Homeಚಳವಳಿರೈತರು ವಿಷ ಸೇವಿಸಿದಾಗ ಕಾಳಜಿ ವಹಿಸದವರು ಪಿಜ್ಜಾ ತಿನ್ನುವಾಗ ಟೀಕೆ ಮಾಡುತ್ತಾರೆ - ದಿಲ್ಜಿತ್ ದೋಸಾಂಜ್

ರೈತರು ವಿಷ ಸೇವಿಸಿದಾಗ ಕಾಳಜಿ ವಹಿಸದವರು ಪಿಜ್ಜಾ ತಿನ್ನುವಾಗ ಟೀಕೆ ಮಾಡುತ್ತಾರೆ – ದಿಲ್ಜಿತ್ ದೋಸಾಂಜ್

ಪಾಕಿಸ್ತಾನಕ್ಕೆ ಹೋಗಿ ಬಿರಿಯಾನಿ ತಿನ್ನೋದು ತಪ್ಪಲ್ಲ ಅಂದಮೇಲೆ ರೈತರು ಹೋರಾಟದಲ್ಲಿ ಪಿಜ್ಜಾ ತಿನ್ನೋದು ಹೇಗೆ ತಪ್ಪು?

- Advertisement -
- Advertisement -

ದೆಹಲಿಯ ಗಡಿಗಳಲ್ಲಿ ಕಳೆದ 19 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಕಳೆದ ವಾರ ಪಿಜ್ಜಾ ವಿತರಣೆಯಾದ ಬಗ್ಗೆ ಟೀಕಿಸಿದವರಿಗೆ, ಟ್ರೋಲ್ ಮಾಡಿದವರಿಗೆ ನಟ, ಗಾಯಕ ದಿಲ್ಜಿತ್ ದೋಸಾಂಜ್ ತಿರುಗೇಟು ನೀಡಿದ್ದಾರೆ. ಪ್ರತಿಭಟನೆ ಆರಂಭದಿಂದಲು ರೈತರ ಪರವಾಗಿ ನಿಂತಿರುವ ನಟ, ರೈತರ ಬಗೆಗಿನ ಎಲ್ಲಾ ಆರೋಪಗಳಿಗೂ ಉತ್ತರ ನೀಡುತ್ತಿದ್ದಾರೆ.

ಕಳೆದ ವಾರ, ದೆಹಲಿ-ಹರಿಯಾಣದ ಸಿಂಘು ಗಡಿಯಲ್ಲಿ ನೂರಾರು ಪಿಜ್ಜಾಗಳನ್ನು ಪ್ರತಿಭಟನಾ ನಿರತ ರೈತರಿಗೆ  ವಿತರಿಸಲಾಗಿತ್ತು. ಅಮೃತಸರದ ಐವರು ಸ್ನೇಹಿತರ ಗುಂಪು ಸಿಂಘು ಗಡಿಯಲ್ಲಿ ಒಂದು ಅಂಗಡಿ ಮಾಡಿ, ಪ್ರತಿಭಟನಾ ನಿರತ ರೈತರಿಗೆ ಸುಮಾರು 400 ಪಿಜ್ಜಾಗಳನ್ನು ವಿತರಿಸಿದ್ದರು.

36 ವರ್ಷದ ಬಾಲಿವುಡ್ ನಟ ದಿಲ್ಜಿತ್ ದೋಸಾಂಜ್, ತಮ್ಮ ಟ್ವಿಟರ್‌ ಖಾತೆಯಲ್ಲಿ ಒಂದು ಚಿತ್ರವನ್ನು ಟ್ವೀಟ್ ಮಾಡಿದ್ದಾರೆ. “ರೈತರು ವಿಷ ಸೇವಿಸುವುದರ ಬಗ್ಗೆ ಯಾರಿಗೂ ಎಂದಿಗೂ ಕಾಳಜಿಯಿಲ್ಲ. ಆದರೆ, ರೈತರು ಪಿಜ್ಜಾ ತಿನ್ನುವುದು ಸುದ್ದಿಯಾಗಿದೆ.” ಎಂದು ವ್ಯಂಗ್ಯ ಮಾಡಿದ್ದಾರೆ.

