Homeಮುಖಪುಟಏಮ್ಸ್ ನರ್ಸಿಂಗ್ ನೌಕರರ ಪ್ರತಿಭಟನೆಗೆ ಹೈಕೋರ್ಟ್ ತಡೆ: ಪ್ರತಿಭಟನಾಕಾರರಿಗೆ ನೋಟಿಸ್

ಏಮ್ಸ್ ನರ್ಸಿಂಗ್ ನೌಕರರ ಪ್ರತಿಭಟನೆಗೆ ಹೈಕೋರ್ಟ್ ತಡೆ: ಪ್ರತಿಭಟನಾಕಾರರಿಗೆ ನೋಟಿಸ್

"ಏಮ್ಸ್‌ನ 5000 ನರ್ಸ್ ಸಿಬ್ಬಂದಿ, ವೇತನ ಹೆಚ್ಚಳ ಸೇರಿದಂತೆ ತಮ್ಮ ದೀರ್ಘಕಾಲದ 23 ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದ್ದಾರೆ"

- Advertisement -
- Advertisement -

ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಏಮ್ಸ್) ನರ್ಸಿಂಗ್ ನೌಕರರು ತಮ್ಮ ದೀರ್ಘಕಾಲದ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಿನ್ನೆಯಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಕುರಿತು ಕೋರ್ಟ್ ಮೆಟ್ಟಿಲೇರಿದ ಆಸ್ಪತ್ರೆ, ಮುಷ್ಕರವನ್ನು ಕೊನೆಗೊಳಿಸುವಂತೆ ಮನವಿ ಸಲ್ಲಿಸಿತ್ತು.

ಇದಕ್ಕೆ ಸಂಬಂಧಿಸಿದಂತೆ ದೆಹಲಿಯ ಹೈಕೋರ್ಟ್, ‘ಮುಂದಿನ ಆದೇಶದವರೆಗೆ ಮುಷ್ಕರ ನಡೆಸುವುದನ್ನು ತಡೆಯಲಾಗುವುದು ಮತ್ತು ಆಸ್ಪತ್ರೆಯ ಮನವಿಗೆ ಸ್ಪಂದಿಸಿ’ ಎಂದು ಪ್ರತಿಭಟನಾಕಾರರಿಗೆ ನೋಟಿಸ್ ನೀಡಿದೆ.

ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಮುಷ್ಕರವನ್ನು ಕೊನೆಗೊಳಿಸಬೇಕು ಆಸ್ಪತ್ರೆ ಕೇಳಿಕೊಂಡಿತ್ತು. ಜೊತೆಗೆ ಇದನ್ನು ಕಾನೂನುಬಾಹಿರ ಎಂದು ಕರೆದು, ಕೈಗಾರಿಕಾ ವಿವಾದ ಕಾಯ್ದೆಯನ್ನು ಉಲ್ಲಂಘಿಸಿದೆ ಎಂದು ಹೇಳಿತ್ತು.

ಇದನ್ನೂ ಓದಿ: ರಜನಿಯ ಹೊಸ ರಾಜಕೀಯ ಪಕ್ಷದ ಹೆಸರು ಮಕ್ಕಳ್ ಸೇವೈ ಕಚ್ಚಿ? ಚಿಹ್ನೆ ಆಟೋ ರಿಕ್ಷಾ?

ಆಸ್ಪತ್ರೆಯ ವಿವಾದಗಳನ್ನು ಗಮನಿಸಿದ ನ್ಯಾಯಮೂರ್ತಿ ನವೀನ್ ಚಾವ್ಲಾ ಅವರ ಏಕ-ಸದಸ್ಯ ನ್ಯಾಯಪೀಠವು “ನರ್ಸಿಂಗ್ ನೌಕರರ ಬೇಡಿಕೆಗಳನ್ನು ಆಸ್ಪತ್ರೆಯು ಪರಿಗಣಿಸುತ್ತಿದೆ. ಆದರೆ ಸಧ್ಯಕ್ಕೆ, ಮುಂದಿನ ಆದೇಶದವರೆಗೆ ಮುಷ್ಕರವನ್ನು ಮುಂದುವರಿಸುವುದನ್ನು ತಡೆಯಲಾಗುತ್ತಿದೆ” ಎಂದು ಹೇಳಿದರು.

