Homeಚಳವಳಿರೈತರ ಪ್ರತಿಭಟನೆಗೆ ಹೋಗುವವರಿಗೆ 100 ಲೀ.ಪೆಟ್ರೋಲ್ ಉಚಿತ- ಹರಿಯಾಣ ಶಾಸಕ

ರೈತರ ಪ್ರತಿಭಟನೆಗೆ ಹೋಗುವವರಿಗೆ 100 ಲೀ.ಪೆಟ್ರೋಲ್ ಉಚಿತ- ಹರಿಯಾಣ ಶಾಸಕ

ರೈತ ಹೋರಾಟಕ್ಕೆ ಎಲ್ಲರೂ ಬೆಂಬಲ ನೀಡಬೇಕು. ಇಲ್ಲದಿದ್ದರೇ ಪ್ರಧಾನಿ ಮೋದಿ ದೇಶವನ್ನು ಕಾರ್ಪೊರೇಟ್‌ಗಳಿಗೆ ಮಾರಿಬಿಡುತ್ತಾರೆ. ಈಗಾಗಲೇ ಎಲ್ಲಾ ವಲಯವನ್ನು ಮಾರಿಬಿಟ್ಟಿದ್ದಾರೆ. ಈಗ ರೈತರನ್ನು ಮಾರಲು ಹೊರಟಿದ್ದರು. ಆದರೆ ರೈತರು ತಿರುಗಿಬಿದ್ದರು.

- Advertisement -
- Advertisement -

ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ದೇಶಾದ್ಯಂತ ಬೆಂಬಲ ವ್ಯಕ್ತವಾಗಿದೆ. ಪಂಜಾಬ್, ಹರಿಯಾಣ ರೈತರ ಸಂಖ್ಯೆ ಹೆಚ್ಚಿರುವ ಕಾರಣ ಆಯಾ ರಾಜ್ಯಗಳ ಜನರು ಇನ್ನು ಹೆಚ್ಚಿನ ಬೆಂಬಲ ನೀಡುತ್ತಿದ್ದಾರೆ. ಈಗ ಪೆಟ್ರೋಲ್, ಡಿಸೇಲ್ ಬೆಲೆ ಗಗನಕ್ಕೆ ಏರಿರುವ ಹೊತ್ತಲ್ಲಿ, ಪ್ರತಿಭಟನೆಗೆ ಸಾಥ್ ನೀಡಲು ತೆರಳುವವರಿಗೆ 100 ಲೀಟರ್‌ ಪೆಟ್ರೋಲ್ ಉಚಿತವಾಗಿ ನೀಡಲು ಹರಿಯಾಣ ಪೆಟ್ರೋಲ್ ಪಂಪ್ ಅಸೋಷಿಯೇಷನ್ ನಿರ್ಧರಿಸಿ ರೈತರನ್ನು ಬೆಂಬಲಿಸಿದೆ.

ದೆಹಲಿಯ ಸಿಂಘು ಗಡಿಯಲ್ಲಿರುವ ಜಿಟಿ ರಸ್ತೆಯಲ್ಲಿ ಸುಮಾರು 15 ರಿಂದ 20 ಪೆಟ್ರೋಲ್ ಬಂಕ್‌ಗಳಿದ್ದು, ಇವು ರೈತರ ಪ್ರತಿಭಟನೆಗೆ ಭಾರಿ ಬೆಂಬಲ ವ್ಯಕ್ತಪಡಿಸಿವೆ. ರೈತರ ಪ್ರತಿಭಟನೆ ಮತ್ತು ಹರಿಯಾಣ ಪೆಟ್ರೋಲ್ ಪಂಪ್ ಅಸೋಷಿಯೇಷನ್ ನಿರ್ಧಾರದ ಕುರಿತು ಮಾತಾಡಿರುವ ಅಸೋಷಿಯೇಷನ್ ಮುಖ್ಯಸ್ಥ ಶಂಶಿರ್‌ ಸಿಂಗ್ ಗೋಗಿ ಇದು ರೈತರ ಪ್ರತಿಭಟನೆ ಅಲ್ಲ, ದೇಶದ ಜನರ ಪ್ರತಿಭಟನೆ ಎಂದಿದ್ದಾರೆ.

