Homeಕರ್ನಾಟಕಉಪಸಭಾಪತಿಯನ್ನು ಎಳೆದಾಡಿದ ಕಾಂಗ್ರೆಸ್-ಬಿಜೆಪಿ ಸದಸ್ಯರು: ವಿಧಾನ ಪರಿಷತ್‌ನಲ್ಲಿ ಭಾರಿ ಗದ್ದಲ

ಉಪಸಭಾಪತಿಯನ್ನು ಎಳೆದಾಡಿದ ಕಾಂಗ್ರೆಸ್-ಬಿಜೆಪಿ ಸದಸ್ಯರು: ವಿಧಾನ ಪರಿಷತ್‌ನಲ್ಲಿ ಭಾರಿ ಗದ್ದಲ

ವಿಧಾನಪರಿಷತ್‌ನಲ್ಲಿ ಕಾಂಗ್ರೆಸ್ ಜೆಡಿಎಸ್‌ ಮೈತ್ರಿ ಬೆಂಬಲಿತ ಸಭಾಪತಿ ಮತ್ತು ಉಪಸಭಾಪತಿ ಇದ್ದಾರೆ. ಜೆಡಿಎಸ್ ಇನ್ನೂ ಅಧಿಕೃತವಾಗಿ ತಮಗೆ ಸಭಾಪತಿಗಳ ಮೇಲೆ ವಿಶ್ವಾಸ ಇಲ್ಲ ಎಂದು ಹೇಳಿಲ್ಲ. ಆದರೆ ಬಿಜೆಪಿ ಸಭಾಪತಿ ಸ್ಥಾನ ಪಡೆಯಲು ಇನ್ನಿಲ್ಲದ ಪ್ರಯತ್ನ ಮಾಡುತ್ತಿದೆ.

- Advertisement -
- Advertisement -

ಇಂದು ಒಂದು ದಿನದ ವಿಧಾನ ಪರಿಷತ್ ಅಧಿವೇಶನ ಆರಂಭವಾಗಬೇಕಿತ್ತು. ಗೋಹತ್ಯೆ ನಿಷೇಧ ಮಸೂದೆಗೆ ಅಂಗೀಕಾರ ಮತ್ತು ಸಭಾಪತಿ ವಿರುದ್ದ ಅವಿಶ್ವಾಸ ನಿರ್ಣಯ ಮಂಡಿಸಲು ಆಡಳಿತರೂಢ ಬಿಜೆಪಿ ಪಕ್ಷ ಎಣಿಸಿತ್ತು. ಆದರೆ ಇಂದು ವಿಧಾನ ಪರಿಷತ್ ಅಧಿವೇಶನ ಆರಂಭವಾಗುವ ಮೊದಲೇ ಹಲವು ನಾಟಕೀಯ ಬೆಳವಣಿಗೆಗಳು ಜರುಗಿದ್ದು, ಗದ್ದಲ, ಕೈ-ಕೈ ಮಿಲಾಯಿಸುವ ಪರಿಸ್ಥಿತಿ ಉದ್ಭವಿಸಿತ್ತು.

