Homeಕರ್ನಾಟಕಉಪಸಭಾಪತಿಯನ್ನು ಎಳೆದಾಡಿದ ಕಾಂಗ್ರೆಸ್-ಬಿಜೆಪಿ ಸದಸ್ಯರು: ವಿಧಾನ ಪರಿಷತ್‌ನಲ್ಲಿ ಭಾರಿ ಗದ್ದಲ

ಉಪಸಭಾಪತಿಯನ್ನು ಎಳೆದಾಡಿದ ಕಾಂಗ್ರೆಸ್-ಬಿಜೆಪಿ ಸದಸ್ಯರು: ವಿಧಾನ ಪರಿಷತ್‌ನಲ್ಲಿ ಭಾರಿ ಗದ್ದಲ

ವಿಧಾನಪರಿಷತ್‌ನಲ್ಲಿ ಕಾಂಗ್ರೆಸ್ ಜೆಡಿಎಸ್‌ ಮೈತ್ರಿ ಬೆಂಬಲಿತ ಸಭಾಪತಿ ಮತ್ತು ಉಪಸಭಾಪತಿ ಇದ್ದಾರೆ. ಜೆಡಿಎಸ್ ಇನ್ನೂ ಅಧಿಕೃತವಾಗಿ ತಮಗೆ ಸಭಾಪತಿಗಳ ಮೇಲೆ ವಿಶ್ವಾಸ ಇಲ್ಲ ಎಂದು ಹೇಳಿಲ್ಲ. ಆದರೆ ಬಿಜೆಪಿ ಸಭಾಪತಿ ಸ್ಥಾನ ಪಡೆಯಲು ಇನ್ನಿಲ್ಲದ ಪ್ರಯತ್ನ ಮಾಡುತ್ತಿದೆ.

- Advertisement -
- Advertisement -

ಇಂದು ಒಂದು ದಿನದ ವಿಧಾನ ಪರಿಷತ್ ಅಧಿವೇಶನ ಆರಂಭವಾಗಬೇಕಿತ್ತು. ಗೋಹತ್ಯೆ ನಿಷೇಧ ಮಸೂದೆಗೆ ಅಂಗೀಕಾರ ಮತ್ತು ಸಭಾಪತಿ ವಿರುದ್ದ ಅವಿಶ್ವಾಸ ನಿರ್ಣಯ ಮಂಡಿಸಲು ಆಡಳಿತರೂಢ ಬಿಜೆಪಿ ಪಕ್ಷ ಎಣಿಸಿತ್ತು. ಆದರೆ ಇಂದು ವಿಧಾನ ಪರಿಷತ್ ಅಧಿವೇಶನ ಆರಂಭವಾಗುವ ಮೊದಲೇ ಹಲವು ನಾಟಕೀಯ ಬೆಳವಣಿಗೆಗಳು ಜರುಗಿದ್ದು, ಗದ್ದಲ, ಕೈ-ಕೈ ಮಿಲಾಯಿಸುವ ಪರಿಸ್ಥಿತಿ ಉದ್ಭವಿಸಿತ್ತು.

