Homeಮುಖಪುಟಏಮ್ಸ್ ನರ್ಸಿಂಗ್ ನೌಕರರ ಪ್ರತಿಭಟನೆಗೆ ಹೈಕೋರ್ಟ್ ತಡೆ: ಪ್ರತಿಭಟನಾಕಾರರಿಗೆ ನೋಟಿಸ್

ಏಮ್ಸ್ ನರ್ಸಿಂಗ್ ನೌಕರರ ಪ್ರತಿಭಟನೆಗೆ ಹೈಕೋರ್ಟ್ ತಡೆ: ಪ್ರತಿಭಟನಾಕಾರರಿಗೆ ನೋಟಿಸ್

"ಏಮ್ಸ್‌ನ 5000 ನರ್ಸ್ ಸಿಬ್ಬಂದಿ, ವೇತನ ಹೆಚ್ಚಳ ಸೇರಿದಂತೆ ತಮ್ಮ ದೀರ್ಘಕಾಲದ 23 ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದ್ದಾರೆ"

- Advertisement -
- Advertisement -

ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಏಮ್ಸ್) ನರ್ಸಿಂಗ್ ನೌಕರರು ತಮ್ಮ ದೀರ್ಘಕಾಲದ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಿನ್ನೆಯಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಕುರಿತು ಕೋರ್ಟ್ ಮೆಟ್ಟಿಲೇರಿದ ಆಸ್ಪತ್ರೆ, ಮುಷ್ಕರವನ್ನು ಕೊನೆಗೊಳಿಸುವಂತೆ ಮನವಿ ಸಲ್ಲಿಸಿತ್ತು.

ಇದಕ್ಕೆ ಸಂಬಂಧಿಸಿದಂತೆ ದೆಹಲಿಯ ಹೈಕೋರ್ಟ್, ‘ಮುಂದಿನ ಆದೇಶದವರೆಗೆ ಮುಷ್ಕರ ನಡೆಸುವುದನ್ನು ತಡೆಯಲಾಗುವುದು ಮತ್ತು ಆಸ್ಪತ್ರೆಯ ಮನವಿಗೆ ಸ್ಪಂದಿಸಿ’ ಎಂದು ಪ್ರತಿಭಟನಾಕಾರರಿಗೆ ನೋಟಿಸ್ ನೀಡಿದೆ.

ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಮುಷ್ಕರವನ್ನು ಕೊನೆಗೊಳಿಸಬೇಕು ಆಸ್ಪತ್ರೆ ಕೇಳಿಕೊಂಡಿತ್ತು. ಜೊತೆಗೆ ಇದನ್ನು ಕಾನೂನುಬಾಹಿರ ಎಂದು ಕರೆದು, ಕೈಗಾರಿಕಾ ವಿವಾದ ಕಾಯ್ದೆಯನ್ನು ಉಲ್ಲಂಘಿಸಿದೆ ಎಂದು ಹೇಳಿತ್ತು.

ಇದನ್ನೂ ಓದಿ: ರಜನಿಯ ಹೊಸ ರಾಜಕೀಯ ಪಕ್ಷದ ಹೆಸರು ಮಕ್ಕಳ್ ಸೇವೈ ಕಚ್ಚಿ? ಚಿಹ್ನೆ ಆಟೋ ರಿಕ್ಷಾ?

ಆಸ್ಪತ್ರೆಯ ವಿವಾದಗಳನ್ನು ಗಮನಿಸಿದ ನ್ಯಾಯಮೂರ್ತಿ ನವೀನ್ ಚಾವ್ಲಾ ಅವರ ಏಕ-ಸದಸ್ಯ ನ್ಯಾಯಪೀಠವು “ನರ್ಸಿಂಗ್ ನೌಕರರ ಬೇಡಿಕೆಗಳನ್ನು ಆಸ್ಪತ್ರೆಯು ಪರಿಗಣಿಸುತ್ತಿದೆ. ಆದರೆ ಸಧ್ಯಕ್ಕೆ, ಮುಂದಿನ ಆದೇಶದವರೆಗೆ ಮುಷ್ಕರವನ್ನು ಮುಂದುವರಿಸುವುದನ್ನು ತಡೆಯಲಾಗುತ್ತಿದೆ” ಎಂದು ಹೇಳಿದರು.