ಇಂದಿನ ಕಲಾಪ ಆರಂಭವಾಗುವ ಮೊದಲೇ ಸಭಾಪತಿ ಸ್ಥಾನದಲ್ಲಿ ಸಭಾಪತಿಗಳಾದ ಪ್ರತಾಪ್ ಚಂದ್ರಶೆಟ್ಟಿಯವರು ಆಸೀನರಾಗುವ ಮೊದಲೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಒಟ್ಟುಸೇರಿ ಉಪಸಭಾಪತಿ ಧರ್ಮೇಗೌಡ ಅವರನ್ನು ಕುಳ್ಳಿರಿಸಿದ್ದಾರೆ! ಇದರಿಂದ ಕುಪಿತಗೊಂಡ ಕಾಂಗ್ರೆಸ್ ಸದಸ್ಯರು ಸಭಾಪತಿಗಳ ಆಸೀನದತ್ತ ನಡೆದು ಅವರನ್ನು ಆ ಸ್ಥಾನದಿಂದ ಹೊರಗೆಳೆಯಲು ಪ್ರಯತ್ನಿಸಿದ್ದಾರೆ. ಆ ಸಮಯಕ್ಕೆ ಬಿಜೆಪಿ ಸದಸ್ಯರು ಬಂದು ಅವರನ್ನು ಮತ್ತೆ ಅದೇ ಸ್ಥಾನದಲ್ಲಿ ಕುಳ್ಳಿರಿಸಿ ಕಲಾಪ ಮುಂದುವರೆಸಲು ಪ್ರಯತ್ನಿಸಿದ್ದಾರೆ. ಈ ಸಮಯದಲ್ಲಿ ಮಾರ್ಷಲ್‌ಗಳು ಏನು ಮಾಡಬೇಕೆಂದು ತಿಳಿಯದೆ ಕಕ್ಕಾಬಿಕ್ಕಿಯಾಗಿದ್ದಾರೆ!

ಕೆಲ ಸಮಯ ಪರಿಷತ್ ಅಧಿವೇಶನ ಅಕ್ಷರಶಃ ಜಗಳಬೀದಿಯಾಗಿ ಪರಿವರ್ತನೆಗೊಂಡಿದೆ. ಕಲಾಪ ಕಾರ್ಯಸೂಚಿ ಕಿತ್ತೆಸುವುದು, ಅವಾಚ್ಯ ಶಬ್ದಗಳಿಂದ ಪರಸ್ಪರ ನಿಂದಿಸಿಕೊಳ್ಳುವುದು, ಕೈ ಕೈ ಮಿಲಾಯಿಸುವುದು ನಡೆದಿದೆ. ಬಿಜೆಪಿ ಮತ್ತು ಜೆಡಿಎಸ್ ವಿರುದ್ಧ ಘೋಷಣೆಗಳನ್ನು ಕೂಗಿದ ಕಾಂಗ್ರೆಸ್ ಸದಸ್ಯರು ಬಲವಂತವಾಗಿ ಉಪಸಭಾಪತಿ ಧರ್ಮೇಗೌಡರವರನ್ನು ಕೆಳಗಿಳಿಸಿ ಆ ಸ್ಥಾನದಲ್ಲಿ ತಮ್ಮ ಪಕ್ಷದ ಸದಸ್ಯರನ್ನು ಕೂಡಿಸಿದ್ದಾರೆ. ಅಲ್ಲದೆ ಬಲವಂತವಾಗಿ ಸಭಾಪತಿಗಳ ಕೊಠಡಿಯ ಬಾಗಿಲು ತೆರೆದು ಅವರನ್ನು ಕರೆತಂದು ಸಭಾಪತಿ ಸ್ಥಾನದಲ್ಲಿ ಕೂರಿಸಲು ಪ್ರಯತ್ನಿಸಿದ್ದಾರೆ. ನಂತರ ಮಾರ್ಷಲ್‌ಗಳ ರಕ್ಷಣೆಯಲ್ಲಿ ಸಭಾಪತಿ ಸ್ಥಾನಕ್ಕೆ ಬಂದ ಸಭಾಪತಿ ಪ್ರತಾಪ್ ಚಂದ್ರಶೆಟ್ಟಿಯವರು ಅನಿರ್ಧಿಷ್ಟಾವಧಿಯವರೆಗೆ ಕಲಾಪ ಮುಂದೂಡಿದ್ದಾರೆ.

