Homeಚಳವಳಿ'ಐಲುದೊರೆ ನೀರೋ’ನಂಥ ಕ್ರೂರಿ ಕೇಂದ್ರ ಸರ್ಕಾರ ಸಮಯವನ್ನೂ, ರೈತರನ್ನೂ ಕೊಲ್ಲುತ್ತಿದೆ: AIKSCC

‘ಐಲುದೊರೆ ನೀರೋ’ನಂಥ ಕ್ರೂರಿ ಕೇಂದ್ರ ಸರ್ಕಾರ ಸಮಯವನ್ನೂ, ರೈತರನ್ನೂ ಕೊಲ್ಲುತ್ತಿದೆ: AIKSCC

AIKSCC ಸಮಸ್ತ ರೈತ-ದಲಿತ-ಕಾರ್ಮಿಕ ಹಾಗೂ ಜನಪರ ಸಂಘಟನೆಗಳ ಸಹಯೋಗದೊಂದಿಗೆ ಡಿಸೆಂಬರ್ 16 ರಿಂದ ಬೆಂಗಳೂರಿನ ಮೌರ್ಯ ಸರ್ಕಲ್ ಗಾಂಧಿ ಪ್ರತಿಮೆ ಬಳಿ ನಿರಂತರ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಿದೆ.

- Advertisement -
- Advertisement -

ಕೇಂದ್ರ ಸರ್ಕಾರವು ಅಸಾಂವಿಧಾನಿಕ ವಿಧಾನದಿಂದ, ಅತ್ಯಂತ ಅಪ್ರಜಾತಾಂತ್ರಿಕ ರೀತಿಯಲ್ಲಿ ಜಾರಿಗೆ ತಂದಿರುವ ಕೃಷಿ ಕಾನೂನುಗಳನ್ನು ರದ್ದುಪಡಿಸಬೇಕು ಹಾಗೂ ಕನಿಷ್ಠ ಬೆಂಬಲ ಬೆಲೆ ಖಾತರಿ (ಎಂಎಸ್‌ಪಿ)ಯನ್ನು ಶಾಸನಬದ್ಧಗೊಳಿಸಬೇಕು ಮತ್ತು ಸಾರ್ವಜನಿಕ ಸಾಲ ಒದಗಿಸುವ ಹಾಗೂ ಋಣಮುಕ್ತಿ ನೀಡುವ ಕಾಯ್ದೆ ಜಾರಿಗೆ ತರಬೇಕು ಎಂಬ ಹಕ್ಕೊತ್ತಾಯಗಳೊಂದಿಗೆ ದೇಶದ ನಾನಾ ಭಾಗಗಳ ಒಂದು ಕೋಟಿಗೂ ಹೆಚ್ಚು ರೈತರು ಇದೇ ನವೆಂಬರ್ 26 ರಿಂದ ದೆಹಲಿಯ ಸರಹದ್ದಿನಲ್ಲಿ ಸತತವಾಗಿ ಸತ್ಯಾಗ್ರಹ ನಡೆಸುತ್ತಿದ್ದಾರೆ. ಕಳೆದ 70 ವರ್ಷಗಳಲ್ಲೆಂದೂ ಇರದಿದ್ದಂತಹ ತೀವ್ರ ಚಳಿಯಿಂದಾಗಿ ಈ ಕಷ್ಟಜೀವಿಗಳು ಅಪಾರ ಬವಣೆಗೆ ಈಡಾಗಿರುವುದಲ್ಲದೆ ಈಗಾಗಲೇ ಸುಮಾರು 40ಕ್ಕೂ ಹೆಚ್ಚು ಜನರು ದಾರುಣವಾಗಿ ಸಾವಿಗೆ ಬಲಿಯಾಗಿದ್ದಾರೆಂದು ವರದಿಗಳು ತಿಳಿಸಿವೆ. ಇದ್ಯಾವುದನ್ನೂ ಪರಿವೆ ಮಾಡದ ‘ಐಲುದೊರೆ ನೀರೋ’ನಂಥ ಕ್ರೂರಿ ಕೇಂದ್ರ ಸರ್ಕಾರ ಮಾತುಕತೆಯ ನಾಟಕವಾಡುತ್ತ ಸಮಯವನ್ನೂ ರೈತರನ್ನೂ ಕೊಲ್ಲುತ್ತಿದೆ ಎಂದು ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿಯ ರಾಜ್ಯ ಸಮಿತಿ ಕಿಡಿಕಾರಿದೆ.