ಆಸ್ಪತ್ರೆ ಇಂದು ಸಂಜೆ ದಾದಿಯರನ್ನು ಮಾತುಕತೆಗೆ ಕರೆದಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಏಮ್ಸ್‌ನ 5000 ನರ್ಸ್ ಸಿಬ್ಬಂದಿ, ವೇತನ ಹೆಚ್ಚಳ ಸೇರಿದಂತೆ ತಮ್ಮ ದೀರ್ಘಕಾಲದ 23 ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದ್ದಾರೆ. ಪ್ರಧಾನ ವೈದ್ಯಕೀಯ ಸಂಸ್ಥೆಯ ಉದ್ಯೋಗದ ನಿಯಮಗಳನ್ನು ಖಾಯಂ ಕೆಲಸದಿಂದ ಗುತ್ತಿಗೆ ಆಧಾರಕ್ಕೆ ಪರಿವರ್ತಿಸಿದೆ ಎಂದು ಹೋರಾಟಗಾರರು ಆರೋಪಿಸಿದ್ದಾರೆ.

ಇದನ್ನೂ ಓದಿ: ರಾಮ ಸಮಾಜವಾದಿ ಪಕ್ಷಕ್ಕೆ ಸೇರಿದವ, ನಾವು ರಾಮ ಭಕ್ತರು: ಅಖಿಲೇಶ್ ಯಾದವ್

“ಕೊರೊನಾ ಅವಧಿಯಲ್ಲಿ ಮಾಡಿದ ಅದ್ಭುತ ಸೇವೆಗಾಗಿ ಏಮ್ಸ್ ಕುಟುಂಬದ ಬಗ್ಗೆ ನನಗೆ ತುಂಬಾ ಹೆಮ್ಮೆ ಇದೆ. ರಾಷ್ಟ್ರವೂ ಹೆಮ್ಮೆಪಡುತ್ತದೆ. ದುರದೃಷ್ಟವಶಾತ್, ಈ ಸಾಂಕ್ರಾಮಿಕ ಸಮಯದಲ್ಲಿ, ನರ್ಸಿಂಗ್ ನೌಕರರ ಸಂಘವು ಮುಷ್ಕರ ನಡೆಸುತ್ತಿದೆ. ಒಕ್ಕೂಟವು ಮಂಡಿಸಿರುವ 23 ಬೇಡಿಕೆಗಳಲ್ಲಿ ಬಹುತೇಕ ಎಲ್ಲಾ ಬೇಡಿಕೆಗಳನ್ನು ಏಮ್ಸ್ ಆಡಳಿತ ಮತ್ತು ಸರ್ಕಾರ ಈಡೇರಿಸಿದೆ” ಎಂದು ಏಮ್ಸ್ ನಿರ್ದೇಶಕ ಪ್ರೊ.ರಂದೀಪ್ ಗುಲೇರಿಯಾ ಏಮ್ಸ್ ನರ್ಸಸ್ ಯೂನಿಯನ್‌ಗೆ ವೀಡಿಯೊ ಸಂದೇಶದಲ್ಲಿ ತಿಳಿಸಿದ್ದರು.

“ಆದರೆ, ಏಮ್ಸ್ ನರ್ಸ್‌ಗಳು ಈ ಬೇಡಿಕೆಗಳನ್ನು ಬಹಳ ಸಮಯದಿಂದ ಮುಂದಿಡುತ್ತಿದ್ದಾರೆ ಎಂದು ಯೂನಿಯನ್‌ನ ವಕ್ತಾರರು ತಿಳಿಸಿದ್ದಾರೆ. ಕಳೆದ ವರ್ಷ, ಸರ್ಕಾರವು ಅವರನ್ನು ಸಭೆಗೆ ಕರೆದು ಅವರ ಸಮಸ್ಯೆಗಳಿಗೆ ಪರಿಹಾರವನ್ನು ನೀಡುವ ಭರವಸೆ ನೀಡಿದ್ದರು” ಎಂದಿದ್ದಾರೆ.

