Homeಮುಖಪುಟಬಾಯ್ಕಾಟ್ ಅಭಿಯಾನ: ಏರ್‌ಟೆಲ್, ವೊಡಾಫೋನ್ ವಿರುದ್ಧ ದೂರು ನೀಡಿದ ಜಿಯೋ!

ಬಾಯ್ಕಾಟ್ ಅಭಿಯಾನ: ಏರ್‌ಟೆಲ್, ವೊಡಾಫೋನ್ ವಿರುದ್ಧ ದೂರು ನೀಡಿದ ಜಿಯೋ!

- Advertisement -
- Advertisement -

ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯಲ್ಲಿ ರೈತರು ಜಿಯೋ ಸಿಮ್‌ ಅನ್ನು ತಿರಸ್ಕರಿಸಿರುವುದರ ಹಿಂದೆ ಏರ್‌ಟೆಲ್ ಮತ್ತು ವೊಡಾಫೋನ್ ಕಂಪನಿಗಳ ಕೈವಾಡವಿದೆ ಎಂದು ಆರೋಪಿಸಿರುವ ಅಂಬಾನಿಯ ಜಿಯೋ ಕಂಪನಿ, ಈ ಎರಡು ನೆಟ್‌ವರ್ಕ್‌ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಟೆಲಿಕಾಂ ರೆಗ್ಯುಲೇಟರ್ ಅಥಾರಿಟಿ ಆಫ್ ಇಂಡಿಯಾ (TRAI)ಗೆ ಡಿಸಂಬರ್ 10 ರಂದು ದೂರು ನೀಡಿದೆ.

ಜಿಯೋ ಕಂಪನಿ ಸೆಪ್ಟೆಂಬರ್ 28 ರಂದು ಬರೆದಿದ್ದ ಪತ್ರವನ್ನು ಉಲ್ಲೇಖಿಸಿ ಮುಂದುವರೆಸುತ್ತಾ, “ರೈತರ ಪ್ರತಿಭಟನೆಯ ಉಪಯೋಗ ಪಡೆದುಕೊಳ್ಳುತ್ತಿರುವ ಏರ್‌ಟೆಲ್ ಮತ್ತು ವೊಡಾಫೋನ್ ಕಂಪನಿಗಳು, ಅನೈತಿಕ ಮತ್ತು ಸ್ಪರ್ಧಾತ್ಮಕ ವಿರೋಧಿ ರೀತಿಯಲ್ಲಿ ಮೊಬೈಲ್ ಸಂಖ್ಯೆ ಪೋರ್ಟಬಿಲಿಟಿ (MNP) ಅಭಿಯಾನವನ್ನು ನಡೆಸುತ್ತಿದೆ ಎಂದು ಆರೋಪಿಸಿದೆ.

ಇದನ್ನೂ ಓದಿ: ಭಾರತದ ಆರ್ಥಿಕತೆ ಕುಸಿಯುತ್ತಿದ್ದರೂ ಅದಾನಿ ಕಂಪನಿ ಮಾತ್ರ ಬೆಳೆಯುತ್ತಿರುವುದು ಹೇಗೆ?

“ಜಿಯೋ ಮೊಬೈಲ್ ಸಂಖ್ಯೆಗಳನ್ನು ತಮ್ಮ ನೆಟ್‌ವರ್ಕ್‌ಗಳಿಗೆ ಸ್ಥಳಾಂತರಿಸುವುದರಿಂದ ರೈತರ ಪ್ರತಿಭಟನೆಗೆ ಸಹಕಾರಿಯಾಗಲಿದೆ ಎಂದು ಹೇಳಿಕೆಗಳನ್ನು ನೀಡುವ ಮೂಲಕ ಈ ನೆಟ್‌ವರ್ಕ್‌ಗಳು ಸಾರ್ವಜನಿಕರನ್ನು ಪ್ರಚೋದಿಸುತ್ತಿದೆ” ಎಂದು ಡಿಸೆಂಬರ್ 10 ರಂದು ಬರೆದ ಪತ್ರದಲ್ಲಿ ತಿಳಿಸಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಏಮ್ಸ್ ನರ್ಸ್‌ಗಳ ಅನಿರ್ದಿಷ್ಟ ಮುಷ್ಕರ: ಕೆಲಸಕ್ಕೆ ಬರುವಂತೆ ಏಮ್ಸ್ ನಿರ್ದೇಶಕರ ಮನವಿ

