫೇಸ್‌ಬುಕ್‌! 

ವಾಲ್ ಸ್ಟ್ರೀಟ್ ಜರ್ನಲ್‌‌ನ ಹೊಸ ವರದಿಯು, ಜೂನ್‌ ತಿಂಗಳಲ್ಲಿ ನವದೆಹಲಿಯ ಹೊರ ವಲಯದಲ್ಲಿರುವ ಚರ್ಚ್‌ ಮೇಲೆ ನಡೆದ ದಾಳಿಯ ವಿಡಿಯೋವನ್ನು ಉಲ್ಲೇಖಿಸಿದೆ. ಈ ದಾಳಿಯ ಹೊಣೆಯನ್ನು ಬಜರಂಗದಳ ವಹಿಸಿಕೊಂಡಿತ್ತು. ಆದರೆ ಆ ವಿಡಿಯೋ 2.5 ಲಕ್ಷ ವೀಕ್ಷಣೆ ಆಗುವವರೆಗೂ ಅನುಮತಿ ನೀಡಿತ್ತು. ಈ ವಿಡಿಯೋವನ್ನು ತೆಗೆದು ಹಾಕಬೇಕು ಎಂದು ಫೇಸ್‌‌ಬುಕ್ ಭದ್ರತಾ ತಂಡ ಹೇಳಿದ್ದರೂ, “ನಿಷೇಧಿಸುವುದರಿಂದ ಫೇಸ್‌ಬುಕ್ ಸಿಬ್ಬಂದಿ ಅಥವಾ ಸೌಲಭ್ಯಗಳ ವಿರುದ್ಧ ದೈಹಿಕ ದಾಳಿ ನಡೆಯಬಹುದು” ಎಂದು ಆಂತರಿಕ ಫೇಸ್‌ಬುಕ್ ಸಿಬ್ಬಂದಿಯೊಬ್ಬರು ತಿಳಿಸಿದ್ದರು ಎಂದು ಜರ್ನಲ್ ವರದಿ ಮಾಡಿದೆ.

ಜರ್ನಲ್ ವರದಿಗೆ ಫೇಸ್‌ಬುಕ್ ವಕ್ತಾರ ಆಂಡಿ ಸ್ಟೋನ್ ಪ್ರತಿಕ್ರಿಯಿಸಿದ್ದು, “ರಾಜಕೀಯ ಸ್ಥಾನಮಾನ ಅಥವಾ ಪಕ್ಷದ ಸಂಬಂಧವನ್ನು ಪರಿಗಣಿಸದೆ ನಾವು ಜಾಗತಿಕವಾಗಿ ಅಪಾಯಕಾರಿ ವ್ಯಕ್ತಿಗಳು ಮತ್ತು ಸಂಸ್ಥೆಗಳ ವಿರುದ್ದ ನೀತಿಯನ್ನು ಜಾರಿಗೊಳಿಸುತ್ತೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಫೇಸ್‌ಬುಕ್ ದ್ವೇಷದಿಂದ ಲಾಭ ಗಳಿಸುತ್ತಿದೆ: ಮಾಜಿ ಫೇಸ್‌ಬುಕ್ ಉದ್ಯೋಗಿ ಮಾರ್ಕ್ ಲಕ್ಕಿ

ಕಳೆದ ಆಗಸ್ಟ್‌‌ನಲ್ಲಿ ತನ್ನ ನೀತಿಗಳಲ್ಲಿ ಫೇಸ್‌ಬುಕ್ ಪಕ್ಷಪಾತ ಮಾಡುತ್ತಿದೆ ಎಂದು ವಾಲ್‌ಸ್ಟ್ರೀಟ್ ಜರ್ನಲ್ ವರದಿ ಮಾಡಿತ್ತು. ವರದಿಯಲ್ಲಿ, “ಆಡಳಿತರೂಡ ಬಿಜೆಪಿಯ ಬಗ್ಗೆ ತನ್ನ ವ್ಯಾಪಾರ ಹಿತಾಸಕ್ತಿಗಳಿಗಾಗಿ ಒಲವು ತೋರಿಸಿದೆ ಹಾಗೂ ಫೇಸ್‌ಬುಕ್‌ನ ಕಾರ್ಯನಿರ್ವಾಹಕಿಯಾಗಿದ್ದ ಆಂಖೀ ದಾಸ್ ಮುಸ್ಲಿಂ ವಿರೋಧಿ ಟೀಕೆಗಳನ್ನು ಮಾಡಿದ್ದ ಬಿಜೆಪಿ ನಾಯಕನ ಪರವಾಗಿ ಲಾಬಿ ಮಾಡಿದ್ದಾರೆ” ಎಂದು ಹೇಳಲಾಗಿತ್ತು.

ಈ ವರದಿ ಪ್ರಕಟವಾದ ಕೆಲವೇ ದಿನಗಳಲ್ಲಿ ರಾಜಕಾರಣಿಯೊಬ್ಬರ ಖಾತೆಯನ್ನು ಅಮಾನತ್ತು ಮಾಡಿದ್ದ ಫೇಸ್‌ಬುಕ್, ತನ್ನ ಮೇಲಿನ ಆರೋಪಗಳನ್ನು ನಿರಾಕರಿಸಿತ್ತಾದರೂ ದ್ವೇಷ ಭಾಷಣಗಳನ್ನು ನಿಗ್ರಹಿಸಲು ಇನ್ನೂ ಉತ್ತಮವಾಗಿ ಕ್ರಮಕೈಗೊಳ್ಳಬೇಕಾಗಿದೆ ಎಂದು ಒಪ್ಪಿಕೊಂಡಿತ್ತು. ಅಲ್ಲದೆ ಅದರ ಕಾರ್ಯನಿರ್ವಾಹಕಿಯಾಗಿದ್ದ ಆಂಖೀ ದಾಸ್ ಕೂಡಾ ಫೇಸ್‌ಬುಕ್ ತೊರೆದಿದ್ದರು.

ಭಾರತದಲ್ಲಿ ಐದು ಕಚೇರಿಗಳನ್ನು ನಡೆಸುತ್ತಿರುವ ಫೇಸ್‌ಬುಕ್, ಅಕ್ಟೋಬರ್ ತಿಂಗಳೊಂದರಲ್ಲೇ ಶತಕೋಟಿ ಡಾಲರ್‌ಗಳಷ್ಟು ದುಡ್ಡನ್ನು ಹೂಡಿಕೆ ಮಾಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಫೇಸ್‌ಬುಕ್ ಭಾರತವನ್ನು ಬಳಕೆದಾರರ ವಿಷಯದಲ್ಲಿ ತನ್ನ ಅತಿದೊಡ್ಡ ಮಾರುಕಟ್ಟೆಯೆಂದು ಪರಿಗಣಿಸಿದೆ.

ಇದನ್ನೂ ಓದಿ: ಬಿಜೆಪಿ-ಫೇಸ್‌ಬುಕ್ ಸಖ್ಯ: ಹುದ್ದೆ ತ್ಯಜಿಸಿದ ಫೇಸ್‌ಬುಕ್ ಇಂಡಿಯಾದ ಮುಖ್ಯಸ್ಥೆ ಅಂಖಿದಾಸ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...