Homeಕರ್ನಾಟಕಕರ್ನಾಟಕದ ಸುಮಾರು 50% ರಷ್ಟು ಯುವತಿಯರಿಗೆ ರಕ್ತಹೀನತೆ- NFHS ವರದಿ

ಕರ್ನಾಟಕದ ಸುಮಾರು 50% ರಷ್ಟು ಯುವತಿಯರಿಗೆ ರಕ್ತಹೀನತೆ- NFHS ವರದಿ

ಹೆಣ್ಣು ಮಕ್ಕಳು ಚಿನ್ನದ ಹಿಂದೆ ಓಡುವ ಬದಲು ಕಬ್ಬಿಣ ಅಂಶದ ಆಹಾರಗಳನ್ನು ಸೇವಿಸಿ. ನೀವೇ ನಿಮ್ಮ ಆಭರಣವಾಗಿ ಎನ್ನುವ ಸಂದೇಶವುಳ್ಳ ವಿಡಿಯೋವೊಂದು ಈ ಹಿಂದೆ ವೈರಲ್ ಆಗಿತ್ತು.

- Advertisement -
- Advertisement -

ಕರ್ನಾಟಕದಲ್ಲಿ ಶೇಕಡಾ 49.4% ರಷ್ಟು ಯುವತಿಯರು ರಕ್ತಹೀನತೆ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ಕೇಂದ್ರ ಸರ್ಕಾರ ಶನಿವಾರ ಬಿಡುಗಡೆ ಮಾಡಿರುವ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ- 5 (NFHS) ವರದಿಯಲ್ಲಿ ತಿಳಿದುಬಂದಿದೆ. 2015-16ರಲ್ಲಿ ಬಿಡುಗಡೆಯಾಗಿದ್ದ ಅಂಕಿ ಅಂಶದಲ್ಲಿಯೂ 45.3% ಯುವತಿಯರು ರಕ್ತಹೀನತೆಯಿಂದ ಬಳಲುತ್ತಿದ್ದರು.

ಮಹಿಳೆಯರ ಸಂತಾನೋತ್ಪತ್ತಿ ಆರೋಗ್ಯ ಮತ್ತು ಮಕ್ಕಳ ಆರೋಗ್ಯದಲ್ಲಿ ಹೆಚ್ಚಿನ ಸುಧಾರಣೆಯನ್ನು ಕರ್ನಾಟಕ ಹೊಂದಿರುವುದನ್ನು ವರದಿ ತೋರಿಸಿದೆ. ಆದರೆ, ಗರ್ಭಿಣಿಯಾಗಿದ್ದಾಗ ಕಬ್ಬಿಣ ಮತ್ತು ಫೋಲಿಕ್ ಆಮ್ಲದ ಮಾತ್ರೆಗಳನ್ನು ಸೇವಿಸುತ್ತಿರುವ ಮಹಿಳೆಯರ ಸಂಖ್ಯೆ ಈಗ ಕಡಿಮೆಯಾಗಿದೆ. ಐದು ವರ್ಷಗಳ ಹಿಂದಿನ ವರದಿಯಾಲ್ಲಿ 32.6% ಇದದ್ದು, ಈಗ 26.7%ಗೆ ಇಳಿದಿದೆ ಎಂದು NFHS ವರದಿ ತಿಳಿಸಿದೆ.

ರಾಜ್ಯದಲ್ಲಿ ಪುರುಷರು ಮತ್ತು ಮಹಿಳೆಯರಲ್ಲಿ ಬೊಜ್ಜಿನ ಮಟ್ಟ ಹೆಚ್ಚುತ್ತಿದೆ ಎಂದು ವರದಿಯಲ್ಲಿ ಸೂಚಿಸಲಾಗಿದೆ. ಹುಟ್ಟಿದ ಒಂದು ಗಂಟೆಯೊಳಗೆ ಹಸುಗೂಸಿಗೆ ಹಾಲುಣಿಸುವ ತಾಯಂದಿರ ಸಂಖ್ಯೆಯಲ್ಲೂ ಇಳಿಕೆ ಕಂಡು ಬಂದಿದೆ. ಐದು ವರ್ಷಗಳ ಹಿಂದೆ 56% ಇದ್ದ ಪ್ರಮಾಣ ಈಗ 49% ಕ್ಕೆ ಕುಸಿದಿದೆ.

ಇದನ್ನೂ ಓದಿ: ಕೊರೊನಾ ಲಸಿಕೆ ಉಚಿತವೆಂದ ಕೇರಳ ಸಿಎಂ: ಚುನಾವಣಾ ಆಯೋಗದ ಮೆಟ್ಟಿಲೇರಿದ ವಿಪಕ್ಷಗಳು!

