Homeಮುಖಪುಟಬಾಹ್ಯಾಕಾಶ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲು ಖಾಸಗಿ ವಲಯಕ್ಕೆ ಮುಕ್ತ ಅವಕಾಶ: ಪ್ರಧಾನಿ ಮೋದಿ

ಬಾಹ್ಯಾಕಾಶ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲು ಖಾಸಗಿ ವಲಯಕ್ಕೆ ಮುಕ್ತ ಅವಕಾಶ: ಪ್ರಧಾನಿ ಮೋದಿ

- Advertisement -
- Advertisement -

ಇನ್ನುಮುಂದೆ ಬಾಹ್ಯಾಕಾಶ ಕ್ಷೇತ್ರದಲ್ಲಿ ಖಾಸಗಿ ವಲಯವೂ ಭಾಗವಹಿಸಬಹುದು ಎಂಬ ನಿರ್ಣಯಕ್ಕೆ ಜೂನ್‌ ತಿಂಗಳಿನಲ್ಲಿಯೇ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಕ್ಷೇತ್ರದಲ್ಲಿ ಖಾಸಗಿ ವಲಯದ ಭಾಗವಹಿಸುವಿಕೆಯನ್ನು ಉತ್ತೇಜಿಸಲು ಪ್ರಧಾನಿ ಇಂದು ಬಾಹ್ಯಾಕಾಶ ಕ್ಷೇತ್ರದ ಪ್ರಮುಖ ಕೈಗಾರಿಕೆಗಳು, ಉದ್ಯಮಗಳು ಮತ್ತು ಶಿಕ್ಷಣ ತಜ್ಞರೊಂದಿಗೆ ಸಂವಾದ ನಡೆಸಿದರು.

ಇದನ್ನೂ ಓದಿ: ಮುಷ್ಕರ ವಾಪಸ್ ಪಡೆದ ಸಾರಿಗೆ ನೌಕರರು: ಇಂದು ಸಂಜೆಯಿಂದಲೇ ಬಸ್‌ಗಳ ಸಂಚಾರ ಆರಂಭ

ಈ ಕುರಿತು ಟ್ವೀಟ್ ಮಾಡಿರುವ ಎಎನ್‌ಐ,”ಖಾಸಗಿ ವಲಯದವರು ಬಾಹ್ಯಾಕಾಶ ಚಟುವಟಿಕೆಗಳಲ್ಲಿ ಭಾಗವಹಿಸುವುದನ್ನು ಉತ್ತೇಜಿಸಲು ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಬಾಹ್ಯಾಕಾಶ ಕ್ಷೇತ್ರದ ಪ್ರಮುಖ ಕೈಗಾರಿಕೆಗಳು, ಉದ್ಯಮಗಳು ಮತ್ತು ಶಿಕ್ಷಣ ತಜ್ಞರೊಂದಿಗೆ ಇಂದು ಸಂವಹನ ನಡೆಸಿದರು. 2020 ರ ಜೂನ್‌ನಲ್ಲಿ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟವು ಭಾರತೀಯ ಖಾಸಗಿ ವಲಯವನ್ನು ಬಾಹ್ಯಾಕಾಶ ಕ್ಷೇತ್ರದ ಚಟುವಟಿಕೆಗಳಿಗೆ ಪಾಲುದಾರರನ್ನಾಗಿ ಮಾಡುವ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದೆ” ಎಂದು ವರದಿ ಮಾಡಿದೆ.

ಇದನ್ನೂ ಓದಿ: ‘ಶೂದ್ರ’ ಪದಬಳಕೆ: ಪ್ರಗ್ಯಾ ಠಾಕೂರ್‌ಗೆ ತಿರುಗೇಟು ಕೊಟ್ಟ ಮೀನಾ ಕಂದಸಾಮಿ

ಇದನ್ನೂ ಓದಿ: ಭಾರತದ ಆರ್ಥಿಕತೆ ಕುಸಿಯುತ್ತಿದ್ದರೂ ಅದಾನಿ ಕಂಪನಿ ಮಾತ್ರ ಬೆಳೆಯುತ್ತಿರುವುದು ಹೇಗೆ?

