Homeಚಳವಳಿರೈತರ ಪ್ರತಿಭಟನೆಗೆ ಹೋಗುವವರಿಗೆ 100 ಲೀ.ಪೆಟ್ರೋಲ್ ಉಚಿತ- ಹರಿಯಾಣ ಶಾಸಕ

ರೈತರ ಪ್ರತಿಭಟನೆಗೆ ಹೋಗುವವರಿಗೆ 100 ಲೀ.ಪೆಟ್ರೋಲ್ ಉಚಿತ- ಹರಿಯಾಣ ಶಾಸಕ

ರೈತ ಹೋರಾಟಕ್ಕೆ ಎಲ್ಲರೂ ಬೆಂಬಲ ನೀಡಬೇಕು. ಇಲ್ಲದಿದ್ದರೇ ಪ್ರಧಾನಿ ಮೋದಿ ದೇಶವನ್ನು ಕಾರ್ಪೊರೇಟ್‌ಗಳಿಗೆ ಮಾರಿಬಿಡುತ್ತಾರೆ. ಈಗಾಗಲೇ ಎಲ್ಲಾ ವಲಯವನ್ನು ಮಾರಿಬಿಟ್ಟಿದ್ದಾರೆ. ಈಗ ರೈತರನ್ನು ಮಾರಲು ಹೊರಟಿದ್ದರು. ಆದರೆ ರೈತರು ತಿರುಗಿಬಿದ್ದರು.

- Advertisement -
- Advertisement -

ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ದೇಶಾದ್ಯಂತ ಬೆಂಬಲ ವ್ಯಕ್ತವಾಗಿದೆ. ಪಂಜಾಬ್, ಹರಿಯಾಣ ರೈತರ ಸಂಖ್ಯೆ ಹೆಚ್ಚಿರುವ ಕಾರಣ ಆಯಾ ರಾಜ್ಯಗಳ ಜನರು ಇನ್ನು ಹೆಚ್ಚಿನ ಬೆಂಬಲ ನೀಡುತ್ತಿದ್ದಾರೆ. ಈಗ ಪೆಟ್ರೋಲ್, ಡಿಸೇಲ್ ಬೆಲೆ ಗಗನಕ್ಕೆ ಏರಿರುವ ಹೊತ್ತಲ್ಲಿ, ಪ್ರತಿಭಟನೆಗೆ ಸಾಥ್ ನೀಡಲು ತೆರಳುವವರಿಗೆ 100 ಲೀಟರ್‌ ಪೆಟ್ರೋಲ್ ಉಚಿತವಾಗಿ ನೀಡಲು ಹರಿಯಾಣ ಪೆಟ್ರೋಲ್ ಪಂಪ್ ಅಸೋಷಿಯೇಷನ್ ನಿರ್ಧರಿಸಿ ರೈತರನ್ನು ಬೆಂಬಲಿಸಿದೆ.

ದೆಹಲಿಯ ಸಿಂಘು ಗಡಿಯಲ್ಲಿರುವ ಜಿಟಿ ರಸ್ತೆಯಲ್ಲಿ ಸುಮಾರು 15 ರಿಂದ 20 ಪೆಟ್ರೋಲ್ ಬಂಕ್‌ಗಳಿದ್ದು, ಇವು ರೈತರ ಪ್ರತಿಭಟನೆಗೆ ಭಾರಿ ಬೆಂಬಲ ವ್ಯಕ್ತಪಡಿಸಿವೆ. ರೈತರ ಪ್ರತಿಭಟನೆ ಮತ್ತು ಹರಿಯಾಣ ಪೆಟ್ರೋಲ್ ಪಂಪ್ ಅಸೋಷಿಯೇಷನ್ ನಿರ್ಧಾರದ ಕುರಿತು ಮಾತಾಡಿರುವ ಅಸೋಷಿಯೇಷನ್ ಮುಖ್ಯಸ್ಥ ಶಂಶಿರ್‌ ಸಿಂಗ್ ಗೋಗಿ ಇದು ರೈತರ ಪ್ರತಿಭಟನೆ ಅಲ್ಲ, ದೇಶದ ಜನರ ಪ್ರತಿಭಟನೆ ಎಂದಿದ್ದಾರೆ.

