Homeಚಳವಳಿರೈತರ ಪ್ರತಿಭಟನೆಗೆ ಹೋಗುವವರಿಗೆ 100 ಲೀ.ಪೆಟ್ರೋಲ್ ಉಚಿತ- ಹರಿಯಾಣ ಶಾಸಕ

ರೈತರ ಪ್ರತಿಭಟನೆಗೆ ಹೋಗುವವರಿಗೆ 100 ಲೀ.ಪೆಟ್ರೋಲ್ ಉಚಿತ- ಹರಿಯಾಣ ಶಾಸಕ

ರೈತ ಹೋರಾಟಕ್ಕೆ ಎಲ್ಲರೂ ಬೆಂಬಲ ನೀಡಬೇಕು. ಇಲ್ಲದಿದ್ದರೇ ಪ್ರಧಾನಿ ಮೋದಿ ದೇಶವನ್ನು ಕಾರ್ಪೊರೇಟ್‌ಗಳಿಗೆ ಮಾರಿಬಿಡುತ್ತಾರೆ. ಈಗಾಗಲೇ ಎಲ್ಲಾ ವಲಯವನ್ನು ಮಾರಿಬಿಟ್ಟಿದ್ದಾರೆ. ಈಗ ರೈತರನ್ನು ಮಾರಲು ಹೊರಟಿದ್ದರು. ಆದರೆ ರೈತರು ತಿರುಗಿಬಿದ್ದರು.

- Advertisement -
- Advertisement -

ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ದೇಶಾದ್ಯಂತ ಬೆಂಬಲ ವ್ಯಕ್ತವಾಗಿದೆ. ಪಂಜಾಬ್, ಹರಿಯಾಣ ರೈತರ ಸಂಖ್ಯೆ ಹೆಚ್ಚಿರುವ ಕಾರಣ ಆಯಾ ರಾಜ್ಯಗಳ ಜನರು ಇನ್ನು ಹೆಚ್ಚಿನ ಬೆಂಬಲ ನೀಡುತ್ತಿದ್ದಾರೆ. ಈಗ ಪೆಟ್ರೋಲ್, ಡಿಸೇಲ್ ಬೆಲೆ ಗಗನಕ್ಕೆ ಏರಿರುವ ಹೊತ್ತಲ್ಲಿ, ಪ್ರತಿಭಟನೆಗೆ ಸಾಥ್ ನೀಡಲು ತೆರಳುವವರಿಗೆ 100 ಲೀಟರ್‌ ಪೆಟ್ರೋಲ್ ಉಚಿತವಾಗಿ ನೀಡಲು ಹರಿಯಾಣ ಪೆಟ್ರೋಲ್ ಪಂಪ್ ಅಸೋಷಿಯೇಷನ್ ನಿರ್ಧರಿಸಿ ರೈತರನ್ನು ಬೆಂಬಲಿಸಿದೆ.

ದೆಹಲಿಯ ಸಿಂಘು ಗಡಿಯಲ್ಲಿರುವ ಜಿಟಿ ರಸ್ತೆಯಲ್ಲಿ ಸುಮಾರು 15 ರಿಂದ 20 ಪೆಟ್ರೋಲ್ ಬಂಕ್‌ಗಳಿದ್ದು, ಇವು ರೈತರ ಪ್ರತಿಭಟನೆಗೆ ಭಾರಿ ಬೆಂಬಲ ವ್ಯಕ್ತಪಡಿಸಿವೆ. ರೈತರ ಪ್ರತಿಭಟನೆ ಮತ್ತು ಹರಿಯಾಣ ಪೆಟ್ರೋಲ್ ಪಂಪ್ ಅಸೋಷಿಯೇಷನ್ ನಿರ್ಧಾರದ ಕುರಿತು ಮಾತಾಡಿರುವ ಅಸೋಷಿಯೇಷನ್ ಮುಖ್ಯಸ್ಥ ಶಂಶಿರ್‌ ಸಿಂಗ್ ಗೋಗಿ ಇದು ರೈತರ ಪ್ರತಿಭಟನೆ ಅಲ್ಲ, ದೇಶದ ಜನರ ಪ್ರತಿಭಟನೆ ಎಂದಿದ್ದಾರೆ.