ಇದನ್ನೂ ಓದಿ: ಜನರಿಗಾಗಿ ತಮ್ಮ ಆಸ್ತಿಯನ್ನು 10 ಕೋಟಿಗೆ ಅಡವಿಟ್ಟ ನಟ ಸೋನು ಸೂದ್!

“ಪಿಜ್ಜಾಗಳಿಗಾಗಿ ಹಿಟ್ಟನ್ನು ಒದಗಿಸುವ ರೈತರು, ತಾವು ಕೂಡ ಒಂದು ಪಿಜ್ಜಾ ತಿನ್ನಲು ಅರ್ಹರಾಗಿರುತ್ತಾರೆ” ಎಂದು ತನ್ನ ನಾಲ್ವರು ಸ್ನೇಹಿತರೊಂದಿಗೆ ಪಿಜ್ಜಾ ಹಂಚಿದ್ದ ಶನ್‌ಬೀರ್ ಸಿಂಗ್ ಸಂಧು ಸುದ್ದಿ ಸಂಸ್ಥೆ ಪಿಟಿಐ ಜೊತೆಗೆ ಹೇಳಿದ್ದಾರೆ.

4fuee5m8

ಈ ಘಟನೆಯನ್ನು ಹಲವು ಮಂದಿ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಶ್ಲಾಘಿಸಿದ್ದರು. ಇನ್ನೂ ಅನೇಕ ಮಂದಿ ಪ್ರತಿಭಟನೆಯನ್ನು ತಿರುಚಲಾಗುತ್ತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪ್ರಧಾನಿ ನೀಡುತ್ತಿರುವ ಐತಿಹಾಸಿಕ ಉಡುಗೊರೆ ರೈತರಿಗೆ ಬೇಡ: ಯೋಗೇಂದ್ರ ಯಾದವ್

ಇದನ್ನೂ ಓದಿ: ರೈತರ ಪ್ರತಿಭಟನೆ ಬೆಂಬಲಿಸಲು ರಾಜೀನಾಮೆ ನೀಡಿದ ಪಂಜಾಬ್ ಡಿಐಜಿ!

ಪ್ರತಿಭಟಿಸುತ್ತಿರುವ ರೈತರಿಗೆ ಉಚಿತ ಪಿಜ್ಜಾಗಳು, ಮಸಾಜ್ ಕುರ್ಚಿಗಳು, ಇದು ಪ್ರತಿಭಟನೆಯೇ ಅಥವಾ ಪಂಚತಾರಾ ಸ್ಪಾನಾ? ಮತ್ತು ಇದಕ್ಕಾಗಿ ಯಾರು ಪಾವತಿಸುತ್ತಿದ್ದಾರೆ? ಎಂದು ಅನೇಕ ಪ್ರಶ್ನೆಗಳು ಬಂದಿದ್ದವು.

ಇದಕ್ಕೆ ಬಹಳಷ್ಟು ಸಾಮಾಜಿಕ ಜಾಲತಾಣಿಗರು “ಗೂಗಲ್‌ನಿಂದ ಆಹಾರ ಡೌನ್‌ಲೋಡ್ ಮಾಡಲು ಸಾಧ್ಯವಿಲ್ಲ. ದೇಶಕ್ಕೆ ಅನ್ನ ನೀಡುವ ರೈತರನ್ನು ಅವಮಾನಿಸಬೇಡಿ. ಅವರು 20 ದಿನಗಳಿಂದ ಹೋರಾಟ ಮಾಡಿ ದಣಿದಿದ್ದಾರೆ. ಹಾಗಾಗಿ ಬಹಳಷ್ಟು ಪ್ರಜ್ಞಾವಂತರು ಹೋರಾಟ ನಿರತ ರೈತರಿಗೆ ಸಹಾಯ ಮಾಡುತ್ತಿದ್ದಾರೆ. ರೈತರನ್ನು ಕೇವಲ ಬಡವರನ್ನಾಗಿಯೇ ನೋಡುವ ನಿಮ್ಮ ಮನಸ್ಥಿತಿಗೆ ಧಿಕ್ಕಾರ” ಎಂಬುದಾಗಿ ಟ್ವೀಟ್‌ ಮಾಡಿ ತಿರುಗೇಟು ನೀಡಿದ್ದರು.

