Homeಎಕಾನಮಿಮೋದಿಯ 20 ಲಕ್ಷ ಕೋಟಿ ಪ್ಯಾಕೇಜ್‌ನಲ್ಲಿ ಬಿಡುಗಡೆಯಾಗಿದ್ದೆಷ್ಟು? - ವಿವರ ಇಲ್ಲಿದೆ!

ಮೋದಿಯ 20 ಲಕ್ಷ ಕೋಟಿ ಪ್ಯಾಕೇಜ್‌ನಲ್ಲಿ ಬಿಡುಗಡೆಯಾಗಿದ್ದೆಷ್ಟು? – ವಿವರ ಇಲ್ಲಿದೆ!

ಮೇ ತಿಂಗಳಿನಲ್ಲಿ ಕೇಂದ್ರ ಸರ್ಕಾರ 20 ಲಕ್ಷ ಕೋಟಿ ಆತ್ಮನಿರ್ಭರ ಪ್ಯಾಕೇಜನ್ನು ಘೋಷಿಸಿತ್ತು. ಆದರೆ ಇದುವರೆಗೂ ಈ ಪ್ಯಾಕೇಜ್‌ನ ಕೇವಲ ಶೇ 10 ರಷ್ಟು ಹಣ ಮಾತ್ರ ಹಂಚಿಕೆಯಾಗಿದೆ

- Advertisement -
- Advertisement -

ಕೊರೊನಾ ಸಂದರ್ಭದ ಆರ್ಥಿಕ ಹಿನ್ನಡೆಯನ್ನು ಸರಿದೂಗಿಸುವ ಸಲುವಾಗಿ ಮೇ ತಿಂಗಳಿನಲ್ಲಿ ಕೇಂದ್ರ ಸರ್ಕಾರ 20 ಲಕ್ಷ ಕೋಟಿ ಆತ್ಮನಿರ್ಭರ ಪ್ಯಾಕೇಜನ್ನು ಘೋಷಿಸಿತ್ತು. ಆದರೆ ಇದುವರೆಗೂ ಈ ಪ್ಯಾಕೇಜ್‌ನ ಕೇವಲ ಶೇ 10 ರಷ್ಟು ಹಣ ಮಾತ್ರ ಹಂಚಿಕೆಯಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, “ಚುನಾವಣೆಯ ಜುಮ್ಲಾ – ಪ್ರತಿಯೊಬ್ಬರ ಅಕೌಂಟಿಗೂ 15 ಲಕ್ಷ, ಕೊರೊನಾ ಜುಮ್ಲಾ – 20 ಲಕ್ಷ ಕೋಟಿ ಪ್ಯಾಕೇಜ್” ಎಂದು ಟ್ವೀಟ್ ಮಾಡಿ ಪತ್ರಿಕಾ ವರದಿಯೊಂದನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ‘ಪ್ರಧಾನ ಮಂತ್ರಿ ಆಗಬೇಕು ಎನ್ನುವ ಆಸೆ ನನಗಿಲ್ಲ…’ – ಸಿದ್ದರಾಮಯ್ಯ

ಮೊದಲೇ ಇಳಿಮುಖವಾಗುತ್ತಿದ್ದ ಆರ್ಥಿಕತೆ ಕೊರೋನಾ ಸಾಂಕ್ರಾಮಿಕ ರೋಗದಿಂದ ಮತ್ತಷ್ಟು ಇಳಿಯತೊಡಗಿತು. ಲಾಕ್‌ಡೌನ್ ಸಂದರ್ಭದಲ್ಲಿ ಸರ್ಕಾರದ ಸರಿಯಾದ ನಿರ್ವಹಣೆಯಿಲ್ಲದೇ ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಜಿಡಿಪಿಯು ಶೇ -23ಕ್ಕೆ ಕುಸಿದಿತ್ತು. ಈ ಸಮಸ್ಯೆಯಿಂದ ಹೊರಬರುಲು ಕೇಂದ್ರ ಸರ್ಕಾರ 20 ಲಕ್ಷ ಕೋಟಿಯ ಆರ್ಥಿಕ ಉತ್ತೇಜಕ ಪ್ಯಾಕೇಜ್‌ ಅನ್ನು ಘೋಷಿಸಿತ್ತು.