“ಹರಿಯಾಣ ಪೆಟ್ರೋಲಿಯಂ ಪಂಪ್ ಅಸೋಷಿಯೇಷನ್ ರೈತರ ಪ್ರತಿಭಟನೆಗೆ ಸಂಪೂರ್ಣ ಬೆಂಬಲ ನೀಡಲಿದೆ. , ಜಿಟಿ ರಸ್ತೆಯಲ್ಲಿ ಇರುವ ಎಲ್ಲಾ 20ಕ್ಕೂ ಹೆಚ್ಚು ಬಂಕ್‌ಗಳು ರೈತರ ಪ್ರತಿಭಟನೆಗೆ ಬೆಂಬಲ ನೀಡಿವೆ. ನಮಗೆ ಎಷ್ಟು ಸಾಧ್ಯವೋ ಅಷ್ಟು ಪ್ರತಿಭಟನಾನಿರತ ರೈತರಿಗೆ ಸಹಾಯ ಮಾಡುತ್ತವೆ. ಬಂಕ್‌ಗಳಲ್ಲಿ ಇರುವ ವಿದ್ಯುತ್, ನೀರು, ಸ್ಥಳ, ನಿದ್ರಿಸಲು ಜಾಗ ಎಲ್ಲ ಮೂಲಭೂತ ಸೌಕರ್ಯಗಳ ಬಳಕೆ ರೈತರಿಗಾಗಿ ಇದೆ. ಜೊತೆಗೆ, ರೈತರಿಗೆ ಬೆಂಬಲ ನೀಡಲು ಪ್ರತಿಭಟನಾ ಸ್ಥಳಕ್ಕೆ ಹೋಗುವವರಿಗೆ ಉಳಿಯಲು ಸ್ಥಳ ನೀಡಲಾಗಿದೆ. ಅವರಿಗೆ ಬೇಕಾದ ಎಲ್ಲಾ ಸೌಲಭ್ಯವನ್ನು ವ್ಯವಸ್ಥೆ ಮಾಡಲಾಗಿದೆ” ಎಂದರು.

ಇದನ್ನೂ ಓದಿ: ಕೊರೊನಾ ಲಸಿಕೆ ಉಚಿತವೆಂದ ಕೇರಳ ಸಿಎಂ: ಚುನಾವಣಾ ಆಯೋಗದ ಮೆಟ್ಟಿಲೇರಿದ ವಿಪಕ್ಷಗಳು!

’ರೈತರ ಪ್ರತಿಭಟನೆಯಲ್ಲಿ ಭಾಗವಹಿಸಲು ಹೋಗುವವರಿಗೆ ಇಲ್ಲಿನ ಪೆಟ್ರೋಲ್ ಬಂಕ್‌ಗಳಲ್ಲಿ 100 ಲೀಟರ್‌ ತೈಲ ಉಚಿತವಾಗಿ ನೀಡಲಾಗುತ್ತದೆ. ಅದು ಪೆಟ್ರೋಲ್, ಡಿಸೇಲ್ ಯಾವುದಾದರೂ ಆಗಿರಲಿ, ರೈತರಿಗೆ ಬೆಂಬಲ ನಿಡಲು ಹೊರಟವರಿಗೆ ಉಚಿತವಾಗಿ ಹಾಕಲಾಗುತ್ತದೆ. ಇಲ್ಲಿಯವರೆಗೆ ಎಷ್ಟು ಜನ ಪೆಟ್ರೋಲ್ ಹಾಕಿಸಿದ್ದಾರೆ ಎಂಬ ಫೀಡ್‌ಬ್ಯಾಕ್ ನಾವಿನ್ನು ತೆಗೆದುಕೊಂಡಿಲ್ಲ. ಪೆಟ್ರೋಲ್ ಬಂಕ್‌ಗಳು ಈ ರೀತಿ ರೈತರಿಗೆ ಬೆಂಬಲ ನೀಡಲು ನಿರ್ಧಾರ ಮಾಡಿವೆ’ ಎಂದರು.