ದೇಶದ ಅನ್ನದಾತರಾದ ರೈತಾಪಿ ವರ್ಗ ಅಮಾಯಕರಿರಬಹುದು, ಆದರೆ ಸರ್ಕಾರಗಳು ಬಿಂಬಿಸುತ್ತಿರುವಂತೆ ದಡ್ಡರೋ, ಮೂರ್ಖರೋ ಅಲ್ಲ; ತಮಗೇನು ಬೇಕು, ಏನು ಬೇಡ ಎಂಬ ಬಗ್ಗೆ ಅವರಿಗೆ ಪೂರ್ಣ ಅರಿವಿದೆ ಎಂಬುದನ್ನು ಜನತೆ ಮನಗಾಣುತ್ತಾರೆಂಬ ನಂಬಿಕೆಯಿದೆ. ಈ ನಿಟ್ಟಿನಲ್ಲಿ ದೆಹಲಿಯಲ್ಲಿ ನಡೆಯುತ್ತಿರುವ ಹೋರಾಟಕ್ಕೆ AIKSCC ಸಂಪೂರ್ಣ ಬೆಂಬಲ ನೀಡುವುದಲ್ಲದೆ ರೈತರು ಡಿ. 16 ರಿಂದ ಕರೆ ನೀಡಿರುವ ಅನಿರ್ದಿಷ್ಟಾವಧಿ ದೇಶವ್ಯಾಪಿ ಪ್ರತಿಭಟನೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.

ಇತ್ತ ಕರ್ನಾಟಕದ ಬಿಜೆಪಿ ಸರ್ಕಾರವೂ ಸಹ ಕೇಂದ್ರದ ಈ ಎಲ್ಲ ಕಾಯ್ದೆಗಳನ್ನು ರಾಜ್ಯದಲ್ಲೂ ಅನುಷ್ಠಾನಕ್ಕೆ ತರಲು ಸುಗ್ರೀವಾಜ್ಞೆಗಳನ್ನು ಬಳಸುತ್ತ, ವಿಧಾನಮಂಡಲದಲ್ಲೂ ಕಾಯ್ದೆಯಾಗಿ ಪಾಸು ಮಾಡಿಕೊಳ್ಳಲು ಹವಣಿಸಿದೆ. ಅಲ್ಲದೆ, ಕಾರ್ಪೊರೇಟ್ ಕಂಪನಿಗಳು, ಭೂಗಳ್ಳ ಮಾಫಿಯಾಗಳು ಹಾಗೂ ಕಪ್ಪುಹಣದ ತಿಮಿಂಗಿಲಗಳು ತಮಗೆ ಬೇಕಾದಂತೆ, ಬೇಕಾದ ಕೃಷಿಯೇತರ ಲಾಭಕೋರ ಉದ್ದೇಶಕ್ಕೆ, ಬೇಕಾದಷ್ಟು ಕೃಷಿ ಭೂಮಿಯನ್ನು ಖರೀದಿಸಲು, ವ್ಯವಸಾಯದಲ್ಲಿ ತೊಡಗಲು ಅನುಕೂಲವಾಗುವಂತೆ ‘ಕರ್ನಾಟಕ ಭೂ ಸುಧಾರಣೆ ಕಾಯ್ದೆ-1961’ಕ್ಕೆ ಕೃಷಿಗೆ ಮಾರಕವಾಗುವಂತಹ ತಿದ್ದುಪಡಿಗಳನ್ನು ಮಾಡಿ ರೈತರನ್ನು ದಿವಾಳಿಯಾಗಿಸಲು ಹೊರಟಿದೆ. ಅದೇ ರೀತಿಯಲ್ಲಿ ಕಾರ್ಪೋರೇಟ್ ಕಂಪನಿಗಳ ಮುಂಗಡ ಕೃಷಿ ವ್ಯಾಪಾರಕ್ಕೆ ಅನೂಕೂಲವಾಗುವಂತೆ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ಮಾಡಿದೆ. ಇದರ ವಿರುದ್ಧ ಕರ್ನಾಟಕದ ಸಮಸ್ತ ರೈತಾಪಿ ಜನತೆ ತಿಂಗಳುಗಟ್ಟಲೆ ಹೋರಾಟ ಮಾಡಿದರೂ ಸರ್ಕಾರ ಅದಕ್ಕೆ ಕಿವಿಗೊಡುತ್ತಿಲ್ಲ ಎಂದು ಸಮಿತಿ ಅಸಮಾಧಾನ ವ್ಯಕ್ತಪಡಿಸಿದೆ.