“ಹರಿಯಾಣ ಪೆಟ್ರೋಲಿಯಂ ಪಂಪ್ ಅಸೋಷಿಯೇಷನ್ ರೈತರ ಪ್ರತಿಭಟನೆಗೆ ಸಂಪೂರ್ಣ ಬೆಂಬಲ ನೀಡಲಿದೆ. , ಜಿಟಿ ರಸ್ತೆಯಲ್ಲಿ ಇರುವ ಎಲ್ಲಾ 20ಕ್ಕೂ ಹೆಚ್ಚು ಬಂಕ್‌ಗಳು ರೈತರ ಪ್ರತಿಭಟನೆಗೆ ಬೆಂಬಲ ನೀಡಿವೆ. ನಮಗೆ ಎಷ್ಟು ಸಾಧ್ಯವೋ ಅಷ್ಟು ಪ್ರತಿಭಟನಾನಿರತ ರೈತರಿಗೆ ಸಹಾಯ ಮಾಡುತ್ತವೆ. ಬಂಕ್‌ಗಳಲ್ಲಿ ಇರುವ ವಿದ್ಯುತ್, ನೀರು, ಸ್ಥಳ, ನಿದ್ರಿಸಲು ಜಾಗ ಎಲ್ಲ ಮೂಲಭೂತ ಸೌಕರ್ಯಗಳ ಬಳಕೆ ರೈತರಿಗಾಗಿ ಇದೆ. ಜೊತೆಗೆ, ರೈತರಿಗೆ ಬೆಂಬಲ ನೀಡಲು ಪ್ರತಿಭಟನಾ ಸ್ಥಳಕ್ಕೆ ಹೋಗುವವರಿಗೆ ಉಳಿಯಲು ಸ್ಥಳ ನೀಡಲಾಗಿದೆ. ಅವರಿಗೆ ಬೇಕಾದ ಎಲ್ಲಾ ಸೌಲಭ್ಯವನ್ನು ವ್ಯವಸ್ಥೆ ಮಾಡಲಾಗಿದೆ” ಎಂದರು.

ಇದನ್ನೂ ಓದಿ: ಕೊರೊನಾ ಲಸಿಕೆ ಉಚಿತವೆಂದ ಕೇರಳ ಸಿಎಂ: ಚುನಾವಣಾ ಆಯೋಗದ ಮೆಟ್ಟಿಲೇರಿದ ವಿಪಕ್ಷಗಳು!

’ರೈತರ ಪ್ರತಿಭಟನೆಯಲ್ಲಿ ಭಾಗವಹಿಸಲು ಹೋಗುವವರಿಗೆ ಇಲ್ಲಿನ ಪೆಟ್ರೋಲ್ ಬಂಕ್‌ಗಳಲ್ಲಿ 100 ಲೀಟರ್‌ ತೈಲ ಉಚಿತವಾಗಿ ನೀಡಲಾಗುತ್ತದೆ. ಅದು ಪೆಟ್ರೋಲ್, ಡಿಸೇಲ್ ಯಾವುದಾದರೂ ಆಗಿರಲಿ, ರೈತರಿಗೆ ಬೆಂಬಲ ನಿಡಲು ಹೊರಟವರಿಗೆ ಉಚಿತವಾಗಿ ಹಾಕಲಾಗುತ್ತದೆ. ಇಲ್ಲಿಯವರೆಗೆ ಎಷ್ಟು ಜನ ಪೆಟ್ರೋಲ್ ಹಾಕಿಸಿದ್ದಾರೆ ಎಂಬ ಫೀಡ್‌ಬ್ಯಾಕ್ ನಾವಿನ್ನು ತೆಗೆದುಕೊಂಡಿಲ್ಲ. ಪೆಟ್ರೋಲ್ ಬಂಕ್‌ಗಳು ಈ ರೀತಿ ರೈತರಿಗೆ ಬೆಂಬಲ ನೀಡಲು ನಿರ್ಧಾರ ಮಾಡಿವೆ’ ಎಂದರು.

ಮುಂದುವರೆದು, “ಈ ರೈತರ ಪ್ರತಿಭಟನೆ ದೇಶದ ಜನರ ಧ್ವನಿಯಾಗಿದೆ. ಈ ರೈತರ ಪ್ರತಿಭಟನೆ ಸೋತರೇ, ಅದು ದೇಶದ ಸೋಲು. ಏಕೆಂದರೆ, ಇದು ಅಂಬಾನಿ ಮತ್ತು ರೈತರ ನಡುವಿನ ಹೋರಾಟವಲ್ಲ, ಅಧಿಕಾರಶಾಹಿ ಮತ್ತು ಪ್ರಜಾಪ್ರಭುತ್ವದ ನಡುವಿನ ಹೋರಾಟ” ಎಂದು ಕಾಂಗ್ರೆಸ್ ಶಾಸಕರು ಆಗಿರುವ ಶಂಶಿರ್‌ ಸಿಂಗ್ ಗೋಗಿ ಹೇಳಿದ್ದಾರೆ.

“ರೈತ ಹೋರಾಟಕ್ಕೆ ಎಲ್ಲರೂ ಬೆಂಬಲ ನೀಡಬೇಕು. ಇಲ್ಲದಿದ್ದರೇ ಪ್ರಧಾನಿ ಮೋದಿ ದೇಶವನ್ನು ಕಾರ್ಪೊರೇಟ್‌ಗಳಿಗೆ ಮಾರಿಬಿಡುತ್ತಾರೆ. ಈಗಾಗಲೇ ಎಲ್ಲಾ ವಲಯವನ್ನು ಮಾರಿಬಿಟ್ಟಿದ್ದಾರೆ. ಈಗ ರೈತರನ್ನು ಮಾರಲು ಹೊರಟಿದ್ದರು. ಆದರೆ ರೈತರು ತಿರುಗಿಬಿದ್ದರು. ಏಕೆಂದರೆ, ರೈತರನ್ನು ಮಾರಾಟ ಮಾಡುವುದು ಅಷ್ಟು ಸುಲಭದ ಮಾತಲ್ಲ ಎಂಬ ಸುಳಿವು ಮೋದಿಯವರಿಗೆ ಇರಲಿಲ್ಲ. ಬ್ರಿಟೀಷರೇ ರೈತರನ್ನು ಮಾರಾಟ ಮಾಡಲು ಆಗಲಿಲ್ಲ” ಎಂದಿದ್ದಾರೆ.