ಇದನ್ನೂ ಓದಿ: ಕೊರೊನಾ ಪ್ಯಾಕೇಜ್‌ ಅಸಮರ್ಪಕ, ದೇಶದ ಆರ್ಥಿಕತೆ ಕುಸಿಯುತ್ತಿದೆ: ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಹ್ಮಣ್ಯನ್‌ ಸ್ವಾಮಿ

ಈ ಪ್ಯಾಕೇಜ್‌ನ ವಿವರಗಳನ್ನು ಕೋರಿ ಪುಣೆಯ ಉದ್ಯಮಿ ಪ್ರಫುಲ್ ಸರ್ದಾ ಎಂಬುವವರು ಆರ್‌ಟಿಐ ಅಡಿಯಲ್ಲಿ ಮಾಹಿತಿ ಕೋರಿದ್ದರು. ಇದರಲ್ಲಿ ಕೆಲವು ಅಚ್ಚರಿಯ ಅಂಶಗಳು ಬಹಿರಂಗವಾಗಿವೆ.

ಈ ಬೃಹತ್ ಪ್ಯಾಕೇಜ್ ವಿತರಣೆಯ ಅಡಿಯಲ್ಲಿ, ವಲಯವಾರು ಮತ್ತು ರಾಜ್ಯವಾರು ನೀಡಬೇಕಾಗಿರುವ ಯಾವುದೇ ಬಾಕಿ ಮೊತ್ತವು ಬಾಕಿ ಉಳಿದಿದೆಯೇ ಎಂಬ ವಿವರಗಳನ್ನು ಕೋರಲಾಗಿತ್ತು.

ಇದನ್ನೂ ಓದಿ: ಇರುವ ಯೋಜನೆಗಳ ರೀಪ್ಯಾಕೇಜೇ ಹೊಸ ಪ್ಯಾಕೇಜ್: ಆರ್ಥಿಕತೆ ಮತ್ತಷ್ಟು ಕುಸಿಯುವುದರಲ್ಲಿ ಅನುಮಾನವಿಲ್ಲ

ಆತ್ಮನಿರ್ಭರ ಭಾರತ್ ಅಭಿಯಾನದ ಅಡಿಯಲ್ಲಿ, ತುರ್ತು ಕ್ರೆಡಿಟ್ ಲೈನ್ ಖಾತರಿ ಯೋಜನೆಯನ್ನು (ECLGS) ಪರಿಚಯಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ. ಈ ಯೋಜನೆಯಡಿಯಲ್ಲಿ ಅಕ್ಟೋಬರ್ 31 ರವರೆಗೆ 3 ಲಕ್ಷ ಕೋಟಿ ರೂ.ಗಳನ್ನು ಮಂಜೂರು ಮಾಡಲಾಗಿದೆ. ಇದರಲ್ಲಿ ಸರ್ಕಾರವು ವಿವಿಧ ರಾಜ್ಯಗಳಿಗೆ ಸಾಲವಾಗಿ ಸುಮಾರು 1.20 ಲಕ್ಷ ಕೋಟಿ ರೂ.ಗಳನ್ನು ವಿತರಿಸಿದೆ ಎಂದು ತಿಳಿದುಬಂದಿದೆ.