ಮುಂದುವರೆದು, “ಈ ರೈತರ ಪ್ರತಿಭಟನೆ ದೇಶದ ಜನರ ಧ್ವನಿಯಾಗಿದೆ. ಈ ರೈತರ ಪ್ರತಿಭಟನೆ ಸೋತರೇ, ಅದು ದೇಶದ ಸೋಲು. ಏಕೆಂದರೆ, ಇದು ಅಂಬಾನಿ ಮತ್ತು ರೈತರ ನಡುವಿನ ಹೋರಾಟವಲ್ಲ, ಅಧಿಕಾರಶಾಹಿ ಮತ್ತು ಪ್ರಜಾಪ್ರಭುತ್ವದ ನಡುವಿನ ಹೋರಾಟ” ಎಂದು ಕಾಂಗ್ರೆಸ್ ಶಾಸಕರು ಆಗಿರುವ ಶಂಶಿರ್‌ ಸಿಂಗ್ ಗೋಗಿ ಹೇಳಿದ್ದಾರೆ.

“ರೈತ ಹೋರಾಟಕ್ಕೆ ಎಲ್ಲರೂ ಬೆಂಬಲ ನೀಡಬೇಕು. ಇಲ್ಲದಿದ್ದರೇ ಪ್ರಧಾನಿ ಮೋದಿ ದೇಶವನ್ನು ಕಾರ್ಪೊರೇಟ್‌ಗಳಿಗೆ ಮಾರಿಬಿಡುತ್ತಾರೆ. ಈಗಾಗಲೇ ಎಲ್ಲಾ ವಲಯವನ್ನು ಮಾರಿಬಿಟ್ಟಿದ್ದಾರೆ. ಈಗ ರೈತರನ್ನು ಮಾರಲು ಹೊರಟಿದ್ದರು. ಆದರೆ ರೈತರು ತಿರುಗಿಬಿದ್ದರು. ಏಕೆಂದರೆ, ರೈತರನ್ನು ಮಾರಾಟ ಮಾಡುವುದು ಅಷ್ಟು ಸುಲಭದ ಮಾತಲ್ಲ ಎಂಬ ಸುಳಿವು ಮೋದಿಯವರಿಗೆ ಇರಲಿಲ್ಲ. ಬ್ರಿಟೀಷರೇ ರೈತರನ್ನು ಮಾರಾಟ ಮಾಡಲು ಆಗಲಿಲ್ಲ” ಎಂದಿದ್ದಾರೆ.

ಇದನ್ನೂ ಓದಿ: ಬರಲಿದೆ ‘ಭೀಮಾ ಕೋರೆಗಾಂವ್’ ಚಿತ್ರ: ಸಾಮಾಜಿಕ ಮಾಧ್ಯಮಗಳಲ್ಲಿ ಫಸ್ಟ್‌ಲುಕ್ ವೈರಲ್!

’ದೇಶದಲ್ಲಿ ಈ ಬಿಜೆಪಿ, ಆರ್‌ಎಸ್‌ಎಸ್ ಜನರಲ್ಲಿ ಜಾತಿ ಧರ್ಮದ ಬಗೆಗೆ ದ್ವೇಷ ಹುಟ್ಟಿಹಾಕಿ ಸಮಾಜವನ್ನು ಹೊಡೆಯುವ ಕೆಲಸ ಮಾಡುತ್ತಿವೆ. ಇದರ ಬಗ್ಗೆ ಗೋಧಿ ಮೀಡಿಯಾ ಏನೂ ಮತಾಡುವುದಿಲ್ಲ. ಅದು ಮೋದಿಯವರ ಗುಲಾಮಿ ಮೀಡಿಯಾ ಆಗಿದೆ. ಅದು ಎಲ್ಲರನ್ನು ಗುಲಾಮರನ್ನಾಗಿಸಲು ಹೊರಟಿದೆ. ಆದರೆ ರೈತರು ಗುಲಾಮಗಿರಿಯನ್ನು ಮುರಿಯುವ ಸಲುವಾಗಿ ಹೋರಾಟಕ್ಕೆ ನಿಂತಿದ್ದಾರೆ” ಎಂದು ಮಾಧ್ಯಮಗಳ ಏಕಪಕ್ಷೀಯತೆಯನ್ನು ಟೀಕಿಸಿದ್ದಾರೆ.