“ಹರಿಯಾಣ ಪೆಟ್ರೋಲಿಯಂ ಪಂಪ್ ಅಸೋಷಿಯೇಷನ್ ರೈತರ ಪ್ರತಿಭಟನೆಗೆ ಸಂಪೂರ್ಣ ಬೆಂಬಲ ನೀಡಲಿದೆ. , ಜಿಟಿ ರಸ್ತೆಯಲ್ಲಿ ಇರುವ ಎಲ್ಲಾ 20ಕ್ಕೂ ಹೆಚ್ಚು ಬಂಕ್‌ಗಳು ರೈತರ ಪ್ರತಿಭಟನೆಗೆ ಬೆಂಬಲ ನೀಡಿವೆ. ನಮಗೆ ಎಷ್ಟು ಸಾಧ್ಯವೋ ಅಷ್ಟು ಪ್ರತಿಭಟನಾನಿರತ ರೈತರಿಗೆ ಸಹಾಯ ಮಾಡುತ್ತವೆ. ಬಂಕ್‌ಗಳಲ್ಲಿ ಇರುವ ವಿದ್ಯುತ್, ನೀರು, ಸ್ಥಳ, ನಿದ್ರಿಸಲು ಜಾಗ ಎಲ್ಲ ಮೂಲಭೂತ ಸೌಕರ್ಯಗಳ ಬಳಕೆ ರೈತರಿಗಾಗಿ ಇದೆ. ಜೊತೆಗೆ, ರೈತರಿಗೆ ಬೆಂಬಲ ನೀಡಲು ಪ್ರತಿಭಟನಾ ಸ್ಥಳಕ್ಕೆ ಹೋಗುವವರಿಗೆ ಉಳಿಯಲು ಸ್ಥಳ ನೀಡಲಾಗಿದೆ. ಅವರಿಗೆ ಬೇಕಾದ ಎಲ್ಲಾ ಸೌಲಭ್ಯವನ್ನು ವ್ಯವಸ್ಥೆ ಮಾಡಲಾಗಿದೆ” ಎಂದರು.

ಇದನ್ನೂ ಓದಿ: ಕೊರೊನಾ ಲಸಿಕೆ ಉಚಿತವೆಂದ ಕೇರಳ ಸಿಎಂ: ಚುನಾವಣಾ ಆಯೋಗದ ಮೆಟ್ಟಿಲೇರಿದ ವಿಪಕ್ಷಗಳು!

’ರೈತರ ಪ್ರತಿಭಟನೆಯಲ್ಲಿ ಭಾಗವಹಿಸಲು ಹೋಗುವವರಿಗೆ ಇಲ್ಲಿನ ಪೆಟ್ರೋಲ್ ಬಂಕ್‌ಗಳಲ್ಲಿ 100 ಲೀಟರ್‌ ತೈಲ ಉಚಿತವಾಗಿ ನೀಡಲಾಗುತ್ತದೆ. ಅದು ಪೆಟ್ರೋಲ್, ಡಿಸೇಲ್ ಯಾವುದಾದರೂ ಆಗಿರಲಿ, ರೈತರಿಗೆ ಬೆಂಬಲ ನಿಡಲು ಹೊರಟವರಿಗೆ ಉಚಿತವಾಗಿ ಹಾಕಲಾಗುತ್ತದೆ. ಇಲ್ಲಿಯವರೆಗೆ ಎಷ್ಟು ಜನ ಪೆಟ್ರೋಲ್ ಹಾಕಿಸಿದ್ದಾರೆ ಎಂಬ ಫೀಡ್‌ಬ್ಯಾಕ್ ನಾವಿನ್ನು ತೆಗೆದುಕೊಂಡಿಲ್ಲ. ಪೆಟ್ರೋಲ್ ಬಂಕ್‌ಗಳು ಈ ರೀತಿ ರೈತರಿಗೆ ಬೆಂಬಲ ನೀಡಲು ನಿರ್ಧಾರ ಮಾಡಿವೆ’ ಎಂದರು.

ಮುಂದುವರೆದು, “ಈ ರೈತರ ಪ್ರತಿಭಟನೆ ದೇಶದ ಜನರ ಧ್ವನಿಯಾಗಿದೆ. ಈ ರೈತರ ಪ್ರತಿಭಟನೆ ಸೋತರೇ, ಅದು ದೇಶದ ಸೋಲು. ಏಕೆಂದರೆ, ಇದು ಅಂಬಾನಿ ಮತ್ತು ರೈತರ ನಡುವಿನ ಹೋರಾಟವಲ್ಲ, ಅಧಿಕಾರಶಾಹಿ ಮತ್ತು ಪ್ರಜಾಪ್ರಭುತ್ವದ ನಡುವಿನ ಹೋರಾಟ” ಎಂದು ಕಾಂಗ್ರೆಸ್ ಶಾಸಕರು ಆಗಿರುವ ಶಂಶಿರ್‌ ಸಿಂಗ್ ಗೋಗಿ ಹೇಳಿದ್ದಾರೆ.

“ರೈತ ಹೋರಾಟಕ್ಕೆ ಎಲ್ಲರೂ ಬೆಂಬಲ ನೀಡಬೇಕು. ಇಲ್ಲದಿದ್ದರೇ ಪ್ರಧಾನಿ ಮೋದಿ ದೇಶವನ್ನು ಕಾರ್ಪೊರೇಟ್‌ಗಳಿಗೆ ಮಾರಿಬಿಡುತ್ತಾರೆ. ಈಗಾಗಲೇ ಎಲ್ಲಾ ವಲಯವನ್ನು ಮಾರಿಬಿಟ್ಟಿದ್ದಾರೆ. ಈಗ ರೈತರನ್ನು ಮಾರಲು ಹೊರಟಿದ್ದರು. ಆದರೆ ರೈತರು ತಿರುಗಿಬಿದ್ದರು. ಏಕೆಂದರೆ, ರೈತರನ್ನು ಮಾರಾಟ ಮಾಡುವುದು ಅಷ್ಟು ಸುಲಭದ ಮಾತಲ್ಲ ಎಂಬ ಸುಳಿವು ಮೋದಿಯವರಿಗೆ ಇರಲಿಲ್ಲ. ಬ್ರಿಟೀಷರೇ ರೈತರನ್ನು ಮಾರಾಟ ಮಾಡಲು ಆಗಲಿಲ್ಲ” ಎಂದಿದ್ದಾರೆ.

