Homeಮುಖಪುಟಹೋರಾಟನಿರತ ರೈತರನ್ನು ವಿರೋಧ ಪಕ್ಷಗಳು ದಾರಿ ತಪ್ಪಿಸುತ್ತಿವೆ: ನರೇಂದ್ರ ಮೋದಿ

ಹೋರಾಟನಿರತ ರೈತರನ್ನು ವಿರೋಧ ಪಕ್ಷಗಳು ದಾರಿ ತಪ್ಪಿಸುತ್ತಿವೆ: ನರೇಂದ್ರ ಮೋದಿ

ನಮ್ಮ ಸರ್ಕಾರ ರೈತರ ಎಲ್ಲಾ ಸಮಸ್ಯೆಗಳನ್ನು ದಿನದ 24 ಗಂಟೆಯೂ ಆಲಿಸಲು ಸಿದ್ದವಾಗಿದೆ ಎಂದು ನಾನು ಎಲ್ಲ ರೈತ ಸಹೋದರ ಮತ್ತು ಸಹೋದರಿಯರಿಗೆ ಭರವಸೆ ನೀಡುತ್ತೇನೆ.

- Advertisement -
- Advertisement -

ದೇಶದಲ್ಲಿ ರೈತ ಹೋರಾಟ ದಿನದಿಂದ ದಿನಕ್ಕೆ ಕಾವೇರುತ್ತಿದ್ದು, ಕೇಂದ್ರ ಸರ್ಕಾರ ಕೃಷಿ ಕಾನೂನುಗಳನ್ನು ಹಿಂಪಡೆಯಲಿ ಎಂದು ರೈತರು 20 ದಿನಗಳಿಂದ ಹೋರಾಟ ನೆಸುತ್ತಿದ್ದು, ನಿನ್ನೆ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ. ಈ ನಡುವೆ ಪ್ರಧಾನಿ ನರೇಂದ್ರ ಮೋದಿ ಮತ್ತೆ ಇಂದು ತಮ್ಮ ವಿವಾದಾತ್ಮಕ ಕಾನೂನುಗಳನ್ನು ಸಮರ್ಥಿಸಿಕೊಂಡಿದ್ದಾರೆ. ದೆಹಲಿಯಲ್ಲಿ ಹೋರಾಟನಿರತ ರೈತರನ್ನು ವಿರೋಧ ಪಕ್ಷಗಳು ದಾರಿ ತಪ್ಪಿಸುತ್ತಿವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

“ಈಗ ಆಗಿರುವ ಕೃಷಿ ಸುಧಾರಣೆಗಳು ಅನೇಕ ವರ್ಷಗಳಿಂದ ರೈತ ಸಂಘಗಳು ಮತ್ತು ಪ್ರತಿಪಕ್ಷಗಳು ಕೇಳುತ್ತಿರುವ ಸುಧಾರಣೆಗಳೇ ಆಗಿವೆ. ಭಾರತ ಸರ್ಕಾರ ಯಾವಾಗಲೂ ರೈತ ಕಲ್ಯಾಣಕ್ಕೆ ಬದ್ಧವಾಗಿದೆ. ಅವರ ಸಮಸ್ಯೆಗಳನ್ನು ಬಗೆಹರಿಸುತ್ತೇವೆ ಎಂದು ನಾವು ರೈತರಿಗೆ ಭರವಸೆ ನೀಡುತ್ತೇವೆ” ಎಂದು ಮೋದಿ ಹೇಳಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ ಬೆಂಬಲಿಸಿದ್ದ ಟ್ರೂಡೊ: ಭಾರತ-ಕೆನಡಾ ರಾಜಕೀಯ ಸಂಬಂಧದಲ್ಲಿ ಬಿರುಕು!

