Homeಚಳವಳಿಕೊರೆಯುವ ಚಳಿಯಲ್ಲಿ ರೈತ ಹೋರಾಟಗಾರರು; ಕರುಣೆ ಇಲ್ಲದ ಸರ್ಕಾರ!

ಕೊರೆಯುವ ಚಳಿಯಲ್ಲಿ ರೈತ ಹೋರಾಟಗಾರರು; ಕರುಣೆ ಇಲ್ಲದ ಸರ್ಕಾರ!

ಸರ್ಕಾರದ ಕಣ್ಣುಪೊರೆ ಜಾಸ್ತಿಯಾಗಿದೆ, ಕಿವಿ ಕುರುಡಾಗಿದೆ, ಹೃದಯ ಇಲ್ಲವೆ ಇಲ್ಲ. ಕೊರೆಯುವ ಚಳಿಯಲ್ಲಿ ಅನ್ನದಾತರನ್ನು ಈ ರೀತಿಯಾಗಿ ನಡೆಸಿಕೊಳ್ಳುತ್ತಿರುವುದು ಯಾವುದೆ ನಾಗರೀಕ ಸರ್ಕಾರ ಮಾಡುವಂತದ್ದಲ್ಲ.

- Advertisement -
- Advertisement -

ದೆಹಲಿಯ ತಾಪಮಾನ ಇಂದು 4.1 ಸೆಲ್ಸಿಯಸ್ ಡಿಗ್ರಿ ತಲುಪಿದ್ದು, ಕೇಂದ್ರದ ಕೃಷಿ ಕಾನೂನಿನ ವಿರುದ್ದ ಹೋರಾಟ ಮಾಡುತ್ತಿರುವ ಅನ್ನದಾತರು ಕೊರೆಯುವ ಚಳಿಯಲ್ಲಿ ನಿರಂತರ 20 ನೇ ದಿನವನ್ನು ಕಳೆದಿದ್ದಾರೆ. ಇಂದಿನ ತಾಪಮಾನವು ಸಾಮಾನ್ಯಕ್ಕಿಂತ ಐದು ಡಿಗ್ರಿಗಳಷ್ಟು ಕಡಿಮೆಯಾಗಿದೆ ಎಂದು ಸಫ್ದರ್‌‌ಜಂಗ್ ವೀಕ್ಷಣಾಲಯ ಹೇಳಿದೆ.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನನ್ನು ರದ್ದುಗೊಳಿಸಬೇಕು ಎಂದು ರೈತರು ಪಟ್ಟು ಹಿಡಿದಿದ್ದಾರೆ. ಕೇಂದ್ರ ಸಚಿವರೊಂದಿಗೆ ನಡೆದ ಆರು ಸುತ್ತಿನ ಮಾತುಕತೆ ವಿಫಲಗೊಂಡಿದೆ. ಪ್ರತಿಭಾರಿ ಮಾತುಕತೆಯಲ್ಲೂ ಕೇಂದ್ರವು ಒಂದೆ ರೀತಿಯ ಪ್ರಸ್ತಾಪದೊಂದಿಗೆ ಬರುತ್ತಿರುವುದಕ್ಕೆ ರೈತ ಹೋರಾಟಗಾರರು ಅಸಮಧಾನಗೊಂಡಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ: ದೆಹಲಿ-ಜೈಪುರ ಹೆದ್ದಾರಿಯಲ್ಲಿ ಪೊಲೀಸರೊಂದಿಗೆ ಘರ್ಷಣೆ- 20 ರೈತರ ಬಂಧನ 

ಆಂದೋಲನವು ನಿನ್ನೆಯಿಂದ ತೀವ್ರಗೊಂಡಿದ್ದು, ಹೋರಾಟ ನಿರತ ರೈತರು ಉಪವಾಸ ಸತ್ಯಾಗ್ರಹಕ್ಕೆ ಕರೆಕೊಟ್ಟಿದ್ದಾರೆ. ಅಲ್ಲದೆ ಆಂದೋಲನವನ್ನು ಸೇರಿಕೊಳ್ಳಲು ತಮಿಳುನಾಡು, ರಾಜಸ್ಥಾನ ಸೇರಿದಂತೆ ಇನ್ನೂ ಸಾವಿರಾರು ರೈತರು ದೆಹಲಿಗೆ ಹೊರಟಿದ್ದಾರೆ.

