Homeಚಳವಳಿ'ಐಲುದೊರೆ ನೀರೋ’ನಂಥ ಕ್ರೂರಿ ಕೇಂದ್ರ ಸರ್ಕಾರ ಸಮಯವನ್ನೂ, ರೈತರನ್ನೂ ಕೊಲ್ಲುತ್ತಿದೆ: AIKSCC

‘ಐಲುದೊರೆ ನೀರೋ’ನಂಥ ಕ್ರೂರಿ ಕೇಂದ್ರ ಸರ್ಕಾರ ಸಮಯವನ್ನೂ, ರೈತರನ್ನೂ ಕೊಲ್ಲುತ್ತಿದೆ: AIKSCC

AIKSCC ಸಮಸ್ತ ರೈತ-ದಲಿತ-ಕಾರ್ಮಿಕ ಹಾಗೂ ಜನಪರ ಸಂಘಟನೆಗಳ ಸಹಯೋಗದೊಂದಿಗೆ ಡಿಸೆಂಬರ್ 16 ರಿಂದ ಬೆಂಗಳೂರಿನ ಮೌರ್ಯ ಸರ್ಕಲ್ ಗಾಂಧಿ ಪ್ರತಿಮೆ ಬಳಿ ನಿರಂತರ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಿದೆ.

- Advertisement -
- Advertisement -

ಕೇಂದ್ರ ಸರ್ಕಾರವು ಅಸಾಂವಿಧಾನಿಕ ವಿಧಾನದಿಂದ, ಅತ್ಯಂತ ಅಪ್ರಜಾತಾಂತ್ರಿಕ ರೀತಿಯಲ್ಲಿ ಜಾರಿಗೆ ತಂದಿರುವ ಕೃಷಿ ಕಾನೂನುಗಳನ್ನು ರದ್ದುಪಡಿಸಬೇಕು ಹಾಗೂ ಕನಿಷ್ಠ ಬೆಂಬಲ ಬೆಲೆ ಖಾತರಿ (ಎಂಎಸ್‌ಪಿ)ಯನ್ನು ಶಾಸನಬದ್ಧಗೊಳಿಸಬೇಕು ಮತ್ತು ಸಾರ್ವಜನಿಕ ಸಾಲ ಒದಗಿಸುವ ಹಾಗೂ ಋಣಮುಕ್ತಿ ನೀಡುವ ಕಾಯ್ದೆ ಜಾರಿಗೆ ತರಬೇಕು ಎಂಬ ಹಕ್ಕೊತ್ತಾಯಗಳೊಂದಿಗೆ ದೇಶದ ನಾನಾ ಭಾಗಗಳ ಒಂದು ಕೋಟಿಗೂ ಹೆಚ್ಚು ರೈತರು ಇದೇ ನವೆಂಬರ್ 26 ರಿಂದ ದೆಹಲಿಯ ಸರಹದ್ದಿನಲ್ಲಿ ಸತತವಾಗಿ ಸತ್ಯಾಗ್ರಹ ನಡೆಸುತ್ತಿದ್ದಾರೆ. ಕಳೆದ 70 ವರ್ಷಗಳಲ್ಲೆಂದೂ ಇರದಿದ್ದಂತಹ ತೀವ್ರ ಚಳಿಯಿಂದಾಗಿ ಈ ಕಷ್ಟಜೀವಿಗಳು ಅಪಾರ ಬವಣೆಗೆ ಈಡಾಗಿರುವುದಲ್ಲದೆ ಈಗಾಗಲೇ ಸುಮಾರು 40ಕ್ಕೂ ಹೆಚ್ಚು ಜನರು ದಾರುಣವಾಗಿ ಸಾವಿಗೆ ಬಲಿಯಾಗಿದ್ದಾರೆಂದು ವರದಿಗಳು ತಿಳಿಸಿವೆ. ಇದ್ಯಾವುದನ್ನೂ ಪರಿವೆ ಮಾಡದ ‘ಐಲುದೊರೆ ನೀರೋ’ನಂಥ ಕ್ರೂರಿ ಕೇಂದ್ರ ಸರ್ಕಾರ ಮಾತುಕತೆಯ ನಾಟಕವಾಡುತ್ತ ಸಮಯವನ್ನೂ ರೈತರನ್ನೂ ಕೊಲ್ಲುತ್ತಿದೆ ಎಂದು ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿಯ ರಾಜ್ಯ ಸಮಿತಿ ಕಿಡಿಕಾರಿದೆ.