ಇದನ್ನೂ ಓದಿ: ಬರಲಿದೆ ‘ಭೀಮಾ ಕೋರೆಗಾಂವ್’ ಚಿತ್ರ: ಸಾಮಾಜಿಕ ಮಾಧ್ಯಮಗಳಲ್ಲಿ ಫಸ್ಟ್‌ಲುಕ್ ವೈರಲ್!

’ದೇಶದಲ್ಲಿ ಈ ಬಿಜೆಪಿ, ಆರ್‌ಎಸ್‌ಎಸ್ ಜನರಲ್ಲಿ ಜಾತಿ ಧರ್ಮದ ಬಗೆಗೆ ದ್ವೇಷ ಹುಟ್ಟಿಹಾಕಿ ಸಮಾಜವನ್ನು ಹೊಡೆಯುವ ಕೆಲಸ ಮಾಡುತ್ತಿವೆ. ಇದರ ಬಗ್ಗೆ ಗೋಧಿ ಮೀಡಿಯಾ ಏನೂ ಮತಾಡುವುದಿಲ್ಲ. ಅದು ಮೋದಿಯವರ ಗುಲಾಮಿ ಮೀಡಿಯಾ ಆಗಿದೆ. ಅದು ಎಲ್ಲರನ್ನು ಗುಲಾಮರನ್ನಾಗಿಸಲು ಹೊರಟಿದೆ. ಆದರೆ ರೈತರು ಗುಲಾಮಗಿರಿಯನ್ನು ಮುರಿಯುವ ಸಲುವಾಗಿ ಹೋರಾಟಕ್ಕೆ ನಿಂತಿದ್ದಾರೆ” ಎಂದು ಮಾಧ್ಯಮಗಳ ಏಕಪಕ್ಷೀಯತೆಯನ್ನು ಟೀಕಿಸಿದ್ದಾರೆ.

’ಇದು ಜನಸಾಮಾನ್ಯರಿಗಾಗಿ ನಡೆಯುತ್ತಿರುವ ಪ್ರತಿಭಟನೆಯಾಗಿದೆ. ಜನಸಾಮಾನ್ಯರು ಬೆಳೆ ಬೆಳೆಯುವುದಿಲ್ಲ. ಆದರೆ ಅದಾನಿ ಅಂಬಾನಿ ಅವರಿಂದ 20 ರೂಪಾಯಿಗೆ ದೊರೆಯುವ ಪದಾರ್ಥವನ್ನು 200 ರೂಪಾಯಿಗೆ ತೆಗೆದುಕೊಳ್ಳಬೇಕಾಗುತ್ತದೆ. ಇದನ್ನು ಜನಸಾಮಾನ್ಯರು ಮರೆಯಬಾರದು. ಇಂದು ಗಡಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಜನರ ಪ್ರತಿಭಟನೆಯಾಗಿದೆ. ಇದು ದೇಶದ ಪ್ರತಿಭಟನೆಯಾನ್ನಾಗಿಸಬೇಕು” ಎಂದು ಜನರನ್ನು ಪ್ರತಿಭಟನೆಗೆ ಒತ್ತಾಯಿಸಿದ್ದಾರೆ.

ಜೊತೆಗೆ, ’ಜನರು ದೇಶವನ್ನು ಪ್ರಜಾಪ್ರಭುತ್ವ, ಸಂವಿಧಾನಿಕವಾಗಿಯೇ ಇರಿಸಿಕೊಳ್ಳಬೇಕೋ ಅಥವಾ ಅಧಿಕಾರಶಾಯಿ ಆರ್‌ಎಸ್‌ಎಸ್‌, ಬಿಜೆಪಿಗೆ ಒಪ್ಪಿಸಬೇಕೋ ಎಂಬುದನ್ನು ಯೋಚಿಸಬೇಕು’ ಎಂದು ಕಾಂಗ್ರೆಸ್ ಶಾಸಕ ಮತ್ತು ಹರಿಯಾಣ ಪೆಟ್ರೋಲ್ ಪಂಪ್ ಅಸೋಷಿಯೇಷನ್ ಮುಖ್ಯಸ್ಥ ಶಂಶಿರ್‌ ಸಿಂಗ್ ಗೋಗಿ ಹೇಳಿದ್ದಾರೆ.


ಇದನ್ನೂ ಓದಿ: ಪ್ರಧಾನಿ ನೀಡುತ್ತಿರುವ ಐತಿಹಾಸಿಕ ಉಡುಗೊರೆ ರೈತರಿಗೆ ಬೇಡ: ಯೋಗೇಂದ್ರ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...