ಸದನ ಆರಂಭವಾಗದಿದ್ದಾಗಲೇ ಬಿಜೆಪಿ ಮತ್ತು ಜೆಡಿಎಸ್ ಅಕ್ರಮವಾಗಿ ಉಪಸಭಾಪತಿಯನ್ನು ಸಭಾಪತಿ ಕುರ್ಚಿಯಲ್ಲಿ ಕೂರಿಸಿತು. ಬಿಜೆಪಿ ಇಂತಹ ಅಸಂವಿಧಾನಿಕ ಕೆಲಸಗಳನ್ನು ಮಾಡುತ್ತಿರುವುದು ದುರದೃಷ್ಟಕರ. ಕಾಂಗ್ರೆಸ್ ಸದಸ್ಯರು ಅವರನ್ನು ಆ ಸ್ಥಾನದಿಂದ ಕೆಳಗಿಳಿಯುವಂತೆ ಕೇಳಿಕೊಂಡೆವು. ಅವರು ಒಪ್ಪಲಿಲ್ಲ. ಅದು  ಕಾನೂನುಬಾಹಿರ ಕ್ರಮವಾದ ಕಾರಣ ನಾವು ಅವರನ್ನು ಹೊರಹಾಕಬೇಕಾಯಿತು: ಎಂದು ಕಾಂಗ್ರೆಸ್‌ನ ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್ ತಿಳಿಸಿದ್ದಾರೆ.

ವಿಧಾನಪರಿಷತ್‌ನಲ್ಲಿ ಕಾಂಗ್ರೆಸ್ ಜೆಡಿಎಸ್‌ ಮೈತ್ರಿ ಬೆಂಬಲಿತ ಸಭಾಪತಿ ಮತ್ತು ಉಪಸಭಾಪತಿ ಇದ್ದಾರೆ. ಜೆಡಿಎಸ್ ಇನ್ನೂ ಅಧಿಕೃತವಾಗಿ ತಮಗೆ ಸಭಾಪತಿಗಳ ಮೇಲೆ ವಿಶ್ವಾಸ ಇಲ್ಲ ಎಂದು ಹೇಳಿಲ್ಲ. ಆದರೆ ಬಿಜೆಪಿ ಸಭಾಪತಿ ಸ್ಥಾನ ಪಡೆಯಲು ಇನ್ನಿಲ್ಲದ ಪ್ರಯತ್ನ ಮಾಡುತ್ತಿದೆ. ಅದರ ಭಾಗವಾಗಿ ಸಭಾಪತಿಗಳ ವಿರುದ್ಧ ಅವಿಶ್ವಾಸ ನಿರ್ಣಯ ನೋಟಿಸ್ ನೀಡಿದೆ. ಅದೇ ಇಂದಿನ ಗದ್ದಲ ಗಲಾಟೆಗೆ ಕಾರಣವಾಗಿದೆ.


ಇದನ್ನೂ ಓದಿ: ಕೊರೊನಾ ಕಾರಣ ನೀಡಿ ಸಂಸತ್ತಿನ ’ಚಳಿಗಾಲದ ಅಧಿವೇಶನ’ ರದ್ದುಪಡಿಸಿದ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇಲ್ಲಿ ಕಾಂಗ್ರೆಸ್ ನದು ತಪ್ಪಿದೆ ಬಿಜೆಪಿ ಜೆಡಿಎಸ್ ತಪ್ಪು ಮಾಡಿದ್ದರೆ. ಕಾನೂನಿನ ಅಡಿಯಲ್ಲಿ ಕ್ರಮಜರಿಗಿಸಬಹುದಿತ್ತು. ಆದರೆ ಉಪ ಸಭಾಪತಿಯನ್ನು ಕತ್ತು ಹಿಡಿದು ದಬ್ಬಿರುವುದು ಸರಿಯಲ್ಲ. ಪರಿಷತ್ತಿನ ಗೌರವಕ್ಕೆ ಚ್ಯುತಿ ತಂದಿದ್ದಾರೆ. ಅವರನ್ನು ಶಾಶ್ವತವಾಗಿ ಸದನದಿಂದ ಹೊರಗಡೆ ಇಡಬೇಕು.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...