ಇಷ್ಟು ಸಾಲದೆಂಬಂತೆ, ಕಾರ್ಪೋರೇಟ್ ಕಂಪನಿಗಳ ಲೂಟಿಗೆ ನೆರವಾಗಲು, ರೈತರಿಗೆ ಮಾರಕವಾಗುವಂತಹ ಜಾನುವಾರು ಹತ್ಯ ನಿಷೇಧ(ತಿದ್ದುಪಡಿ) ಕಾಯ್ದೆಯನ್ನು ಜಾರಿಗೊಳಿಸಲು ಸರ್ಕಾರ ಸಜ್ಜಾಗಿದೆ. ಕೃಷಿ ಪ್ರಧಾನವಾದ ನಮ್ಮ ದೇಶದಲ್ಲಿ ಅನಾದಿ ಕಾಲದಿಂದಲೂ ರೈತರು ತಮ್ಮ ಅಗತ್ಯಕ್ಕೆ ತಕ್ಕಂತೆ ಜಾನುವಾರುಗಳನ್ನು ಸಾಕುತ್ತ, ದನಕರುಗಳನ್ನು ಗೋಮಾತೆಯೆಂದು ಪೂಜಿಸುತ್ತ ಬಂದಿದ್ದಾರೆ. ಅನುಪಯುಕ್ತವಾದವುಗಳನ್ನು ವಿಲೇವಾರಿ (ಡಿಸ್ಪೋಸ್) ಮಾಡುತ್ತಲೂ ಬಂದಿದ್ದಾರೆ. ದೇಸೀ ತಳಿಗಳ ಸಂರಕ್ಷಣೆ ಮತ್ತು ಅಭಿವೃದ್ಧಿಗೆ ಸರ್ಕಾರಗಳು ಸರಿಯಾಗಿ ಗಮನ ನೀಡದೆ ಹೋದ ಕಾರಣ ಹಲವು ಗೋ ತಳಿಗಳು ಅವಸಾನದ ಹಂತ ತಲುಪಿವೆಯೇ ಹೊರತು, ರೈತರು ಅನುಪಯುಕ್ತ ಜಾನುವಾರುಗಳನ್ನು ವಿಲೇವಾರಿ ಮಾಡಿದ್ದರಿಂದಾಗಲಿ, ಅಂಥವುಗಳ ಮಾಂಸವನ್ನು ಕೆಲವು ಜನಸಮುದಾಯಗಳು ಆಹಾರವಾಗಿ ಬಳಸುತ್ತ ಬಂದುದರಿಂದಾಗಲಿ ದೇಶದಲ್ಲಿ ಯಾವತ್ತೂ ದನಕರುಗಳ/ಜಾನುವಾರುಗಳ ಕೊರತೆ ಉಂಟಾಗಿಲ್ಲ. ಈಗ ಬಿಜೆಪಿ ಸರ್ಕಾರ ತರಲು ಹೊರಟಿರುವ ಕಾಯ್ದೆ ಕೇವಲ ದುರುದ್ದೇಶದಿಂದ ಕೂಡಿದ್ದು, ಅದರಿಂದಾಗಿ ರೈತರು ಜಾನುವಾರು ಸಾಕುವುದನ್ನೇ ಕೈಬಿಡುವಂತಾಗಿ, ಕೃಷಿ ಬದುಕಿನ ಮೇಲೆ, ಹೈನುಗಾರಿಕೆಯ ಮೇಲೆ ಹಾಗೂ ಕೃಷಿ ಆರ್ಥಿಕತೆಯ ಮೇಲೆ ತೀವ್ರವಾದ ಮಾರಕ ಪರಿಣಾಮಗಳು ಉಂಟಾಗುತ್ತವೆ. ಇರುವ ದನಕರುಗಳ ಸಂತತಿಯೂ ಕ್ರಮೇಣ ಅವಸಾನಗೊಳ್ಳುತ್ತದೆ. ಹೈನೋದ್ಯಮ, ಮಾಂಸೋದ್ಯಮ ಮತ್ತು ಚರ್ಮೋದ್ಯಮಗಳು ಕಾರ್ಪೋರೇಟ್ ಲೂಟಿಯ ಪಾಲಾಗಲಿವೆ.
ಆದಕಾರಣ, ಕರ್ನಾಟಕ ಸರ್ಕಾರ ವಿಧಾನ ಮಂಡಲದಲ್ಲಿ ಪಾಸು ಮಾಡಿಕೊಂಡಿರುವ ಭೂ ಸುಧಾರಣಾ ತಿದ್ದುಪಡಿ ಮಸೂದೆ-2020, ಎಪಿಎಂಸಿ ತಿದ್ದುಪಡಿ ಮಸೂದೆ-2020, ಜಾನುವಾರು ಹತ್ಯ ನಿಷೇಧ ತಿದ್ದುಪಡಿ ಮಸೂದೆ-2020 ಮತ್ತು ಕಾರ್ಮಿಕ ಕಾಯ್ದೆ ತಿದ್ದುಪಡಿಗಳನ್ನು ಹಿಂತೆಗೆದುಕೊಳ್ಳಬೇಕು, ಕೇಂದ್ರ ಸರ್ಕಾರ ತಂದಿರುವ ಕಾಯ್ದೆಗಳನ್ನು ರಾಜ್ಯದಲ್ಲಿ ಜಾರಿ ಮಾಡಬಾರದು ಎಂದು AIKSCC ರಾಜ್ಯ ಘಟಕ ಆಗ್ರಹಿಸಿದೆ.