ಆಸ್ಪತ್ರೆ ಇಂದು ಸಂಜೆ ದಾದಿಯರನ್ನು ಮಾತುಕತೆಗೆ ಕರೆದಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಏಮ್ಸ್‌ನ 5000 ನರ್ಸ್ ಸಿಬ್ಬಂದಿ, ವೇತನ ಹೆಚ್ಚಳ ಸೇರಿದಂತೆ ತಮ್ಮ ದೀರ್ಘಕಾಲದ 23 ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದ್ದಾರೆ. ಪ್ರಧಾನ ವೈದ್ಯಕೀಯ ಸಂಸ್ಥೆಯ ಉದ್ಯೋಗದ ನಿಯಮಗಳನ್ನು ಖಾಯಂ ಕೆಲಸದಿಂದ ಗುತ್ತಿಗೆ ಆಧಾರಕ್ಕೆ ಪರಿವರ್ತಿಸಿದೆ ಎಂದು ಹೋರಾಟಗಾರರು ಆರೋಪಿಸಿದ್ದಾರೆ.

ಇದನ್ನೂ ಓದಿ: ರಾಮ ಸಮಾಜವಾದಿ ಪಕ್ಷಕ್ಕೆ ಸೇರಿದವ, ನಾವು ರಾಮ ಭಕ್ತರು: ಅಖಿಲೇಶ್ ಯಾದವ್

“ಕೊರೊನಾ ಅವಧಿಯಲ್ಲಿ ಮಾಡಿದ ಅದ್ಭುತ ಸೇವೆಗಾಗಿ ಏಮ್ಸ್ ಕುಟುಂಬದ ಬಗ್ಗೆ ನನಗೆ ತುಂಬಾ ಹೆಮ್ಮೆ ಇದೆ. ರಾಷ್ಟ್ರವೂ ಹೆಮ್ಮೆಪಡುತ್ತದೆ. ದುರದೃಷ್ಟವಶಾತ್, ಈ ಸಾಂಕ್ರಾಮಿಕ ಸಮಯದಲ್ಲಿ, ನರ್ಸಿಂಗ್ ನೌಕರರ ಸಂಘವು ಮುಷ್ಕರ ನಡೆಸುತ್ತಿದೆ. ಒಕ್ಕೂಟವು ಮಂಡಿಸಿರುವ 23 ಬೇಡಿಕೆಗಳಲ್ಲಿ ಬಹುತೇಕ ಎಲ್ಲಾ ಬೇಡಿಕೆಗಳನ್ನು ಏಮ್ಸ್ ಆಡಳಿತ ಮತ್ತು ಸರ್ಕಾರ ಈಡೇರಿಸಿದೆ” ಎಂದು ಏಮ್ಸ್ ನಿರ್ದೇಶಕ ಪ್ರೊ.ರಂದೀಪ್ ಗುಲೇರಿಯಾ ಏಮ್ಸ್ ನರ್ಸಸ್ ಯೂನಿಯನ್‌ಗೆ ವೀಡಿಯೊ ಸಂದೇಶದಲ್ಲಿ ತಿಳಿಸಿದ್ದರು.

“ಆದರೆ, ಏಮ್ಸ್ ನರ್ಸ್‌ಗಳು ಈ ಬೇಡಿಕೆಗಳನ್ನು ಬಹಳ ಸಮಯದಿಂದ ಮುಂದಿಡುತ್ತಿದ್ದಾರೆ ಎಂದು ಯೂನಿಯನ್‌ನ ವಕ್ತಾರರು ತಿಳಿಸಿದ್ದಾರೆ. ಕಳೆದ ವರ್ಷ, ಸರ್ಕಾರವು ಅವರನ್ನು ಸಭೆಗೆ ಕರೆದು ಅವರ ಸಮಸ್ಯೆಗಳಿಗೆ ಪರಿಹಾರವನ್ನು ನೀಡುವ ಭರವಸೆ ನೀಡಿದ್ದರು” ಎಂದಿದ್ದಾರೆ.

