Homeಮುಖಪುಟ'ಶೂದ್ರ' ಪದಬಳಕೆ: ಪ್ರಗ್ಯಾ ಠಾಕೂರ್‌ಗೆ ತಿರುಗೇಟು ಕೊಟ್ಟ ಮೀನಾ ಕಂದಸಾಮಿ

‘ಶೂದ್ರ’ ಪದಬಳಕೆ: ಪ್ರಗ್ಯಾ ಠಾಕೂರ್‌ಗೆ ತಿರುಗೇಟು ಕೊಟ್ಟ ಮೀನಾ ಕಂದಸಾಮಿ

"100 ವರ್ಷಗಳ ಹಿಂದೆ ಇ.ವಿ.ರಾಮಸಾಮಿ ಪೆರಿಯಾರ್ ಅವರು ಮನುಸ್ಮೃತಿ ಮತ್ತು ಜಾತಿ ಪದ್ಧತಿಯಡಿಯಲ್ಲಿ ಶೂದ್ರ ಪದದ ವಿವರಣೆಯನ್ನು ಉಲ್ಲೇಖಿಸಿ ಶೂದ್ರ ಎಂದು ಸಂಬೋಧಿಸುವುದನ್ನು ಆಕ್ಷೇಪಿಸಿದ್ದರು"

- Advertisement -
- Advertisement -

ಮಾಲೆಗಾಂವ್ ಬಾಂಬ್ ಸ್ಫೋಟದ ಆರೋಪಿ ಮತ್ತು ಬಿಜೆಪಿ ಸಂಸದೆ ಪ್ರಗ್ಯಾ ಠಾಕೂರ್ ವರ್ಣ ವ್ಯವಸ್ಥೆ ಮತ್ತು ಜಾತಿಗೆ ಸಂಬಂಧಿಸಿದಂತೆ ವಿವಾದಾತ್ಮಕ ಹೇಳಿಕೆ ನೀಡಿರುವುದನ್ನು ಖಂಡಿಸಿರುವ ಸಾಮಾಜಿಕ ಕಾರ್ಯಕರ್ತೆ ಡಾ. ಮೀನಾ ಕಂದಸಾಮಿ ಪೆರಿಯಾರ್ ಹೇಳಿಕೆಯನ್ನು ಉಲ್ಲೇಖಿಸಿ ತಿರುಗೇಟು ನೀಡಿದ್ದಾರೆ.

“100 ವರ್ಷಗಳ ಹಿಂದೆ ಇ.ವಿ.ರಾಮಸಾಮಿ ಪೆರಿಯಾರ್ ಅವರು ಮನುಸ್ಮೃತಿ ಮತ್ತು ಜಾತಿ ಪದ್ಧತಿಯಡಿಯಲ್ಲಿ ಶೂದ್ರ ಪದದ ವಿವರಣೆಯನ್ನು ಉಲ್ಲೇಖಿಸಿ ಶೂದ್ರ ಎಂದು ಸಂಬೋಧಿಸುವುದನ್ನು ಆಕ್ಷೇಪಿಸಿದ್ದರು” ಎಂದು ವಿದ್ವಾಂಸರು ಮತ್ತು ಯುವ ಕವಿಯಾದ ಮೀನಾ ಕಂದಸಾಮಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಶೂದ್ರರಿಗೆ ಜ್ಞಾನವಿಲ್ಲ, ಹಾಗಾಗಿಯೇ ತಾವು ಶೂದ್ರರು ಎಂದು ಒಪ್ಪಿಕೊಳ್ಳುವುದಿಲ್ಲ: ಪ್ರಗ್ಯಾ ಠಾಕೂರ್ 

“ಬ್ರಾಹ್ಮಣರನ್ನು ಬ್ರಾಹ್ಮಣರು ಎಂದು ಕರೆದರೆ, ಅವರು ತಪ್ಪಾಗಿ ಗ್ರಹಿಸುವುದಿಲ್ಲ. ಏಕೆಂದರೆ ಈ ಪದ ಅಧಿಕಾರ, ಜ್ಞಾನ, ಪಾವಿತ್ರ್ಯತೆ ಮತ್ತು ಅರ್ಹತೆಯನ್ನು ಸೂಚಿಸುತ್ತದೆ” ಎಂದು ವಿವರಿಸಿದ್ದಾರೆ.