ದೇಶದಾದ್ಯಂತ ಆಂದೋಲನ ತೀವ್ರಗೊಳ್ಳುತ್ತಿದ್ದರೂ ಪ್ರಧಾನಿ ಮೋದಿ ಮಾತ್ರ ವಿವಾದಿತ ಕಾನೂನನ್ನು ಮತ್ತೆ ಮತ್ತೆ ಸಮರ್ಥಿಸಿಕೊಳ್ಳುತ್ತಿದ್ದಾರೆ. ಜೊತೆಗೆ ಪ್ರತಿಭಟನಾ ನಿರತರನ್ನು ಅವಮಾನಿಸುವ ಹಾಗೂ ಅನುಮಾನಿಸುವ ಕಾರ್ಯ ಕೇಂದ್ರ ಸರ್ಕಾರದ ಪ್ರತಿನಿಧಿಗಳಿಂದ ಹಾಗೂ ಸರ್ಕಾರವನ್ನು ಬೆಂಬಲಿಸುವವರಿಂದ ನಡೆಯುತ್ತಲೇ ಇದೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷರಾದ ಬಡಗಲಪುರ ನಾಗೇಂದ್ರ ಅವರು, “ಸರ್ಕಾರದ ಕಣ್ಣುಪೊರೆ ಜಾಸ್ತಿಯಾಗಿದೆ, ಕಿವಿ ಕುರುಡಾಗಿದೆ, ಹೃದಯ ಇಲ್ಲವೇ ಇಲ್ಲ. ಕೊರೆಯುವ ಚಳಿಯಲ್ಲಿ ಅನ್ನದಾತರನ್ನು ಈ ರೀತಿಯಾಗಿ ನಡೆಸಿಕೊಳ್ಳುತ್ತಿರುವುದು ಯಾವುದೆ ನಾಗರೀಕ ಸರ್ಕಾರ ಮಾಡುವಂತದ್ದಲ್ಲ. ಇದು ಪ್ರಪಂಚವೆ ತಲೆತಗ್ಗಿಸುವಂತಹ ನಡವಳಿಕೆ. ಈ ಹಂತದಲ್ಲಿ ರೈತರ ಸಾವು-ನೋವಾದರೆ ಇದಕ್ಕೆ ಮೋದಿ ಮತ್ತು ಅಮಿತ್‌ ಶಾನೇ ನೇರವಾದ ಕಾರಣ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ರೈತ ಹೋರಾಟ ಬೆಂಬಲಿಸಿ 25,000 ಸೇನಾ ಪದಕಗಳನ್ನು ಹಿಂದಿರುಗಿಸಲು ಮುಂದಾದ ಮಾಜಿ ಸೈನಿಕರು!

ಕರ್ನಾಟಕ ಸರ್ಕಾರದ ಕೃಷಿ ಬೆಲೆ ಅಯೋಗದ ಮಾಜಿ ಅಧ್ಯಕ್ಷರಾದ ಪ್ರಕಾಶ್ ಕಮ್ಮರಡಿ ಅವರು ಮಾತನಾಡಿ,”ಒಂದು ಕಡೆ ತಮ್ಮ ಸರ್ಕಾರದ ಭಾಗವಾಗಿರುವ ಪಕ್ಷಗಳು ಈ ಕಾನೂನಿನ ವಿಷಯದಲ್ಲಿ ಎನ್‌ಡಿಎಯನ್ನು ಕೈಬಿಟ್ಟಿವೆ. ಇನ್ನೊಂದು ಕಡೆ ದೇಶದಾದ್ಯಂತ ರೈತರು ಬೀದಿಗಿಳಿದ್ದಾರೆ. ಇಷ್ಟೇ ಅಲ್ಲದೆ ಇವರದೇ ಮಾತೃ ಸಂಘಟನೆಯಾದ ಆರೆಸ್ಸೆಸ್ ಕೂಡಾ ಇದನ್ನು ವಿರೋಧಿಸುತ್ತಿದೆ. ರಾಜಕೀಯವಾಗಿ ದೊಡ್ಡ ಬೆಲೆ ತೆರಬೇಕಾದರು ಕೂಡಾ ಸರ್ಕಾರ ತಮ್ಮ ಹಠವನ್ನು ಬಿಡುತ್ತಿಲ್ಲವೆಂದರೆ, ಸರ್ಕಾರ ಆಳವಾದ ಹುನ್ನಾರದಲ್ಲಿ ತೊಡಗಿದೆ ಎನ್ನುವುದಲ್ಲಿ ಅನುಮಾನವೆ ಇಲ್ಲ” ಎಂದು ಹೇಳಿದರು.