“ಇಂದು ಪ್ರತಿಪಕ್ಷಗಳಲ್ಲಿ ಕುಳಿತು ರೈತರನ್ನು ದಾರಿ ತಪ್ಪಿಸುತ್ತಿರುವವರು ತಮ್ಮ ಸರ್ಕಾರದ ಅವಧಿಯಲ್ಲಿ ಈ ಕೃಷಿ ಸುಧಾರಣೆಗಳ ಪರವಾಗಿದ್ದರು. ಅವರು ತಮ್ಮ ಸರ್ಕಾರದ ಅವಧಿಯಲ್ಲಿ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗಲಿಲ್ಲ. ಇಂದು ರಾಷ್ಟ್ರವು ಐತಿಹಾಸಿಕ ಹೆಜ್ಜೆ ಇಟ್ಟಾಗ ಇವರು ರೈತರನ್ನು ದಾರಿ ತಪ್ಪಿಸುತ್ತಿದ್ದಾರೆ” ಎಂದು ಪ್ರಧಾನಿ ಕಛ್‌ನಲ್ಲಿ ನಡೆದ ಸಮಾರಂಭವೊಂದರಲ್ಲಿ ಹೇಳಿದ್ದಾರೆ.

ದೆಹಲಿಯಲ್ಲಿರುವ ರೈತರನ್ನು ದಿಕ್ಕತಪ್ಪಿಸುವ ಪಿತೂರಿ ನಡೆಯುತ್ತಿದೆ. ಈ ಕೃಷಿ ಕಾಯ್ದೆಗಳಿಂದ ರೈತರ ಭೂಮಿಯನ್ನು ಇತರರು ಕಬಳಿಸುತ್ತಾರೆ ಎಂದು ರೈತರು ಹೆದರಿದ್ದಾರೆ. ಡೈರಿ ಕಂಪನಿಗಳು ನಿಮ್ಮಿಂದ ಹಾಲನ್ನು ಕೊಂಡುಕೊಳ್ಳುತ್ತವೆಯೊ? ಅಥವಾ ನಿಮ್ಮ ಹಸುಗಳನ್ನು ಕಿತ್ತುಕೊಳ್ಳುತ್ತಿವೆಯೋ ನೀವು ಹೇಳಿ? ಎಂದು ಮೋದಿ ಪ್ರಶ್ನಿಸಿದ್ದಾರೆ.

ನಮ್ಮ ಸರ್ಕಾರ ರೈತರ ಎಲ್ಲಾ ಸಮಸ್ಯೆಗಳನ್ನು ದಿನದ 24 ಗಂಟೆಯೂ ಆಲಿಸಲು ಸಿದ್ದವಾಗಿದೆ ಎಂದು ನಾನು ಎಲ್ಲ ರೈತ ಸಹೋದರ ಮತ್ತು ಸಹೋದರಿಯರಿಗೆ ಭರವಸೆ ನೀಡುತ್ತೇನೆ. ಮೊದಲ ದಿನದಿಂದಲೂ ರೈತರ ಹಿತರಕ್ಷಣೆಯೇ ನಮ್ಮ ಆದ್ಯತೆಯೆಂದು ಮೋದಿ ಹೇಳಿದ್ದಾರೆ.

ಇದನ್ನೂ ಓದಿ: ಹೊಸ ಸಂಸತ್ ಭವನದ ನಿರ್ಮಾಣಕ್ಕೆ ಟಾಟಾ ಕಂಪೆನಿ ಆಯ್ಕೆಯಾಗಿದ್ದು ಹೇಗೆ: ಸುಬ್ರಮಣಿಯನ್ ಸ್ವಾಮಿ ಪ್ರಶ್ನೆ

ಕೇಂದ್ರ ಸರ್ಕಾರದ ಬಿಜೆಪಿ ನಾಯಕರು ತಾವು ಜಾರಿಗೆ ತಂದಿರುವ ಕೃಷಿ ಕಾಯ್ದೆಗಳನ್ನು ಸಮರ್ಥಿಸಿಕೊಳ್ಳಲು ಪದೇ ಪದೇ ಪ್ರತಿಪಕ್ಷಗಳತ್ತ ಬೆರಳು ತೋರಿಸುತ್ತಲೇ ಇದೆ. ಮೋದಿ ಸರ್ಕಾರ ಜಾರಿಗೆ ತಂದ ಜಿಎಸ್‌ಟಿ ಕೂಡ ಕಾಂಗ್ರೆಸ್ ಸರ್ಕಾರದ ಕಾರ್ಯಕ್ರಮ ಎಂದು ನುಣುಚಿಕೊಂಡಿತ್ತು.

