Homeಚಳವಳಿರೈತ ಹೋರಾಟ ಬೆಂಬಲಿಸಿದ್ದ ಟ್ರೂಡೊ: ಭಾರತ-ಕೆನಡಾ ರಾಜಕೀಯ ಸಂಬಂಧದಲ್ಲಿ ಬಿರುಕು!

ರೈತ ಹೋರಾಟ ಬೆಂಬಲಿಸಿದ್ದ ಟ್ರೂಡೊ: ಭಾರತ-ಕೆನಡಾ ರಾಜಕೀಯ ಸಂಬಂಧದಲ್ಲಿ ಬಿರುಕು!

"ಪ್ರಪಂಚದ ಎಲ್ಲಾ ಶಾಂತಿಯುತ ಪ್ರತಿಭಟನೆಗಳನ್ನು ಕೆನಡಾ ಎಂದಿಗೂ ಬೆಂಬಲಿಸುತ್ತದೆ ಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರೂಡೊ ಪುನರುಚ್ಚರಿಸಿದ್ದರು.

- Advertisement -
- Advertisement -

ಭಾರತ ಮತ್ತೆ ಕೆನಡಾ ಉಭಯ ದೇಶಗಳ ಉನ್ನತ ರಾಜತಾಂತ್ರಿಕರ ನಡುವಿನ ವಿದೇಶಾಂಗ ಕಚೇರಿ ಸಮಾಲೋಚನೆಗಳನ್ನು ಮುಂದೂಡುವಂತೆ ಭಾರತ ಸರ್ಕಾರ ಕೆನಡಾವನ್ನು ಕೋರಿದೆ. ದೇಶದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಕುರಿತು ಕೆನಡಾ ಪ್ರಧಾನಿ ಜಸ್ಟಿನ್ ಟ್ರೂಡೊ ಅವರ ಟೀಕೆಗಳ ನಂತರ ಎರಡು ದೇಶಗಳ ನಡುವಿನ ರಾಜಕೀಯ ಸಂಬಂಧದಲ್ಲಿ ಬಿರುಕು ಮೂಡಿರುವ ಮುನ್ಸೂಚನೆ ಇದಾಗಿದೆ.

ಇಂದು (ಡಿ.15) ನಡೆಯಲಿದೆ ಎಂದು ನಿರೀಕ್ಷಿಸಲಾಗಿದ್ದ ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿ (ಪೂರ್ವ), ರಿವಾ ಗಂಗೂಲಿ ದಾಸ್ ಮತ್ತು ಅವರ ಕೆನಡಾದ ಅಧಿಕಾರಿಯೊಂದಿಗೆ ವಿದೇಶಾಂಗ ಕಚೇರಿ ಸಮಾಲೋಚನೆಗಳನ್ನು ಮುಂದೂಡಲಾಗಿದೆ. ಸಮಾಲೋಚನೆ ನಡೆಸಲು ದಿನಾಂಕ ಅನಾನುಕೂಲವಾಗಿದೆ ಎಂದು ನವದೆಹಲಿ ಒಟ್ಟಾವಾಕ್ಕೆ ತಿಳಿಸಿದೆ.

ದಿನಾಂಕ ಅನಾನುಕೂಲವಾಗಿದೆ ಎಂಬ ಕಾರಣವಿಟ್ಟುಕೊಂಡು ಕೆನಡಾದ ವಿದೇಶಾಂಗ ಸಚಿವ ಫ್ರಾಂಕೋಯಿಸ್-ಫಿಲಿಪ್ ಷಾಂಪೇನ್ ಆಯೋಜಿಸಿದ್ದ ಕೋವಿಡ್ -19 ಮಂತ್ರಿ ಸಮನ್ವಯ ಗುಂಪಿನ ಸಭೆಗೂ ವಿದೇಶಾಂಗ ಸಚಿವ ಎಸ್.ಜೈಶಂಕರ್ ಗೈರಾಗಿದ್ದರು. ಇದರ ಹಿಂದಿನ ಮಂತ್ರಿ ಸಮನ್ವಯ ಗುಂಪಿನ ಸಭೆಯಲ್ಲಿ ಭಾಗವಹಿಸಿದ್ದ ಭಾರತ, ಡಿಸೆಂಬರ್ 7 ರ ಸಭೆಯಿಂದ ದೂರವಿರಲು ವೇಳಾಪಟ್ಟಿ ಸಮಸ್ಯೆಗಳನ್ನು ಉಲ್ಲೇಖಿಸಿತ್ತು.

ಇದನ್ನೂ ಓದಿ: ಭಾರತ ಸರ್ಕಾರದ ಆಕ್ಷೇಪ ಲೆಕ್ಕಿಸದೆ ಮತ್ತೆ ರೈತರ ಪರ ದನಿಯೆತ್ತಿದ್ದ ಕೆನಡಾ ಪ್ರಧಾನಿ!