ಇದನ್ನೂ ಓದಿ: ಬರಲಿದೆ ‘ಭೀಮಾ ಕೋರೆಗಾಂವ್’ ಚಿತ್ರ: ಸಾಮಾಜಿಕ ಮಾಧ್ಯಮಗಳಲ್ಲಿ ಫಸ್ಟ್‌ಲುಕ್ ವೈರಲ್!

’ದೇಶದಲ್ಲಿ ಈ ಬಿಜೆಪಿ, ಆರ್‌ಎಸ್‌ಎಸ್ ಜನರಲ್ಲಿ ಜಾತಿ ಧರ್ಮದ ಬಗೆಗೆ ದ್ವೇಷ ಹುಟ್ಟಿಹಾಕಿ ಸಮಾಜವನ್ನು ಹೊಡೆಯುವ ಕೆಲಸ ಮಾಡುತ್ತಿವೆ. ಇದರ ಬಗ್ಗೆ ಗೋಧಿ ಮೀಡಿಯಾ ಏನೂ ಮತಾಡುವುದಿಲ್ಲ. ಅದು ಮೋದಿಯವರ ಗುಲಾಮಿ ಮೀಡಿಯಾ ಆಗಿದೆ. ಅದು ಎಲ್ಲರನ್ನು ಗುಲಾಮರನ್ನಾಗಿಸಲು ಹೊರಟಿದೆ. ಆದರೆ ರೈತರು ಗುಲಾಮಗಿರಿಯನ್ನು ಮುರಿಯುವ ಸಲುವಾಗಿ ಹೋರಾಟಕ್ಕೆ ನಿಂತಿದ್ದಾರೆ” ಎಂದು ಮಾಧ್ಯಮಗಳ ಏಕಪಕ್ಷೀಯತೆಯನ್ನು ಟೀಕಿಸಿದ್ದಾರೆ.

’ಇದು ಜನಸಾಮಾನ್ಯರಿಗಾಗಿ ನಡೆಯುತ್ತಿರುವ ಪ್ರತಿಭಟನೆಯಾಗಿದೆ. ಜನಸಾಮಾನ್ಯರು ಬೆಳೆ ಬೆಳೆಯುವುದಿಲ್ಲ. ಆದರೆ ಅದಾನಿ ಅಂಬಾನಿ ಅವರಿಂದ 20 ರೂಪಾಯಿಗೆ ದೊರೆಯುವ ಪದಾರ್ಥವನ್ನು 200 ರೂಪಾಯಿಗೆ ತೆಗೆದುಕೊಳ್ಳಬೇಕಾಗುತ್ತದೆ. ಇದನ್ನು ಜನಸಾಮಾನ್ಯರು ಮರೆಯಬಾರದು. ಇಂದು ಗಡಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಜನರ ಪ್ರತಿಭಟನೆಯಾಗಿದೆ. ಇದು ದೇಶದ ಪ್ರತಿಭಟನೆಯಾನ್ನಾಗಿಸಬೇಕು” ಎಂದು ಜನರನ್ನು ಪ್ರತಿಭಟನೆಗೆ ಒತ್ತಾಯಿಸಿದ್ದಾರೆ.

ಜೊತೆಗೆ, ’ಜನರು ದೇಶವನ್ನು ಪ್ರಜಾಪ್ರಭುತ್ವ, ಸಂವಿಧಾನಿಕವಾಗಿಯೇ ಇರಿಸಿಕೊಳ್ಳಬೇಕೋ ಅಥವಾ ಅಧಿಕಾರಶಾಯಿ ಆರ್‌ಎಸ್‌ಎಸ್‌, ಬಿಜೆಪಿಗೆ ಒಪ್ಪಿಸಬೇಕೋ ಎಂಬುದನ್ನು ಯೋಚಿಸಬೇಕು’ ಎಂದು ಕಾಂಗ್ರೆಸ್ ಶಾಸಕ ಮತ್ತು ಹರಿಯಾಣ ಪೆಟ್ರೋಲ್ ಪಂಪ್ ಅಸೋಷಿಯೇಷನ್ ಮುಖ್ಯಸ್ಥ ಶಂಶಿರ್‌ ಸಿಂಗ್ ಗೋಗಿ ಹೇಳಿದ್ದಾರೆ.


ಇದನ್ನೂ ಓದಿ: ಪ್ರಧಾನಿ ನೀಡುತ್ತಿರುವ ಐತಿಹಾಸಿಕ ಉಡುಗೊರೆ ರೈತರಿಗೆ ಬೇಡ: ಯೋಗೇಂದ್ರ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...