Homeಮುಖಪುಟಮಣಿಕರ್ಣಿಕಾ ವಿವಾದ: ಕಂಗನಾ ಕಾರಣಕ್ಕೆ ನಾನು ಜಗತ್ತಿಗೆ ಅಪರಿಚಿತನಾಗಿರಬಹುದು- ನಿರ್ದೇಶಕ

ಮಣಿಕರ್ಣಿಕಾ ವಿವಾದ: ಕಂಗನಾ ಕಾರಣಕ್ಕೆ ನಾನು ಜಗತ್ತಿಗೆ ಅಪರಿಚಿತನಾಗಿರಬಹುದು- ನಿರ್ದೇಶಕ

ಮಣಿಕರ್ಣಿಕಾ ಚಿತ್ರದ 70 ಪ್ರತಿಶತವನ್ನು ತಾವೇ ನಿರ್ದೇಶಿಸಿದೆ ಎಂದು ಕಂಗನಾ ಹೇಳಿಕೊಂಡಿದ್ದರು. ಇದಕ್ಕೆ ಆಕೆಯ ಸಹೋದರಿ ರಂಗೋಲಿ ಬೆಂಬಲವಾಗಿ ನಿಂತಿದ್ದರು.

- Advertisement -
- Advertisement -

’ಮಣಿಕರ್ಣಿಕಾ: ದಿ ಕ್ವೀನ್ ಆಫ್ ಝೂನ್ಸಿ’ ಚಿತ್ರದ ನಿರ್ದೇಶನದ ಬಗ್ಗೆ ನಟಿ ಕಂಗನಾ ರಣಾವತ್ ಜೊತೆ ಭಿನ್ನಾಭಿಪ್ರಾಯ ಹೊಂದಿದ್ದ ನಿರ್ದೇಶಕ ಕ್ರಿಶ್ ಜಗಾರ್ಲಮುಡಿ, ವಿವಾದದ ಬಗ್ಗೆ ಮಾತನಾಡಿದ ಕ್ರಿಶ್, ಕಂಗನಾರಿಂದ ತಾನು ಜಗತ್ತಿಗೆ ಅಪರಿಚಿತನಾಗಿರಬಹುದೆಂಬ ಭಯವಿದೆ ಎಂದು ಹೇಳಿದ್ದಾರೆ.

ನಟಿ ಸಮಂತಾ ಅವರ ಟಾಕ್ ಶೋ ಸ್ಯಾಮ್ ಜಾಮ್‌ನಲ್ಲಿ ಕೊನೆಯ ಬಾರಿಗೆ ವಿವಾದದ ಬಗ್ಗೆ ಮಾತನಾಡುತ್ತೇನೆ ಎಂದು ಹೇಳುತ್ತಾ ಹಲವು ವಿಚಾರಗಳನ್ನು ತೆರೆದಿಟ್ಟಿದ್ದಾರೆ. ನಟಿ ರಾಕುಲ್ ಪ್ರೀತ್ ಸಿಂಗ್ ಜೊತೆಗೆ ಟಾಕ್ ಶೋ ಸ್ಯಾಮ್ ಜಾಮ್‌ನಲ್ಲಿ ಕಾಣಿಸಿಕೊಂಡರು.

ಡಿಸೆಂಬರ್ 18 ರಂದು ಒಟಿಟಿ ಪ್ಲಾಟ್‌ಫಾರ್ಮ್ ಆಹಾ ನಲ್ಲಿ  ಪ್ರಸಾರವಾಗಲಿರುವ, ನಟಿ ಸಮಂತಾ ಅವರ ಟಾಕ್ ಶೋ ಸ್ಯಾಮ್ ಜಾಮ್‌ನಲ್ಲಿ ರಾಕುಲ್ ಪ್ರೀತ್ ಸಿಂಗ್ ಮತ್ತು ಕ್ರಿಶ್ ಜಗಾರ್ಲಮುಡಿ ಅವರು ಅತಿಥಿಗಳಾಗಿದ್ದಾರೆ. ಇತ್ತೀಚೆಗೆ, ಈ ಕಾರ್ಯಕ್ರಮದ ಪ್ರೋಮೋ ಬಿಡುಗಡೆ ಮಾಡಲಾಗಿದ್ದು, ಇದರಲ್ಲಿ ಇಬ್ಬರು ಕಲಾವಿದರು ತಮ್ಮ ಸುತ್ತಲು ಹರಡಿದ್ದ, ಕಾಡಿದ ವಿವಾದಗಳ ಬಗ್ಗೆ ಮಾತನಾಡಿದ್ದಾರೆ.