ಇಂದಿನ ಕಲಾಪ ಆರಂಭವಾಗುವ ಮೊದಲೇ ಸಭಾಪತಿ ಸ್ಥಾನದಲ್ಲಿ ಸಭಾಪತಿಗಳಾದ ಪ್ರತಾಪ್ ಚಂದ್ರಶೆಟ್ಟಿಯವರು ಆಸೀನರಾಗುವ ಮೊದಲೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಒಟ್ಟುಸೇರಿ ಉಪಸಭಾಪತಿ ಧರ್ಮೇಗೌಡ ಅವರನ್ನು ಕುಳ್ಳಿರಿಸಿದ್ದಾರೆ! ಇದರಿಂದ ಕುಪಿತಗೊಂಡ ಕಾಂಗ್ರೆಸ್ ಸದಸ್ಯರು ಸಭಾಪತಿಗಳ ಆಸೀನದತ್ತ ನಡೆದು ಅವರನ್ನು ಆ ಸ್ಥಾನದಿಂದ ಹೊರಗೆಳೆಯಲು ಪ್ರಯತ್ನಿಸಿದ್ದಾರೆ. ಆ ಸಮಯಕ್ಕೆ ಬಿಜೆಪಿ ಸದಸ್ಯರು ಬಂದು ಅವರನ್ನು ಮತ್ತೆ ಅದೇ ಸ್ಥಾನದಲ್ಲಿ ಕುಳ್ಳಿರಿಸಿ ಕಲಾಪ ಮುಂದುವರೆಸಲು ಪ್ರಯತ್ನಿಸಿದ್ದಾರೆ. ಈ ಸಮಯದಲ್ಲಿ ಮಾರ್ಷಲ್‌ಗಳು ಏನು ಮಾಡಬೇಕೆಂದು ತಿಳಿಯದೆ ಕಕ್ಕಾಬಿಕ್ಕಿಯಾಗಿದ್ದಾರೆ!

ಕೆಲ ಸಮಯ ಪರಿಷತ್ ಅಧಿವೇಶನ ಅಕ್ಷರಶಃ ಜಗಳಬೀದಿಯಾಗಿ ಪರಿವರ್ತನೆಗೊಂಡಿದೆ. ಕಲಾಪ ಕಾರ್ಯಸೂಚಿ ಕಿತ್ತೆಸುವುದು, ಅವಾಚ್ಯ ಶಬ್ದಗಳಿಂದ ಪರಸ್ಪರ ನಿಂದಿಸಿಕೊಳ್ಳುವುದು, ಕೈ ಕೈ ಮಿಲಾಯಿಸುವುದು ನಡೆದಿದೆ. ಬಿಜೆಪಿ ಮತ್ತು ಜೆಡಿಎಸ್ ವಿರುದ್ಧ ಘೋಷಣೆಗಳನ್ನು ಕೂಗಿದ ಕಾಂಗ್ರೆಸ್ ಸದಸ್ಯರು ಬಲವಂತವಾಗಿ ಉಪಸಭಾಪತಿ ಧರ್ಮೇಗೌಡರವರನ್ನು ಕೆಳಗಿಳಿಸಿ ಆ ಸ್ಥಾನದಲ್ಲಿ ತಮ್ಮ ಪಕ್ಷದ ಸದಸ್ಯರನ್ನು ಕೂಡಿಸಿದ್ದಾರೆ. ಅಲ್ಲದೆ ಬಲವಂತವಾಗಿ ಸಭಾಪತಿಗಳ ಕೊಠಡಿಯ ಬಾಗಿಲು ತೆರೆದು ಅವರನ್ನು ಕರೆತಂದು ಸಭಾಪತಿ ಸ್ಥಾನದಲ್ಲಿ ಕೂರಿಸಲು ಪ್ರಯತ್ನಿಸಿದ್ದಾರೆ. ನಂತರ ಮಾರ್ಷಲ್‌ಗಳ ರಕ್ಷಣೆಯಲ್ಲಿ ಸಭಾಪತಿ ಸ್ಥಾನಕ್ಕೆ ಬಂದ ಸಭಾಪತಿ ಪ್ರತಾಪ್ ಚಂದ್ರಶೆಟ್ಟಿಯವರು ಅನಿರ್ಧಿಷ್ಟಾವಧಿಯವರೆಗೆ ಕಲಾಪ ಮುಂದೂಡಿದ್ದಾರೆ.