ಇದನ್ನೂ ಓದಿ:  ಹೋರಾಟನಿರತ ರೈತರನ್ನು ವಿರೋಧ ಪಕ್ಷಗಳು ದಾರಿ ತಪ್ಪಿಸುತ್ತಿವೆ: ನರೇಂದ್ರ ಮೋದಿ

“ಪ್ರೊಫೆಸರ್ ರಂದೀಪ್ ಗುಲೇರಿಯಾ ಅವರ ಬಗ್ಗೆ ನಮಗೆ ಅತ್ಯಂತ ಗೌರವವಿದೆ. ಆದರೆ ನಮ್ಮ ಎಲ್ಲ ಬೇಡಿಕೆಗಳನ್ನು ಈಗಾಗಲೇ ಈಡೇರಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಹಾಗಾದರೆ ಈಗೀನ ಈ ಎಲ್ಲಾ ಭರವಸೆಗಳು ಯಾವುವು..?” ಎಂದು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ಕಸ್ತೂರ್‌ಬಾ vs ಗಾಂಧಿ ಪುಸ್ತಕದ ಆಯ್ದ ಅಧ್ಯಾಯ: ಕಷ್ಟವಾದರೂ ಇಷ್ಟಪಟ್ಟು ಬದುಕಿದ ಕಸ್ತೂರ್‌ಬಾ ಗಾಂಧಿ…

“6 ನೇ ವೇತನ ಆಯೋಗದ ಶಿಫಾರಸುಗಳ ಬಗ್ಗೆ ನರ್ಸ್‌ಗಳಲ್ಲಿ ತಪ್ಪು ಭಾವನೆ ಇದೆ. ಇದರ ಬಗ್ಗೆ ಒಕ್ಕೂಟದೊಂದಿಗೆ ಅನೇಕ ಸಭೆಗಳನ್ನು ನಡೆಸಿ, ವಿವರಿಸಲಾಗಿದೆ. ಅದೇನೇ ಇದ್ದರೂ, ಅವರ ಬೇಡಿಕೆಗಳನ್ನು ಸಹಾನುಭೂತಿಯಿಂದ ಮತ್ತೆ ಹೊಸದಾಗಿ ಪರಿಗಣಿಸಲು ಸರ್ಕಾರ ಸಿದ್ಧವಿದೆ ಎಂದು ಗುಲೇರಿಯಾ ಹೇಳಿದ್ದಾರೆ.

“ಆದಾಗ್ಯೂ, ಒಂದು ದೇಶವು ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡುತ್ತಿರುವಾಗ, ನರ್ಸ್ ಯೂನಿಯನ್ ಮುಷ್ಕರ ನಡೆಸಲು ನಿರ್ಧರಿಸಿದೆ ಎಂಬುದು ಸೂಕ್ತವಲ್ಲವೆಂದು ತೋರುತ್ತದೆ. ನಿಮ್ಮೆಲ್ಲರಿಗೂ ಕೆಲಸಕ್ಕೆ ಮರಳಲು ಮತ್ತು ನಮಗೆ ಸಹಾಯ ಮಾಡಿ ಎಂದು ನಾನು ಮನವಿ ಮಾಡುತ್ತೇನೆ” ಎಂದು ಪ್ರೊಫೆಸರ್ ಗುಲೇರಿಯಾ ಮನವಿ ಮಾಡಿದ್ದಾರೆ.


ಇದನ್ನೂ ಓದಿ: ರಿಪಬ್ಲಿಕ್ ಟಿವಿ ಸಿಇಒ ವಿಕಾಸ್ ಖಂಚಂದಾನಿಗೆ 14 ದಿನಗಳ ನ್ಯಾಯಾಂಗ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...