ಇದನ್ನೂ ಓದಿ: ನಟಿ ಕಂಗನಾ ವಿರುದ್ಧ ಹಕ್ಕುಚ್ಯುತಿ ನೋಟಿಸ್ ನೀಡಿದ ಶಿವಸೇನೆ ಶಾಸಕ ಪ್ರತಾಪ್ ಸರ್ನಾಯಕ್

ಮಣಿಕರ್ಣಿಕಾ ಮತ್ತು ಕಂಗನಾ ರಣಾವತ್ ಅವರೊಂದಿಗೆ ಏನಾಯಿತು ಎಂದು ನಟಿ ಸಮಂತಾ ಕೇಳಿದಾಗ, “ನಾನು ಕೊನೆಯ ಬಾರಿಗೆ ಮಾತನಾಡಲು ಬಯಸುತ್ತೇನೆ. ಕಂಗನಾ ಮತ್ತು ಅವಳ ತಂಡವು ಚಿತ್ರವನ್ನು ವೀಕ್ಷಿಸಿತ್ತು. ಆದಾಗಿ ಎರಡು ದಿನಗಳ ನಂತರ ನನಗೆ ಕರೆ ಬಂತು ಎಂದಿದ್ದಾರೆ. ನನ್ನ ಏಕೈಕ ಭಯವೆಂದರೆ ಕಂಗನಾ ಕಾರಣಕ್ಕೆ ನಾನು ಜಗತ್ತಿಗೆ ಅಪರಿಚಿತನಾಗಿರಬಹುದು. ಕಲಾವಿದರಾದ ನಾವು ಉತ್ತಮ ಅವಕಾಶಗಳನ್ನು ಪಡೆದಾಗ ಮಾತ್ರ ನಮ್ಮ ಸಾಮರ್ಥ್ಯವನ್ನು ಜಗತ್ತಿಗೆ ತೋರಿಸಬಹುದು” ಎಂದು ಕ್ರಿಶ್ ಹೇಳಿದ್ದಾರೆ.

ಮಣಿಕರ್ಣಿಕಾ ಚಿತ್ರ ವಿವಾದವೇನು…?

2019 ರಲ್ಲಿ ನಟಿ ಕಂಗನಾ ರಣಾವತ್ ಮಣಿಕರ್ಣಿಕಾ: ರಾಣಿ ಆಫ್ ಝಾನ್ಸಿ ಚಿತ್ರವನ್ನು ವಹಿಸಿಕೊಂಡು, ಚಿತ್ರದ ಬಹಳಷ್ಟು ಭಾಗಗಳನ್ನು ಮತ್ತೆ ಚಿತ್ರೀಕರಿಸಿದರು. ನಿರ್ದೇಶಕ ಕ್ರಿಶ್ ಜಗಾರ್ಲಮುಡಿ ಅವರೊಂದಿಗೆ ಸಹ-ನಿರ್ದೇಶಕರ ಕ್ರೆಡಿಟ್ ಕೂಡ ಹಂಚಿಕೊಂಡಿದ್ದರು. ನಂತರ ಚಿತ್ರದ 70 ಪ್ರತಿಶತವನ್ನು ತಾವೇ ನಿರ್ದೇಶಿಸಿದೆ ಎಂದು ಕಂಗನಾ ಹೇಳಿಕೊಂಡಿದ್ದರು. ಇದಕ್ಕೆ ಆಕೆಯ ಸಹೋದರಿ ರಂಗೋಲಿ ಬೆಂಬಲವಾಗಿ ನಿಂತಿದ್ದರು.

