Homeಮುಖಪುಟ'ಶೂದ್ರ' ಪದಬಳಕೆ: ಪ್ರಗ್ಯಾ ಠಾಕೂರ್‌ಗೆ ತಿರುಗೇಟು ಕೊಟ್ಟ ಮೀನಾ ಕಂದಸಾಮಿ

‘ಶೂದ್ರ’ ಪದಬಳಕೆ: ಪ್ರಗ್ಯಾ ಠಾಕೂರ್‌ಗೆ ತಿರುಗೇಟು ಕೊಟ್ಟ ಮೀನಾ ಕಂದಸಾಮಿ

"100 ವರ್ಷಗಳ ಹಿಂದೆ ಇ.ವಿ.ರಾಮಸಾಮಿ ಪೆರಿಯಾರ್ ಅವರು ಮನುಸ್ಮೃತಿ ಮತ್ತು ಜಾತಿ ಪದ್ಧತಿಯಡಿಯಲ್ಲಿ ಶೂದ್ರ ಪದದ ವಿವರಣೆಯನ್ನು ಉಲ್ಲೇಖಿಸಿ ಶೂದ್ರ ಎಂದು ಸಂಬೋಧಿಸುವುದನ್ನು ಆಕ್ಷೇಪಿಸಿದ್ದರು"

- Advertisement -
- Advertisement -

ಮಾಲೆಗಾಂವ್ ಬಾಂಬ್ ಸ್ಫೋಟದ ಆರೋಪಿ ಮತ್ತು ಬಿಜೆಪಿ ಸಂಸದೆ ಪ್ರಗ್ಯಾ ಠಾಕೂರ್ ವರ್ಣ ವ್ಯವಸ್ಥೆ ಮತ್ತು ಜಾತಿಗೆ ಸಂಬಂಧಿಸಿದಂತೆ ವಿವಾದಾತ್ಮಕ ಹೇಳಿಕೆ ನೀಡಿರುವುದನ್ನು ಖಂಡಿಸಿರುವ ಸಾಮಾಜಿಕ ಕಾರ್ಯಕರ್ತೆ ಡಾ. ಮೀನಾ ಕಂದಸಾಮಿ ಪೆರಿಯಾರ್ ಹೇಳಿಕೆಯನ್ನು ಉಲ್ಲೇಖಿಸಿ ತಿರುಗೇಟು ನೀಡಿದ್ದಾರೆ.

“100 ವರ್ಷಗಳ ಹಿಂದೆ ಇ.ವಿ.ರಾಮಸಾಮಿ ಪೆರಿಯಾರ್ ಅವರು ಮನುಸ್ಮೃತಿ ಮತ್ತು ಜಾತಿ ಪದ್ಧತಿಯಡಿಯಲ್ಲಿ ಶೂದ್ರ ಪದದ ವಿವರಣೆಯನ್ನು ಉಲ್ಲೇಖಿಸಿ ಶೂದ್ರ ಎಂದು ಸಂಬೋಧಿಸುವುದನ್ನು ಆಕ್ಷೇಪಿಸಿದ್ದರು” ಎಂದು ವಿದ್ವಾಂಸರು ಮತ್ತು ಯುವ ಕವಿಯಾದ ಮೀನಾ ಕಂದಸಾಮಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಶೂದ್ರರಿಗೆ ಜ್ಞಾನವಿಲ್ಲ, ಹಾಗಾಗಿಯೇ ತಾವು ಶೂದ್ರರು ಎಂದು ಒಪ್ಪಿಕೊಳ್ಳುವುದಿಲ್ಲ: ಪ್ರಗ್ಯಾ ಠಾಕೂರ್ 

“ಬ್ರಾಹ್ಮಣರನ್ನು ಬ್ರಾಹ್ಮಣರು ಎಂದು ಕರೆದರೆ, ಅವರು ತಪ್ಪಾಗಿ ಗ್ರಹಿಸುವುದಿಲ್ಲ. ಏಕೆಂದರೆ ಈ ಪದ ಅಧಿಕಾರ, ಜ್ಞಾನ, ಪಾವಿತ್ರ್ಯತೆ ಮತ್ತು ಅರ್ಹತೆಯನ್ನು ಸೂಚಿಸುತ್ತದೆ” ಎಂದು ವಿವರಿಸಿದ್ದಾರೆ.