ಕಾಂಗ್ರೆಸ್ ಏನೂ ಮಾಡಿಲ್ಲ ಎಂದು ಹೇಳುವ ಬಿಜೆಪಿ, ಇಕ್ಕಟ್ಟಿನ ಸಂದರ್ಭದಲ್ಲೆಲ್ಲಾ ‘ಇದು ಕಾಂಗ್ರೆಸ್‌ನ ಯೋಜನೆ’ ಎಂದು ನುಣುಚಿಕೊಳ್ಳುತ್ತಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಆರೋಪ ವ್ಯಕ್ತವಾಗಿದೆ.

ಇದನ್ನೂ ಓದಿ: ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆಯಲ್ಲೂ AAP ಸ್ಪರ್ಧೆ: ಕೇಜ್ರಿವಾಲ್ ಘೋಷಣೆ

ಈ ಹಿಂದೆಯೂ ರೈತರ ಹೋರಾಟವನ್ನು ಖಂಡಿಸಿ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ “ಈಗ ಎನ್‌ಡಿಎ ಸರ್ಕಾರ ಯಾವ ಕಾನೂನುಗಳನ್ನು ಅಂಗೀಕರಿಸಿದೆಯೇ ಅವೆಲ್ಲವನ್ನು ಸಹ ಯುಪಿಎ ಅಧಿಕಾರದಲ್ಲಿದ್ದಾಗ ಜಾರಿಗೊಳಿಸಲು ಬಯಸಿದ್ದವು. ಕಾಂಗ್ರೆಸ್ ಪಕ್ಷವು ಅಧಿಕಾರದಲ್ಲಿದ್ದಾಗ ಖಾಸಗೀಕರಣದ ಪರವಾಗಿತ್ತು. ಈಗ ಅವರೆಲ್ಲಾ ಈ ಕಾನೂನುಗಳನ್ನು ವಿರೋಧಿಸುವುದು ಅವರ ಇಬ್ಬಂದಿತನ” ಎಂದು ಹೇಳಿದ್ದರು.

ತಮ್ಮ ಆಡಳಿತದಲ್ಲಿ ಏನೇ ಒಳ್ಳೆಯದಾದರೂ ಅವುಗಳ ಕ್ರೆಡಿಟ್ ಬಿಜೆಪಿಗೇ ಸೇರುತ್ತದೆ. ಆದರೆ ಏನಾದರೂ ಕೆಡುಕಾದರೆ ಅದಕ್ಕೆ ನೆಹರೂ, ಕಾಂಗ್ರೆಸ್ ಕಾರಣ ಎಂದು ಹೇಳಿ ತಪ್ಪಿಸಿಕೊಳ್ಳುತ್ತದೆ. ಇದು ಬಿಜೆಪಿಯ ಅನೈತಿಕ ರಾಜಕಾರಣವನ್ನು ತೋರಿಸುತ್ತದೆ ನೆಟ್ಟಿಗರು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಉಪಸಭಾಪತಿಯನ್ನು ಎಳೆದಾಡಿದ ಕಾಂಗ್ರೆಸ್-ಬಿಜೆಪಿ ಸದಸ್ಯರು: ವಿಧಾನ ಪರಿಷತ್‌ನಲ್ಲಿ ಭಾರಿ ಗದ್ದಲ

2022ರ ವೇಳೆಗೆ ರೈತರ ಆದಾಯ ಡಬಲ್ ಮಾಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದರು. ಆದರೆ ಈಗ ಅದರ ಬದಲು ಮೂರು ಕಾಯ್ದೆಗಳನ್ನು ಜಾರಿಗೊಳಿಸಿದ್ದಾರೆ. ಆರಂಭದಿಂದಲು ಈ ಕಾಯ್ದೆ ರೈತರ ಒಳಿತಿಗಾಗಿ ಎಂದು ಕೇಂದ್ರ ಸರ್ಕಾರ ಹೇಳುತ್ತಿದೆ. ಆದರೆ ಮೋದಿ ಸರ್ಕಾರ ಯಾವುದೇ ರೈತರೊಂದಿಗೆ ಚರ್ಚಿಸದೇ ಸುಗ್ರೀವಾಜ್ಞೆಗಳ ಮೂಲಕ ಈ ಕಾನೂನುಗಳನ್ನು ತಂದಿದ್ದಲ್ಲದೇ ವಿರೋಧ ಪಕ್ಷಗಳ ಮತ್ತು ರೈತರ ಭಾರೀ ವಿರೋಧದ ನಡುವೆಯೂ ಚರ್ಚೆ ನಡೆಸದೆ ಅಂಗೀಕರಿಸಿದೆ.