ಇದನ್ನೂ ಓದಿ: ರಾಜ್ಯಪಾಲರೇ, ಭೂಸುಧಾರಣಾ ಕಾಯ್ದೆಗೆ ಸಹಿ ಹಾಕಬೇಡಿ: ಟ್ವಿಟ್ಟರ್ ದಾಳಿಗೆ ಸಿದ್ದತೆ!

ಪೆರಿಯಾರ್ ಹೇಳಿಕೆಯಿರುವ ಚಿತ್ರವನ್ನು ಹಂಚಿಕೊಂಡಿರುವ ಮೀನಾ, “ನಮ್ಮನ್ನು ಸಂಬೋಧಿಸುವ ಹೆಸರು ಶೂದ್ರ, ನಮ್ಮನ್ನು ಹುಟ್ಟಿನಿಂದಲೇ ಅವಮಾನಕ್ಕೆ ಗುರಿ ಮಾಡುತ್ತದೆ. ಹುಟ್ಟುತ್ತಲೇ ಗುಲಾಮ ಎಂದು ಗುರುತಿಸಲಾಗುತ್ತದೆ. ಶೂದ್ರ ಎಂದರೆ ವೇಶ್ಯೆಯ ಮಗ.. ಇತ್ಯಾದಿ…” ಎಂದು ಬರೆಯಲಾಗಿದೆ.

“ಪ್ರಗ್ಯಾ ಠಾಕೂರ್ ಮತ್ತು ಇತರೆ ಹಿಂದುತ್ವವಾದಿಗಳು ಹಾಗೂ ಸನಾತನವಾದಿಗಳಿಗೆ ಈ ಪದಗಳ ಬಳಕೆ ಏನನ್ನು ಸೂಚಿಸುತ್ತದೆ ಎಂದು ತಿಳಿದಿಲ್ಲ. ಈ ಪದಗಳು ಅಥವಾ ಇಂತಹ ಉಲ್ಲೇಖಗಳು ಎಷ್ಟು ತೀವ್ರವಾಗಿ ನೋಯಿಸುತ್ತದೆ ಎಂಬುದೂ ಅವರಿಗೆ ತಿಳಿದಿಲ್ಲ. ಇದಕ್ಕೆ ತದ್ವಿರುದ್ದವಾಗಿ ಜಾತಿ ಮತ್ತು ವರ್ಣಾಶ್ರಮವನ್ನು ರಕ್ಷಿಸಿ ಅವುಗಳನ್ನು ಸಾರ್ವತ್ರಿಕಗೊಳಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಮತ್ತೊಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಹೋರಾಟ ತೀವ್ರಗೊಳಿಸಲು ಉಪವಾಸ ಸತ್ಯಾಗ್ರಹ ಆರಂಭಿಸಿದ ರೈತ ಮುಖಂಡರು: 10 ಅಂಶಗಳು

ಬಿಜೆಪಿ ಸಂಸದೆ ಪ್ರಗ್ಯಾ ಸಿಂಗ್ ಠಾಕೂರ್ ಶನಿವಾರ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದು, ಮಧ್ಯಪ್ರದೇಶದ ಸೆಹೋರ್‌ನಲ್ಲಿ ನಡೆದ ಸಭೆಯನ್ನುದ್ದೇಶಿಸಿ, “ಶೂದ್ರರನ್ನು ಶೂದ್ರರು ಎಂದು ಕರೆದರೆ ಅವರು ಒಪ್ಪುವುದಿಲ್ಲ, ಯಾಕೆಂದರೆ ಅವರಿಗೆ ಜ್ಞಾನವಿಲ್ಲ” ಎಂದು ಹೇಳಿದ್ದರು.