“ಸರ್ಕಾರವು 3 ಲಕ್ಷ ಕೋಟಿ ರೂ.ಗಳನ್ನು ಮಂಜೂರು ಮಾಡಿದೆ. ಅದರಲ್ಲಿ ಸುಮಾರು ಶೇಕಡಾ 40ರಷ್ಟನ್ನು (1.20 ಲಕ್ಷ ಕೋಟಿ) ವಿತರಿಸಲಾಗಿದೆ. ದೊಡ್ಡ ಪ್ರಶ್ನೆಯೆಂದರೆ – ಈ ದೊಡ್ಡ ಪ್ಯಾಕೇಜ್‌ನಲ್ಲಿ ಉಳಿದ 17 ಲಕ್ಷ ಕೋಟಿ ರೂ. ಏನಾಯಿತು. ಈ ಯೋಜನೆ ಘೋಷಿಸಿ 7 ತಿಂಗಳ ನಂತರ ಇದು ಬಹಿರಂಗವಾಗಿದೆ. ಇದು ಭಾರತೀಯ ಜನರಿಗೆ ಮಾಡಿದ ಮತ್ತೊಂದು ವಂಚನೆಯೇ (ಜುಮ್ಲಾ)”ಎಂದು ಸರ್ದಾ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಭಾರತವು ವಿಶ್ವದ ಆರ್ಥಿಕತೆಯಲ್ಲಿ 3ನೇ ಸ್ಥಾನಕ್ಕೆ ಬರಲು ಇನ್ನೂ 30 ವರ್ಷ ಬೇಕು: ಅಧ್ಯಯನ

“ಇಡೀ ದೇಶವು, ಕಳೆದ 10 ತಿಂಗಳುಗಳಿಂದ ಕೊರೋನಾ ವೈರಸ್ ಸಾಂಕ್ರಾಮಿಕ ರೋಗ ಮತ್ತು ಲಾಕ್‌ಡೌನ್‌ನ ನಂತರದ ಪರಿಣಾಮಗಳಿಂದ ತತ್ತರಿಸುತ್ತಿದೆ. ಕೋಟ್ಯಂತರ ವ್ಯಕ್ತಿಗಳು, ಅವರ ಕುಟುಂಬಗಳು ಮತ್ತು ವ್ಯವಹಾರಗಳು ತೊಂದರೆ ಅನುಭವಿಸುತ್ತಿವೆ. ಆದರೆ ಪರಿಸ್ಥಿತಿಯನ್ನು ಸಾಮಾನ್ಯಗೊಳಿಸಲು ಕೇಂದ್ರವು ಇನ್ನೂ ಸಾಕಷ್ಟು ಹಣವನ್ನು ಮಂಜೂರು ಮಾಡಿಲ್ಲ” ಸರ್ದಾ ಹೇಳಿದರು.

ದೇಶದ ಆರ್ಥಿಕ ತಜ್ಞರು, ಕೇಂದ್ರ ಸರ್ಕಾರದ ಈ ಯೋಜನೆಯನ್ನು ವಾಸ್ತವದಲ್ಲಿ ಇದು ಸಾಧ್ಯವಾಗುವುದಿಲ್ಲ ಟೀಕಿಸಿದ್ದರು. ಆದರೂ ಕೇಂದ್ರ ಬಿಜೆಪಿ ಸರ್ಕಾರ ಮತ್ತು ಅದರ ವಕ್ತಾರರು ಈ ಯೋಜನೆಯ ಬಗ್ಗೆ ಸಾಕಷ್ಟು ಪ್ರಚಾರ ನಡೆಸಿದರು. ಆದರೆ ಇಷ್ಟು ದಿನಗಳ ನಂತರ ಬಹಿರಂಗಗೊಂಡಿರುವ ಮಾಹಿತಿಯನ್ನು ಅವಲೋಕಿಸಿದಾಗ 20 ಲಕ್ಷ ಕೋಟಿಯ ಯೋಜನೆ ಚುನಾವಣಾ ಪ್ರಣಾಳಿಕೆಯಂತಾಗಿದೆ ಎಂಬುದರಲ್ಲಿ ಸಂದೇಹವಿಲ್ಲ.


ಇದನ್ನೂ ಓದಿ: ಕೋವಿಡ್‌ನಿಂದ ನೆಲಕಚ್ಚಿರುವ ಆರ್ಥಿಕತೆಯನ್ನು ಮೇಲೆತ್ತಲು ಸರ್ಕಾರ ಮಾಡಬೇಕಾದುದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...