ಆರಂಭದಲ್ಲಿ ರೈತರು ಈ ಕಾಯ್ದೆಗಳ ವಿರುದ್ಧ ಪ್ರತಿಭಟನೆ ಆರಂಭಿಸಿದಾಗ ಅವರನ್ನು ಖಲಿಸ್ತಾನಿಗಳು, ಭಯೋತ್ಪಾದಕರು, ನಕ್ಸಲರು ಎಂದು ಬಿಂಬಿಸಿದ್ದಲ್ಲದೇ ಅವರ ಮೇಲೆ ಲಾಠೀ ಪ್ರಹಾರ, ಟಿಯರ್ ಗ್ಯಾಸ್, ಜಲಫಿರಂಗಿಗಳನ್ನು ಪ್ರಯೋಗ ಮಾಡಿ ಹೋರಾಟವನ್ನು ಹತ್ತಿಕ್ಕಲು ಪ್ರಯತ್ನಿಸಿತ್ತು. ಆದರೆ ರೈತರು ಇದಾವುದಕ್ಕೂ ಹೆದರದೇ ದಿಟ್ಟ ಹೋರಾಟ ನಡೆಸಿದ ನಂತರ ಅನಿವಾರ್ಯವಾಗಿ ಸರ್ಕಾರ ಅವರೊಂದಿಗೆ ಮಾತುಕತೆ ನಡೆಸಿತ್ತು.

ಇದನ್ನೂ ಓದಿ: ತುಮಕೂರು: ವಕೀಲರೊಬ್ಬರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ -ಸಬ್‌ಇನ್ಸ್‌ಪೆಕ್ಟರ್ ವಿರುದ್ದ ಕ್ರಮಕ್ಕೆ ವಕೀಲರ ಆಗ್ರಹ

ಇನ್ನೊಂದು ಕಡೆ ವಿರೋಧ ಪಕ್ಷಗಳು ರೈತರನ್ನು ದಿಕ್ಕುತಪ್ಪಿಸುತ್ತಿದ್ದಾರೆ ಎನ್ನುತ್ತಿದ್ದ ಕೇಂದ್ರ ಈಗ ರೈತರು ಬಗ್ಗದೇ ಇರುವುದರಿಂದ ಮತ್ತೆ ವಿರೋಧ ಪಕ್ಷಗಳ ಮೇಲೆ ದಾಳಿ ನಡೆಸುತ್ತಿದೆ. ಅವರೂ ಖಾಸಗೀಕರಣದ ಪರವಾಗಿದ್ದರು ಎನ್ನುವ ನೆಪ ನೀಡುವ ಮೂಲಕ ಈ ಕಾಯ್ದೆಗಳನ್ನು ಸಮರ್ಥಿಸಿಕೊಳ್ಳುತ್ತಿದೆ.

ಆದರೆ ಕೇಂದ್ರ ಸರ್ಕಾರದ ಈ ಗೊಡ್ಡು ಸಮರ್ಥನೆಗಳು ನಡೆಯುವುದಿಲ್ಲ ಎಂಬಂತೆ ರೈತರು ಪಟ್ಟುಬಿಡದೇ ದಿಟ್ಟ ಹೋರಾಟ ನಡೆಸುತ್ತಿದ್ದಾರೆ.


ಇದನ್ನೂ ಓದಿ: ಕೊರೆಯುವ ಚಳಿಯಲ್ಲಿ ರೈತ ಹೋರಾಟಗಾರರು; ಕರುಣೆ ಇಲ್ಲದ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...