ದೇಶದ ಅನ್ನದಾತರಾದ ರೈತಾಪಿ ವರ್ಗ ಅಮಾಯಕರಿರಬಹುದು, ಆದರೆ ಸರ್ಕಾರಗಳು ಬಿಂಬಿಸುತ್ತಿರುವಂತೆ ದಡ್ಡರೋ, ಮೂರ್ಖರೋ ಅಲ್ಲ; ತಮಗೇನು ಬೇಕು, ಏನು ಬೇಡ ಎಂಬ ಬಗ್ಗೆ ಅವರಿಗೆ ಪೂರ್ಣ ಅರಿವಿದೆ ಎಂಬುದನ್ನು ಜನತೆ ಮನಗಾಣುತ್ತಾರೆಂಬ ನಂಬಿಕೆಯಿದೆ. ಈ ನಿಟ್ಟಿನಲ್ಲಿ ದೆಹಲಿಯಲ್ಲಿ ನಡೆಯುತ್ತಿರುವ ಹೋರಾಟಕ್ಕೆ AIKSCC ಸಂಪೂರ್ಣ ಬೆಂಬಲ ನೀಡುವುದಲ್ಲದೆ ರೈತರು ಡಿ. 16 ರಿಂದ ಕರೆ ನೀಡಿರುವ ಅನಿರ್ದಿಷ್ಟಾವಧಿ ದೇಶವ್ಯಾಪಿ ಪ್ರತಿಭಟನೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.

ಇತ್ತ ಕರ್ನಾಟಕದ ಬಿಜೆಪಿ ಸರ್ಕಾರವೂ ಸಹ ಕೇಂದ್ರದ ಈ ಎಲ್ಲ ಕಾಯ್ದೆಗಳನ್ನು ರಾಜ್ಯದಲ್ಲೂ ಅನುಷ್ಠಾನಕ್ಕೆ ತರಲು ಸುಗ್ರೀವಾಜ್ಞೆಗಳನ್ನು ಬಳಸುತ್ತ, ವಿಧಾನಮಂಡಲದಲ್ಲೂ ಕಾಯ್ದೆಯಾಗಿ ಪಾಸು ಮಾಡಿಕೊಳ್ಳಲು ಹವಣಿಸಿದೆ. ಅಲ್ಲದೆ, ಕಾರ್ಪೊರೇಟ್ ಕಂಪನಿಗಳು, ಭೂಗಳ್ಳ ಮಾಫಿಯಾಗಳು ಹಾಗೂ ಕಪ್ಪುಹಣದ ತಿಮಿಂಗಿಲಗಳು ತಮಗೆ ಬೇಕಾದಂತೆ, ಬೇಕಾದ ಕೃಷಿಯೇತರ ಲಾಭಕೋರ ಉದ್ದೇಶಕ್ಕೆ, ಬೇಕಾದಷ್ಟು ಕೃಷಿ ಭೂಮಿಯನ್ನು ಖರೀದಿಸಲು, ವ್ಯವಸಾಯದಲ್ಲಿ ತೊಡಗಲು ಅನುಕೂಲವಾಗುವಂತೆ ‘ಕರ್ನಾಟಕ ಭೂ ಸುಧಾರಣೆ ಕಾಯ್ದೆ-1961’ಕ್ಕೆ ಕೃಷಿಗೆ ಮಾರಕವಾಗುವಂತಹ ತಿದ್ದುಪಡಿಗಳನ್ನು ಮಾಡಿ ರೈತರನ್ನು ದಿವಾಳಿಯಾಗಿಸಲು ಹೊರಟಿದೆ. ಅದೇ ರೀತಿಯಲ್ಲಿ ಕಾರ್ಪೋರೇಟ್ ಕಂಪನಿಗಳ ಮುಂಗಡ ಕೃಷಿ ವ್ಯಾಪಾರಕ್ಕೆ ಅನೂಕೂಲವಾಗುವಂತೆ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ಮಾಡಿದೆ. ಇದರ ವಿರುದ್ಧ ಕರ್ನಾಟಕದ ಸಮಸ್ತ ರೈತಾಪಿ ಜನತೆ ತಿಂಗಳುಗಟ್ಟಲೆ ಹೋರಾಟ ಮಾಡಿದರೂ ಸರ್ಕಾರ ಅದಕ್ಕೆ ಕಿವಿಗೊಡುತ್ತಿಲ್ಲ ಎಂದು ಸಮಿತಿ ಅಸಮಾಧಾನ ವ್ಯಕ್ತಪಡಿಸಿದೆ.