“ಪಾಕಿಸ್ತಾನಕ್ಕೆ ಹೋಗಿ ಬಿರಿಯಾನಿ ತಿನ್ನೋದು ತಪ್ಪಲ್ಲ ಅಂದಮೇಲೆ ರೈತರು ಹೋರಾಟದಲ್ಲಿ ಪಿಜ್ಜಾ ತಿನ್ನೋದು ಹೇಗೆ ತಪ್ಪು? ಅನ್ನದಾತ ರೈತರು ಹೋರಾಟದಲ್ಲಿ ಪಿಜ್ಜಾ ಬಿರಿಯಾನಿ ತಿನ್ನೋದು ನಾವೆಲ್ಲರೂ ಖುಷಿಯಿಂದ ಸ್ವಾಗತಿಸಬೇಕು. ಅನ್ನದಾತೋ ಸುಖೀಭವ” ಎಂದು ಯುವ ಹೋರಾಟಗಾರ ಸರೋವರ್ ಬೆಂಕಿಕೆರೆ ಅಭಿಪ್ರಾಯಪಟ್ಟಿದ್ದಾರೆ.

ಈ ತಿಂಗಳ ಆರಂಭದಲ್ಲಿ, ದಿಲ್ಜಿತ್ ದೋಸಾಂಜ್ ದೆಹಲಿ-ಹರಿಯಾಣ ಗಡಿಯಲ್ಲಿರುವ ಪ್ರತಿಭಟನಾ ಸ್ಥಳಕ್ಕೆ ಬೆಂಬಲ ನೀಡಲು ಭೇಟಿ ನೀಡಿದ್ದರು. “ದಯವಿಟ್ಟು ನಮ್ಮ ರೈತರ ಬೇಡಿಕೆಗಳನ್ನು ಈಡೇರಿಸಿ. ಎಲ್ಲರೂ ಇಲ್ಲಿ ಶಾಂತಿಯುತವಾಗಿ ಕುಳಿತಿದ್ದಾರೆ ಮತ್ತು ಇಡೀ ದೇಶವು ರೈತರೊಂದಿಗೆ ಇದೆ. ಈ ರೈತರ ಪ್ರತಿಭಟನೆ ಬಗ್ಗೆ, ಟ್ವಿಟ್ಟರ್‌ನಲ್ಲಿ ವಿಷಯಗಳನ್ನು ತಿರುಚಲಾಗಿದೆ ಆದರೆ ಸತ್ಯವೆಂದರೆ ರೈತರು ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದಾರೆ. ಇಲ್ಲಿ ಯಾರೂ ರಕ್ತಪಾತದ ಬಗ್ಗೆ ಮಾತನಾಡುವುದಿಲ್ಲ. ಇವರ ಬೇಡಿಕೆಗಳನ್ನು ಪರಿಹರಿಸಿ’ ಎಂದು ಕೇಂದ್ರ ಸರ್ಕಾರಕ್ಕೆ ದಿಲ್ಜಿತ್ ಮನವಿ ಮಾಡಿದ್ದರು.

ನವೆಂಬರ್ ಅಂತ್ಯದಲ್ಲಿ ಪ್ರಾರಂಭವಾದ ಆಂದೋಲನದ ಬಗ್ಗೆ ಅವರು ನಿಯಮಿತವಾಗಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಪ್ರತಿಭಟನಾಕಾರರಿಗೆ ಬೆಂಬಲ ಸೂಚಿಸಿ ದಿಲ್ಜಿತ್ ಹಾಕಿದ ಟ್ವೀಟ್‌ಗಳಲ್ಲಿ ಒಂದನ್ನು ಬಾಲಿವುಡ್ ನಟ ಪ್ರಿಯಾಂಕಾ ಚೋಪ್ರಾ ಕೂಡ ಅನುಮೋದಿಸಿ, ರಿಟ್ವೀಟ್ ಮಾಡಿದ್ದರು.


ಇದನ್ನೂ ಓದಿ: ಹೋರಾಟನಿರತ ರೈತರ ಸ್ಪೆಟರ್, ಹೊದಿಕೆ‌ಗಾಗಿ 1 ಕೋಟಿ ರೂ. ದೇಣಿಗೆ ನೀಡಿದ ಗಾಯಕ ದಿಲ್ಜಿತ್​ ದೋಸಂಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...