ಭಾರತದಲ್ಲಿನ ವರ್ಣ ವ್ಯವಸ್ಥೆಯ ಬಗ್ಗೆ ಮಾತನಾಡುತ್ತಾ, “ಸಾಮಾಜಿಕ ರಚನೆಗಾಗಿ ನಮ್ಮ ಸಮಾಜವನ್ನು ನಾಲ್ಕು ಭಾಗಗಳಾಗಿ ವಿಂಗಡಿಸಲಾಗಿದೆ. ಕ್ಷತ್ರಿಯರನ್ನು ಕ್ಷತ್ರಿಯರು ಎಂದು ಕರೆದರೆ, ಅವರು ಅದನ್ನು ತಪ್ಪೆಂದು ಪರಿಗಣಿಸುವುದಿಲ್ಲ. ಒಬ್ಬ ಬ್ರಾಹ್ಮಣನನ್ನು ಬ್ರಾಹ್ಮಣ ಎಂದು ಕರೆದರೆ ತಪ್ಪೆಂದು ಪರಿಗಣಿಸುವುದಿಲ್ಲ. ವೈಶ್ಯನನ್ನು ವೈಶ್ಯ ಎಂದರೆ, ಅವನೂ ಅದನ್ನು ಅನ್ಯತಾ ಭಾವಿಸುವುದಿಲ್ಲ. ಆದರೆ ಶೂದ್ರರನ್ನು ಶೂದ್ರರನ್ನು ಶೂದ್ರರು ಎಂದು ಕರೆದರೆ, ಅವರು ಅದನ್ನು ಒಪ್ಪುವುದಿಲ್ಲ, ಯಾಕೆಂದರೆ ಅವರಿಗೆ ಜ್ಞಾನವಿಲ್ಲ” ಎಂದು ಹೇಳಿದ್ದರು.

ಇದನ್ನೂ ಓದಿ: ಕರ್ನಾಟಕದ ಸುಮಾರು 50% ರಷ್ಟು ಯುವತಿಯರಿಗೆ ರಕ್ತಹೀನತೆ- NFHS ವರದಿ

ಪ್ರಗ್ಯಾ ಸಿಂಗ್ ಇಂತಹ ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಿರುವುದು ಇದೇ ಮೊದಲೇನಲ್ಲ. ಕಳೆದ ವರ್ಷ ನವೆಂಬರ್‌ನಲ್ಲಿ ಮಹಾತ್ಮ ಗಾಂಧಿಯ ಹಂತಕ ನಾಥೂರಾಂ ಗೂಡ್ಸೆಯನ್ನು ದೇಶ ಭಕ್ತ ಎಂದು ಕರೆದು ವ್ಯಾಪಕ ಟೀಕೆಗೆ ಗುರಿಯಾಗಿದ್ದರು.

2008 ರಲ್ಲಿ ಮುಂಬೈನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಕೊಲ್ಲಲ್ಪಟ್ಟ ದಿವಂಗತ ಮಹಾರಾಷ್ಟ್ರ ಎಟಿಎಸ್ ಮುಖ್ಯಸ್ಥ ಹೇಮಂತ್ ಕಾರ್ಕರೆ ಅವರನ್ನು ತಾನು ಶಪಿಸಿದ್ದರಿಂದಲೇ ಸಾವನ್ನಪ್ಪಿದ್ದಾರೆ ಎಂದು ಪ್ರಗ್ಯಾ ಸಿಂಗ್ ತಮ್ಮ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಹೇಳಿ ವಿವಾದಕ್ಕೆ ಗುರಿಯಾಗಿದ್ದರು.


ಇದನ್ನೂ ಓದಿ: ರಾಜಸ್ಥಾನ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಕಾಂಗ್ರೆಸ್-620, ಬಿಜೆಪಿ-548 ಸ್ಥಾನಗಳಲ್ಲಿ ಗೆಲುವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...