Homeಕರೋನಾ ತಲ್ಲಣಏಮ್ಸ್ ನರ್ಸ್‌ಗಳ ಅನಿರ್ದಿಷ್ಟ ಮುಷ್ಕರ: ಕೆಲಸಕ್ಕೆ ಬರುವಂತೆ ಏಮ್ಸ್ ನಿರ್ದೇಶಕರ ಮನವಿ

ಏಮ್ಸ್ ನರ್ಸ್‌ಗಳ ಅನಿರ್ದಿಷ್ಟ ಮುಷ್ಕರ: ಕೆಲಸಕ್ಕೆ ಬರುವಂತೆ ಏಮ್ಸ್ ನಿರ್ದೇಶಕರ ಮನವಿ

ಏಮ್ಸ್‌ ಉದ್ಯೋಗದ ನಿಯಮಗಳನ್ನು ಖಾಯಂ ಕೆಲಸದಿಂದ ಗುತ್ತಿಗೆ ಆಧಾರಕ್ಕೆ ಪರಿವರ್ತಿಸಿದೆ ಎಂದು ನರ್ಸ್ ಯೂನಿಯನ್ ಆರೋಪಿಸಿದೆ.

- Advertisement -
- Advertisement -

ದೀರ್ಘಕಾಲದ ಬೇಡಿಕೆಗಳನ್ನು  ಈಡೇರಿಸುವಂತೆ ಒತ್ತಾಯಿಸಿ ನವದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಏಮ್ಸ್) ನರ್ಸ್‌ಗಳು ಮಧ್ಯಾಹ್ನದಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆ ಕೈಬಿಟ್ಟು ಕೆಲಸಕ್ಕೆ ಮರಳುವಂತೆ ಸಂಸ್ಥೆ ನಿರ್ದೇಶಕ ಡಾ.ರಂದೀಪ್ ಗುಲೇರಿಯಾ ನರ್ಸ್‌ಗಳಿಗೆ ಭಾವನಾತ್ಮಕವಾಗಿ ಮನವಿ ಮಾಡಿದ್ದಾರೆ.

ಏಮ್ಸ್‌ನ 5000 ನರ್ಸ್ ಸಿಬ್ಬಂದಿ, ವೇತನ ಹೆಚ್ಚಳ ಸೇರಿದಂತೆ ತಮ್ಮ 23 ದೀರ್ಘಕಾಲದ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದ್ದಾರೆ. ಪ್ರಧಾನ ವೈದ್ಯಕೀಯ ಸಂಸ್ಥೆಯ ಉದ್ಯೋಗದ ನಿಯಮಗಳನ್ನು ಖಾಯಂ ಕೆಲಸದಿಂದ ಗುತ್ತಿಗೆ ಆಧಾರಕ್ಕೆ ಪರಿವರ್ತಿಸಿದೆ ಎಂದು ಆರೋಪಿಸಲಾಗಿದೆ.

“ಕೊರೊನಾ ಅವಧಿಯಲ್ಲಿ ಮಾಡಿದ ಅದ್ಭುತ ಕಾರ್ಯಗಳಿಗಾಗಿ ಏಮ್ಸ್ ಕುಟುಂಬದ ಬಗ್ಗೆ ನನಗೆ ತುಂಬಾ ಹೆಮ್ಮೆ ಇದೆ. ರಾಷ್ಟ್ರವು ಹೆಮ್ಮೆಪಡುತ್ತದೆ. ದುರದೃಷ್ಟವಶಾತ್, ಈ ಸಾಂಕ್ರಾಮಿಕ ಸಮಯದಲ್ಲಿ, ದಾದಿಯರ ಸಂಘವು ಮುಷ್ಕರ ನಡೆಸುತ್ತಿದೆ. ಒಕ್ಕೂಟವು ಮಂಡಿಸಿರುವ 23 ಬೇಡಿಕೆಗಳಲ್ಲಿ ಬಹುತೇಕ ಎಲ್ಲಾ ಬೇಡಿಕೆಗಳನ್ನು ಏಮ್ಸ್ ಆಡಳಿತ ಮತ್ತು ಸರ್ಕಾರ ಈಡೇರಿಸಿದೆ” ಎಂದು ಏಮ್ಸ್ ನಿರ್ದೇಶಕ ಪ್ರೊ.ರಂದೀಪ್ ಗುಲೇರಿಯಾ ಏಮ್ಸ್ ನರ್ಸಸ್ ಯೂನಿಯನ್‌ಗೆ ವೀಡಿಯೊ ಸಂದೇಶದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: 2022ರ ವರೆಗೆ ಕೊರೊನಾ ವ್ಯಾಕ್ಸಿನ್ ಸಿಗಲ್ಲ: ಏಮ್ಸ್ ನಿರ್ದೇಶಕ ಡಾ. ಗುಲೇರಿಯಾ

ಆದರೆ, ಏಮ್ಸ್ ನರ್ಸ್‌ಗಳು ಈ ಬೇಡಿಕೆಗಳನ್ನು ಬಹಳ ಸಮಯದಿಂದ ಮುಂದಿಡುತ್ತಿದ್ದಾರೆ ಎಂದು ಯೂನಿಯನ್‌ನ ವಕ್ತಾರರು ತಿಳಿಸಿದ್ದಾರೆ. ಕಳೆದ ವರ್ಷ, ಸರ್ಕಾರವು ಅವರನ್ನು ಸಭೆಗೆ ಕರೆದು ಅವರ ಸಮಸ್ಯೆಗಳಿಗೆ ಪರಿಹಾರವನ್ನು ನೀಡುವ ಭರವಸೆ ನೀಡಿದ್ದರು’ ಎಂದಿದ್ದಾರೆ.