ಗುರುನಾನಕ್ ಅವರ 551 ನೇ ಜನ್ಮ ದಿನಾಚರಣೆಯಂದು ವಿಡಿಯೋ ಸಂವಾದದಲ್ಲಿ ಮಾತನಾಡಿದ್ದ ಪ್ರಧಾನಿ ಜಸ್ಟಿನ್ ಟ್ರೂಡೊ, “ರೈತರ ಪ್ರತಿಭಟನೆಯ ಕುರಿತು ಭಾರತದಿಂದ ಬರುತ್ತಿರುವ ಸುದ್ದಿಗಳನ್ನು ನಮ್ಮನ್ನು ಆತಂಕಕ್ಕೀಡುಮಾಡಿವೆ. ಅಲ್ಲಿನ ಪರಿಸ್ಥಿತಿಯಿಂದ ನಾವೆಲ್ಲರೂ ಕುಟುಂಬ ಮತ್ತು ಸ್ನೇಹಿತರ ಬಗ್ಗೆ ಚಿಂತಿತರಾಗಿದ್ದೇವೆ. ನಿಮ್ಮಲ್ಲಿ ಅನೇಕರಿಗೆ ಇದು ನಿಜವೆಂದು ತಿಳಿದಿದೆ. ಶಾಂತಿಯುತವಾಗಿ ಪ್ರತಿಭಟಿಸುವ ಹಕ್ಕನ್ನು ಕೆನಡಾ ಯಾವಾಗಲೂ ಬೆಂಬಲಿಸುತ್ತದೆ ಎಂದು ಹೇಳಲು ಇಚ್ಛಿಸುತ್ತೇನೆ. ಸಂವಾದದಲ್ಲಿ ನಂಬಿಕೆಯುಳ್ಳವರು ನಾವು. ರೈತರ ಬಗೆಗಿನ ನಮ್ಮ ಕಾಳಜಿಯನ್ನು ನೇರವಾಗಿ ಎಲ್ಲಾ ಮಾರ್ಗಗಳಲ್ಲಿ ಭಾರತದ ಸರ್ಕಾರದ ಗಮನಕ್ಕೆ ತರುತ್ತೇವೆ. ಇದು ನಾವೆಲ್ಲರೂ ರೈತರೊಂದಿಗೆ ನಿಲ್ಲುವ ಸಮಯ” ಎಂದು ಹೇಳಿದ್ದರು.

ಇದಕ್ಕೆ ದೇಶದಲ್ಲಿ ಅನೇಕ ಪ್ರತಿರೋಧಗಳು ವ್ಯಕ್ತವಾಗಿದ್ದವು. ದೆಹಲಿಯಲ್ಲಿರುವ ಕೆನಡಾ ರಾಯಭಾರಿಯನ್ನ ಕರೆಸಿ ವಿದೇಶಾಂಗ ಇಲಾಖೆ ಎಚ್ಚರಿಕೆ ನೀಡಿತ್ತು. ಕೆನಡಾ ಪ್ರಧಾನಿ ನೀಡಿದಂಥ ಹೇಳಿಕೆಯಿಂದ ಭಾರತ ಮತ್ತು ಕೆನಡಾ ನಡುವಿನ ಸಂಬಂಧಕ್ಕೆ ಧಕ್ಕೆಯಾಗುತ್ತದೆ. ಇನ್ನುಮುಂದೆ ಇಂಥದಕ್ಕೆ ಆಸ್ಪದ ಕೊಡಬೇಡಿ ಎಂದು ಕೆನಡಾ ರಾಯಭಾರಿಗೆ ಸರ್ಕಾರ ಸೂಚಿಸಿತ್ತು.

ಆದರೂ ಕೂಡ ಕೆನಡಾ ಪ್ರಧಾನಿ ರೈತರಿಗೆ ಬೆಂಬಲ ನೀಡುವುದನ್ನು ನಿಲ್ಲಿಸಿರಲಿಲ್ಲ. ವಿದೇಶಾಂಗ ಇಲಾಖೆ ಎಚ್ಚರಿಕೆಗೆ ಪ್ರತಿಕ್ರಿಯಿಸಿದ್ದ ಪ್ರಧಾನಿ ಜಸ್ಟಿನ್ ಟ್ರೂಡೊ, “ಪ್ರಪಂಚದ ಎಲ್ಲಾ ಶಾಂತಿಯುತ ಪ್ರತಿಭಟನೆಗಳನ್ನು ಕೆನಡಾ ಎಂದಿಗೂ ಬೆಂಬಲಿಸುತ್ತದೆ. ಭಾರತದಲ್ಲಿ ಹೋರಾಟನಿರತ ರೈತರೊಂದಿಗೆ ಸರ್ಕಾರ ಮಾತುಕತೆ ನಡೆಸುತ್ತಿರುವುದು ಒಳ್ಳೆಯ ನಡೆ” ಎಂದಿದ್ದಾರೆ. ಭಾರತವು ನಿಮ್ಮ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದೆ ಎಂಬ ಪ್ರಶ್ನೆಗೆ ಅವರು ಪ್ರಪಂಚದ ಎಲ್ಲಾ ಶಾಂತಿಯುತ ಪ್ರತಿಭಟನೆಗಳನ್ನು ಕೆನಡಾ ಎಂದಿಗೂ ಬೆಂಬಲಿಸುತ್ತದೆ ಎಂದು ಪುನರುಚ್ಚರಿಸಿದ್ದರು. ಈ ಎಲ್ಲಾ ಬೆಳವಣಿಗೆಗಳು ಉಭಯ ದೇಶಗಳ ರಾಜಕೀಯ ಸಂಬಂಧದಲ್ಲಿ ಬಿರುಕು ಮೂಡಿಸುವ ಮುನ್ಸೂಚನೆ ನೀಡುತ್ತಿವೆ.

ಇದನ್ನೂ ಓದಿ: ಭಾರತ ಸರ್ಕಾರದ ಆಕ್ಷೇಪ ಲೆಕ್ಕಿಸದೆ ಮತ್ತೆ ರೈತರ ಪರ ದನಿಯೆತ್ತಿದ್ದ ಕೆನಡಾ ಪ್ರಧಾನಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...