ಹೊಸ ಸಂಸತ್ ಭವನದ ನಿರ್ಮಾಣಕ್ಕೆ ಪ್ರಧಾನಿ ಮೋದಿ ಇತ್ತೀಚೆಗೆ ಶಂಕುಸ್ಥಾಪನಾ ಪೂಜೆಯನ್ನು ನೆರವೇರಿಸಿದ್ದರು. ಈ ಸಂಸತ್ ಕಟ್ಟಡದ ನಿರ್ಮಾಣಕ್ಕೆ ಟಾಟಾ ಕಂಪನಿಯಯನ್ನು ಆಯ್ಕೆ ಮಾಡಿರುವುದನ್ನು ಬಿಜೆಪಿಯ ಕೇಂದ್ರ ಸಚಿವ ಸುಬ್ರಮಣಿಯನ್ ಸ್ವಾಮಿ ಪ್ರಶ್ನಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿದ ಸುಬ್ರಮಣಿಯನ್ ಸ್ವಾಮಿ, “ಹೊಸ ಸಂಸತ್ ಭವನದ ನಿರ್ಮಾಣಕ್ಕೆ ಟಾಟಾ ಕಂಪೆನಿ ಆಯ್ಕೆಯಾಗಿದ್ದು ಹೇಗೆ ಎನ್ನುವುದರ ಕುರಿತು ಯಾರಿಗಾದರೂ ತಿಳಿದಿದೆಯೇ? ಇದು ಹರಾಜು ಪ್ರಕ್ರಿಯೆಯ ಮೂಲಕ ನಡೆದಿರುವ ಪ್ರಕ್ರಿಯೆಯೇ? ಅಥವಾ 2ಜಿ ಸ್ಪೆಕ್ಟ್ರಮ್ ಹಗರಣದ ರೀತಿಯಲ್ಲಿ ಮೊದಲು ಬಂದವರಿಗೆ ಮೊದಲ ಆದ್ಯತೆ ಎಂಬಂತೆಯೇ?” ಎಂದು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: ವಿಲಕ್ಷಣ ಘಟನೆ: ಹೆಂಡತಿಯನ್ನೇ ಪಣಕ್ಕಿಟ್ಟು ಜೂಜು – ಆಸಿಡ್ ದಾಳಿ!
Does anyone know how Tatas were selected for building the new Parliament complex? Was it by bids or like in 2G Spectrum scandal on first come first served basis ?
— Subramanian Swamy (@Swamy39) December 14, 2020
ಹೊಸ ಸಂಸತ್ ಭವನ ನಿರ್ಮಾಣದ ಗುತ್ತಿಗೆಯನ್ನು ಟಾಟಾ ಸಮೂಹ ಸಂಸ್ಥೆಯು 861.90 ಕೋಟಿ. ರೂ.ಗೆ ಪಡೆದುಕೊಂಡಿದೆ.
ಇದನ್ನೂ ಓದಿ: ಮೋದಿ ಸರ್ಕಾರಕ್ಕೆ ಬಂಡವಾಳಶಾಹಿಗಳೇ ಆಪ್ತ ಸ್ನೇಹಿತರು: ರಾಹುಲ್ ಗಾಂಧಿ
ಕೊರೊನಾ ಸಂದರ್ಭದಲ್ಲಿ ಮತ್ತು ಭಾರತದ ಆರ್ಥಿಕತೆ ಕುಸಿದಿರುವ ಕೆಟ್ಟ ಪರಿಸ್ಥಿತಿಯಲ್ಲಿ ಹೊಸ ಸಂಸತ್ ಕಟ್ಟಡ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ನೂರಾರು ಕೋಟಿ ಖರ್ಚು ಮಾಡುತ್ತಿರುವುದನ್ನು ದೇಶದಾದ್ಯಂತ ವಿರೋಧ ಪಕ್ಷಗಳೂ ಸೇರಿದಂತೆ ಅನೇಕರು ವಿರೋಧಿಸಿದ್ದರು.
ಈಗ ಬಿಜೆಪಿಯ ಮುಖಂಡರೂ ಆದ ಸುಬ್ರಮಣಿಯನ್ ಸ್ವಾಮಿ ಎತ್ತಿರುವ ಪ್ರಶ್ನೆ ಮತ್ತಷ್ಟು ಕುತೂಹಲಕಾರಿ ಮತ್ತು ಮಹತ್ವದ್ದಾಗಿದೆ.
ಇದನ್ನೂ ಓದಿ: ತುಮಕೂರು: ವಕೀಲರೊಬ್ಬರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ -ಸಬ್ಇನ್ಸ್ಪೆಕ್ಟರ್ ವಿರುದ್ದ ಕ್ರಮಕ್ಕೆ ವಕೀಲರ ಆಗ್ರಹ