ಇದನ್ನೂ ಓದಿ: ರಾಜ್ಯಪಾಲರೇ, ಭೂಸುಧಾರಣಾ ಕಾಯ್ದೆಗೆ ಸಹಿ ಹಾಕಬೇಡಿ: ಟ್ವಿಟ್ಟರ್ ದಾಳಿಗೆ ಸಿದ್ದತೆ!

ಪೆರಿಯಾರ್ ಹೇಳಿಕೆಯಿರುವ ಚಿತ್ರವನ್ನು ಹಂಚಿಕೊಂಡಿರುವ ಮೀನಾ, “ನಮ್ಮನ್ನು ಸಂಬೋಧಿಸುವ ಹೆಸರು ಶೂದ್ರ, ನಮ್ಮನ್ನು ಹುಟ್ಟಿನಿಂದಲೇ ಅವಮಾನಕ್ಕೆ ಗುರಿ ಮಾಡುತ್ತದೆ. ಹುಟ್ಟುತ್ತಲೇ ಗುಲಾಮ ಎಂದು ಗುರುತಿಸಲಾಗುತ್ತದೆ. ಶೂದ್ರ ಎಂದರೆ ವೇಶ್ಯೆಯ ಮಗ.. ಇತ್ಯಾದಿ…” ಎಂದು ಬರೆಯಲಾಗಿದೆ.

“ಪ್ರಗ್ಯಾ ಠಾಕೂರ್ ಮತ್ತು ಇತರೆ ಹಿಂದುತ್ವವಾದಿಗಳು ಹಾಗೂ ಸನಾತನವಾದಿಗಳಿಗೆ ಈ ಪದಗಳ ಬಳಕೆ ಏನನ್ನು ಸೂಚಿಸುತ್ತದೆ ಎಂದು ತಿಳಿದಿಲ್ಲ. ಈ ಪದಗಳು ಅಥವಾ ಇಂತಹ ಉಲ್ಲೇಖಗಳು ಎಷ್ಟು ತೀವ್ರವಾಗಿ ನೋಯಿಸುತ್ತದೆ ಎಂಬುದೂ ಅವರಿಗೆ ತಿಳಿದಿಲ್ಲ. ಇದಕ್ಕೆ ತದ್ವಿರುದ್ದವಾಗಿ ಜಾತಿ ಮತ್ತು ವರ್ಣಾಶ್ರಮವನ್ನು ರಕ್ಷಿಸಿ ಅವುಗಳನ್ನು ಸಾರ್ವತ್ರಿಕಗೊಳಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಮತ್ತೊಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಹೋರಾಟ ತೀವ್ರಗೊಳಿಸಲು ಉಪವಾಸ ಸತ್ಯಾಗ್ರಹ ಆರಂಭಿಸಿದ ರೈತ ಮುಖಂಡರು: 10 ಅಂಶಗಳು

ಬಿಜೆಪಿ ಸಂಸದೆ ಪ್ರಗ್ಯಾ ಸಿಂಗ್ ಠಾಕೂರ್ ಶನಿವಾರ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದು, ಮಧ್ಯಪ್ರದೇಶದ ಸೆಹೋರ್‌ನಲ್ಲಿ ನಡೆದ ಸಭೆಯನ್ನುದ್ದೇಶಿಸಿ, “ಶೂದ್ರರನ್ನು ಶೂದ್ರರು ಎಂದು ಕರೆದರೆ ಅವರು ಒಪ್ಪುವುದಿಲ್ಲ, ಯಾಕೆಂದರೆ ಅವರಿಗೆ ಜ್ಞಾನವಿಲ್ಲ” ಎಂದು ಹೇಳಿದ್ದರು.