ಭಾರತದ ಸರ್ಕಾರಿ ಸ್ವಾಮ್ಯದಲ್ಲಿರುವ ಬಹುತೇಕ ಎಲ್ಲಾ ವಲಯಗಳನ್ನು ಖಾಸಗಿಯವರಿಗೆ ಬಿಟ್ಟುಕೊಡುತ್ತಿರುವ ಮೋದಿ ಸರ್ಕಾರದ ಮತ್ತೊಂದು ನಿರ್ಧಾರವಿದು. ಈಗಾಗಲೇ ಖಾಸಗೀಕರಣದ ಕರಾಳ ಪರಿಣಾಮಗಳನ್ನು ಎದುರಿಸುತ್ತಿರುವ ಭಾರತ, ಕೇಂದ್ರ ಸರ್ಕಾರದ ಈ ಕ್ರಮದಿಂದ ಏನೆಲ್ಲಾ ಸಕಾರಾತ್ಮಕ ಮತ್ತು ನಕಾರಾತ್ಮಕ ಪರಿಣಾಗಳನ್ನು ಎದುರಿಸಬೇಕಾಗಬಹುದು ಎಂಬುದನ್ನು ಕಾದು ನೋಡಬೇಕಿದೆ.

ಈಗಾಗಲೇ ರೈತ ಬೆಳೆಯುವ ತರಕಾರಿಯಿಂದ ಹಿಡಿದು ವಿಮಾನಯಾನ, ವಿಮಾನ ನಿಲ್ದಾಣದವರೆಗೆ ಎಲ್ಲವೂ ಅಂಬಾನಿ-ಅದಾನಿಯ ಪಾಲಾಗಿದೆ. ಇದೀಗ ಬಾಹ್ಯಾಕಾಶ ಕ್ಷೇತ್ರವನ್ನು ಖಾಸಗಿ ವಲಯಕ್ಕೆ ಮುಕ್ತಗೊಳಿಸಿರುವುದರಿಂದ ಉಪಗ್ರಹ ಉಡಾವಣೆ, ರಾಕೆಟ್ ತಯಾರಿಕೆ ಸೇರಿದಂತೆ ಮುಂತಾದ ತಾಂತ್ರಿಕ ಉಪಕರಣಗಳನ್ನು ತಯಾರಿಸುವ ಜವಾಬ್ದಾರಿಗಳು ಅಂಬಾನಿ-ಅದಾನಿಯ ಹೆಗಲ ಮೇಲೆ ಬೀಳಬಹುದು. ಹಾಗಾಗಿ ಇನ್ನುಮುಂದೆ ಉಪಗ್ರಹ ತಯಾರಿಕೆ ಮತ್ತು ಉಡಾವಣೆಗೆ ಸಂಬಂಧಿಸಿದ ಎಲ್ಲಾ ಉತ್ಪನ್ನಗಳನ್ನು ಇವರ ಕಂಪನಿಯಿಂದಲೇ ತಯಾರಾಗಬಹುದು? ಈ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸರ್ಕಾರಿ ಸಂಸ್ಥೆಗಳು ನೆಲಕಚ್ಚಬಹುದು? ಇನ್ನು ಇಲ್ಲಿನ ನೌಕರರ ಪರಿಸ್ಥಿತಿ?

ಸರ್ಕಾರವೇ ಎಷ್ಟು ಭಾರವನ್ನು ಹೊರಲು ಸಾಧ್ಯ! ಹಾಗಾಗಿಯೇ ಅಂಬಾನಿ-ಅದಾನಿಯೂ ಸ್ವಲ್ಪ ಭಾರ ಹೊರಲಿ ಎಂದು ಅವರಿಗೆ ಸರ್ಕಾರಿ ಸ್ವಾಮ್ಯದಲ್ಲಿರುವ ಪ್ರಮುಖ ಉದ್ಯಮಗಳನ್ನು ಮಾರಲಾಗುತ್ತಿದೆ ಅಷ್ಟೆ!


ಇದನ್ನೂ ಓದಿ: ರೈತರು ವಿಷ ಸೇವಿಸಿದಾಗ ಕಾಳಜಿ ವಹಿಸದವರು ಪಿಜ್ಜಾ ತಿನ್ನುವಾಗ ಟೀಕೆ ಮಾಡುತ್ತಾರೆ – ದಿಲ್ಜಿತ್…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...