“ಇತ್ತೀಚಿನವರೆಗೂ, ನಮ್ಮ ಬೇಡಿಕೆಗಳನ್ನು ಪರಿಗಣಿಸಲಾಗುತ್ತಿದೆ ಎಂದು ನಮಗೆ ತಿಳಿಸಲಾಯಿತು. ಅವುಗಳಲ್ಲಿ ಪ್ರಮುಖವಾದವು ಆರನೇ ವೇತನ ಆಯೋಗದ ವೇತನ ನೀಡುವುದು ಮತ್ತು ಗುತ್ತಿಗೆ ಆಧಾರದಲ್ಲಿ ಕಾರ್ಮಿಕರನ್ನು ನೇಮಿಸಿಕೊಳ್ಳುವುದು” ಎಂದು ನರ್ಸಸ್ ಯೂನಿಯನ್ ಪ್ರಧಾನ ಕಾರ್ಯದರ್ಶಿ ಫಮೀರ್ ಸಿಕೆ ಮಾಹಿತಿ ನೀಡಿದ್ದಾರೆ.

“ಪ್ರೊಫೆಸರ್ ರಂದೀಪ್ ಗುಲೇರಿಯಾ ಅವರ ಬಗ್ಗೆ ನಮಗೆ ಅತ್ಯಂತ ಗೌರವವಿದೆ. ಆದರೆ ನಮ್ಮ ಎಲ್ಲ ಬೇಡಿಕೆಗಳನ್ನು ಈಗಾಗಲೇ ಈಡೇರಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಹಾಗಾದರೆ ಈಗೀನ ಈ ಎಲ್ಲಾ ಭರವಸೆಗಳು ಯಾವುವು..?” ಎಂದು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ಕೊರೊನಾ ಲಸಿಕೆ ಉಚಿತವೆಂದ ಕೇರಳ ಸಿಎಂ: ಚುನಾವಣಾ ಆಯೋಗದ ಮೆಟ್ಟಿಲೇರಿದ ವಿಪಕ್ಷಗಳು!

“6 ನೇ ವೇತನ ಆಯೋಗದ ಶಿಫಾರಸುಗಳ ಬಗ್ಗೆ ನರ್ಸ್‌ಗಳಲ್ಲಿ ತಪ್ಪು ಭಾವನೆ ಇದೆ ಇದರ ಬಗ್ಗೆ ಒಕ್ಕೂಟದೊಂದಿಗೆ ಅನೇಕ ಸಭೆಗಳನ್ನು ನಡೆಸಿ, ವಿವರಿಸಲಾಗಿದೆ. ಅದೇನೇ ಇದ್ದರೂ, ಅವರ ಬೇಡಿಕೆಗಳನ್ನು ಸಹಾನುಭೂತಿಯಿಂದ ಮತ್ತೆ ಹೊಸದಾಗಿ ಪರಿಗಣಿಸಲು ಸರ್ಕಾರ ಸಿದ್ಧವಿದೆ ಎಂದು ಗುಲೇರಿಯಾ ಹೇಳಿದ್ದಾರೆ.

“ಆದಾಗ್ಯೂ, ಒಂದು ದೇಶವು ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡುತ್ತಿರುವಾಗ, ನರ್ಸ್ ಯೂನಿಯನ್ ಮುಷ್ಕರ ನಡೆಸಲು ನಿರ್ಧರಿಸಿದೆ ಎಂಬುದು ಸೂಕ್ತವಲ್ಲವೆಂದು ತೋರುತ್ತದೆ. ನಿಮ್ಮೆಲ್ಲರಿಗೂ ಕೆಲಸಕ್ಕೆ ಮರಳಲು ಮತ್ತು ನಿಜವಾಗಿಯೂ ನಮಗೆ ಸಹಾಯ ಮಾಡಲು ನಾನು ಮನವಿ ಮಾಡುತ್ತೇನೆ” ಎಂದು ಪ್ರೊಫೆಸರ್ ಗುಲೇರಿಯಾ ಮನವಿ ಮಾಡಿದ್ದಾರೆ.


ಇದನ್ನೂ ಓದಿ: ಹೋರಾಟ ತೀವ್ರಗೊಳಿಸಲು ಉಪವಾಸ ಸತ್ಯಾಗ್ರಹ ಆರಂಭಿಸಿದ ರೈತ ಮುಖಂಡರು: 10 ಅಂಶಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...