’ಇದು ಜನಸಾಮಾನ್ಯರಿಗಾಗಿ ನಡೆಯುತ್ತಿರುವ ಪ್ರತಿಭಟನೆಯಾಗಿದೆ. ಜನಸಾಮಾನ್ಯರು ಬೆಳೆ ಬೆಳೆಯುವುದಿಲ್ಲ. ಆದರೆ ಅದಾನಿ ಅಂಬಾನಿ ಅವರಿಂದ 20 ರೂಪಾಯಿಗೆ ದೊರೆಯುವ ಪದಾರ್ಥವನ್ನು 200 ರೂಪಾಯಿಗೆ ತೆಗೆದುಕೊಳ್ಳಬೇಕಾಗುತ್ತದೆ. ಇದನ್ನು ಜನಸಾಮಾನ್ಯರು ಮರೆಯಬಾರದು. ಇಂದು ಗಡಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಜನರ ಪ್ರತಿಭಟನೆಯಾಗಿದೆ. ಇದು ದೇಶದ ಪ್ರತಿಭಟನೆಯಾನ್ನಾಗಿಸಬೇಕು” ಎಂದು ಜನರನ್ನು ಪ್ರತಿಭಟನೆಗೆ ಒತ್ತಾಯಿಸಿದ್ದಾರೆ.

ಜೊತೆಗೆ, ’ಜನರು ದೇಶವನ್ನು ಪ್ರಜಾಪ್ರಭುತ್ವ, ಸಂವಿಧಾನಿಕವಾಗಿಯೇ ಇರಿಸಿಕೊಳ್ಳಬೇಕೋ ಅಥವಾ ಅಧಿಕಾರಶಾಯಿ ಆರ್‌ಎಸ್‌ಎಸ್‌, ಬಿಜೆಪಿಗೆ ಒಪ್ಪಿಸಬೇಕೋ ಎಂಬುದನ್ನು ಯೋಚಿಸಬೇಕು’ ಎಂದು ಕಾಂಗ್ರೆಸ್ ಶಾಸಕ ಮತ್ತು ಹರಿಯಾಣ ಪೆಟ್ರೋಲ್ ಪಂಪ್ ಅಸೋಷಿಯೇಷನ್ ಮುಖ್ಯಸ್ಥ ಶಂಶಿರ್‌ ಸಿಂಗ್ ಗೋಗಿ ಹೇಳಿದ್ದಾರೆ.


ಇದನ್ನೂ ಓದಿ: ಪ್ರಧಾನಿ ನೀಡುತ್ತಿರುವ ಐತಿಹಾಸಿಕ ಉಡುಗೊರೆ ರೈತರಿಗೆ ಬೇಡ: ಯೋಗೇಂದ್ರ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ ಎಸ್‌ಐಆರ್ ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್ ನಿರ್ದೇಶನ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.9) ಹಲವಾರು ನಿರ್ದೇಶನಗಳನ್ನು ನೀಡಿದೆ. ಚುನಾವಣಾ ಆಯೋಗವು ನಿಯೋಜಿಸಿರುವ ಮೈಕ್ರೋ-ಅಬ್ಸರ್ವರ್‌ಗಳ (ಸೂಕ್ಷ್ಮ ವೀಕ್ಷಕರು) ಬದಲಿಗೆ ಗ್ರೂಪ್...

ಮುಸ್ಲಿಮರಿಗೆ ಗುಂಡಿಕ್ಕುವಂತೆ ವಿಡಿಯೋ ಹಂಚಿಕೆ: ಅಸ್ಸಾಂ ಸಿಎಂ ವಿರುದ್ಧ ಓವೈಸಿ ದೂರು: ದ್ವೇಷ ಭಾಷಣ ಆದೇಶ ಉಲ್ಲೇಖ 

ಅಸ್ಸಾಂ ಬಿಜೆಪಿ ಘಟಕದ ಅಧಿಕೃತ 'ಎಕ್ಸ್' ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಲಾದ ಮತ್ತು ಈಗ ಅಳಿಸಲಾದ ವೀಡಿಯೊದಲ್ಲಿ, ಮುಸ್ಲಿಮರ ಮೇಲೆ ಸಾಂಕೇತಿಕವಾಗಿ ಗುಂಡು ಹಾರಿಸುತ್ತಿರುವುದನ್ನು ತೋರಿಸಲಾಗಿದೆ ಎಂದು ಆರೋಪಿಸಿ ಹಿಮಂತ ಬಿಸ್ವಾ ಶರ್ಮಾ ವಿರುದ್ಧ...