ಕರ್ನಾಟಕದಲ್ಲಿ 15 ರಿಂದ 24 ವರ್ಷ ವಯಸ್ಸಿನ ಮಹಿಳೆಯರಲ್ಲಿ ಮುಟ್ಟಿನ ಆರೋಗ್ಯಕರ ಉತ್ಪನ್ನಗಳ ಬಳಕೆ  84.2% ಕ್ಕೆ ಏರಿದೆ ಎಂದು ವರದಿ ತಿಳಿಸಿದೆ.

ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಪ್ರಾಜೆಕ್ಟ್ ಸ್ತ್ರೀಧನ್ ಎಂಬ ಪೇಜ್ ಹೆಣ್ಣು ಮಕ್ಕಳ ಆರೋಗ್ಯದ ಕುರಿತು ಹಲವು ವಿಡಿಯೋಗಳನ್ನು ಪೋಸ್ಟ್ ಮಾಡುತ್ತದೆ. ಅದರಲ್ಲಿ ರಕ್ತಹೀನತೆ ಕುರಿತು ಮಾಡಿರುವ ವಿಡಿಯೋ ಸಾಕಷ್ಟು ವೈರಲ್ ಆಗಿತ್ತು.

ಚಿನ್ನದ ಹಿಂದೆ ಓಡುವ ಬದಲು ಕಬ್ಬಿಣ ಅಂಶದ ಆಹಾರಗಳನ್ನು ಸೇವಿಸಿ. ನೀವೇ ನಿಮ್ಮ ಆಭರಣವಾಗಿ ಎನ್ನುವ ಸಂದೇಶವುಳ್ಳ ಈ ವಿಡಿಯೋದಲ್ಲಿ ಹಲವು ಬಗೆಯ ಕಬ್ಬಿಣ ಅಂಶ ಹೊಂದಿರುವ ಆಹಾರ ಪದಾರ್ಥಗಳನ್ನು ತೋರಿಸಲಾಗಿದೆ. ಜೊತೆಗೆ ರಕದತಹೀನತೆಯಿಮದ ಬಳಲುತ್ತಿರುವ ಭಾರತೀಯ ಮಹಿಳೆಯರ ಅಂಕಿ ಅಂಶಗಳನ್ನು ನೀಡಲಾಗಿದೆ.

ದೇಶ ಮತ್ತು ಕೇಂದ್ರಾಡಳಿತ ಪ್ರದೇಶಗಳ ಜನಸಂಖ್ಯೆ, ಆರೋಗ್ಯ ಮತ್ತು ಪೋಷಣೆಯ ಬಗ್ಗೆ ವಿವರವಾದ ಮಾಹಿತಿಯನ್ನು ಒಳಗೊಂಡಿರುವ ಐದನೇ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆಯನ್ನು (NFHS) ಆರೋಗ್ಯ ಸಚಿವ ಹರ್ಷ್ ವರ್ಧನ್ ಶನಿವಾರ ಬಿಡುಗಡೆ ಮಾಡಿದ್ದಾರೆ.

ಕೇಂದ್ರ ಆರೋಗ್ಯ ಸಚಿವಾಲಯವು ಮೊದಲ ಹಂತದಲ್ಲಿ ಕರ್ನಾಟಕ ಸೇರಿ 17 ರಾಜ್ಯಗಳು ಮತ್ತು ಐದು ಕೇಂದ್ರಾಡಳಿತ ಪ್ರದೇಶಗಳಲ್ಲಿ ಸಮೀಕ್ಷೆ ನಡೆಸಿ, ವರದಿ ಬಿಡುಗಡೆ ಮಾಡಿದೆ. ರಾಜ್ಯದಲ್ಲಿ 2019ರ ಜು.10 ರಿಂದ ಡಿ.11ರವರೆಗೆ ನೀಲ್ಸನ್ ಇಂಡಿಯಾ ಪ್ರೈ.ಲಿ. ಏಜನ್ಸಿ ಸಹಯೋಗದಲ್ಲಿ ಸಮೀಕ್ಷೆ ನಡೆಸಲಾಗಿದೆ.

ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ತಡೆ ಹಿಡಿಯಲಾಗಿದ್ದ, ಉಳಿದ 12 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳನ್ನು ಒಳಗೊಂಡ ಎರಡನೇ ಹಂತದ ಸಮೀಕ್ಷೆಯನ್ನು ನವೆಂಬರ್‌ನಿಂದ ಪುನರಾರಂಭ ಮಾಡಲಾಗಿದೆ.  2021 ರ ಮೇ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.


ಇದನ್ನೂ ಓದಿ: ಶೂದ್ರರಿಗೆ ಜ್ಞಾನವಿಲ್ಲ, ಹಾಗಾಗಿಯೇ ತಾವು ಶೂದ್ರರು ಎಂದು ಒಪ್ಪಿಕೊಳ್ಳುವುದಿಲ್ಲ: ಪ್ರಗ್ಯಾ ಠಾಕೂರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...