ಇದನ್ನೂ ಓದಿ: ’ಶಾಹೀನ್ ಬಾಗ್‌ ದಾದಿ’ಯ ಕುರಿತು ಆಕ್ಷೇಪಾರ್ಹ ಹೇಳಿಕೆ- ನಟಿ ಕಂಗನಾಗೆ ಕಾನೂನು ನೋಟಿಸ್

ಈ ಬಗ್ಗೆ ನಿರ್ದೇಶಕ ಕ್ರಿಶ್ ಜಗಾರ್ಲಮುಡಿ ಹಲವಾರು ಸಂದರ್ಶನಗಳಲ್ಲಿ, ಕಂಗನಾ ಅವರಿಂದ ಚಿತ್ರವನ್ನು ಸ್ವಾಧೀನಪಡಿಸಿಕೊಂಡ ಬಗ್ಗೆ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದರು. ಜೊತೆಗೆ ಚಿತ್ರದಲ್ಲಿ ಹಲವರ ಪಾತ್ರಗಳನ್ನು ಕಡಿತಗೊಳಿಸಿ, ಸಣ್ಣ ಪುಟ್ಟ ಬದಲಾವಣೆ ಮಾಡಬೇಕು ಎಂದು ಏನೇನೋ ಬದಲಾವಣೆ ಮಾಡಿದರು’ ಎಂದು ಆರೋಪಿಸಿದ್ದರು.

ವಿವಾದದಿಂದ ಬೇಸತ್ತ ಕ್ರಿಶ್, “ಕಂಗನಾ ಮತ್ತು ನಾನು ಇಬ್ಬರೂ ಈ ಉದ್ಯಮದಿಂದ ಬೇಗ ದೂರ  ಸರಿಯುವುದಿಲ್ಲ. ಭವಿಷ್ಯದಲ್ಲಿ ನಾನು ಇನ್ನೂ ಅನೇಕ ಚಿತ್ರಗಳನ್ನು ನಿರ್ದೇಶಿಸುತ್ತೇನೆ ಮತ್ತು ಅವರು ಕೂಡ ಚಿತ್ರರಂಗದಲ್ಲಿರುತ್ತಾರೆ. ಯಾರು ಎಲ್ಲಿ ನಿಲ್ಲುತ್ತಾರೆ ಎಂದು ಜನರಿಗೆ ತಿಳಿಯುತ್ತದೆ. ನಾನು ಕಂಗನಾ ಮತ್ತು ಇಡೀ ವಿವಾದದಿಂದ ದಣಿದಿದ್ದೇನೆ” ಎಂದು ಹೇಳಿದ್ದರು.

ಈಗ ಈ ಟಾಕ್ ಶೋನಿಂದ ಮತ್ತೊಮ್ಮೆ ಮಣಿಕರ್ಣಿಕಾ ಚಿತ್ರ ವಿವಾದ ಜನರ ನೆನಪಿಗೆ ಬಂದಿದೆ. ಬರೀ ಪ್ರೋಮೋ ಇಷ್ಟೊಂದು ವೈರಲ್ ಆಗಿದೆ. ಡಿಸೆಂಬರ್‌ 18 ರಂದು ಪೂರ್ತಿ ಕಾರ್ಯಕ್ರಮ ಪ್ರಸಾರವಾಗಲಿದ್ದು, ಕ್ರಿಶ್ ವಿವಾದದ ಬಗ್ಗೆ ಏನೇನು ಹೇಳಿದ್ದಾರೆ ಎಂಬ ಸಂಪೂರ್ಣ ಮಾಹಿತಿ ಹೊರಬರಲಿದೆ.

ನಟಿ ಕಂಗನಾ ರಣಾವತ್ ಇತ್ತಿಚೆಗೆ ಹೆಚ್ಚು ಹೆಚ್ಚು ಟ್ರೋಲ್ ಮತ್ತು ಟೀಕೆಗಳಿಗೆ ಗುರಿಯಾಗುತ್ತಿದ್ದಾರೆ. ಈ ಸಂದರ್ಭದಲ್ಲೇ ಮತ್ತೆ ಮಣಿಕರ್ಣಿಕಾ ವಿವಾದ ಹೊರ ಬಿದ್ದಿದೆ.


ಇದನ್ನೂ ಓದಿ: ರೈತರ ಬಗ್ಗೆ ಅವಹೇಳನಕಾರಿ ಟ್ವೀಟ್: ನಟಿ ಕಂಗನಾಗೆ ಮತ್ತೊಂದು ಲೀಗಲ್ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...