ನರವಾಣೆ ಪುಸ್ತಕಕ್ಕೆ ಹೆದರಿ ಪ್ರಧಾನಿ ಲೋಕಸಭೆಗೆ ಬರುತ್ತಿಲ್ಲ : ರಾಹುಲ್ ಗಾಂಧಿ

ಪ್ರತಿಪಕ್ಷಗಳು ಎತ್ತಿರುವ ವಿಷಯಗಳಿಂದ, ವಿಶೇಷವಾಗಿ ಮಾಜಿ ಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಪುಸ್ತಕದ ವಿಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಭಯಗೊಂಡಿದ್ದಾರೆ. ಹಾಗಾಗಿ, ಅವರು ರಾಷ್ಟ್ರಪತಿಯ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ...

ಡಿಜಿಟಲ್ ‘ಡಕಾಯಿತಿ’: 54,000 ಕೋಟಿಗೂ ಹೆಚ್ಚಿನ ಹಣ ವಂಚನೆ: ಎಸ್‌ಒಪಿ ರಚಿಸಲು ಕೇಂದ್ರಕ್ಕೆ ಸೂಚನೆ ನೀಡಿದ ಸುಪ್ರೀಂ

ನವದೆಹಲಿ: ಡಿಜಿಟಲ್ ವಂಚನೆಯಿಂದ 54,000 ಕೋಟಿ ರೂ.ಗಳಿಗೂ ಹೆಚ್ಚು ಹಣವನ್ನು ವಂಚಿಸುವುದು ಸಂಪೂರ್ಣ "ದರೋಡೆ ಅಥವಾ ಡಕಾಯಿತಿ" ಎಂದು ಸುಪ್ರೀಂ ಕೋರ್ಟ್ ಸೋಮವಾರ ಬಣ್ಣಿಸಿದೆ ಮತ್ತು ಅಂತಹ ಪ್ರಕರಣಗಳನ್ನು ನಿಭಾಯಿಸಲು ಆರ್‌ಬಿಐ, ಬ್ಯಾಂಕುಗಳು...

ಪಾಕಿಸ್ತಾನ ನಂಟು : ಸಿಎಂ ಶರ್ಮಾ ಆರೋಪ ನಿರಾಧಾರ, ಸಿ-ಗ್ರೇಡ್ ಸಿನಿಮಾ ಎಂದ ಗೌರವ್ ಗೊಗೊಯ್

ತಮಗೂ ಪಾಕಿಸ್ತಾನಕ್ಕೂ ಸಂಬಂಧವಿದೆ ಎಂಬ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ಆರೋಪಗಳನ್ನು ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಗೌರವ್ ಗೊಗೊಯ್ ತಳ್ಳಿಹಾಕಿದ್ದು, ಎಸ್‌ಐಟಿ ವರದಿಯು ಕಳೆದ ಆರು ತಿಂಗಳಿನಿಂದ ಮುಖ್ಯಮಂತ್ರಿ ಬಳಿಯೇ ಇದೆ....

ಪಂಜಾಬ್: ತರಗತಿಯೊಳಗೆ ವಿದ್ಯಾರ್ಥಿನಿಯನ್ನು ಕೊಂದು, ತಾನು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಕಾನೂನು ವಿದ್ಯಾರ್ಥಿ

ಚಂಡೀಗಢ: ಪಂಜಾಬ್‌ನ ತರ್ನ್ ತರಣ್ ಜಿಲ್ಲೆಯಲ್ಲಿ ಕಾನೂನು ವಿದ್ಯಾರ್ಥಿಯೊಬ್ಬ ಶಾಲಾ ಕೋಣೆಯೊಳಗೆ ವಿದ್ಯಾರ್ಥಿನಿಯ ತಲೆಗೆ ಗುಂಡು ಹಾರಿಸಿ ಕೊಂದ ಘಟನೆ ಸೋಮವಾರ ನಡೆದಿದೆ. ಸಹಪಾಠಿಗಳು ಭಯಭೀತರಾಗಿ ನೋಡುತ್ತಿದ್ದ ವೇಳೆ ಈ ಘಟನೆ ನಡೆದಿದೆ. ವಿದ್ಯಾರ್ಥಿನಿಯನ್ನು...