ಸದನ ಆರಂಭವಾಗದಿದ್ದಾಗಲೇ ಬಿಜೆಪಿ ಮತ್ತು ಜೆಡಿಎಸ್ ಅಕ್ರಮವಾಗಿ ಉಪಸಭಾಪತಿಯನ್ನು ಸಭಾಪತಿ ಕುರ್ಚಿಯಲ್ಲಿ ಕೂರಿಸಿತು. ಬಿಜೆಪಿ ಇಂತಹ ಅಸಂವಿಧಾನಿಕ ಕೆಲಸಗಳನ್ನು ಮಾಡುತ್ತಿರುವುದು ದುರದೃಷ್ಟಕರ. ಕಾಂಗ್ರೆಸ್ ಸದಸ್ಯರು ಅವರನ್ನು ಆ ಸ್ಥಾನದಿಂದ ಕೆಳಗಿಳಿಯುವಂತೆ ಕೇಳಿಕೊಂಡೆವು. ಅವರು ಒಪ್ಪಲಿಲ್ಲ. ಅದು  ಕಾನೂನುಬಾಹಿರ ಕ್ರಮವಾದ ಕಾರಣ ನಾವು ಅವರನ್ನು ಹೊರಹಾಕಬೇಕಾಯಿತು: ಎಂದು ಕಾಂಗ್ರೆಸ್‌ನ ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್ ತಿಳಿಸಿದ್ದಾರೆ.

ವಿಧಾನಪರಿಷತ್‌ನಲ್ಲಿ ಕಾಂಗ್ರೆಸ್ ಜೆಡಿಎಸ್‌ ಮೈತ್ರಿ ಬೆಂಬಲಿತ ಸಭಾಪತಿ ಮತ್ತು ಉಪಸಭಾಪತಿ ಇದ್ದಾರೆ. ಜೆಡಿಎಸ್ ಇನ್ನೂ ಅಧಿಕೃತವಾಗಿ ತಮಗೆ ಸಭಾಪತಿಗಳ ಮೇಲೆ ವಿಶ್ವಾಸ ಇಲ್ಲ ಎಂದು ಹೇಳಿಲ್ಲ. ಆದರೆ ಬಿಜೆಪಿ ಸಭಾಪತಿ ಸ್ಥಾನ ಪಡೆಯಲು ಇನ್ನಿಲ್ಲದ ಪ್ರಯತ್ನ ಮಾಡುತ್ತಿದೆ. ಅದರ ಭಾಗವಾಗಿ ಸಭಾಪತಿಗಳ ವಿರುದ್ಧ ಅವಿಶ್ವಾಸ ನಿರ್ಣಯ ನೋಟಿಸ್ ನೀಡಿದೆ. ಅದೇ ಇಂದಿನ ಗದ್ದಲ ಗಲಾಟೆಗೆ ಕಾರಣವಾಗಿದೆ.


ಇದನ್ನೂ ಓದಿ: ಕೊರೊನಾ ಕಾರಣ ನೀಡಿ ಸಂಸತ್ತಿನ ’ಚಳಿಗಾಲದ ಅಧಿವೇಶನ’ ರದ್ದುಪಡಿಸಿದ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇಲ್ಲಿ ಕಾಂಗ್ರೆಸ್ ನದು ತಪ್ಪಿದೆ ಬಿಜೆಪಿ ಜೆಡಿಎಸ್ ತಪ್ಪು ಮಾಡಿದ್ದರೆ. ಕಾನೂನಿನ ಅಡಿಯಲ್ಲಿ ಕ್ರಮಜರಿಗಿಸಬಹುದಿತ್ತು. ಆದರೆ ಉಪ ಸಭಾಪತಿಯನ್ನು ಕತ್ತು ಹಿಡಿದು ದಬ್ಬಿರುವುದು ಸರಿಯಲ್ಲ. ಪರಿಷತ್ತಿನ ಗೌರವಕ್ಕೆ ಚ್ಯುತಿ ತಂದಿದ್ದಾರೆ. ಅವರನ್ನು ಶಾಶ್ವತವಾಗಿ ಸದನದಿಂದ ಹೊರಗಡೆ ಇಡಬೇಕು.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...