“ಇಲ್ಲಿ ಹಣದ ಆಮಿಷಗಳು, ಸೇರಿದಂತೆ ಇದರ ಹಿಂದೆ ಅಡಗಿರುವಂತಹ ಶಕ್ತಿಗಳು ಬಹಳ ಪ್ರಭಲವಾಗಿದೆ. ಆದರೆ ಇವುಗಳೆಲ್ಲವು ಹೋರಾಟ ನಿರತ ರೈತರ ಮನೋಸ್ಥಿತಿಯನ್ನು ಇನ್ನೂ ಹರಿತ ಮಾಡುತ್ತಿದೆ. ಈ ಕೊರೆಯುವ ಚಳಿಯಲ್ಲೂ ಅವರು ಕೂತಿದ್ದಾರೆಂದರೆ ದೇಶದ ರೈತರು ಎಲ್ಲಕ್ಕೂ ಸಿದ್ದವಾಗಿಯೇ ಇದ್ದಾರೆ. ಇದು ನಮ್ಮ ದೇಶದ ಚರಿತ್ರೆಯಲ್ಲಿ ಒಂದು ನಿರ್ಣಾಯಕ ಹಂತವಾಗಿದೆ” ಎಂದು ತಿಳಿಸಿದರು.

ರೈತ-ದಲಿತ-ಕಾರ್ಮಿಕ-ಜನಪರ ಸಂಘಟನೆಗಳ ಐಕ್ಯ ಹೋರಾಟದ ಕೋರ್‌ ಕಮಿಟಿ ಸದಸ್ಯರಾದ ಸಿರಿಮನೆ ನಾಗರಾಜ್ ಅವರು ಮಾತನಾಡಿ, “ಮೈ ಮಾತ್ರವಲ್ಲ ಮೂಳೆಯನ್ನೇ ಕೊರೆಯುವ ಇಂಥ ಚಳಿಯಿಂದಾಗಿ ಈಗಾಗಲೇ 40 ಕ್ಕೂ ಹೆಚ್ಚು ಜನ ರೈತರು ಪ್ರಾಣ ಕಳೆದುಕೊಂಡಿದ್ದಾರೆ. ಆದರೂ, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತ-ಕಾರ್ಮಿಕ-ಜನವಿರೋಧಿ ಕಾಯ್ದೆಗಳು ರದ್ದಾಗದೆ ವಾಪಸ್ ಹೋಗುವುದಿಲ್ಲ ಎಂದು ಪ್ರಾಣದ ಹಂಗು ತೊರೆದು ಹೋರಾಟ ನಡೆಸಿದ್ದಾರೆ. ಕೇಂದ್ರ ಸರ್ಕಾರವು ಹೋರಾಟಗಾರರನ್ನು ಸುಳ್ಳೇ ಮಾತುಕತೆಯ ಸುಳಿಯಲ್ಲಿ ಸುತ್ತಿಸುತ್ತ, ಸಮಯವನ್ನು ಮಾತ್ರವಲ್ಲ, ರೈತರನ್ನೂ ಕೊಲ್ಲುತ್ತಿದೆ” ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಇದು ತೀವ್ರ ಖಂಡನಾರ್ಹವಾಗಿದ್ದು. ಕೇಂದ್ರ ಸರ್ಕಾರ ಕೂಡಲೇ ರೈತರ-ಕಾರ್ಮಿಕರ ಹಕ್ಕೊತ್ತಾಯಗಳನ್ನು ಬೇಶರತ್ತಾಗಿ ಒಪ್ಪಿಕೊಂಡು, ಕಾಯ್ದೆಗಳನ್ನು ಹಿಂಪಡೆಯಬೇಕು. ಈ ಮೂಲಕ ಈ ಚಳವಳಿಗೆ ಅಂತ್ಯ ಹಾಡಿ, ಅಮಾಯಕ ಅನ್ನದಾತರ-ಶ್ರಮಜೀವಿಗಳ ಸಾಮೂಹಿಕ ಕಗ್ಗೊಲೆಯನ್ನು ನಿಲ್ಲಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ರೈತ ಹೋರಾಟಕ್ಕೆ ವಿಶ್ವದ ಅತ್ಯಂತ ಕಿರಿಯ ಪರಿಸರ ಹೋರಾಟಗಾರ್ತಿಯ ಬೆಂಬಲ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...