ಭಾರತದಲ್ಲಿನ ವರ್ಣ ವ್ಯವಸ್ಥೆಯ ಬಗ್ಗೆ ಮಾತನಾಡುತ್ತಾ, “ಸಾಮಾಜಿಕ ರಚನೆಗಾಗಿ ನಮ್ಮ ಸಮಾಜವನ್ನು ನಾಲ್ಕು ಭಾಗಗಳಾಗಿ ವಿಂಗಡಿಸಲಾಗಿದೆ. ಕ್ಷತ್ರಿಯರನ್ನು ಕ್ಷತ್ರಿಯರು ಎಂದು ಕರೆದರೆ, ಅವರು ಅದನ್ನು ತಪ್ಪೆಂದು ಪರಿಗಣಿಸುವುದಿಲ್ಲ. ಒಬ್ಬ ಬ್ರಾಹ್ಮಣನನ್ನು ಬ್ರಾಹ್ಮಣ ಎಂದು ಕರೆದರೆ ತಪ್ಪೆಂದು ಪರಿಗಣಿಸುವುದಿಲ್ಲ. ವೈಶ್ಯನನ್ನು ವೈಶ್ಯ ಎಂದರೆ, ಅವನೂ ಅದನ್ನು ಅನ್ಯತಾ ಭಾವಿಸುವುದಿಲ್ಲ. ಆದರೆ ಶೂದ್ರರನ್ನು ಶೂದ್ರರನ್ನು ಶೂದ್ರರು ಎಂದು ಕರೆದರೆ, ಅವರು ಅದನ್ನು ಒಪ್ಪುವುದಿಲ್ಲ, ಯಾಕೆಂದರೆ ಅವರಿಗೆ ಜ್ಞಾನವಿಲ್ಲ” ಎಂದು ಹೇಳಿದ್ದರು.

ಇದನ್ನೂ ಓದಿ: ಕರ್ನಾಟಕದ ಸುಮಾರು 50% ರಷ್ಟು ಯುವತಿಯರಿಗೆ ರಕ್ತಹೀನತೆ- NFHS ವರದಿ

ಪ್ರಗ್ಯಾ ಸಿಂಗ್ ಇಂತಹ ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಿರುವುದು ಇದೇ ಮೊದಲೇನಲ್ಲ. ಕಳೆದ ವರ್ಷ ನವೆಂಬರ್‌ನಲ್ಲಿ ಮಹಾತ್ಮ ಗಾಂಧಿಯ ಹಂತಕ ನಾಥೂರಾಂ ಗೂಡ್ಸೆಯನ್ನು ದೇಶ ಭಕ್ತ ಎಂದು ಕರೆದು ವ್ಯಾಪಕ ಟೀಕೆಗೆ ಗುರಿಯಾಗಿದ್ದರು.

2008 ರಲ್ಲಿ ಮುಂಬೈನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಕೊಲ್ಲಲ್ಪಟ್ಟ ದಿವಂಗತ ಮಹಾರಾಷ್ಟ್ರ ಎಟಿಎಸ್ ಮುಖ್ಯಸ್ಥ ಹೇಮಂತ್ ಕಾರ್ಕರೆ ಅವರನ್ನು ತಾನು ಶಪಿಸಿದ್ದರಿಂದಲೇ ಸಾವನ್ನಪ್ಪಿದ್ದಾರೆ ಎಂದು ಪ್ರಗ್ಯಾ ಸಿಂಗ್ ತಮ್ಮ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಹೇಳಿ ವಿವಾದಕ್ಕೆ ಗುರಿಯಾಗಿದ್ದರು.


ಇದನ್ನೂ ಓದಿ: ರಾಜಸ್ಥಾನ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಕಾಂಗ್ರೆಸ್-620, ಬಿಜೆಪಿ-548 ಸ್ಥಾನಗಳಲ್ಲಿ ಗೆಲುವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....