ಇದನ್ನೂ ಓದಿ:  ಹೋರಾಟನಿರತ ರೈತರನ್ನು ವಿರೋಧ ಪಕ್ಷಗಳು ದಾರಿ ತಪ್ಪಿಸುತ್ತಿವೆ: ನರೇಂದ್ರ ಮೋದಿ

“ಪ್ರೊಫೆಸರ್ ರಂದೀಪ್ ಗುಲೇರಿಯಾ ಅವರ ಬಗ್ಗೆ ನಮಗೆ ಅತ್ಯಂತ ಗೌರವವಿದೆ. ಆದರೆ ನಮ್ಮ ಎಲ್ಲ ಬೇಡಿಕೆಗಳನ್ನು ಈಗಾಗಲೇ ಈಡೇರಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಹಾಗಾದರೆ ಈಗೀನ ಈ ಎಲ್ಲಾ ಭರವಸೆಗಳು ಯಾವುವು..?” ಎಂದು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ಕಸ್ತೂರ್‌ಬಾ vs ಗಾಂಧಿ ಪುಸ್ತಕದ ಆಯ್ದ ಅಧ್ಯಾಯ: ಕಷ್ಟವಾದರೂ ಇಷ್ಟಪಟ್ಟು ಬದುಕಿದ ಕಸ್ತೂರ್‌ಬಾ ಗಾಂಧಿ…

“6 ನೇ ವೇತನ ಆಯೋಗದ ಶಿಫಾರಸುಗಳ ಬಗ್ಗೆ ನರ್ಸ್‌ಗಳಲ್ಲಿ ತಪ್ಪು ಭಾವನೆ ಇದೆ. ಇದರ ಬಗ್ಗೆ ಒಕ್ಕೂಟದೊಂದಿಗೆ ಅನೇಕ ಸಭೆಗಳನ್ನು ನಡೆಸಿ, ವಿವರಿಸಲಾಗಿದೆ. ಅದೇನೇ ಇದ್ದರೂ, ಅವರ ಬೇಡಿಕೆಗಳನ್ನು ಸಹಾನುಭೂತಿಯಿಂದ ಮತ್ತೆ ಹೊಸದಾಗಿ ಪರಿಗಣಿಸಲು ಸರ್ಕಾರ ಸಿದ್ಧವಿದೆ ಎಂದು ಗುಲೇರಿಯಾ ಹೇಳಿದ್ದಾರೆ.

“ಆದಾಗ್ಯೂ, ಒಂದು ದೇಶವು ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡುತ್ತಿರುವಾಗ, ನರ್ಸ್ ಯೂನಿಯನ್ ಮುಷ್ಕರ ನಡೆಸಲು ನಿರ್ಧರಿಸಿದೆ ಎಂಬುದು ಸೂಕ್ತವಲ್ಲವೆಂದು ತೋರುತ್ತದೆ. ನಿಮ್ಮೆಲ್ಲರಿಗೂ ಕೆಲಸಕ್ಕೆ ಮರಳಲು ಮತ್ತು ನಮಗೆ ಸಹಾಯ ಮಾಡಿ ಎಂದು ನಾನು ಮನವಿ ಮಾಡುತ್ತೇನೆ” ಎಂದು ಪ್ರೊಫೆಸರ್ ಗುಲೇರಿಯಾ ಮನವಿ ಮಾಡಿದ್ದಾರೆ.


ಇದನ್ನೂ ಓದಿ: ರಿಪಬ್ಲಿಕ್ ಟಿವಿ ಸಿಇಒ ವಿಕಾಸ್ ಖಂಚಂದಾನಿಗೆ 14 ದಿನಗಳ ನ್ಯಾಯಾಂಗ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...