ಇಷ್ಟು ಸಾಲದೆಂಬಂತೆ, ಕಾರ್ಪೋರೇಟ್ ಕಂಪನಿಗಳ ಲೂಟಿಗೆ ನೆರವಾಗಲು, ರೈತರಿಗೆ ಮಾರಕವಾಗುವಂತಹ ಜಾನುವಾರು ಹತ್ಯ ನಿಷೇಧ(ತಿದ್ದುಪಡಿ) ಕಾಯ್ದೆಯನ್ನು ಜಾರಿಗೊಳಿಸಲು ಸರ್ಕಾರ ಸಜ್ಜಾಗಿದೆ. ಕೃಷಿ ಪ್ರಧಾನವಾದ ನಮ್ಮ ದೇಶದಲ್ಲಿ ಅನಾದಿ ಕಾಲದಿಂದಲೂ ರೈತರು ತಮ್ಮ ಅಗತ್ಯಕ್ಕೆ ತಕ್ಕಂತೆ ಜಾನುವಾರುಗಳನ್ನು ಸಾಕುತ್ತ, ದನಕರುಗಳನ್ನು ಗೋಮಾತೆಯೆಂದು ಪೂಜಿಸುತ್ತ ಬಂದಿದ್ದಾರೆ. ಅನುಪಯುಕ್ತವಾದವುಗಳನ್ನು ವಿಲೇವಾರಿ (ಡಿಸ್ಪೋಸ್) ಮಾಡುತ್ತಲೂ ಬಂದಿದ್ದಾರೆ. ದೇಸೀ ತಳಿಗಳ ಸಂರಕ್ಷಣೆ ಮತ್ತು ಅಭಿವೃದ್ಧಿಗೆ ಸರ್ಕಾರಗಳು ಸರಿಯಾಗಿ ಗಮನ ನೀಡದೆ ಹೋದ ಕಾರಣ ಹಲವು ಗೋ ತಳಿಗಳು ಅವಸಾನದ ಹಂತ ತಲುಪಿವೆಯೇ ಹೊರತು, ರೈತರು ಅನುಪಯುಕ್ತ ಜಾನುವಾರುಗಳನ್ನು ವಿಲೇವಾರಿ ಮಾಡಿದ್ದರಿಂದಾಗಲಿ, ಅಂಥವುಗಳ ಮಾಂಸವನ್ನು ಕೆಲವು ಜನಸಮುದಾಯಗಳು ಆಹಾರವಾಗಿ ಬಳಸುತ್ತ ಬಂದುದರಿಂದಾಗಲಿ ದೇಶದಲ್ಲಿ ಯಾವತ್ತೂ ದನಕರುಗಳ/ಜಾನುವಾರುಗಳ ಕೊರತೆ ಉಂಟಾಗಿಲ್ಲ. ಈಗ ಬಿಜೆಪಿ ಸರ್ಕಾರ ತರಲು ಹೊರಟಿರುವ ಕಾಯ್ದೆ ಕೇವಲ ದುರುದ್ದೇಶದಿಂದ ಕೂಡಿದ್ದು, ಅದರಿಂದಾಗಿ ರೈತರು ಜಾನುವಾರು ಸಾಕುವುದನ್ನೇ ಕೈಬಿಡುವಂತಾಗಿ, ಕೃಷಿ ಬದುಕಿನ ಮೇಲೆ, ಹೈನುಗಾರಿಕೆಯ ಮೇಲೆ ಹಾಗೂ ಕೃಷಿ ಆರ್ಥಿಕತೆಯ ಮೇಲೆ ತೀವ್ರವಾದ ಮಾರಕ ಪರಿಣಾಮಗಳು ಉಂಟಾಗುತ್ತವೆ. ಇರುವ ದನಕರುಗಳ ಸಂತತಿಯೂ ಕ್ರಮೇಣ ಅವಸಾನಗೊಳ್ಳುತ್ತದೆ. ಹೈನೋದ್ಯಮ, ಮಾಂಸೋದ್ಯಮ ಮತ್ತು ಚರ್ಮೋದ್ಯಮಗಳು ಕಾರ್ಪೋರೇಟ್ ಲೂಟಿಯ ಪಾಲಾಗಲಿವೆ.
ಆದಕಾರಣ, ಕರ್ನಾಟಕ ಸರ್ಕಾರ ವಿಧಾನ ಮಂಡಲದಲ್ಲಿ ಪಾಸು ಮಾಡಿಕೊಂಡಿರುವ ಭೂ ಸುಧಾರಣಾ ತಿದ್ದುಪಡಿ ಮಸೂದೆ-2020, ಎಪಿಎಂಸಿ ತಿದ್ದುಪಡಿ ಮಸೂದೆ-2020, ಜಾನುವಾರು ಹತ್ಯ ನಿಷೇಧ ತಿದ್ದುಪಡಿ ಮಸೂದೆ-2020 ಮತ್ತು ಕಾರ್ಮಿಕ ಕಾಯ್ದೆ ತಿದ್ದುಪಡಿಗಳನ್ನು ಹಿಂತೆಗೆದುಕೊಳ್ಳಬೇಕು, ಕೇಂದ್ರ ಸರ್ಕಾರ ತಂದಿರುವ ಕಾಯ್ದೆಗಳನ್ನು ರಾಜ್ಯದಲ್ಲಿ ಜಾರಿ ಮಾಡಬಾರದು ಎಂದು AIKSCC ರಾಜ್ಯ ಘಟಕ ಆಗ್ರಹಿಸಿದೆ.