ಅಸ್ಸಾಂ ಸಿಎಂ ಮುಸ್ಲಿಮರ ವಿರುದ್ಧ ನರಮೇಧವನ್ನು ಪ್ರಚೋದಿಸುತ್ತಿದ್ದಾರೆ : ಗೌರವ್ ಗೊಗೊಯ್

ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರು ಮುಸ್ಲಿಮರ ವಿರುದ್ದ ದ್ವೇಷ ಹರಡುತ್ತಿದ್ದಾರೆ, ಅವರ ಜನಾಂಗೀಯ ಹತ್ಯೆಗೆ ಪ್ರಚೋದಿಸುತ್ತಿದ್ದಾರೆ ಎಂದು ಅಸ್ಸಾಂ ರಾಜ್ಯ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಹಾಗೂ ಸಂಸದ ಗೌರವ್ ಗೊಗೊಯ್ ಹೇಳಿದ್ದಾರೆ. ಅಸ್ಸಾಂ...

‘ಎಂಡಿಎಂಎ ಡ್ರಗ್ಸ್ ಕೇಂದ್ರವಾಗಿ ಮಾರ್ಪಟ್ಟ ಮಧ್ಯಪ್ರದೇಶ-ರಾಜಸ್ಥಾನ ಗಡಿ’: 13ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದ ಪೊಲೀಸರು. 

ಭೋಪಾಲ್: ದೇಶದ ಅಫೀಮು ಕೃಷಿ ಮತ್ತು ಕಳ್ಳಸಾಗಣೆ ಮಾರ್ಗವಾಗಿ ದೀರ್ಘಕಾಲದಿಂದ ಕುಖ್ಯಾತಿ ಗಳಿಸಿರುವ ಪಶ್ಚಿಮ ಮಧ್ಯಪ್ರದೇಶ ಮತ್ತು ಪಕ್ಕದ ಆಗ್ನೇಯ ರಾಜಸ್ಥಾನದ ಜಿಲ್ಲೆಗಳು ಈಗ MDMA ಸಂಶ್ಲೇಷಿತ ಡ್ರಗ್ಸ್ ಅಕ್ರಮ ಉತ್ಪಾದನೆ ಮತ್ತು...

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಮುಂದಾದ ವಿರೋಧ ಪಕ್ಷಗಳು: ವರದಿ

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ವಿರೋಧ ಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ವಿಪಕ್ಷ ಸಂಸದರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ 'ಅನಿರೀಕ್ಷಿತ ಕೃತ್ಯ' ಎಸಗಲು ಸಂಚು...

ಮೆಟಾ-ವಾಟ್ಸಾಪ್ ಗೌಪ್ಯತೆ ನೀತಿ ಪ್ರಕರಣ: ಸುಪ್ರೀಂ ಕೋರ್ಟ್ ವಿಚಾರಣೆ ಫೆಬ್ರವರಿ 23ಕ್ಕೆ ಮುಂದೂಡಿಕೆ 

ನವದೆಹಲಿ: ಗೌಪ್ಯತೆ ನೀತಿಯ ಮೇಲೆ 213.14 ಕೋಟಿ ರೂ. ದಂಡ ವಿಧಿಸಿದ ಭಾರತೀಯ ಸ್ಪರ್ಧಾ ಆಯೋಗದ (ಸಿಸಿಐ) ಆದೇಶದ ವಿರುದ್ಧ ಮೆಟಾ ಪ್ಲಾಟ್‌ಫಾರ್ಮ್ಸ್ ಇಂಕ್ ಮತ್ತು ವಾಟ್ಸಾಪ್ ಸಲ್ಲಿಸಿದ ಅರ್ಜಿಗಳನ್ನು ಸುಪ್ರೀಂ ಕೋರ್ಟ್...