ಈ ನಿಟ್ಟಿನಲ್ಲಿ AIKSCC ಸಮಸ್ತ ರೈತ-ದಲಿತ-ಕಾರ್ಮಿಕ ಹಾಗೂ ಜನಪರ ಸಂಘಟನೆಗಳ ಸಹಯೋಗದೊಂದಿಗೆ ಡಿಸೆಂಬರ್ 16 ರಿಂದ ಬೆಂಗಳೂರಿನ ಮೌರ್ಯ ಸರ್ಕಲ್ ಗಾಂಧಿ ಪ್ರತಿಮೆ ಬಳಿ ನಿರಂತರ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಿದೆ. ರೈತಾಪಿಯ ಈ ಎಲ್ಲ ಹಕ್ಕೊತ್ತಾಯಗಳು ಈಡೇರುವವರೆಗೂ ಹೋರಾಟಗಳು ನಿಲ್ಲುವುದಿಲ್ಲ, ಇದರಿಂದ ಉಂಟಾಗುವ ಯಾವುದೇ ದುಷ್ಪರಿಣಾಮಗಳಿಗೆ ಸರ್ಕಾರವೇ ನೇರ ಹೊಣೆಯಾಗಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.

AIKSCC ರಾಜ್ಯ ಸಮತಿಯ ಪರವಾಗಿ ಕವಿತಾ ಕುರುಗಂಟಿ, ಕೋಡಿಹಳ್ಳಿ ಚಂದ್ರಶೇಖರ್, ಬಡಗಲಪುರ ನಾಗೇಂದ್ರ ಜಿ.ಸಿ.ಬಯ್ಯಾರೆಡ್ಡಿ, ಪಿ.ವಿ.ಲೋಕೇಶ್, ಎಚ್.ವಿ.ದಿವಾಕರ್ ನಿತ್ಯಾನಂದ ಸ್ವಾಮಿ, ಯು. ಬಸವರಾಜ,
ಚಂದ್ರಪ್ಪ ಹೊಸ್ಕೇರಾ, ಕುಮಾರ್ ಸಮತಳ, ಡಾಟ ಜನಾರ್ದನ, ಚಾಮರಸ ಮಾಲಿಪಾಟೀಲ್‌ರವರು ಪತ್ರಿಕಾ ಹೇಳಿಕೆಗೆ ಸಹಿ ಮಾಡಿದ್ದಾರೆ.


ಇದನ್ನೂ ಓದಿ: ರಾಜ್ಯಪಾಲರೇ, ಭೂಸುಧಾರಣಾ ಕಾಯ್ದೆಗೆ ಸಹಿ ಹಾಕಬೇಡಿ: ಟ್ವಿಟ್ಟರ್ ದಾಳಿಗೆ ಸಿದ್ದತೆ!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಪ್ರಾಧಿಕಾರ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...