ಈ ನಿಟ್ಟಿನಲ್ಲಿ AIKSCC ಸಮಸ್ತ ರೈತ-ದಲಿತ-ಕಾರ್ಮಿಕ ಹಾಗೂ ಜನಪರ ಸಂಘಟನೆಗಳ ಸಹಯೋಗದೊಂದಿಗೆ ಡಿಸೆಂಬರ್ 16 ರಿಂದ ಬೆಂಗಳೂರಿನ ಮೌರ್ಯ ಸರ್ಕಲ್ ಗಾಂಧಿ ಪ್ರತಿಮೆ ಬಳಿ ನಿರಂತರ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಿದೆ. ರೈತಾಪಿಯ ಈ ಎಲ್ಲ ಹಕ್ಕೊತ್ತಾಯಗಳು ಈಡೇರುವವರೆಗೂ ಹೋರಾಟಗಳು ನಿಲ್ಲುವುದಿಲ್ಲ, ಇದರಿಂದ ಉಂಟಾಗುವ ಯಾವುದೇ ದುಷ್ಪರಿಣಾಮಗಳಿಗೆ ಸರ್ಕಾರವೇ ನೇರ ಹೊಣೆಯಾಗಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.

AIKSCC ರಾಜ್ಯ ಸಮತಿಯ ಪರವಾಗಿ ಕವಿತಾ ಕುರುಗಂಟಿ, ಕೋಡಿಹಳ್ಳಿ ಚಂದ್ರಶೇಖರ್, ಬಡಗಲಪುರ ನಾಗೇಂದ್ರ ಜಿ.ಸಿ.ಬಯ್ಯಾರೆಡ್ಡಿ, ಪಿ.ವಿ.ಲೋಕೇಶ್, ಎಚ್.ವಿ.ದಿವಾಕರ್ ನಿತ್ಯಾನಂದ ಸ್ವಾಮಿ, ಯು. ಬಸವರಾಜ,
ಚಂದ್ರಪ್ಪ ಹೊಸ್ಕೇರಾ, ಕುಮಾರ್ ಸಮತಳ, ಡಾಟ ಜನಾರ್ದನ, ಚಾಮರಸ ಮಾಲಿಪಾಟೀಲ್‌ರವರು ಪತ್ರಿಕಾ ಹೇಳಿಕೆಗೆ ಸಹಿ ಮಾಡಿದ್ದಾರೆ.


ಇದನ್ನೂ ಓದಿ: ರಾಜ್ಯಪಾಲರೇ, ಭೂಸುಧಾರಣಾ ಕಾಯ್ದೆಗೆ ಸಹಿ ಹಾಕಬೇಡಿ: ಟ್ವಿಟ್ಟರ್ ದಾಳಿಗೆ ಸಿದ್ದತೆ!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...