ಜಿಯೋ ಮಾಡಿದ ಆರೋಪಗಳಿಗೆ ಪ್ರತಿಕ್ರಿಯಿಸಿದ ಭಾರತೀಯ ಏರ್‌ಟೆಲ್, “ಏರ್‌ಟೆಲ್ ಟೆಲಿಕಾಂ ಉದ್ಯಮದಲ್ಲಿ 25 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದೆ. ಈ ಅವಧಿಯಲ್ಲಿ, ನಾವು ಮಾರುಕಟ್ಟೆಯಲ್ಲಿ ತೀವ್ರವಾಗಿ ಸ್ಪರ್ಧಿಸಿದ್ದೇವೆ ಮತ್ತು ನಮ್ಮ ಗ್ರಾಹಕರಿಗೆ ಅತ್ಯುತ್ತಮ ಸೇವೆ ನೀಡಲು ಶ್ರಮಿಸಿದ್ದೇವೆ. ಅದೇ ಸಮಯದಲ್ಲಿ ನಮ್ಮ ಸ್ಪರ್ಧಿಗಳು ಮತ್ತು ಪಾಲುದಾರರನ್ನು ಗೌರವದಿಂದ ನಡೆಸಿಕೊಂಡಿದ್ದೇವೆ. ನಾವು ನಮ್ಮ ವ್ಯವಹಾರವನ್ನು ಪಾರದರ್ಶಕವಾಗಿ ನಡೆಸಿದ್ದೇವೆ. ಇದಕ್ಕೆ ನಮಗೆ ಬಹಳ ಹೆಮ್ಮೆಯಿದೆ” ಎಂದು ಹೇಳಿದೆ.

ಅಂಬಾನಿ ಮತ್ತು ಅವರ ಕಂಪನಿಗಳ ಉತ್ಪನ್ನಗಳಾದ ಪೆಟ್ರೋಲ್ ಪಂಪ್, ಜಿಯೋ ಸಿಮ್, ರಿಲಯನ್ಸ್ ಸೇರಿದಂತೆ ಇತರೆ ಉತ್ಪನ್ನಗಳನ್ನು ಬಾಯ್ಕಾಟ್ ಮಾಡುವಂತೆ ಪ್ರತಿಭಟನಾ ನಿರತ ರೈತರು ಇತ್ತೀಚೆಗೆ ಕರೆ ನೀಡಿದ್ದರು. ಕರ್ನಾಟಕದಲ್ಲಿಯೂ ಯುವಕರು ಜಿಯೋ ಸಿಮ್ ಇಂದ ಪೋರ್ಟಿಂಗ್ ಅಭಿಯಾನವನ್ನು ಕೈಗೊಂಡಿದ್ದರು.

ಕೇಂದ್ರ ಸರ್ಕಾರ ತನ್ನ ಕೃಷಿ ಕಾನೂನುಗಳನ್ನು ಹಿಂಪಡೆಯಲಿ ಎಂದು ಒತ್ತಾಯಿಸಿ ಲಕ್ಷಾಂತರ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಕೃಷಿ ಕಾನೂನುಗಳು ಪರೋಕ್ಷವಾಗಿ ಅಂಬಾನಿಗೆ ಸಹಕಾರಿಯಾಗುತ್ತದೆ ಎಂಬ ಕಾರಣಕ್ಕೆ ಅಂಬಾನಿ ಕಂಪನಿಯ ಉತ್ಪನ್ನಗಳನ್ನು ಬಾಯ್ಕಾಟ್‌ ಮಾಡಬೇಕು ಎಂದು ಕರೆ ನೀಡಲಾಗಿತ್ತು.


ಇದನ್ನೂ ಓದಿ: ಬಾಹ್ಯಾಕಾಶ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲು ಖಾಸಗಿ ವಲಯಕ್ಕೆ ಮುಕ್ತ ಅವಕಾಶ: ಪ್ರಧಾನಿ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನೀವು ಜಿಯೋಮಾರ್ಟ್ ಪ್ರಚಾರಮಾಡುತ್ತಿದ್ದೀರ?
    ನಾನು ಗೌರಿ ಪೇಜ್ ತೆರೆದಕೂಡಲೇ ಜಿಯೋಮಾರ್ಟ್ ಬರುತ್ತದೆ ನಡುವಿನಲ್ಲಿ ಯಾಕೆ?

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...